AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಹಕಾರ ಸಚಿವರಾದ ಮೊದಲ ದಿನವೇ ನಾನು ಸ್ವಾಗತಿಸಿದ್ದೇನೆ: ಅಮಿತ್ ಶಾರನ್ನು ಹಾಡಿಹೊಗಳಿದ ಸಚಿವ ಕೆಎನ್​ ರಾಜಣ್ಣ

ಮಂಗಳೂರಿನಲ್ಲಿ ನಡೆದ ಸಹಕಾರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವ ಕೆ.ಎನ್.ರಾಜಣ್ಣ, ಅಮಿತ್ ಶಾ ಸಹಕಾರ ಸಚಿವರಾದ ಮೊದಲ ದಿನವೇ ನಾನು ಸ್ವಾಗತಿಸಿದ್ದೇನೆ. ಪಕ್ಷದ ದೃಷ್ಟಿಯಲ್ಲಿ ಯಾರು ಏನು ಬೇಕಾದರೂ ಹೇಳಿಕೊಳ್ಳಬಹುದು. ಆದರೆ ನಾನೊಬ್ಬ ಸಹಕಾರ ಇಲಾಖೆ ಸಚಿವನಾಗಿ ಸ್ವಾಗತಿಸಿದ್ದೇನೆ ಎಂದು ಹೇಳಿದ್ದಾರೆ.

ಸಹಕಾರ ಸಚಿವರಾದ ಮೊದಲ ದಿನವೇ ನಾನು ಸ್ವಾಗತಿಸಿದ್ದೇನೆ: ಅಮಿತ್ ಶಾರನ್ನು ಹಾಡಿಹೊಗಳಿದ ಸಚಿವ ಕೆಎನ್​ ರಾಜಣ್ಣ
ಕೇಂದ್ರ ಸಚಿವ ಅಮಿತ್ ಶಾ, ಸಚಿವ ಕೆ.ಎನ್.ರಾಜಣ್ಣ
ಅಶೋಕ್​ ಪೂಜಾರಿ
| Edited By: |

Updated on:Nov 17, 2023 | 4:33 PM

Share

ಮಂಗಳೂರು, ನವೆಂಬರ್​​ 17: ಕೇಂದ್ರ ಸಚಿವ ಅಮಿತ್ ಶಾ (Amit Shah) ಅವರು ಒಂದು ಹಳ್ಳಿಯ ಸೊಸೈಟಿ ಅಧ್ಯಕ್ಷರು. ಅಹಮದಾಬಾದ್​ ಜಿಲ್ಲಾ ಬ್ಯಾಂಕ್, ಗುಜರಾತ್ ಅಫೆಕ್ಸ್ ಬ್ಯಾಂಕ್​ ನಿರ್ದೇಶಕರು. ಸಹಕಾರ ಇಲಾಖೆಯ ಎಲ್ಲಾ ವಿಚಾರಗಳು ಸಹ ಅಮಿತ್​ ಶಾಗೆ ಗೊತ್ತಿದೆ. ಅಂಥವರು ಸಹಕಾರ ಇಲಾಖೆ ಸಚಿವರಾಗಿರುವುದು ನಮಗೆಲ್ಲರಿಗೂ ಹೆಮ್ಮೆ ಎಂದು ಅಮಿತ್ ಶಾರನ್ನು ಸಚಿವ ಕೆ.ಎನ್.ರಾಜಣ್ಣ ಹಾಡಿಹೊಗಳಿದ್ದಾರೆ. ನಗರದಲ್ಲಿ ನಡೆದ ಸಹಕಾರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಮಿತ್ ಶಾ ಸಹಕಾರ ಸಚಿವರಾದ ಮೊದಲ ದಿನವೇ ನಾನು ಸ್ವಾಗತಿಸಿದ್ದೇನೆ. ಪಕ್ಷದ ದೃಷ್ಟಿಯಲ್ಲಿ ಯಾರು ಏನು ಬೇಕಾದರೂ ಹೇಳಿಕೊಳ್ಳಬಹುದು. ಆದರೆ ನಾನೊಬ್ಬ ಸಹಕಾರ ಇಲಾಖೆ ಸಚಿವನಾಗಿ ಸ್ವಾಗತಿಸಿದ್ದೇನೆ ಎಂದು ಹೇಳಿದ್ದಾರೆ.

ಯಾರೋ ಗೊತ್ತಿಲ್ಲದ ಸಚಿವರು ಇಲಾಖೆಗೆ ಬಂದಾಗ ಪಾಠ ಮಾಡಿ ತಿಳಿಸಬೇಕು. ಅಷ್ಟೊತ್ತಿಗೆ ಅವರ ಅಧಿಕಾರವಧಿ ಮುಗಿದು ಹೋಗಿರುತ್ತೆ. ಅಮಿತ್ ಶಾ ಬಂದಿದ್ದರಿಂದ ಅನುಕೂಲವಾಗುತ್ತೆ ಅಂತಾ ಅವತ್ತೇ ಸ್ವಾಗತಿಸಿದ್ದೆ. ಸಹಕಾರಿ ಆಂದೋಲನಕ್ಕೆ ಪೂರಕ ಸಲಹೆ ನೀಡಿದರೆ ನಾವು ತೆಗೆದುಕೊಳ್ಳುತ್ತೇವೆ. ಇದರಲ್ಲಿ ಯಾವುದೇ ವ್ಯತ್ಯಾಸಗಳಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ತುಮಕೂರು ಲೋಕಸಭೆ ಕ್ಷೇತ್ರದ ಟಿಕೆಟ್​ಗೆ ಬೇಡಿಕೆ ಇಟ್ಟಿದ್ದೇನೆ: ಸಚಿವ ಕೆಎನ್​ ರಾಜಣ್ಣ

ಗೌರಿಶಂಕರ್​ ಕಾಂಗ್ರೆಸ್​ ಸೇರ್ಪಡೆಗೆ ಅಸಮಾಧಾನ ವಿಚಾರವಾಗಿ ಮಾತನಾಡಿದ ಅವರು, ವಿರೋಧ ಅಂತಾ ನಾನು ಹೇಳಿಲ್ಲ, ಅಸಮಾಧಾನ ಇದ್ದೇ ಇರುತ್ತದೆ. ಒಂದು ಮನೆಯಲ್ಲಿ ಅಸಮಾಧಾನ ಇರಲ್ವಾ. ಆದರೆ ಪಕ್ಷಕ್ಕೆ ಮಾರಕವಾಗುವ ರೀತಿಯಲ್ಲಿ ಅಸಮಾಧಾನ ಇಲ್ಲ. ಸಾತ್ವಿಕ ವಿರೋಧ ಅಷ್ಟೇ. ಇನ್ನೂ ಯಾರ್ಯಾರು ಕಾಂಗ್ರೆಸ್​ಗೆ ಬರುತ್ತಾರೆ ಅಂತಾ ಮುಂದೆ ನೋಡಿ ಎಂದು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಗೆ ಕರ್ನಾಟಕ ಅಂದರೆ ಭಯ: ಎಂ ಸಿದ್ದರಾಮಯ್ಯ 

ಮೈಸೂರಿನ ಮಂಡಕಳ್ಳಿ ಏರ್​ಪೋರ್ಟ್​​ನಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದು, ಪ್ರಧಾನಿ ನರೇಂದ್ರ ಮೋದಿಗೆ ಕರ್ನಾಟಕ ಅಂದರೆ ಭಯ. ಕರ್ನಾಟಕ ಕಾಂಗ್ರೆಸ್​ ಸರ್ಕಾರದ ಬಗ್ಗೆ ಪ್ರಧಾನಿ ಮೋದಿ ಭಯವಿದೆ. ಹೀಗಾಗಿ ಮಧ್ಯಪ್ರದೇಶದಲ್ಲಿ ಕರ್ನಾಟಕದ ಬಗ್ಗೆ ಮೋದಿ ಮಾತಾಡ್ತಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳನ್ನ ಜಾರಿಗೆ ತಂದಿದೆ. ಮೋದಿ ಕೂಡ ಪಂಚರಾಜ್ಯಗಳಲ್ಲಿ ಗ್ಯಾರಂಟಿ ಯೋಜನೆ ಘೋಷಿಸಿದ್ದಾರೆ ಎಂದು ವಾಗ್ದಾಳಿ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:10 pm, Fri, 17 November 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ