AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ದಾಖಲೆಯ ಆದಾಯ, ಸತತ 15 ವರ್ಷಗಳ ಕಾಲ ನಂ.1

ರಾಜ್ಯದ ಮುಜರಾಯಿ ಇಲಾಖೆ ಆಧೀನದ ಪ್ರಸಿದ್ಧ ನಾಗಾರಾಧನಾ ಕ್ಷೇತ್ರವಾದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯ 2025-26ನೇ ಹಣಕಾಸು ವರ್ಷದಲ್ಲಿ ಭಾರೀ ಆದಾಯ ಗಳಿಸಿ ಮತ್ತೊಮ್ಮೆ ಗಮನ ಸೆಳೆದಿದೆ. ಇದರೊಂದಿಗೆ ಸತತ 15ನೇ ವರ್ಷವೂ ರಾಜ್ಯದ ಮುಜರಾಯಿ ದೇವಾಲಯಗಳ ಪೈಕಿ ಅತ್ಯಧಿಕ ಆದಾಯ ಗಳಿಸುವ ನಂ.1 ಸ್ಥಾನವನ್ನು ಈ ದೇವಾಲಯ ಕಾಯ್ದುಕೊಂಡಿದೆ.

ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ದಾಖಲೆಯ ಆದಾಯ, ಸತತ 15 ವರ್ಷಗಳ ಕಾಲ ನಂ.1
Kukke Subrahmanya
ರಮೇಶ್ ಬಿ. ಜವಳಗೇರಾ
|

Updated on:May 11, 2026 | 8:11 PM

Share

ಮಂಗಳೂರು, (ಮೇ 11): ಕರ್ನಾಟಕ ಮುಜರಾಯಿ ಇಲಾಖೆ (karnataka muzrai department) ಆಧೀನದ ಕುಕ್ಕೆ ಸುಬ್ರಹ್ಮಣ್ಯ ದೇವಾಲಯವು (Kukke subramanya Temple) ಸತತ 15ನೇ ವರ್ಷವು ಸಹ ಆದಾಯ ಗಳಿಕೆಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದೆ. ಹೌದು.. 2025-26ನೇ ಸಾಲಿನ ಆರ್ಥಿಕ ವರ್ಷದಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಬರೋಬ್ಬರಿ 167.89 ಲಕ್ಷ ರೂಪಾಯಿ ಆದಾಯ ಹರಿದುಬಂದಿದೆ. 2025ರ ಏಪ್ರಿಲ್ 1ರಿಂದ 2026ರ ಮಾರ್ಚ್ 31ರವರೆಗೆ ದೇವಾಲಯವು ಒಟ್ಟು 167.89 ಕೋಟಿ ರೂಪಾಯಿ ಆದಾಯ ಗಳಿಸಿದ್ದು, ಇದರಲ್ಲಿ 85.20 ಕೋಟಿ ರೂ. ವೆಚ್ಚ ಮಾಡಲಾಗಿದೆ. ಈ ಮೂಲಕ ಕಳೆದ 2024-25ನೇ ಸಾಲಿನ 155 ಕೋಟಿ ರೂ. ಆದಾಯವನ್ನು ಮೀರಿ ಸುಮಾರು 12 ಕೋಟಿ ರೂ. ಹೆಚ್ಚುವರಿ ಆದಾಯ ದಾಖಲಿಸಿದೆ.

  • 2025-26ನೇ ಸಾಲಿನ ಆರ್ಥಿಕ ವರ್ಷದಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವಾಲಕ್ಕೆ 167,89,09,080.77 ರೂ. ಆದಾಯ.
  • ಈ ಮೂಲಕ ಸತತ 15ನೇ ವರ್ಷ ಆದಾಯ ಗಳಿಕೆಯಲ್ಲಿ ಮುಜರಾಯಿ ದೇವಸ್ಥಾನಗಳ ಪೈಕಿ ಮೊದಲ ಸ್ಥಾನ.
  • 2025ರ ಏಪ್ರಿಲ್ 1ರಿಂದ 2026ರ ಮಾರ್ಚ್ 31ರ ತನಕದ ಆರ್ಥಿಕ ವರ್ಷದಲ್ಲಿ ದೇವಳಕ್ಕೆ ಈ ಆದಾಯ

2024-2025ನೇ ಸಾಲಿನಲ್ಲಿ 155.95 ಕೋಟಿ ರೂ. ಆದಾಯ ಗಳಿಸಿದ್ದ  ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯವು 2025-26ನೇ ಹಣಕಾಸು ವರ್ಷದಲ್ಲಿ 167.89 ಕೋಟಿ ರೂ. ದಾಖಲೆಯ ಆದಾಯ ಗಳಿಸುವ ಮೂಲಕ ಸತತ 15ನೇ ವರ್ಷವೂ ರಾಜ್ಯದ ನಂ.1 ಮುಜರಾಯಿ ದೇವಾಲಯವಾಗಿ ತನ್ನ ಸ್ಥಾನವನ್ನು ಉಳಿಸಿಕೊಂಡಿದೆ. ಹರಕೆ, ಕಾಣಿಕೆ ಹುಂಡಿ, ಹೂಡಿಕೆಗಳಿಂದ ಬರುವ ಬಡ್ಡಿ ಆದಾಯದ ಪ್ರಮುಖ ಮೂಲಗಳಾಗಿವೆ.

ಇದನ್ನೂ ಓದಿ: ಅಂಜನಾದ್ರಿಗೆ 2 ಕೋಟಿ ರೂ. ಚಿನ್ನಾಭರಣ ಕಾಣಿಕೆ: ಹಲವು ಅನುಮಾನಗಳಿಗೆ ಕಾರಣವಾಯ್ತು ಉದ್ಯಮಿಯ ಬಿಲ್

ಪ್ರಥಮ ಬಾರಿಗೆ 167 ಕೋಟಿ ರೂ.ಗೂ ಅಧಿಕ ಆದಾಯ

ಒಟ್ಟು 167.89 ಕೋಟಿ ರೂಪಾಯಿ ಆದಾಯದಲ್ಲಿ 85,20,14,531.42 ರು. ಖರ್ಚಾಗಿದೆ. 2024-2025ನೇ ಸಾಲಿನಲ್ಲಿ 155 ಕೋಟಿ ರೂ ಆದಾಯ ಗಳಿಸಿತ್ತು. ಈ ಬಾರಿ 167,89,09,080.77 ರೂ. ಆದಾಯ ಗಳಿಸುವ ಮೂಲಕ ಈ ಆರ್ಥಿಕ ವರ್ಷದಲ್ಲಿ ಕಳೆದ ಆರ್ಥಿಕ ವರ್ಷದಿಂದ ಸುಮಾರು 12 ಕೋಟಿ ರೂ. ಅಧಿಕ ಆದಾಯ ಗಳಿಸಿದೆ. ದೇವಸ್ಥಾನಕ್ಕೆ ಮುಖ್ಯವಾಗಿ ಹರಕೆ ಸೇವೆ, ಕಾಣಿಕೆ ಡಬ್ಬಿ, ಬಡ್ಡಿ, ಛತ್ರಗಳ ಬಾಡಿಗೆ, ಕಟ್ಟಡಗಳ ಬಾಡಿಗೆ ಮತ್ತು ಕೃಷಿ ತೋಟದಿಂದ ಆದಾಯ ಬರುತ್ತದೆ. ಕಳೆದ 14 ವರ್ಷಗಳಿಂದ ನಿರಂತರವಾಗಿ ಆದಾಯ ಗಳಿಕೆಯಲ್ಲಿ ರಾಜ್ಯದ ನಂಬರ್ ದೇವಸ್ಥಾನವಾಗಿ ಹೊರ ಹೊಮ್ಮಿರುವ ಕುಕ್ಕೆ, 15ನೇ ವರ್ಷವೂ ತನ್ನ ಅಗ್ರಸ್ಥಾನವನ್ನು ಸ್ಥಾನವನ್ನು ಗಟ್ಟಿಗೊಳಿಸಿಕೊಂಡಿದೆ.

ಯಾವುದರಿಂದ ಎಷ್ಟು ಆದಾಯ?

ಗುತ್ತಿಗೆಗಳಿಂದ 2,53,09,230.00 ರೂ., ಧಾನ್ಯಗಳ ಇಳುವರಿ ಮತ್ತು ತೋಟದ ಉತ್ಪನ್ನದಿಂದ 10,50,323.00 ರೂ., ಕಟ್ಟಡ ಮತ್ತು ಅಂಗಡಿಗಳ ಬಾಡಿಗೆಯಿಂದ 94,46,470.00 ರೂ., ಕಾಣಿಕೆಯಿಂದ 5,47,43,244.45 ರೂ., ಇ ಹುಂಡಿಯಿಂದ 38,01,676.80 ರೂ., ಕಾಣಿಕೆ ಹುಂಡಿಯಿಂದ 24,69,63,576.00 ರೂ, ಹರಿಕೆ ಸೇವೆಗಳಿಂದ 64,08,90,940.51 ರೂ., ಅನುದಾನದಿಂದ 1,67,956.00 ರೂ., ಹೂಡಿಕೆಯಿಂದ ಬಂದ ಬಡ್ಡಿ 49,11,07,412 ರೂ., ಉಳಿತಾಯ ಖಾತೆ ಹಾಗೂ ಇತರ ಬಡ್ಡಿ 41,80,588.00 ರೂ., ಸ್ವೀಪ್ ವ್ಯವಹಾದಿಂದ ಬಂದ ಬಡ್ಡಿ 12,90,390.00 ರೂ., ಇತರ ಬಾಬ್ತುಗಳು 3,20,31,937.00 ರೂ., ಛತ್ರ ಸಂರಕ್ಷಣಾ ವಂತಿಗೆ 6,93,66,026.00 ರೂ., ಅನ್ನಸಂತರ್ಪಣೆ ನಿಧಿಯಿಂದ 9,14,71,606.01 ರೂ., ಅಭಿವೃದ್ದಿ ನಿಧಿ 14,17,284.00 ರೂ., ಶಾಶ್ವತ ಸೇವಾ ಮೂಲ ಧನ 56,70,421 ರೂ. ಹೀಗೆ ಒಟ್ಟು 167 ಕೋಟಿ 89 ಲಕ್ಷದ 09 ಸಾವಿರದ 080.77 ರೂ. ಆದಾಯ ದೇವಳಕ್ಕೆ ಬಂದಿದೆ.

ಯಾವ ವರ್ಷ ಎಷ್ಟು ಆದಾಯ?

2006-07ರಲ್ಲಿ ದೇವಳದ ಆದಾಯವು 19.76 ಕೋಟಿ ರೂ., 2007-08ರಲ್ಲಿ 24.44 ಕೋಟಿ ರೂ., 2008-09ರಲ್ಲಿ 31 ಕೋಟಿ ರೂ., 2009-10ರಲ್ಲಿ 38.51 ಕೋಟಿ ರೂ., 2011-12ರಲ್ಲಿ 56.24 ಕೋಟಿ ರೂ., 2012-13ರಲ್ಲಿ 66.76 ಕೋಟಿ ರೂ., 2013-14ರಲ್ಲಿ 68 ಕೋಟಿ ರೂ., 2014-15ರಲ್ಲಿ 77 ಕೋಟಿ 60 ಲಕ್ಷ ರೂ., 2015-16ರಲ್ಲಿ 88 ಕೋಟಿ 83 ಲಕ್ಷ, 2016-17ರಲ್ಲಿ 89 ಕೋಟಿ 65 ಲಕ್ಷ ರೂ., 2017-18ರಲ್ಲಿ 95 ಕೋಟಿ 92 ಲಕ್ಷ ರೂ., 2018-19ರಲ್ಲಿ 92 ಕೋಟಿ 09 ಲಕ್ಷ ರೂ, 2019-20ರಲ್ಲಿ 98 ಕೋಟಿ 92 ಲಕ್ಷ, 2020-21ರಲ್ಲಿ 68 ಕೋಟಿ 94 ಲಕ್ಷ., 2021-22 ರಲ್ಲಿ 72 ಕೋಟಿ 73 ಲಕ್ಷ, 2022-23ರಲ್ಲಿ 123 ಕೋಟಿ 64 ಲಕ್ಷ, 2023-24ನೇ ಸಾಲಿನಲ್ಲಿ 146 ಕೋಟಿ 1 ಲಕ್ಷ, 2024-25ನೇ ಸಾಲಿನಲ್ಲಿ 155 ಕೋಟಿ 95 ಲಕ್ಷ ಆದಾಯ ಗಳಿಸಿ ಸತತ 14 ವರ್ಷ ರಾಜ್ಯದ ನಂಬರ್ ವನ್ ಆದಾಯ ಗಳಿಕೆಯ ದೇವಸ್ಥಾನವಾಗಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:02 pm, Mon, 11 May 26

Follow Us
ಭಾರೀ ಕುತೂಹಲ ಮೂಡಿಸಿದ ತಮಿಳುನಾಡು ಸಿಎಂ ವಿಜಯ್- ಸ್ಟಾಲಿನ್ ಭೇಟಿ
ಭಾರೀ ಕುತೂಹಲ ಮೂಡಿಸಿದ ತಮಿಳುನಾಡು ಸಿಎಂ ವಿಜಯ್- ಸ್ಟಾಲಿನ್ ಭೇಟಿ
ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ
ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ
PM ಮೋದಿ 8 ಸಂದೇಶ ಯಾಕೆ? ಆರ್ಥಿಕ ತಜ್ಞ ರುದ್ರಮೂರ್ತಿ ಹೇಳಿದ್ದಿಷ್ಟು
PM ಮೋದಿ 8 ಸಂದೇಶ ಯಾಕೆ? ಆರ್ಥಿಕ ತಜ್ಞ ರುದ್ರಮೂರ್ತಿ ಹೇಳಿದ್ದಿಷ್ಟು
ಮೋದಿ ಸಾಗೋ ದಾರಿಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಕೇಸ್​: ತಮಿಳುನಾಡು ಲಿಂಕ್​?
ಮೋದಿ ಸಾಗೋ ದಾರಿಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಕೇಸ್​: ತಮಿಳುನಾಡು ಲಿಂಕ್​?
ಅಡುಗೆ ಎಣ್ಣೆ ಬೆಲೆ 3 ರೂ. ಏರಿಕೆ
ಅಡುಗೆ ಎಣ್ಣೆ ಬೆಲೆ 3 ರೂ. ಏರಿಕೆ
ಕಾನೂನು ಉಲಂಘಿಸಿ ರಸ್ತೆಯಲ್ಲಿ ಸಂಚಾರ ಮಾಡ್ತಿದ್ದ ಶಾಲಾ ವಾಹನಗಳು RTO ವಶಕ್ಕೆ
ಕಾನೂನು ಉಲಂಘಿಸಿ ರಸ್ತೆಯಲ್ಲಿ ಸಂಚಾರ ಮಾಡ್ತಿದ್ದ ಶಾಲಾ ವಾಹನಗಳು RTO ವಶಕ್ಕೆ
ಮುಂಬೈ ಇಂಡಿಯನ್ಸ್​ ಸೋಲಿಗೆ ಕಾರಣವಾಯ್ತು ಈ ಒಂದು 'ಎಡವಟ್ಟು'
ಮುಂಬೈ ಇಂಡಿಯನ್ಸ್​ ಸೋಲಿಗೆ ಕಾರಣವಾಯ್ತು ಈ ಒಂದು 'ಎಡವಟ್ಟು'
ಇತಿಹಾಸ ನಿರ್ಮಿಸಿದ ದಳಪತಿಗೆ ಸಿಎಂ ಸಿದ್ದರಾಮಯ್ಯ ವಿಶೇಷ ಅಭಿನಂದನೆ!
ಇತಿಹಾಸ ನಿರ್ಮಿಸಿದ ದಳಪತಿಗೆ ಸಿಎಂ ಸಿದ್ದರಾಮಯ್ಯ ವಿಶೇಷ ಅಭಿನಂದನೆ!
ತಿಂಗಳಾನುಗಟ್ಟಲೆ ಪೇಮೆಂಟ್ ಇಲ್ಲದೆ ಇಂದಿರಾ ಕ್ಯಾಂಟಿನ್ ಸಿಬ್ಬಂದಿ ಪರದಾಟ!
ತಿಂಗಳಾನುಗಟ್ಟಲೆ ಪೇಮೆಂಟ್ ಇಲ್ಲದೆ ಇಂದಿರಾ ಕ್ಯಾಂಟಿನ್ ಸಿಬ್ಬಂದಿ ಪರದಾಟ!
ಚಿಕ್ಕಬಳ್ಳಾಪುರದಲ್ಲಿ ಕಾಶ್ಮೀರಿ ಆ್ಯಪಲ್ ಬೆಳೆದು ಸೈ ಎನಿಸಿಕೊಂಡ ರೈತ!
ಚಿಕ್ಕಬಳ್ಳಾಪುರದಲ್ಲಿ ಕಾಶ್ಮೀರಿ ಆ್ಯಪಲ್ ಬೆಳೆದು ಸೈ ಎನಿಸಿಕೊಂಡ ರೈತ!