AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೃಹ ಸಚಿವ ಪರಮೇಶ್ವರ್, ಉಸ್ತುವಾರಿ ಸಚಿವ ಗುಂಡೂರಾವ್ ಬದಲಾವಣೆಗೆ ಮಂಗಳೂರು ಮುಸ್ಲಿಂ ಮುಖಂಡರ ಪಟ್ಟು: ಕಾಂಗ್ರೆಸ್​ಗೆ ಎಚ್ಚರಿಕೆ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ ಇದೀಗ ಕೋಮು ಆಧಾರಿತ ರಾಜಕೀಯ ಆಯಾಮ ಪಡೆದುಕೊಂಡಿದೆ. ಜಿಲ್ಲೆಯ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹಾಗೂ ಗೃಹ ಸಚಿವ ಪರಮೇಶ್ವರ್ ಬದಲಾವಣೆಗೆ ಜಿಲ್ಲೆಯ ಮುಸ್ಲಿಂ ಮುಖಂಡರು ಪಟ್ಟುಹಿಡಿದಿದ್ದಾರೆ. ಒಂದು ವೇಳೆ, ಬದಲಾವಣೆ ಮಾಡದಿದ್ದರೆ ಕಾಂಗ್ರೆಸ್​​ಗೆ ಸಾಮೂಹಿಕ ರಾಜೀನಾಮೆ ನೀಡುವ, ಹೊಸ ಪಕ್ಷ ಕಟ್ಟುವ ಬ್ಲ್ಯಾಕ್​ಮೇಲ್ ತಂತ್ರವನ್ನೂ ಹೂಡಿದ್ದಾರೆ.

ಗೃಹ ಸಚಿವ ಪರಮೇಶ್ವರ್, ಉಸ್ತುವಾರಿ ಸಚಿವ ಗುಂಡೂರಾವ್ ಬದಲಾವಣೆಗೆ ಮಂಗಳೂರು ಮುಸ್ಲಿಂ ಮುಖಂಡರ ಪಟ್ಟು: ಕಾಂಗ್ರೆಸ್​ಗೆ ಎಚ್ಚರಿಕೆ
ಮಂಗಳೂರಿನಲ್ಲಿ ಬಿಗಿ ಬಂದೋಬಸ್ತ್
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on: May 29, 2025 | 10:41 AM

Share

ಮಂಗಳೂರು, ಮೇ 29: ಬಂಟ್ವಾಳದಲ್ಲಿ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣ ಇದೀಗ ರಾಜಕೀಯ ಸ್ವರೂಪ ಪಡೆದುಕೊಂಡಿದೆ. ಅದರಲ್ಲೂ, ಮುಸ್ಲಿಂ ಮುಖಂಡರು (Muslim Leaders) ಸದ್ಯ ಗೃಹ ಸಚಿವ ಪರಮೇಶ್ವರ್, ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಬದಲಾಯಿಸಲು ಪಟ್ಟು ಹಿಡಿದಿದ್ದು, ಆಡಳಿತಾರೂಢ ಕಾಂಗ್ರೆಸ್ (Congress) ಪಕ್ಷವನ್ನು ಬ್ಲ್ಯಾಕ್​ಮೇಲ್ ಮಾಡಲು ಆರಂಭಿಸಿದ್ದಾರೆ. ಉಭಯ ಸಚಿವರ ಬದಲಾವಣೆಗೆ ದಕ್ಷಿಣ ಕನ್ನಡ ಜಿಲ್ಲೆಯ ಪ್ರಭಾವಿ ಮುಸ್ಲಿಂ ಕಾಂಗ್ರೆಸ್ ನಾಯಕರು ಪಟ್ಟುಹಿಡಿದಿದ್ದಾರೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂಗೆ ಡಿಕೆ ಶಿವಕುಮಾರ್​​ಗೆ ಭಾರೀ ಒತ್ತಡ ಹೇರುತ್ತಿದ್ದಾರೆ ಎಂದು ಮೂಲಗಳೂ ತಿಳಿಸಿವೆ.

ರಹಿಮಾನ್ ಹತ್ಯೆ ಬೆನ್ನಲ್ಲೇ ಗೃಹ ಇಲಾಖೆ ಕಾರ್ಯವೈಖರಿಗೆ ಮುಸ್ಲಿಂ ಮುಖಂಡರು ಕಿಡಿಕಾರಿದ್ದಾರೆ. ಗೃಹ ಸಚಿವ ಪರಮೇಶ್ವರ್ ಮುಸ್ಲಿಂ ಸಮುದಾಯದ ನೋವು ಕೇಳುತ್ತಿಲ್ಲ. ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕೂಡ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ ಎಂದು ಮುಸ್ಲಿಂ ಮುಖಂಡರು ಆರೋಪ ಮಾಡಿದ್ದಾರೆ.

ಸಾಫ್ಟ್ ಗೃಹ ಸಚಿವರಿಂದ ನ್ಯಾಯ ಸಿಗುತ್ತಿಲ್ಲ: ಮುಸ್ಲಿಂ ಮುಖಂಡರ ಅಳಲು

ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ಇಲಾಖೆ ಕಾರ್ಯ ವೈಫಲ್ಯಕ್ಕೂ ಕಾಂಗ್ರೆಸ್​ನಲ್ಲಿರುವ ಮುಸ್ಲಿಂ ಮುಖಂಡರಿಂದ ವ್ಯಾಪಕ ಆಕ್ಷೇಪ ವ್ಯಕ್ತಪವಾಗಿದೆ. ನಮಗೆ ಓರ್ವ ಖಡಕ್ ಗೃಹ ಸಚಿವರು ಬೇಕು ಎಂದು ಅವರು ಪಟ್ಟು ಹಿಡಿದಿದ್ದಾರೆ. ಸಾಫ್ಟ್ ಹೋಂ ಮಿನಿಸ್ಟರ್ ಅವರಿಂದ ಮುಸ್ಲಿಮರಿಗೆ ನ್ಯಾಯ ಸಿಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿದಿದ್ದಾರೆ.

ಇದನ್ನೂ ಓದಿ
Image
ಬಂಟ್ವಾಳ ರಹಿಮಾನ್ ಹತ್ಯೆ ಹೇಗಾಯ್ತು?ಮಂಗಳೂರಿನಲ್ಲಿ ಏನೇನಾಯ್ತು?ಈಗ ಹೇಗಿದೆ?
Image
ಮಂಗಳೂರುಗೆ ಇಂದು ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರ ಭೇಟಿ
Image
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್
Image
ಬಂಟ್ವಾಳ ಅಬ್ದುಲ್ ಹತ್ಯೆ​: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿ

ಮುಸ್ಲಿಂ ಮುಸಾಮೂಹಿಕ ರಾಜೀನಾಮೆ ಬೆದರಿಕೆ

ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ ಸಂಬಂಧ ಸರ್ಕಾರದ ಕಾರ್ಯವೈಖರಿ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ಕಾಂಗ್ರೆಸ್ ಪಕ್ಷಕ್ಕೆ ಮುಸ್ಲಿಂ ಮುಖಂಡರು ಸಾಮೂಹಿಕ ರಾಜೀನಾಮೆ ನೀಡಲು ಆರಂಭಿಸಿದ್ದಾರೆ. ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಹುದ್ದೆಗಳಿಗೆ ಸಾಮೂಹಿಕ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಅಲ್ಲದೆ, ಪರ್ಯಾಯ ಪಕ್ಷ ಕಟ್ಟುವ ಬಗ್ಗೆಯೂ ಎಚ್ಚರಿಕೆ ನೀಡಿದ್ದಾರೆ. ಸದ್ಯ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಕೆ.ಅಶ್ರಫ್ ರಾಜೀನಾಮೆ ನೀಡಿದ್ದಾರೆ. ಕೋಮುಹತ್ಯೆ ತಡೆಯಲು ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವೈಯುಕ್ತಿಕ ಕಾರಣಕ್ಕೆ ಅಬ್ದುಲ್ ರಹಿಮಾನ್ ಕೊಲೆಯಾಗಿದೆ ಎಂದು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ ಕೊಟ್ಟಿದ್ದಾರೆ. ಆ ಹೇಳಿಕೆಯನ್ನು ಜಿಲ್ಲಾ ಉಸ್ತುವಾರಿ ಸಚಿವರು ವಾಪಾಸ್ ಪಡೆಯಬೇಕು ಎಂದು ಮುಸ್ಲಿಂ ಮುಖಂಡರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಬಂಟ್ವಾಳ ರಹಿಮಾನ್ ಹತ್ಯೆ..ಮತ್ತೆ ಪ್ರತೀಕಾರದ ಪೋಸ್ಟರ್: ಮಂಗಳೂರಿನಲ್ಲಿ ಏನೇನಾಯ್ತು? ಇಲ್ಲಿದೆ ವಿವರ

ಏತನ್ಮಧ್ಯೆ, ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸದ್ಯ ಬೂದಿ ಮುಚ್ಚಿದ ಕೆಂಡದಂತಹ ಪರಿಸ್ಥಿತಿ ಇದೆ. ಜಿಲ್ಲೆಯಲ್ಲಿ ನಾಳೆ ಸಂಜೆ 6 ಗಂಟೆವರೆಗೂ ನಿಷೇಧಾಜ್ಞೆ ಜಾರಿಯಲ್ಲಿದೆ. ಮಂಗಳೂರು ಕಮಿನರೇಟ್ ಮತ್ತು ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲೂ ನಿಷೇಧಾಜ್ಞೆ ಇದೆ. ಆಯಕಟ್ಟಿನ ಸ್ಥಳಗಳಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಒದಗಿಸಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ