ಮಂಗಳೂರು: ಆಸ್ಪತ್ರೆಯಲ್ಲಿ ದೈಹಿಕ ಸಂಪರ್ಕ ನಡೆಸುವುದನ್ನು ನೋಡಿದ ಅಪ್ರಾಪ್ತೆ ಮೇಲೆ ಅತ್ಯಾಚಾರ!

ಆಸ್ಪತ್ರೆಯಲ್ಲಿ ಮಹಿಳೆಯೊಂದಿಗೆ ದೈಹಿಕ ಸಂಪರ್ಕ ನಡೆಸುತ್ತಿದ್ದಾಗ ನೋಡಿದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಡೆದಿದೆ. ಪ್ರಕರಣ ಸಂಬಂಧ ಪೊಲೀಸರು ಮಹಿಳೆ ಸಹಿತ ಇಬ್ಬರನ್ನು ಬಂಧಿಸಿದ್ದಾರೆ.

ಮಂಗಳೂರು: ಆಸ್ಪತ್ರೆಯಲ್ಲಿ ದೈಹಿಕ ಸಂಪರ್ಕ ನಡೆಸುವುದನ್ನು ನೋಡಿದ ಅಪ್ರಾಪ್ತೆ ಮೇಲೆ ಅತ್ಯಾಚಾರ!
ಆಸ್ಪತ್ರೆಯಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪಿ ಅಬ್ದುಲ್ ಹಲೀಂ ಮತ್ತು ಕೃತ್ಯಕ್ಕೆ ಸಹಕರಿಸಿದ ಮಹಿಳೆ ಶಮೀನಾ ಬಾನು
Edited By: Rakesh Nayak Manchi

Updated on: Aug 17, 2023 | 9:59 PM

ಮಂಗಳೂರು, ಆಗಸ್ಟ್ 17: ಅಪ್ರಾಪ್ತ ವಿಶೇಷ ಸಾಮರ್ಥ್ಯ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಘಟನೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಮಂಗಳೂರಿನ (Mangaluru) ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಪ್ರಕರಣ ಸಂಬಂಧ ಅತ್ಯಾಚಾರ ಎಸಗಲು ಸಹಕಿಸಿದ ಮಹಿಳೆ ಸೇರಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಅಬ್ದುಲ್ ಹಲೀಂ (37) ಮತ್ತು ಶಮೀನಾ ಬಾನು (22) ಬಂಧಿತ ಆರೋಪಿಗಳಾಗಿದ್ದಾರೆ.

ಬೈಕ್ ಅಪಘಾತದಲ್ಲಿ ಅಬ್ದುಲ್ ಹಲೀಂ ಮತ್ತು ಆತನ ಸ್ನೇಹಿತ ಗಾಯಗೊಂಡು ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಇವರನ್ನು ನೋಡಲು ಮಹಿಳೆಯೊಬ್ಬಳು ಅಪ್ರಾಪ್ತ ಮಗಳನ್ನು ಕರೆದುಕೊಂಡು ಹೋಗಿದ್ದಾರೆ. ಹೀಗೆ ಬಂದಾಕೆ, ತನ್ನ ಮಗಳನ್ನ ಶಮೀನಾ ಬಾನು ಜೊತೆ ಬಿಟ್ಟು  ಪೊಲೀಸ್ ಠಾಣೆಗೆ ಹೋಗಿದ್ದಾರೆ.

ಇದನ್ನೂ ಓದಿ: ಮಂಗಳೂರು ಸೇರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಹೆಚ್ಚಾದ ಮದ್ರಾಸ್ ಐ; ಕಾಂಜಂಕ್ಟಿವಿಟಿಸ್ ಬಗ್ಗೆ ಎಚ್ಚರಿಕೆ ವಹಿಸಲು ಸೂಚನೆ

ಈ ನಡುವೆ ಆಸ್ಪತ್ರೆಯಲ್ಲಿ ಅಬ್ದುಲ್ ಹಲೀಂ ಮತ್ತು ಶಮೀನಾ ದೈಹಿಕ ಸಂಪರ್ಕ ನಡೆಸುತ್ತಿದ್ದಾಗ ಅಪ್ರಾಪ್ತ ಬಾಲಕಿ ನೋಡಿದ್ದಾಳೆ. ಹೀಗಾಗಿ ಈಕೆಯ ಮೇಲೆ ಅತ್ಯಾಚರಕ್ಕೆ ಅಬ್ದುಲ್ ಹಲೀಂ ಯತ್ನಿಸಿದಾಗ ಪ್ರತಿರೋಧವೊಡ್ಡಿದ್ದಾಳೆ. ಈ ವೇಳೆ ಶಮೀನಾ, ಬಾಲಕಿಯ ಕೈ ಹಿಡಿದು ಬಾಯಿ ಮುಚ್ಚಿ ಅತ್ಯಾಚರ ಮಾಡಲು ಸಹಕರಿಸಿದ್ದಾಳೆ.

ವಿಚಾರ ತಿಳಿದ ಬಾಲಕಿಯ ತಾಯಿ ಮಂಗಳೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಅಬ್ದುಲ್ ಹಲೀಂ ಮತ್ತು ಶಮೀನಾಳನ್ನು ಬಂಧಿಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:57 pm, Thu, 17 August 23

Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
Follow Us