AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಅಪ್ರಾಪ್ತೆ ಮೇಲೆ ಯುವಕರಿಬ್ಬರಿಂದ ಅತ್ಯಾಚಾರ, ವಿಡಿಯೋ ವೈರಲ್ ಮಾಡಿದವರೂ ಖಾಕಿ ಬಲೆಗೆ!

ಮಂಗಳೂರಿನಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಇಬ್ಬರು ಯುವಕರಿಂದ ಅತ್ಯಾಚಾರವೆಸಗಿರುವಂತಹ ಘಟನೆ ಜೂನ್​ನಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಅತ್ಯಾಚಾರದ ವಿಡಿಯೋ ಮಾಡಿ ವೈರಲ್​ ಮಾಡಲಾಗಿತ್ತು. ಬಜ್ಪೆ ಪೊಲೀಸ್ ಠಾಣೆಗೆ ಸಂತ್ರಸ್ತ ಬಾಲಕಿ ದೂರು ನೀಡಿದ್ದಳು. ಅತ್ಯಾಚಾರವೆಸಗಿದ ಮತ್ತು ವಿಡಿಯೋ ವೈರಲ್​ ಮಾಡಿದ ಒಟ್ಟು ಎಂಟು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು: ಅಪ್ರಾಪ್ತೆ ಮೇಲೆ ಯುವಕರಿಬ್ಬರಿಂದ ಅತ್ಯಾಚಾರ, ವಿಡಿಯೋ ವೈರಲ್ ಮಾಡಿದವರೂ ಖಾಕಿ ಬಲೆಗೆ!
ಪ್ರಾತಿನಿಧಿಕ ಚಿತ್ರ
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on: Sep 03, 2025 | 3:57 PM

Share

ಮಂಗಳೂರು, ಸೆಪ್ಟೆಂಬರ್​ 03: ಅಪ್ರಾಪ್ತ ಬಾಲಕಿ (girl) ಮೇಲೆ ಯುವಕರಿಬ್ಬರಿಂದ ಸಾಮೂಹಿಕ ಅತ್ಯಾಚಾರವೆಸಗಿದ್ದ ಘಟನೆಯೊಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮಂಗಳೂರು (Mangaluru) ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಜೂನ್​​ನಲ್ಲಿ ದುಷ್ಕೃತ್ಯ ನಡೆದಿದೆ. ಬಜ್ಪೆ ಪೊಲೀಸ್ ಠಾಣೆಗೆ ಸಂತ್ರಸ್ತ ಬಾಲಕಿ ದೂರು ನೀಡಿದ್ದಳು. ಅತ್ಯಾಚಾರವೆಸಗಿದ ಮತ್ತು ವಿಡಿಯೋ ವೈರಲ್​ ಮಾಡಿದ್ದ ಒಟ್ಟು ಎಂಟು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ನಡೆದ್ದೇನು?

ಓರ್ವ ಆರೋಪಿ ಇನ್​ಸ್ಟಾಗ್ರಾಂನಲ್ಲಿ ಬಾಲಕಿಯನ್ನು ಪರಿಚಯಿಸಿಕೊಂಡಿದ್ದ. ಬಳಿಕ ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಕರೆಸಿಕೊಂಡು ಒಬ್ಬನಿಂದ ಅತ್ಯಾಚಾರವೆಸಗಿದ್ದು, ಮತ್ತೋರ್ವ ಆರೋಪಿ ವಿಡಿಯೋ ಮಾಡಿದ್ದ. ನಂತರ ಅತ್ಯಾಚಾರದ ವಿಡಿಯೋವನ್ನು ದುಷ್ಕರ್ಮಿಗಳು ಸ್ನೇಹಿತರಿಗೆ ಕಳುಹಿಸಿದ್ದರು. ಆರೋಪಿಯ ಸ್ನೇಹಿತರು ಅತ್ಯಾಚಾರ ವಿಡಿಯೋವನ್ನು ವೈರಲ್ ಮಾಡಿದ್ದರು. ಸದ್ಯ ಗ್ಯಾಂಗ್​ರೇಪ್ ಸಂಬಂಧ ಎಂಟು ಆರೋಪಿಗಳನ್ನು ಬಂಧಿಸಲಾಗಿದೆ.

ಅಪ್ರಾಪ್ತ ಬಾಲಕನಿಂದ ಅಪ್ರಾಪ್ತೆ ಮೇಲೆ ಅತ್ಯಾಚಾರ

ಅಪ್ರಾಪ್ತನೊಬ್ಬ ಅತ್ಯಾಚಾರ ಎಸಗಿದ ಪರಿಣಾಮ ಅಪ್ರಾಪ್ತೆಯೋರ್ವಳು ಎರಡು ತಿಂಗಳ ಗರ್ಭಿಣಿಯಾಗಿರುವಂತಹ ಘಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್ ಗ್ರಾಮೀಣ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಾಲಕಿಯ ತಂದೆ ಸದ್ಯ ಇಳಕಲ್ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ
Image
26 ರ ವಿಧವೆ ಜೊತೆ 52 ರ ಇಬ್ಬರು ಹೆಂಡಿರ ಗಂಡನ ಲಿವ್ ಇನ್! ನಡೆಯಿತು ದುರಂತ
Image
ಬೆಂಗಳೂರಿನ ಪಿಜಿಯಲ್ಲಿ ಮಲಗಿದ್ದ ಯುವತಿಗೆ ಲೈಂಗಿಕ ಕಿರುಕುಳ
Image
ಶಿವಮೊಗ್ಗ: 9ನೇ ಕ್ಲಾಸ್ ವಿದ್ಯಾರ್ಥಿನಿಗೆ ಹೆರಿಗೆ! ಫೋಕ್ಸೋ ಕೇಸ್ ದಾಖಲು
Image
ಟೀನೇಜ್ ಪ್ರೆಗ್ನೆನ್ಸಿ ಭಾರೀ ಹೆಚ್ಚಳ: ಬೆಚ್ಚಿಬೀಳಿಸುವಂತಿದೆ ಅಂಕಿಅಂಶ

ಇದನ್ನೂ ಓದಿ: ಬೆಂಗಳೂರಿನ ಪಿಜಿಯಲ್ಲಿ ಮಲಗಿದ್ದ ಯುವತಿಗೆ ಲೈಂಗಿಕ ದೌರ್ಜನ್ಯ; ಹಲ್ಲೆ ಮಾಡಿ ದುಡ್ಡಿನೊಂದಿಗೆ ಆರೋಪಿ ಪರಾರಿ

ಈ ಹಿಂದೆ ಮೊರಾರ್ಜಿ ಶಾಲೆಯಲ್ಲಿ ಬಾಲಕಿ 7ನೇ ತರಗತಿಯಲ್ಲಿದ್ದಾಗ ಬಾಲಕ 8ನೇ ತರಗತಿ ಓದುತ್ತಿದ್ದನಂತೆ, ಆಗಲೇ ಇವರಿಬ್ಬರ ಮಧ್ಯೆ ಪರಿಚಯವಾಗಿತ್ತಂತೆ. ಸದ್ಯ ಬಾಲಕಿ ಎರಡು ತಿಂಗಳ ಗರ್ಭಿಣಿಯಾಗಿದ್ದಾಳೆಂದು ಆರೋಪಿ ವಿರುದ್ಧ ಪೋಕ್ಸೋ ಕೇಸ್ ದಾಖಲಿಸಿದ್ದಾರೆ.

ಇದನ್ನೂ ಓದಿ: 26 ರ ವಿಧವೆ ಜೊತೆ 52 ವರ್ಷದ ಇಬ್ಬರು ಹೆಂಡಿರ ಗಂಡನ ಲಿವಿಂಗ್ ಟುಗೆದರ್! ಯುವತಿ ದೂರವಾಗ್ತಾಳೆಂದು ಬೆಂಕಿ ಹಚ್ಚಿ ಕೊಲೆ

ಇನ್ನು ಸದ್ಯ ಅಪ್ರಾಪ್ತಳಿಗೆ 16 ವರ್ಷವಿದ್ದು, ಆರೋಪಿತನಿಗೆ 17 ವರ್ಷ ವಯಸ್ಸಾಗಿದೆ. ಈ ಹಿಂದೆ ಶಾಲೆಯಲ್ಲಿರುವಾಗಲೇ ಇವರಿಬ್ಬರ ಪರಿಚಯವಾಗಿತ್ತು. ಹೀಗಾಗಿ ಮಗಳನ್ನ ಪುಸಲಾಯಿಸಿ ಆರೋಪಿ ಅತ್ಯಾಚಾರ ಮಾಡಿದ್ದಾನೆಂದು ತಂದೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Pruthviraj
Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ