ಸಹಕಾರ ಸಚಿವರಾದ ಮೊದಲ ದಿನವೇ ನಾನು ಸ್ವಾಗತಿಸಿದ್ದೇನೆ: ಅಮಿತ್ ಶಾರನ್ನು ಹಾಡಿಹೊಗಳಿದ ಸಚಿವ ಕೆಎನ್​ ರಾಜಣ್ಣ

ಮಂಗಳೂರಿನಲ್ಲಿ ನಡೆದ ಸಹಕಾರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವ ಕೆ.ಎನ್.ರಾಜಣ್ಣ, ಅಮಿತ್ ಶಾ ಸಹಕಾರ ಸಚಿವರಾದ ಮೊದಲ ದಿನವೇ ನಾನು ಸ್ವಾಗತಿಸಿದ್ದೇನೆ. ಪಕ್ಷದ ದೃಷ್ಟಿಯಲ್ಲಿ ಯಾರು ಏನು ಬೇಕಾದರೂ ಹೇಳಿಕೊಳ್ಳಬಹುದು. ಆದರೆ ನಾನೊಬ್ಬ ಸಹಕಾರ ಇಲಾಖೆ ಸಚಿವನಾಗಿ ಸ್ವಾಗತಿಸಿದ್ದೇನೆ ಎಂದು ಹೇಳಿದ್ದಾರೆ.

ಸಹಕಾರ ಸಚಿವರಾದ ಮೊದಲ ದಿನವೇ ನಾನು ಸ್ವಾಗತಿಸಿದ್ದೇನೆ: ಅಮಿತ್ ಶಾರನ್ನು ಹಾಡಿಹೊಗಳಿದ ಸಚಿವ ಕೆಎನ್​ ರಾಜಣ್ಣ
ಕೇಂದ್ರ ಸಚಿವ ಅಮಿತ್ ಶಾ, ಸಚಿವ ಕೆ.ಎನ್.ರಾಜಣ್ಣ
Edited By:

Updated on: Nov 17, 2023 | 4:33 PM

ಮಂಗಳೂರು, ನವೆಂಬರ್​​ 17: ಕೇಂದ್ರ ಸಚಿವ ಅಮಿತ್ ಶಾ (Amit Shah) ಅವರು ಒಂದು ಹಳ್ಳಿಯ ಸೊಸೈಟಿ ಅಧ್ಯಕ್ಷರು. ಅಹಮದಾಬಾದ್​ ಜಿಲ್ಲಾ ಬ್ಯಾಂಕ್, ಗುಜರಾತ್ ಅಫೆಕ್ಸ್ ಬ್ಯಾಂಕ್​ ನಿರ್ದೇಶಕರು. ಸಹಕಾರ ಇಲಾಖೆಯ ಎಲ್ಲಾ ವಿಚಾರಗಳು ಸಹ ಅಮಿತ್​ ಶಾಗೆ ಗೊತ್ತಿದೆ. ಅಂಥವರು ಸಹಕಾರ ಇಲಾಖೆ ಸಚಿವರಾಗಿರುವುದು ನಮಗೆಲ್ಲರಿಗೂ ಹೆಮ್ಮೆ ಎಂದು ಅಮಿತ್ ಶಾರನ್ನು ಸಚಿವ ಕೆ.ಎನ್.ರಾಜಣ್ಣ ಹಾಡಿಹೊಗಳಿದ್ದಾರೆ. ನಗರದಲ್ಲಿ ನಡೆದ ಸಹಕಾರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಮಿತ್ ಶಾ ಸಹಕಾರ ಸಚಿವರಾದ ಮೊದಲ ದಿನವೇ ನಾನು ಸ್ವಾಗತಿಸಿದ್ದೇನೆ. ಪಕ್ಷದ ದೃಷ್ಟಿಯಲ್ಲಿ ಯಾರು ಏನು ಬೇಕಾದರೂ ಹೇಳಿಕೊಳ್ಳಬಹುದು. ಆದರೆ ನಾನೊಬ್ಬ ಸಹಕಾರ ಇಲಾಖೆ ಸಚಿವನಾಗಿ ಸ್ವಾಗತಿಸಿದ್ದೇನೆ ಎಂದು ಹೇಳಿದ್ದಾರೆ.

ಯಾರೋ ಗೊತ್ತಿಲ್ಲದ ಸಚಿವರು ಇಲಾಖೆಗೆ ಬಂದಾಗ ಪಾಠ ಮಾಡಿ ತಿಳಿಸಬೇಕು. ಅಷ್ಟೊತ್ತಿಗೆ ಅವರ ಅಧಿಕಾರವಧಿ ಮುಗಿದು ಹೋಗಿರುತ್ತೆ. ಅಮಿತ್ ಶಾ ಬಂದಿದ್ದರಿಂದ ಅನುಕೂಲವಾಗುತ್ತೆ ಅಂತಾ ಅವತ್ತೇ ಸ್ವಾಗತಿಸಿದ್ದೆ. ಸಹಕಾರಿ ಆಂದೋಲನಕ್ಕೆ ಪೂರಕ ಸಲಹೆ ನೀಡಿದರೆ ನಾವು ತೆಗೆದುಕೊಳ್ಳುತ್ತೇವೆ. ಇದರಲ್ಲಿ ಯಾವುದೇ ವ್ಯತ್ಯಾಸಗಳಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ತುಮಕೂರು ಲೋಕಸಭೆ ಕ್ಷೇತ್ರದ ಟಿಕೆಟ್​ಗೆ ಬೇಡಿಕೆ ಇಟ್ಟಿದ್ದೇನೆ: ಸಚಿವ ಕೆಎನ್​ ರಾಜಣ್ಣ

ಗೌರಿಶಂಕರ್​ ಕಾಂಗ್ರೆಸ್​ ಸೇರ್ಪಡೆಗೆ ಅಸಮಾಧಾನ ವಿಚಾರವಾಗಿ ಮಾತನಾಡಿದ ಅವರು, ವಿರೋಧ ಅಂತಾ ನಾನು ಹೇಳಿಲ್ಲ, ಅಸಮಾಧಾನ ಇದ್ದೇ ಇರುತ್ತದೆ. ಒಂದು ಮನೆಯಲ್ಲಿ ಅಸಮಾಧಾನ ಇರಲ್ವಾ. ಆದರೆ ಪಕ್ಷಕ್ಕೆ ಮಾರಕವಾಗುವ ರೀತಿಯಲ್ಲಿ ಅಸಮಾಧಾನ ಇಲ್ಲ. ಸಾತ್ವಿಕ ವಿರೋಧ ಅಷ್ಟೇ. ಇನ್ನೂ ಯಾರ್ಯಾರು ಕಾಂಗ್ರೆಸ್​ಗೆ ಬರುತ್ತಾರೆ ಅಂತಾ ಮುಂದೆ ನೋಡಿ ಎಂದು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಗೆ ಕರ್ನಾಟಕ ಅಂದರೆ ಭಯ: ಎಂ ಸಿದ್ದರಾಮಯ್ಯ 

ಮೈಸೂರಿನ ಮಂಡಕಳ್ಳಿ ಏರ್​ಪೋರ್ಟ್​​ನಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದು, ಪ್ರಧಾನಿ ನರೇಂದ್ರ ಮೋದಿಗೆ ಕರ್ನಾಟಕ ಅಂದರೆ ಭಯ. ಕರ್ನಾಟಕ ಕಾಂಗ್ರೆಸ್​ ಸರ್ಕಾರದ ಬಗ್ಗೆ ಪ್ರಧಾನಿ ಮೋದಿ ಭಯವಿದೆ. ಹೀಗಾಗಿ ಮಧ್ಯಪ್ರದೇಶದಲ್ಲಿ ಕರ್ನಾಟಕದ ಬಗ್ಗೆ ಮೋದಿ ಮಾತಾಡ್ತಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳನ್ನ ಜಾರಿಗೆ ತಂದಿದೆ. ಮೋದಿ ಕೂಡ ಪಂಚರಾಜ್ಯಗಳಲ್ಲಿ ಗ್ಯಾರಂಟಿ ಯೋಜನೆ ಘೋಷಿಸಿದ್ದಾರೆ ಎಂದು ವಾಗ್ದಾಳಿ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:10 pm, Fri, 17 November 23

Ashok

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸುದ್ದಿಬಿಡುಗಡೆ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಪ್ರಜಾ ಟಿ.ವಿಯ ಉಡುಪಿ ಜಿಲ್ಲಾ ವರದಿಗಾರರಾಗಿ ಒಂದು ವರ್ಷ ಏಳು ತಿಂಗಳು ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ, ಒಂದು ವರ್ಷ ನಾಲ್ಕು ತಿಂಗಳಿನಿಂದ ಟಿ.ವಿ 9 ವಾಹಿನಿಯಲ್ಲಿ ದಕ್ಷಿಣಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ ಇಂಡಿಯಾ ಟೆಲಿವಿಷನ್​ . ಕಾಮ್​ 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More
Follow Us