AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cyber Crime: ಆನ್​ಲೈನ್ ವಂಚನೆಯಿಂದ ಬರೋಬ್ಬರಿ 1.60 ಕೋಟಿ ರೂ. ಕಳೆದುಕೊಂಡ ಮಂಗಳೂರಿನ ವ್ಯಕ್ತಿ

ಆನ್ಲೈನ್ ವಂಚನೆ ಪ್ರಕರಣಗಳು ರಾಜ್ಯದಲ್ಲಿ ದಿನೇ ದಿನೇ ಹೆಚ್ಚಾಗುತ್ತಿವೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಇತ್ತೀಚೆಗೆ ಇಂತಹ ಹಲವು ಪ್ರಕರಣಗಳು ವರದಿಯಾಗಿವೆ..ತ್ತೀಚಿನ ದಿನಗಳಲ್ಲಿ ಬಹುದೊಡ್ಡದು ಎನ್ನಬಹುದಾದಂತಹ ಸೈಬರ್ ವಂಚನೆ ಪ್ರಕರಣ ಒಂದು ಮಂಗಳೂರಿನಲ್ಲಿ ಬೆಳಕಿಗೆ ಬಂದಿದ್ದು, ನಿವೃತ್ತ ಇಂಜಿನಿಯರ್ ಒಬ್ಬರು ಬರೋಬ್ಬರಿ 1.60 ಕೋಟಿ ರೂ. ಕಳೆದುಕೊಂಡಿದ್ದಾರೆ. ಸಂತ್ರಸ್ತ ವ್ಯಕ್ತಿ ಮೋಸ ಹೋಗಿದ್ದು ಹೇಗೆ ಎಂಬ ಮಾಹಿತಿ ಇಲ್ಲಿದೆ.

Cyber Crime: ಆನ್​ಲೈನ್ ವಂಚನೆಯಿಂದ ಬರೋಬ್ಬರಿ  1.60 ಕೋಟಿ ರೂ. ಕಳೆದುಕೊಂಡ ಮಂಗಳೂರಿನ ವ್ಯಕ್ತಿ
ಆನ್​ಲೈನ್ ವಂಚನೆ
ಗಣಪತಿ ಶರ್ಮಾ
|

Updated on: May 10, 2024 | 8:22 AM

Share

ಮಂಗಳೂರು, ಮೇ 10: ಮುಂಬೈ ಕ್ರೈಂ ಬ್ರಾಂಚ್ ಮತ್ತು ಸಿಬಿಐ ಅಧಿಕಾರಿಗಳ (Mumbai crime branch and CBI officers) ಸೋಗಿನಲ್ಲಿ ಆನ್‌ಲೈನ್ ವಂಚಕರು (Online Fraud) 72 ವರ್ಷದ ನಿವೃತ್ತ ಇಂಜಿನಿಯರ್‌ ಒಬ್ಬರಿಗೆ ಬೆದರಿಕೆ ಹಾಕಿ 1.60 ಕೋಟಿ ರೂ.ಗಳನ್ನು ಪಟಾಯಿಸಿರುವ ಬಹುದೊಡ್ಡ ಆನ್‌ಲೈನ್ ವಂಚನೆ (Cyber Crime) ಪ್ರಕರಣ ಮಂಗಳೂರಿನಲ್ಲಿ (Mangaluru) ಇತ್ತೀಚೆಗೆ ಬೆಳಕಿಗೆ ಬಂದಿದೆ. 72 ವರ್ಷದ ವ್ಯಕ್ತಿಗೆ ಮುಂಬೈ ಕ್ರೈಂ ಬ್ರಾಂಚ್ ವಿಭಾಗದ ಸೋಗಿನಲ್ಲಿ ವಂಚಕರಿಂದ ಬೆದರಿಕೆ ಕರೆ ಬಂದಿದ್ದು, ನಿಮ್ಮ ಹೆಸರಿನಲ್ಲಿ ಥಾಯ್ಲೆಂಡ್‌ಗೆ ಕಳುಹಿಸಲಾದ ಪಾರ್ಸೆಲ್‌ನಲ್ಲಿ ಡ್ರಗ್ಸ್ ಇದೆ ಎಂದು ಹೇಳಿದ್ದಾರೆ.

ಫೋನ್ ಮಾಡಿದ ಅಪರಿಚಿತ ವ್ಯಕ್ತಿ ತನ್ನ ಹೆಸರು ರಾಜೇಶ್ ಕುಮಾರ್ ಮತ್ತು ಫೆಡೆಕ್ಸ್ ಕಂಪನಿಯಿಂದ ಕರೆ ಮಾಡುತ್ತಿದ್ದೇನೆ ಎಂದು ಹೇಳಿದ್ದಾನೆ. ನೀವು ಥೈಲ್ಯಾಂಡ್‌ಗೆ ಕಳುಹಿಸಿದ್ದ ಪಾರ್ಸೆಲಲನ್ನು ಕಸ್ಟಮ್ಸ್ ವಶಪಡಿಸಿಕೊಂಡಿದೆ. ಇದು ಅಫ್ಘಾನಿಸ್ತಾನ ಮತ್ತು ಕೀನ್ಯಾದ ಐದು ಪಾಸ್‌ಪೋರ್ಟ್‌ಗಳನ್ನು, ಮೂರು ಕ್ರೆಡಿಟ್ ಕಾರ್ಡ್‌ಗಳನ್ನು ಹೊಂದಿದೆ. 140 ಗ್ರಾಂ ಎಂಡಿಎಂಎ ಔಷಧ, ನಾಲ್ಕು ಕಿಲೋ ಬಟ್ಟೆ ಮತ್ತು ಲ್ಯಾಪ್‌ಟಾಪ್ ಹೊಂದಿದೆ. ಮುಂಬೈ ಅಪರಾಧ ವಿಭಾಗವು ಪ್ರಕರಣದ ತನಿಖೆ ನಡೆಸುತ್ತಿದೆ ಎಂದು ವಂಚಕ ಹೇಳಿದ್ದಾನೆ.

ಮುಂಬೈ ಕ್ರೈಂ ಬ್ರಾಂಚ್ ಅಧಿಕಾರಿ ಎಂದು ಹೇಳಿಕೊಂಡ ಇನ್ನೊಬ್ಬ ವ್ಯಕ್ತಿ ಸಿಬಿಐ ಅಧಿಕಾರಿ ರುದ್ರ ರಾಥೋಡ್ ಹೆಚ್ಚುವರಿ ಮಾಹಿತಿಯನ್ನು ನೀಡಲಿದ್ದಾರೆ ಮತ್ತು ಇ-ಮೇಲ್ ಮೂಲಕ rathoreb@21 ಗೆ ಸಂಪರ್ಕಿಸಲು ನಿವೃತ್ತ ಎಂಜಿನಿಯರ್​​​ಗೆ ಸೂಚಿಸಿದ್ದಾರೆ. ನಂತರ ರುದ್ರ ರಾಥೋಡ್ ಎಂದು ಹೇಳಿಕೊಂಡ ವ್ಯಕ್ತಿಯೊಬ್ಬ ಕರೆ ಮಾಡಿ ಹಲವು ಮಕ್ಕಳನ್ನು ಹತ್ಯೆಗೈದ ತಂಡ ಈ ಪ್ರಕರಣದಲ್ಲಿ ಶಾಮೀಲಾಗಿದೆ ಎಂದು ತಿಳಿಸಿದ್ದಾನೆ. ಜತೆಗೆ, ನೀವು ತನಿಖೆಗೆ ಸಹಕರಿಸದಿದ್ದರೆ ನಿಮ್ಮ ಮಗ ಮತ್ತು ಮಗಳನ್ನು ಇಂಟರ್‌ಪೋಲ್ ಮೂಲಕ ಬಂಧಿಸಬೇಕಾಗುತ್ತದೆ ಎಂದು ಬೆದರಿಕೆಯೊಡ್ಡಿದ್ದಾನೆ.

ನಿವೃತ್ತ ಎಂಜಿನಿಯರ್ ಇದು ಮೋಸದ ದೂರವಾಣಿ ಕರೆ ಎಂದು ಅರ್ಥಮಾಡಿಕೊಳ್ಳದೆ ಭಯಗೊಂಡಿದ್ದಾರೆ. ವಂಚಕರು ಸ್ಕೈಪ್ ಖಾತೆ ತೆರೆಯುವಂತೆ ಒತ್ತಾಯಿಸಿ ಬೆದರಿಕೆ ಹಾಕಿದ್ದಾರೆ. ನಂತರ, ವಂಚಕರು ಸ್ಕೈಪ್ ಅಪ್ಲಿಕೇಶನ್‌ನಲ್ಲಿ ಸಿಬಿಐ ಅಧಿಕಾರಿಗಳಂತೆ ಪೋಸ್ ನೀಡಿ ಹಲವಾರು ನೋಟಿಸ್‌ಗಳನ್ನು ಕಳುಹಿಸಿದ್ದಾರೆ. ಬಂಧನದಿಂದ ಬಚಾವಾಗಬೇಕಾದರೆ ಬಾಂಡ್‌ಗಳ ರೂಪದಲ್ಲಿ ಹಣವನ್ನು ಕಳುಹಿಸುವಂತೆ ಹೇಳಿದ್ದಾರೆ.

ಇದನ್ನೂ ಓದಿ: ಕಾನೂನುಬಾಹಿರ ಚಟುವಟಿಕೆ; ಒಂದೇ ತಿಂಗಳಲ್ಲಿ ಬೆಂಗಳೂರಿನಲ್ಲಿ 563 ಮಂದಿ ಬಂಧನ

ನಂತರ ವಂಚಕರು, ಪ್ರಕರಣದ ತನಿಖೆ ಪೂರ್ಣಗೊಂಡ ನಂತರ ಮೊತ್ತವನ್ನು ಹಿಂದಿರುಗಿಸುವುದಾಗಿ ನಿವೃತ್ತ ಎಂಜಿನಿಯರ್‌ಗೆ ಭರವಸೆ ನೀಡಿದ್ದರು. ತನಗೆ ಮತ್ತು ಮಕ್ಕಳಿಗೆ ಹಾನಿ ಮಾಡಬೇಡಿ ಎಂದು ಮನವಿ ಮಾಡಿದ ಎಂಜಿನಿಯರ್, ಐಸಿಐಸಿಐ ಬ್ಯಾಂಕ್ ಖಾತೆಯಿಂದ ಮೇ 2 ರಂದು 1.1 ಕೋಟಿ ರೂ. ಮತ್ತು ಮೇ 6 ರಂದು 50 ಲಕ್ಷ ರೂ. ಗಳನ್ನು ಹಣ ವರ್ಗಾವಣೆ ಮಾಡಿದ್ದರು. ಆದರೆ, ಮರುದಿನ ಅಪರಿಚಿತರಿಗೆ ಅವರಿಗೆ ಕರೆ ಮಾಡಿದಾಗ ಯಾವುದೇ ಪ್ರತಿಕ್ರಿಯೆ ಬರಲಿಲ್ಲ. ನಂತರ ಸಂತ್ರ ವ್ಯಕ್ತಿ ತನ್ನ ಮಗಳಿಗೆ ಮಾಹಿತಿ ನೀಡಿದ್ದು, ವಾಸ್ತವದ ಅರಿವಾಗಿದೆ. ನಂತರ ಪೊಲೀಸರಿಗೆ ದೂರು ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು