AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲಿನಿಂದ ನೇರವಾಗಿ ಕಚೇರಿಗೆ: 2ನೇ ಬಾರಿ ಲೋಕಾಯುಕ್ತಕ್ಕೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ ಭೂವಿಜ್ಞಾನಿ ಸಸ್ಪೆಂಡ್

ದಕ್ಷಿಣ ಕನ್ನಡ ಜಿಲ್ಲಾ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪನಿರ್ದೇಶಕಿ ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದು ಬಂಧಿನಕೊಳ್ಳಲಾಗಿದ್ದರು. 18 ದಿನ ಜೈಲಿನಲ್ಲಿದ್ದರೂ ಬುದ್ಧಿ ಅಧಿಕಾರಿ ನೇರವಾಗಿ ಕಚೇರಿಗೆ ಆಗಮಿಸಿ ಮತ್ತೆ ದರ್ಬಾರ್ ನಡೆಸಿದ್ದರು. ಈ ಬಗ್ಗೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಇದೀಗ ಅಮಾನತುಗೊಳಿಸಲಾಗಿದೆ.

ಜೈಲಿನಿಂದ ನೇರವಾಗಿ ಕಚೇರಿಗೆ: 2ನೇ ಬಾರಿ ಲೋಕಾಯುಕ್ತಕ್ಕೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ ಭೂವಿಜ್ಞಾನಿ ಸಸ್ಪೆಂಡ್
ಕೃಷ್ಣವೇಣಿ
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on: Jun 22, 2025 | 12:38 PM

Share

ಮಂಗಳೂರು, ಜೂನ್ 22: ಕಚೇರಿಯಲ್ಲಿ ದರ್ಬಾರ್ ಮಾಡುತ್ತಿದ್ದ ಅಧಿಕಾರಿಯನ್ನು ಕೊನೆಗೂ ಅಮಾನತು (suspended) ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಗಣಿ ಮತ್ತು ಭೂವಿಜ್ಞಾನ ಇಲಾಖೆ (Mines dept Deputy Director) ಡಿಡಿ ಕೃಷ್ಣವೇಣಿ ಅನ್ನು ಇಲಾಖೆ ತನಿಖೆ ಬಾಕಿ ಇರಿಸಿ ಅಮಾನತುಗೊಳಿಸಿ ಅಧೀನ ಕಾರ್ಯದರ್ಶಿ ಮಂಜುನಾಥ್ ಭಾನುವಾರ ಆದೇಶ ಹೊರಡಿಸಿದ್ದಾರೆ. ಜೈಲಿನಿಂದ ನೇರಾವಾಗಿ ಕಚೇರಿಗೆ ಬಂದಿದ್ದ ಅಧಿಕಾರಿಗೆ ಬೊಕ್ಕೆ ಕೊಟ್ಟು ಸ್ವಾಗತಿಸಿದ್ದ ಫೋಟೋ ವೈರಲ್​ ಆಗಿದೆ.

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್​​ ಶನಿವಾರ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆಯುವ ಮೂಲಕ ಕೃಷ್ಣವೇಣಿಯನ್ನು ಸೇವೆಯಿಂದ ಅಮಾನತುಗೊಳಿಸಿ ಮತ್ತು ಶಿಸ್ತು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದರು.

12 ಕೋಟಿ ಮೌಲ್ಯದ ಆಸ್ತಿ ಪತ್ತೆ

ಡಿಡಿ ಕೃಷ್ಣವೇಣಿ ಅವರ ಮೇಲೆ 2ನೇ ಬಾರಿ ಲೋಕಾಯುಕ್ತ ದಾಳಿ ನಡೆದಿದ್ದು, ರೆಡ್​ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದರು. ಈ ವೇಳೆ 12 ಕೋಟಿ ಮೌಲ್ಯದ ಆಸ್ತಿ ಪತ್ತೆಯಾಗಿತ್ತು. ಇನ್ನು ಇತ್ತೀಚೆಗೆ ಉಳ್ಳಾಲ ತಾಲೂಕಿನ ಇರಾ ಗ್ರಾಮದ ವ್ಯಕ್ತಯೊಬ್ಬರ ಬಳಿ 50 ಸಾವಿರ ರೂ ಲಂಚ ಸ್ವೀಕರಿಸುವಾಗ ಬಂಧನಕೊಳ್ಳಗಾಗಿದ್ದರು.

ಇದನ್ನೂ ಓದಿ
Image
ಸರ್ಕಾರ ದಿಟ್ಟ ಹೆಜ್ಜೆ: ಸುಳ್ಳು ಸುದ್ದಿ, ದ್ವೇಷ ಭಾಷಣಕ್ಕೆ ಜೈಲು, ದಂಡ!
Image
ಮಂಗಳೂರು ಪೊಲೀಸರ ವಿರುದ್ಧ ಕಿರುಕುಳ ಆರೋಪ ಮಾಡಿದ ಕಾಂಗ್ರೆಸ್​​ ಕಾರ್ಯಕರ್ತ
Image
ಸಭೆಗಳಲ್ಲಿ ತುಳು ಬಳಕೆಗೆ ನಿರ್ಬಂಧ, ವ್ಯಾಪಕ ಆಕ್ರೋಶ ಬೆನ್ನಲ್ಲೇ ಆದೇಶ ವಾಪಸ್
Image
ಮಂಗಳೂರು: ಸೌಜನ್ಯ ಹೆಸರಿನಲ್ಲಿ ಹೆಲ್ಪ್ ಲೈನ್ ತೆರೆದು ವಂಚಿಸಿದ ಮಹಿಳೆ

ಇದನ್ನೂ ಓದಿ: ಮಂಗಳೂರು ಪೊಲೀಸರ ವಿರುದ್ಧ ಕಿರುಕುಳ ಆರೋಪ ಮಾಡಿದ ಕಾಂಗ್ರೆಸ್​ ಕಾರ್ಯಕರ್ತ: ಸ್ಪಷ್ಟನೆ ನೀಡಿದ ಆಯುಕ್ತ

ಸರ್ಕಾರದ ನಿಯಮಗಳ ಪ್ರಕಾರ 48 ಗಂಟೆಗಳಿಗಿಂತ ಹೆಚ್ಚು ಕಾಲ ಪೊಲೀಸ್​ ಕಸ್ಟಡಿಯಲ್ಲಿರುವ ಯಾವುದೇ ಅಧಿಕಾರಿಯನ್ನು ಅಮಾನತುಗೊಳಿಸಲಾಗುತ್ತದೆ. ಆದರೆ, ಕೃಷ್ಣವೇಣಿ 18 ದಿನ ಜೈಲಿನಲ್ಲಿದ್ದರೂ ಈ ನಿಯಮವನ್ನು ಪಾಲನೆ ಆಗಿಲ್ಲ ಎಲ್ಲಾಗಿದ್ದು, ಸಾರ್ವಜನಿಕರ ಟೀಕೆಗೂ ಗುರಿಯಾಗಿತ್ತು.

ಇದನ್ನೂ ಓದಿ: ಮಂಗಳೂರು: ಪಂಚಾಯತ್ ಸಾಮಾನ್ಯ ಸಭೆಗಳಲ್ಲಿ ತುಳು ಭಾಷೆ ಬಳಕೆಗೆ ನಿರ್ಬಂಧ, ವ್ಯಾಪಕ ಆಕ್ರೋಶದ ಬೆನ್ನಲ್ಲೇ ಆದೇಶ ವಾಪಸ್

ಜಾಮೀನು ಮೇಲೆ ಹೊರಬಂದು ಮತ್ತೆ ತಮ್ಮ ಸ್ಥಾನಕ್ಕೆ ಹಿಂದಿರುಗಿದ್ದರು. ಜೊತೆಗೆ ಹೈಕೋರ್ಟ್​​ನಿಂದ ಸ್ಟೇ ತಂದು ಅಮಾನತು ಮಾಡದಂತೆ ತಡೆದಿದ್ದರು. ಇತ್ತ ಕಚೇರಿಯಲ್ಲಿ ಮತ್ತೆ ದರ್ಬಾರ್ ಮಾಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ಆಕ್ಷೇಪ ಬಂದ ಹಿನ್ನಲೆ ಕೃಷ್ಣವೇಣಿ ಅವರನ್ನು ಅಮಾನತುಗೊಳಿಸಲಾಗಿದೆ.

ಸಂದೀಪ್ ಜೆ.ಯು ಭಾರ ಉಪ ನಿರ್ದೇಶಕರಾಗಿ ನೇಮಕ

ಕೃಷ್ಣವೇಣಿ ಅವರನ್ನು ಅಮಾನತುಗೊಳಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರ ಉಡುಪಿಯ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ವಿಜ್ಞಾನಿ ಸಂದೀಪ್ ಜೆ.ಯು. ಅವರನ್ನು ಪ್ರಭಾರ ಉಪ ನಿರ್ದೇಶಕರನ್ನಾಗಿ ನೇಮಿಸಿ ಆದೇಶ ಹೊರಡಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Pruthviraj
Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು