AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2 ಗಂಟೆ ತಡವಾಗಿ ಬಂದರೂ ಮುಂಬೈನಲ್ಲೇ ಮಂಗಳೂರು ಪ್ರಯಾಣಿಕರನ್ನು ಬಿಟ್ಟು ಹಾರಿದ ವಿಮಾನ

ಬಹರೇನ್​ನಲ್ಲಿ ಓರ್ವನಿಗಾಗಿ ಎರಡು ಗಂಟೆ ಕಾದಿದ್ದ ವಿಮಾನ, 12 ಜನರಿಗಾಗಿ ಒಂದು ಗಂಟೆ ಕಾದಿಲ್ಲ. ಮುಂಬೈ ವಿಮಾನ ನಿಲ್ದಾಣದಲ್ಲೇ ಮಂಗಳೂರು ಪ್ರಯಾಣಿಕರನ್ನು ಬಿಟ್ಟು ಹಾರಿದೆ.

2 ಗಂಟೆ ತಡವಾಗಿ ಬಂದರೂ ಮುಂಬೈನಲ್ಲೇ ಮಂಗಳೂರು ಪ್ರಯಾಣಿಕರನ್ನು ಬಿಟ್ಟು ಹಾರಿದ ವಿಮಾನ
ಮುಂಬೈ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಆಕ್ರೋಶ
ಆಯೇಷಾ ಬಾನು
| Edited By: |

Updated on:Mar 23, 2023 | 12:51 PM

Share

ಮಂಗಳೂರು: ಬಹರೇನ್​ನಿಂದ ಮುಂಬೈಗೆ ವಿಮಾನ 2 ಗಂಟೆ ತಡವಾಗಿ ಆಗಮಿಸಿದಲ್ಲದೇ ಪ್ರಯಾಣಿಕರನ್ನು ಬಿಟ್ಟು ಹೋಗಿದೆ.  ಇಂಡಿಗೋ ವಿಮಾನ ಸಿಬ್ಬಂದಿಗಳ ನಿರ್ಲಕ್ಷ್ಯಕ್ಕೆ ಮಂಗಳೂರು ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದು ಮುಂಬೈ ವಿಮಾನ ನಿಲ್ದಾಣದಲ್ಲಿ ಕೆಲ ಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಬಹರೇನ್​ನಿಂದ ಮಂಗಳೂರಿಗೆ ಟಿಕೆಟ್ ಮಾಡಿದ್ದ ಪ್ರಯಾಣಿಕರು ಮುಂಬೈ ವಿಮಾನ ನಿಲ್ದಾಣದಲ್ಲಿ ಪರದಾಡುವಂತಾಗಿದೆ. ಬಹರೇನ್​ನಿಂದ ಮುಂಬೈಗೆ ಆಗಮಿಸಿದ ವಿಮಾನ 2 ತಾಸು ವಿಳಂಬವಾಗಿದೆ. ಮುಂಜಾನೆ 5.30 ಕ್ಕೆ ಲ್ಯಾಂಡ್ ಆಗಮಿಸಬೇಕಿದ್ದ ಇಂಡಿಯೋ ವಿಮಾನ 7.30 ಕ್ಕೆ ಮುಂಬೈ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಆಗಿದ್ದು, ಆದರೂ ಸಹ ಮುಂಬೈನಲ್ಲಿ ಕಾಯುತ್ತಿದ್ದ ಮಂಗಳೂರು ಪ್ರಯಾಣಿಕರನ್ನು ಬಿಟ್ಟು ಹೋಗಿದೆ. ಇದರಿಂದ ಮಂಗಳೂರಿಗೆ ಬರಬೇಕಿದ್ದ ಪ್ರಯಾಣಿಕರು ಮುಂಬೈ ವಿಮಾನ ನಿಲ್ದಾಣದಲ್ಲೇ ಉಳಿಯುವಂತಾಗಿದ್ದು,  ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಹರೇನ್​ನಲ್ಲಿ ಪ್ರಯಾಣಿಕನೋರ್ವನಿಗಾಗಿ ವಿಮಾನ ಎರಡು ಗಂಟೆ ಕಾದಿದೆ. ಹೀಗಾಗಿ ಮುಂಬೈ ನಿಲ್ದಾಣಕ್ಕೆ ತಡವಾಗಿ ಲ್ಯಾಂಡ್ ಆಗಿದೆ. ಅಲ್ಲದೆ ಮುಂಬೈನಿಂದ ಮಂಗಳೂರಿಗೆ ಹಾರಬೇಕಿದ್ದ ಇಂಡಿಗೋ ವಿಮಾನದ ಕನೆಕ್ಟಿಂಗ್ ಫ್ಲೈಟ್ ಮಂಗಳೂರಿನ ಪ್ರಯಾಣಿಕರನ್ನು ಬಿಟ್ಟು ಹಾರಿದೆ. 12 ಪ್ರಯಾಣಿಕರು ಮುಂಬೈ ವಿಮಾನ ನಿಲ್ದಾಣದಲ್ಲೇ ಅತಂತ್ರರಾಗಿದ್ದು ಇಂಡಿಗೋ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಸದ್ಯ ಸಿಬ್ಬಂದಿ ರಾತ್ರಿ 8.30ರ ವಿಮಾನದ ವ್ಯವಸ್ಥೆ ಮಾಡಿದ್ದಾರೆ. ರಾತ್ರಿ ವರೆಗೂ ರೂಮ್ ವ್ಯವಸ್ಥೆ ಕೂಡ ಮಾಡಲಾಗಿದೆ. ಆದ್ರೆ ಬಹರೇನ್​ನಲ್ಲಿ ಓರ್ವನಿಗಾಗಿ ಎರಡು ಗಂಟೆ ಕಾದಿದ್ದ ವಿಮಾನ, 12 ಜನರಿಗಾಗಿ ಒಂದು ಗಂಟೆ ಕಾದಿಲ್ಲ ಯಾಕೆ ಎಂದು ಪ್ರಯಾಣಿಕರು ಪ್ರಶ್ನೆ ಮಾಡಿದ್ದಾರೆ.

ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಯುತ್ತಿದ್ದ 12 ಪ್ರಯಾಣಿಕರನ್ನು ಬಿಟ್ಟು ಮಂಗಳೂರಿಗೆ ವಿಮಾನ ಹಾರಿದೆ. ಈ ಹಿನ್ನೆಲೆಯಲ್ಲಿ ಇಂಡಿಗೋ ಸಿಬ್ಬಂದಿ ಇಂದುಶ್ರ(ಮಾರ್ಚ್ 23) ರಾತ್ರಿ 8.30ರ ವಿಮಾನ ವ್ಯವಸ್ಥೆ ಮಾಡಿದೆ. ಅಲ್ಲಿಯವರೆಗೂ ಪ್ರಯಾಣಿಕರಿಗೆ ರೂಮ್ ವ್ಯವಸ್ಥೆ ಮಾಡಿಕೊಡಲಾಗಿದೆ ಎಂದು ತಿಳಿದುಬಂದಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:43 pm, Thu, 23 March 23

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ