AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿನ ಬಹುಕೋಟಿ ವಂಚನೆ ಕೇಸ್: ಐಷಾರಾಮಿ ವಂಚಕ ರೋಹನ್ ಸಲ್ಡಾನಾ ಸಿಕ್ಕಿಬಿದ್ದಿದ್ದು ಹೇಗೆ ಗೊತ್ತಾ?

ಮಂಗಳೂರಿನ ರೋಹನ್ ಸಲ್ಡಾನಾ ಎಂಬಾತನನ್ನು ಬಹುಕೋಟಿ ರೂ. ವಂಚನೆ ಪ್ರಕರಣದಲ್ಲಿ ಈಗಾಗಲೇ ಪೊಲೀಸರು ಬಂಧಿಸಿದ್ದಾರೆ. ಈ ಐಷರಾಮಿ ನಟೋರಿಯಸ್​ ವಂಚಕ ಸೆರೆಸಿಕ್ಕಿದ್ದು ಮಾತ್ರ ರೋಚಕ. ಆಂಧ್ರ ಪ್ರದೇಶ ಮೂಲದ ಉದ್ಯಮಿಯಿಂದ ರೋಹನ್ ಸಲ್ಡಾನಾ ತಗ್ಲಾಕ್ಕೊಂಡಿದ್ದಾನೆ. ಆರೋಪಿ ಕೈಸ್ತ ಸಮುದಾಯದವನಾಗಿದ್ದು, ಇತನ ಮನೆಯಲ್ಲಿ ಹಿಂದೂ ಗುರೂಜಿ ಫೋಟೋ ಪತ್ತೆ ಆಗಿದೆ.

ಮಂಗಳೂರಿನ ಬಹುಕೋಟಿ ವಂಚನೆ ಕೇಸ್: ಐಷಾರಾಮಿ ವಂಚಕ ರೋಹನ್ ಸಲ್ಡಾನಾ ಸಿಕ್ಕಿಬಿದ್ದಿದ್ದು ಹೇಗೆ ಗೊತ್ತಾ?
ರೋಶನ್ ಸಲ್ಡಾನಾ
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on:Jul 18, 2025 | 2:59 PM

Share

ಮಂಗಳೂರು, ಜುಲೈ 18: ಸಾಲ ಕೊಡುವುದಾಗಿ ಕೊಟ್ಯಂತರ ರೂ ಹಣ ಪಡೆದು ವಂಚನೆ ಮಾಡುತ್ತಿದ್ದ ನಟೋರಿಯಸ್ ರೋಹನ್ ಸಲ್ಡಾನಾ (Rohan Saldanha) ಎಂಬಾತನನ್ನ ಬಂಧಿಸುವಲ್ಲಿ ಮಂಗಳೂರು (Mangaluru) ಪೊಲೀಸರು ಯಶಸ್ವಿಯಾಗಿದ್ದಾರೆ. ಅನೇಕ ವರ್ಷಗಳಿಂದ 200 ಕೋಟಿಗೂ ಅಧಿಕ ವಂಚನೆ ಮಾಡಿದ್ದಾನೆ. ಅಷ್ಟಕ್ಕೂ ಈ ಐಷರಾಮಿ ವಂಚಕ ಆಂಧ್ರ ಪ್ರದೇಶ ಮೂಲದ ಉದ್ಯಮಿಯಿಂದ ಸಿಕ್ಕಿಬಿದ್ದಿದ್ದು ಅಚ್ಚರಿಯ ಸಂಗತಿ.

ಆಂಧ್ರ ಪ್ರದೇಶ ಮೂಲದ ಸಿಲ್ಕ್ ಸ್ಯಾರಿ ತಯಾರಿಕ ಕಂಪನಿ ಮಾಲೀಕ, ಸಾಲಕ್ಕಾಗಿ 2023ರಲ್ಲಿ ಬೆಂಗಳೂರಿನಲ್ಲಿ ಫೈನಾನ್ಸ್ ಕನ್ಸಲ್‌ಟೆನ್ಸಿ ನಡೆಸಿಕೊಂಡಿರುವ ವಿಮಲೇಶ್ ಎಂಬಾತನ ಮೊರೆ ಹೋಗಿದ್ದ. ಆಗ ವಿಮಲೇಶ್ ಇದೇ ರೋಹನ್‌ನನ್ನ ಪರಿಚಯಿಸಿಕೊಟ್ಟಿದ್ದ. ಸಾಲ ಕೊಡಿಸೋದಕ್ಕೆ ಒಂದು ಸ್ಟ್ಯಾಂಪ್ ಪೇಪರ್‌ಗೆಂದು ರೋಹನ್ ಉದ್ಯಮಿ ಬಳಿ 40 ಲಕ್ಷ ರೂ ಹಣ ಪಡೆದಿದ್ದ. ಇದಾದ 15 ದಿನಗಳ ಬಳಿಕ ರೋಹನ್ ಎಸ್ಕೇಪ್ ಆಗಿದ್ದ.

ಇದನ್ನೂ ಓದಿ: ಸಾಲ ಕೊಡುವುದಾಗಿ ಕೋಟ್ಯಂತರ ರೂ ವಂಚನೆ: ವಿದೇಶಿ ಯುವತಿಯರೊಂದಿಗೆ ಪಾರ್ಟಿ ಮಾಡುತ್ತಿರುವಾಗಲೇ ಬಂಧನ

ಇದನ್ನೂ ಓದಿ
Image
ಕೇವಲ ವಂಚನೆಯಿಂದ ಐಷಾರಾಮಿ ಬದುಕು ನಡೆಸಿದವನನ್ನು ಬಂಧಿಸಿದ ಪೊಲೀಸ್
Image
ಮಂಗಳೂರು ನಟೋರಿಯಸ್‌ ವಂಚಕನ ರಹಸ್ಯ ಕೋಣೆಲಿ ವಿದೇಶಿ ಯುವತಿಯರು, ಮದ್ಯ ರಾಶಿ!
Image
ಸಾಲ ಕೊಡುವುದಾಗಿ ಕೋಟ್ಯಂತರ ರೂ ವಂಚನೆ: ನಟೋರಿಯಸ್​ ವಂಚಕನ ಬಂಧನ
Image
ಶುಶ್ರುತಿ ಸಹಕಾರ ಬ್ಯಾಂಕ್ ವಂಚನೆ: ಇಡಿ ತನಿಖೆ ವೇಳೆ ಆಘಾತಕಾರಿ ಅಂಶ ಬಯಲಿಗೆ

ಮೋಸ ಹೋಗಿದ್ದು ಅರಿವಾದ ಉದ್ಯಮಿ, ಕಳೆದ ವರ್ಷ ಜುಲೈ 16ರಂದು ಚಿತ್ರದುರ್ಗ ನಗರ ಠಾಣೆಗೆ ದೂರು ಕೊಟ್ಟಿದ್ದರು. ಆಗ ಈ ಇಬ್ಬರ ನಡುವೆ ಇದ್ದ ವಿಮಲೇಶ್ ಎಂಬಾತನನ್ನ ಮಂಗಳೂರಿನ ಪೊಲೀಸರು ಬಂಧಿಸಿದ್ದರು. ಆಗಲೇ ಈ ರೋಹನ್​ನ ವಂಚನೆ ಕಹಾನಿ ಬಯಲಾಗಿದೆ.

ರೋಹನ್​ ಮನೆಯಲ್ಲಿ ಹಿಂದೂ ಗುರೂಜಿ ಫೋಟೋ

ರೋಹನ್, ದೇಶದ ದೊಡ್ಡ ದೊಡ್ಡ ಕುಳಗಳಿಗೆ ಗಾಳ ಹಾಕುತ್ತಿದ್ದ. ಐಷಾರಾಮಿ ವ್ಯಕ್ತಿಗಳು, ಉದ್ಯಮಿಗಳನ್ನ ಟಾರ್ಗೆಟ್ ಮಾಡುತ್ತಿದ್ದ. ಭೂ ವ್ಯವಹಾರ, ಸಾಲ ನೀಡುವ ನೆಪದಲ್ಲಿ ನಂಬಿಸಿ, ಮಂಗಳೂರಿನ ಜಪ್ಪಿನಮೊಗರುವಿನ‌ ಐಷಾರಾಮಿ ಬಂಗಲೆಗೆ ಕರೆದು ವ್ಯವಹಾರ ಕುದುರಿಸುತ್ತಿದ್ದ. ರೋಹನ್, ಕೈಸ್ತ ಸಮುದಾಯದವನಾದರೂ ಹಿಂದೂ ಗುರೂಜಿ ಫೋಟೋವನ್ನು ತನ್ನ ಮನೆಯಲ್ಲಿ ಹಾಕಿದ್ದಾನೆ. ಆ ಮೂಲಕ  ಕೂಡ ವಂಚಿಸುತ್ತಿದ್ದ ಶಂಕೆ ವ್ಯಕ್ತವಾಗಿದೆ.

ಉತ್ತರ ಪ್ರದೇಶದ ಹಿಂದೂ ಗುರೂಜಿ ನೀಮ್ ಕರೋಲಿ ಬಾಬಾ ಫೋಟೋವನ್ನು ರೋಷನ್ ತನ್ನ ಕಚೇರಿಯಲ್ಲಿ ಹಾಕಿದ್ದಾನೆ. ಆ ಮೂಲಕ ಉತ್ತರ ಭಾರತದ ಬಹುಕೋಟಿ ಉದ್ಯಮಿಗಳನ್ನು ವಂಚನೆಗೆ ನಾನು ಬಾಬಾ ಭಕ್ತ ಅಂತ ನಂಬಿಸುತ್ತಿದ್ದ ಎನ್ನಲಾಗಿದೆ.

ಇದನ್ನೂ ಓದಿ: ಗೆಸ್ಟ್ ರೂಮ್​ನಲ್ಲಿ ವಿದೇಶಿ ಯುವತಿಯರು, ಮದ್ಯ ರಾಶಿ! ಮಂಗಳೂರು ನಟೋರಿಯಸ್‌ ವಂಚಕನ ರಹಸ್ಯ ಕೋಣೆ ಹೇಗಿತ್ತು ನೋಡಿ

ನೀಮ್ ಕರೋಲಿ ಬಾಬಾ ಆಂಜನೇಯನ ಅವತಾರ ರೂಪಿ ಎಂದೇ ಪ್ರಸಿದ್ಧಿ. ಸ್ವತಃ ಆಂಜನೇಯ ನೀಡಿರುವ ಪಾತ್ರೆಯೊಂದು ಬಾಬಾ ಬಳಿ ಇದೆ ಎನ್ನಲಾಗುತ್ತೆ. ಸದ್ಯ ಬಾಬಾ ಫೋಟೋ ಕುತೂಹಲಕ್ಕೆ ಕಾರಣವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 2:40 pm, Fri, 18 July 25

Follow Us
Pruthviraj
Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
ಗಿಡ ನೆಟ್ಟು ವಿಶ್ವ ಪರಿಸರ ದಿನ ಆಚರಿಸಿದ ಪ್ರಧಾನಿ ಮೋದಿ
ಗಿಡ ನೆಟ್ಟು ವಿಶ್ವ ಪರಿಸರ ದಿನ ಆಚರಿಸಿದ ಪ್ರಧಾನಿ ಮೋದಿ
ಮತ್ತೆ ಬರುತ್ತಿದೆ ‘ಅಗ್ನಿಸಾಕ್ಷಿ’ ಧಾರಾವಾಹಿ: ಶಮಂತ್ ಗೌಡ ಹೇಳಿದ್ದೇನು?
ಮತ್ತೆ ಬರುತ್ತಿದೆ ‘ಅಗ್ನಿಸಾಕ್ಷಿ’ ಧಾರಾವಾಹಿ: ಶಮಂತ್ ಗೌಡ ಹೇಳಿದ್ದೇನು?
ಬಿಜೆಪಿಗೆ ರಾಜೀನಾಮೆ ನೀಡಿ ಬಂದ ಅಣ್ಣಾಮಲೈಗೆ ಭರ್ಜರಿ ಸ್ವಾಗತ
ಬಿಜೆಪಿಗೆ ರಾಜೀನಾಮೆ ನೀಡಿ ಬಂದ ಅಣ್ಣಾಮಲೈಗೆ ಭರ್ಜರಿ ಸ್ವಾಗತ
ಅಧಿಕಾರ ಕಳೆದುಕೊಂಡ ನಂತರ ಒಬ್ಬಂಟಿಯಾದ ಸಿದ್ದರಾಮಯ್ಯ
ಅಧಿಕಾರ ಕಳೆದುಕೊಂಡ ನಂತರ ಒಬ್ಬಂಟಿಯಾದ ಸಿದ್ದರಾಮಯ್ಯ
ಪ್ರತಿಷ್ಠಿತ ಅರ್ಥ್ ಪ್ರಶಸ್ತಿ ಗೆದ್ದ ಭಾರತೀಯ ವಿದ್ಯಾರ್ಥಿಗಳು
ಪ್ರತಿಷ್ಠಿತ ಅರ್ಥ್ ಪ್ರಶಸ್ತಿ ಗೆದ್ದ ಭಾರತೀಯ ವಿದ್ಯಾರ್ಥಿಗಳು
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹುಟ್ಟುಹಬ್ಬ
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹುಟ್ಟುಹಬ್ಬ
ಮಹರಾಜ ಲೀಗ್​​ನಲ್ಲಿ ಅನ್​​ಸೋಲ್ಡ್ ಆದ ಕೆಎಲ್ ರಾಹುಲ್; ಕಾರಣ ಇಲ್ಲಿದೆ
ಮಹರಾಜ ಲೀಗ್​​ನಲ್ಲಿ ಅನ್​​ಸೋಲ್ಡ್ ಆದ ಕೆಎಲ್ ರಾಹುಲ್; ಕಾರಣ ಇಲ್ಲಿದೆ
ನಾನು ಸಚಿವನಾಗಿ ಚಾರ್ಜ್ ತಗೊಳ್ಳಲ್ಲ: ಕಾಂಗ್ರೆಸ್‌ಗೆ ಸಚಿವ ಮುನಿಯಪ್ಪ ಶಾಕ್
ನಾನು ಸಚಿವನಾಗಿ ಚಾರ್ಜ್ ತಗೊಳ್ಳಲ್ಲ: ಕಾಂಗ್ರೆಸ್‌ಗೆ ಸಚಿವ ಮುನಿಯಪ್ಪ ಶಾಕ್
ಬೆಂಗಳೂರಿನಲ್ಲಿ ರಾಮಲಿಂಗಾ ರೆಡ್ಡಿ ಬೆಂಬಲಿಗರಿಂದ ಭಾರಿ ಪ್ರತಿಭಟನೆ
ಬೆಂಗಳೂರಿನಲ್ಲಿ ರಾಮಲಿಂಗಾ ರೆಡ್ಡಿ ಬೆಂಬಲಿಗರಿಂದ ಭಾರಿ ಪ್ರತಿಭಟನೆ
ರಾಮಲಿಂಗಾರೆಡ್ಡಿ ನನಗೆ ತುಂಬಾ ಆತ್ಮೀಯರು, ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ
ರಾಮಲಿಂಗಾರೆಡ್ಡಿ ನನಗೆ ತುಂಬಾ ಆತ್ಮೀಯರು, ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ