AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಷಾನಿಲ ಸೋರಿಕೆ ಕೇಸ್​: ದಿಗ್ಬಂಧನದಲ್ಲಿದ್ದ ಐವರು ಸಿಬ್ಬಂದಿ ರಕ್ಷಣೆ, ಮಂಗಳೂರಿನತ್ತ ಪಯಣ

ಮಂಗಳೂರಿನ ಹೊರವಲಯದ ಸುರತ್ಕಲ್​ನಲ್ಲಿರುವ MRPL ಕಾರ್ಖಾನೆಯಲ್ಲಿ ವಿಷಾನಿಲ ಸೋರಿಕೆಯಿಂದ ಇಬ್ಬರು ಸಿಬ್ಬಂದಿ ಮೃತಪಟ್ಟಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಪ್ರಯಾಗ್ ರಾಜ್​ನಲ್ಲಿ ದಿಗ್ಬಂಧನದಲ್ಲಿದ್ದ ಐವರು ಸಿಬ್ಬಂದಿಯನ್ನು ಸ್ಥಳೀಯ ಪೊಲೀಸರು ಇದೀಗ ರಕ್ಷಿಸಿದ್ದಾರೆ. ಸದ್ಯ ವಿಮಾನದಲ್ಲಿ ಮಂಗಳೂರಿನ ಕಡೆಗೆ ಐವರು ಸಿಬ್ಬಂದಿ ಹೊರಟ್ಟಿದ್ದಾರೆ.

ವಿಷಾನಿಲ ಸೋರಿಕೆ ಕೇಸ್​: ದಿಗ್ಬಂಧನದಲ್ಲಿದ್ದ ಐವರು ಸಿಬ್ಬಂದಿ ರಕ್ಷಣೆ, ಮಂಗಳೂರಿನತ್ತ ಪಯಣ
ದಿಗ್ಬಂಧನದಲ್ಲಿದ್ದ ಸಿಬ್ಬಂದಿ
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on: Jul 14, 2025 | 1:02 PM

Share

ಮಂಗಳೂರು, ಜುಲೈ 14: ಮಂಗಳೂರಿನ (Mangaluru) ಹೊರವಲಯದ ಎಂಆರ್​ಪಿಎಲ್​​ನಲ್ಲಿ ವಿಷಾನಿಲ ಸೋರಿಕೆಯಿಂದಾಗಿ ಇಬ್ಬರು ಸಿಬ್ಬಂದಿ ದುರ್ಮರಣ (death) ಹೊಂದಿದ್ದರು. ಮೃತಪಟ್ಟ ಸಿಬ್ಬಂದಿಗಳ ವಿಚಾರವಾಗಿ ಸ್ಪಂದನೆ ನೀಡದ ಆರೋಪ ಹಿನ್ನಲೆ ಎಂಆರ್​​ಪಿಎಲ್​ ಗೇಟ್ ಬಳಿ ಕಾರ್ಮಿಕರಿಂದ ಪ್ರತಿಭಟನೆ ಮಾಡಲಾಗಿದೆ. ಈ ಮಧ್ಯೆ ಉತ್ತರ ಪ್ರದೇಶದ ಪ್ರಯಾಗ್ ರಾಜ್​ನಲ್ಲಿ ದಿಗ್ಬಂಧನದಲ್ಲಿದ್ದ ಐವರನ್ನು ಸ್ಥಳೀಯ ಪೊಲೀಸರು ರಕ್ಷಣೆ ಮಾಡಿದ್ದು, ವಿಮಾನದ ಮೂಲಕ ಮಂಗಳೂರಿನ ಕಡೆ ಹೊರಟಿದ್ದಾರೆ.

ಪ್ರಕರಣದಲ್ಲಿ ಮೃತಪಟ್ಟಿದ್ದ ದೀಪ್ ಚಂದ್ರ ಭಾರ್ತಿಯಾ ಅವರ ಮೃತದೇಹವನ್ನು ವಿಮಾನದಲ್ಲಿ ಅವರ ಕುಟುಂಬದ ಜೊತೆ ಎಂಆರ್​ಪಿಎಲ್​​ನ ಐವರು ಸಿಬ್ಬಂದಿಗಳಾ ಪ್ರಸಾದ್, ಬಲ್ಬೀರ್, ಸುರೇಂದ್, ಬಾಲನಾರಾಯಣ್ ಮತ್ತು ಪಂಕಜ್​ ತೆಗೆದುಕೊಂಡು ಹೋಗಿದ್ದರು. ಈ ವೇಳೆ ಅವರನ್ನು ದಿಗ್ಬಂಧಿಸಿದ್ದರು.

ಇದನ್ನೂ ಓದಿ: ವಿಷಾನಿಲ ಸೋರಿಕೆಯಿಂದ ಸಾವು ಪ್ರಕರಣ: ಪ್ರಯಾಗ್​ರಾಜ್​ನಲ್ಲಿ ಎಂಆರ್​ಪಿಎಲ್ ಸಿಬ್ಬಂದಿಗೆ ದಿಗ್ಭಂಧನ

ಇದನ್ನೂ ಓದಿ
Image
ಪ್ರಯಾಗ್​ರಾಜ್​ನಲ್ಲಿ ಸಿಕ್ಕಿಹಾಕಿಕೊಂಡ ಎಂಆರ್​ಪಿಎಲ್ ಸಿಬ್ಬಂದಿ!
Image
ಗಾಳಿ ಆಂಜನೇಯಸ್ವಾಮಿ ದೇಗುಲ ವಾಪಸ್: ಕಂಡಿಷನ್ಸ್ ಅಪ್ಲೈ ಎಂದ ಸಚಿವ
Image
ಪ್ರತ್ಯೇಕ ಘಟನೆ: ಮಂಡ್ಯ, ಮಂಗಳೂರಿನಲ್ಲಿ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ
Image
ಮಂಗಳೂರು MRPLನಲ್ಲಿ ವಿಷಾನಿಲ ಸೋರಿಕೆಯಾಗಿ ಇಬ್ಬರು ಕಾರ್ಮಿಕರ ಸಾವು

ಎಂಆರ್​ಪಿಎಲ್​​ನ ಮ್ಯಾನೇಜ್ಮೆಂಟ್ ಬರುವವರೆಗೂ ಮಂಗಳೂರಿಗೆ ಕಳಿಸಲ್ಲ ಅಂತಾ ದೀಪ್ ಚಂದ್ರ ಭಾರ್ತಿಯಾ ಕುಟುಂಬ ಪಟ್ಟು ಹಿಡಿದಿದ್ದರು. ಎಂಆರ್​ಪಿಎಲ್​​ನ ಫ್ಯಾಕ್ಟರಿ ಮ್ಯಾನೇಜರ್ ಸೇರಿ ಐವರ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಆದರೂ ಕ್ರಮ ಆಗಿಲ್ಲ, ಎಂಆರ್​ಪಿಎಲ್​​ ತಮ್ಮ ನಿಲುವು ತಾಳಿಲ್ಲ ಅಂತಾ ಕುಟುಂಬಸ್ಥರು ಮತ್ತು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದರು.

ಮಂಗಳೂರಿನ ಕಡೆಗೆ ಪ್ರಯಾಣ

ಇತ್ತ ಎಂಆರ್​ಪಿಎಲ್​​ನ ಸಿಬ್ಬಂದಿ ನಮ್ಮನ್ನು ದಿಗ್ಬಂಧನ ಮಾಡಿದ್ದಾರೆ. ತಮ್ಮನ್ನು ಕಾಪಾಡುವಂತೆ ಐವರು ಸಿಬ್ಬಂದಿ ವಿಡಿಯೋ ಮೂಲಕ ಎಂಆರ್​ಪಿಎಲ್​ಗೆ ಮನವಿ ಮಾಡಿದ್ದರು. ಇದೀಗ ಸ್ಥಳೀಯ ಪೊಲೀಸರು ಅರನ್ನು ರಕ್ಷಣೆ ಮಾಡಿದ್ದು, ಐವರು ಸಿಬ್ಬಂದಿ ಮಂಗಳೂರಿನ ಕಡೆಗೆ ಹೊರಟಿದ್ದಾರೆ.

ಕಾರ್ಮಿಕರ ಪ್ರತಿಭಟನೆ

ಇನ್ನು ಎಂಆರ್​ಪಿಎಲ್​ನಲ್ಲಿ ಮೃತಪಟ್ಟ ಸಿಬ್ಬಂದಿಗೆ ಸ್ಪಂದನೆ ನೀಡದ ಆರೋಪ ಹಿನ್ನಲೆ ಕಾರ್ಮಿಕ ಸಂಘಟನೆ ನೇತೃತ್ವದಲ್ಲಿ ಕೆಲ ಸಿಬ್ಬಂದಿ ಪ್ರತಿಭಟನೆ ಮಾಡಿದ್ದಾರೆ. ಘಟನೆ ಬಗ್ಗೆ ಸರಿಯಾದ ಕ್ರಮ ಆಗಿಲ್ಲ. ಮೃತಪಟ್ಟವರಿಗೆ ಪರಿಹಾರ ಮತ್ತು ನ್ಯಾಯ ದೊರಕಿಸಿಕೊಡುವಂತೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಮಂಗಳೂರು MRPLನಲ್ಲಿ ವಿಷಾನಿಲ ಸೋರಿಕೆಯಾಗಿ ಇಬ್ಬರು ಕಾರ್ಮಿಕರ ಸಾವು

ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಸದ್ಯ ಪ್ರಕರಣ ದಾಖಲಾಗಿದೆ. ಇಬ್ಬರ ಶವಗಳನ್ನು ಸಂಬಂಧಿಕರು ತಮ್ಮ ರಾಜ್ಯಗಳಿಗೆ ಕೊಂಡೊಯ್ದಿದ್ದಾರೆ. ದೂರದ ಊರಿಂದ ಬಂದು ಇಲ್ಲಿ ಬದುಕು ಕಟ್ಟುಕೊಳ್ಳುತ್ತಿದ್ದರು. ಅಷ್ಟರಲ್ಲಿ ವಿಷಾನಿಲ ದುರಂತ ಇಬ್ಬರ ಜೀವವನ್ನೇ ಕಸಿದಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ