AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಪಾವೂರು ಉಳಿಯ ದ್ವೀಪದಲ್ಲಿ ಅಕ್ರಮ ಮರಳುಗಾರಿಕೆ, ಮಾಲಿನ್ಯ ನಿಯಂತ್ರಣ ಮಂಡಳಿ ವಿರುದ್ಧ ಪ್ರಕರಣ

ಅದು ಕಡಲನಗರಿ ಮಂಗಳೂರಿನ ಸುಂದರ ದ್ವೀಪ ಪ್ರದೇಶ. ಆದರೆ ಐಲ್ಯಾಂಡ್ ಪ್ರದೇಶವನ್ನು ಮರಳು ದಂಧೆಕೋರರು ನೀರು ಪಾಲು ಮಾಡಿದ್ದರು. ಇದರ ವಿರುದ್ದ ದ್ವೀಪ ನಿವಾಸಿಗಳು ಆಡಳಿತ ವ್ಯವಸ್ಥೆಗೆ ಎಷ್ಟೇ ಮೊರೆಯಿಟ್ಟರೂ ಅಕ್ರಮ ಮರಳುಗಾರಿಕೆ ನಿಂತಿರಲಿಲ್ಲ. ಇದೀಗ ಈ ವಿಚಾರದಲ್ಲಿ ರಾಷ್ಟ್ರೀಯ ಹಸಿರು ಪ್ರಾಧಿಕಾರ ಎಂಟ್ರಿ ಕೊಟ್ಟಿದ್ದು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.‌

ಮಂಗಳೂರು: ಪಾವೂರು ಉಳಿಯ ದ್ವೀಪದಲ್ಲಿ ಅಕ್ರಮ ಮರಳುಗಾರಿಕೆ, ಮಾಲಿನ್ಯ ನಿಯಂತ್ರಣ ಮಂಡಳಿ ವಿರುದ್ಧ ಪ್ರಕರಣ
ಅಕ್ರಮ ಮರಳುಗಾರಿಕೆ ವಿರೋಧಿಸಿ ಪಾವೂರು ನಿವಾಸಿಗಳಿಂದ ಪ್ರತಿಭಟನೆ
ಅಶೋಕ್​ ಪೂಜಾರಿ, ಮಂಗಳೂರು
| Edited By: |

Updated on:Nov 30, 2024 | 6:08 PM

Share

ಮಂಗಳೂರು, ನವೆಂಬರ್ 30: ಕಡಲನಗರಿ ಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಹೆಚ್ಚಾಗಿದೆ. ರಾತ್ರಿಯಾಗುತ್ತಿದ್ದಂತೆಯೇ ಎಂಟ್ರಿಯಾಗುವ ಮರಳುದಂಧೆಕೋರರು ರಾತ್ರಿ ಬೆಳಗಾಗುವಷ್ಟರಲ್ಲಿ ಟನ್​ಗಟ್ಟಲೇ ಮರಳನ್ನು ದೋಚಿರುತ್ತಾರೆ. ಗಣಿ ಇಲಾಖೆ, ಪೊಲೀಸ್ ಇಲಾಖೆಗೆ ಈ ಅಕ್ರಮ ಮರಳುಗಾರಿಕೆ ನಡೆಯುತ್ತಿರುವ ದೂರು ಬಂದರೂ ಸಹ ನಾಟಕೀಯ ದಾಳಿ ನಡೆಸಿ ಸುಮ್ಮನಾಗುತ್ತಿದ್ದಾರೆ.‌

ಇದೇ ರೀತಿ ದಕ್ಷಿಣಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಪಾವೂರು ಉಳಿಯ ದ್ವೀಪದಲ್ಲಿಯು ಅಕ್ರಮ ಮರಳುಗಾರಿಕೆ ನಡೆಯುತಿತ್ತು. ಪರಿಣಾಮ ದ್ವೀಪ ಪ್ರದೇಶ ವಿನಾಶದ ಅಂಚಿಗೆ ತಲುಪಿತ್ತು. ಮರಳು ದಂಧೆಕೋರರ ಅಟ್ಟಹಾಸಕ್ಕೆ ಸುಮಾರು 80 ಎಕರೆ ಇದ್ದ ದ್ವೀಪ ಪ್ರದೇಶ ಇದೀಗ 40 ಎಕರೆಗೆ ಬಂದಿತ್ತು. ಇದರ ವಿರುದ್ಧ ಇಲ್ಲಿನ ಸ್ಥಳೀಯರು ಆಡಳಿತ ವ್ಯವಸ್ಥೆಗೆ ದೂರು ನೀಡಿದರೂ ಯಾವುದೇ ಪ್ರಯೋಜನ ಆಗಿರಲಿಲ್ಲ. ಆದ್ರೆ ಇದೀಗ ಈ ವಿಚಾರದಲ್ಲಿ ರಾಷ್ಟ್ರೀಯ ಹಸಿರು ಪ್ರಾಧಿಕಾರ ಮಧ್ಯ ಪ್ರವೇಶಿಸಿದ್ದು, ಮಾಲಿನ್ಯ ನಿಯಂತ್ರಣ ಮಂಡಳಿ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ. ಈಗಾಗಲೇ ಒಂದು ಹಂತದ ವಿಚಾರಣೆ ನಡೆದಿದ್ದು, ಮುಂದಿನ ವಿಚಾರಣೆ ಜನವರಿ ತಿಂಗಳಿಗೆ ಮುಂದೂಡಲಾಗಿದೆ.

ಈ ದ್ವೀಪ ಪ್ರದೇಶದಲ್ಲಿ ಸುಮಾರು ಐವತ್ತೈದ್ದಕೂ ಹೆಚ್ಚು ಕುಟುಂಬಗಳು ನೂರಾರು ವರ್ಷಗಳಿಂದ ವಾಸವಾಗಿದ್ದು, ಅಕ್ರಮ ಮರಳುಗಾರಿಕೆಯಿಂದ ಇವರುಗಳ ಮನೆ ಅಪಾಯದಲ್ಲಿದೆ. ವಿಧಾನಸಭೆಯ ಸ್ಪೀಕರ್ ಯುಟಿ ಖಾದರ್ ಪ್ರತಿನಿಧಿಸುವ ಕ್ಷೇತ್ರದ ವ್ಯಾಪ್ತಿಯಲ್ಲಿ ಈ ದ್ವೀಪವಿದ್ದು ಸ್ವತಃ ಸ್ಪೀಕರ್ ಅವರೇ ಈ ಅಕ್ರಮ ಮರಳುಗಾರಿಕೆಯ ಬಗ್ಗೆ ತನಿಖೆ ನಡೆಸಿ ವರದಿ ನೀಡಲು ಸಮತಿಯೊಂದನ್ನು ರಚಿಸಿದ್ದಾರೆ. ಕಂದಾಯ, ಗಣಿ, ಪೊಲೀಸ್ ಇಲಾಖೆ ಅಧಿಕಾರಿಗಳನ್ನು ಒಳಗೊಂಡ ಸಮಿತಿ ರಚಿಸಿ ಈ ಹಿಂದೆ ಎಷ್ಟು ಜಾಗವಿತ್ತು? ಈಗ ಎಷ್ಟಿದೆ ಎಂಬ ಬಗ್ಗೆ ವರದಿ ನೀಡುವಂತೆ ಸೂಚಿಸಲಾಗಿದೆ‌.

ಇದನ್ನೂ ಓದಿ: ಆಕಾಶದಲ್ಲಿ ತೇಲುತ್ತಾ ಊಟ ಸವಿಯಲು ಕರಾವಳಿಯಲ್ಲಿ ಪ್ರಾರಂಭವಾಗಿದೆ ಸ್ಕೈ ಡೈನಿಂಗ್‌

ಕೇವಲ ನನ್ನ ಕ್ಷೇತ್ರ ಮಾತ್ರವಲ್ಲ ಜಿಲ್ಲೆಯ ಯಾವ ಪ್ರದೇಶದಲ್ಲಿಯೂ ಅಕ್ರಮ ಮರಳುಗಾರಿಕೆ ನಡೆದರೂ ಕಠಿಣ ಕ್ರಮ ಕೈಗೊಳ್ಳುವುದಾಗಿ ಸ್ಪೀಕರ್ ಖಾದರ್ ಹೇಳಿದ್ದಾರೆ. ಸದ್ಯ ಪಾವೂರಿನಲ್ಲಿ ನಡೆದ ಅಕ್ರಮ ಮರಳುಗಾರಿಕೆ ಬಗ್ಗೆ ತನಿಖೆ ನಡೆಸಲು ಸಮಿತಿ ರಚನೆಯಾಗಿದ್ದರೆ ಇನ್ನೊಂದು ಕಡೆ ರಾಷ್ಟ್ರೀಯ ಹಸಿರು ಪ್ರಾಧಿಕಾರವು ಎಂಟ್ರಿ ಕೊಟ್ಟಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಈ ಅಕ್ರಮಗಳಿಗೆ ಕಡಿವಾಣ ಬೀಳುತ್ತಾ ಎಂದು ಕಾದು ನೋಡಬೇಕಾಗಿದೆ‌.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 6:05 pm, Sat, 30 November 24

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ