AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿನಲ್ಲಿ ಇ-ರಿಕ್ಷಾ ನೋಂದಣಿಗೆ ಅಡ್ಡಿ: ಹೊಸ ಆಟೋ ಬುಕ್ ಮಾಡಿದವರು ಅತಂತ್ರ!

Mangaluru News: ಕಡಲನಗರಿ ಮಂಗಳೂರಿನಲ್ಲಿ ಇ-ಅಟೋ ಬುಕ್ ಮಾಡಿದವರು ಸಂಕಷ್ಟ ಅನುಭವಿಸುವಂತಾಗಿದೆ. ತಾವು ಖರೀದಿಸಿದ ಆಟೋಗಳನ್ನು ನೋಂದಣಿ ಮಾಡಿಕೊಳ್ಳಲು ಸಾಧ್ಯವಾಗದೆ ಪರದಾಡುವಂತಾಗಿದೆ.

ಮಂಗಳೂರಿನಲ್ಲಿ ಇ-ರಿಕ್ಷಾ ನೋಂದಣಿಗೆ ಅಡ್ಡಿ: ಹೊಸ ಆಟೋ ಬುಕ್ ಮಾಡಿದವರು ಅತಂತ್ರ!
ಇ-ರಿಕ್ಷಾ ನೋಂದಣಿಗೆ ಸಂಕಷ್ಟ
ಅಶೋಕ್​ ಪೂಜಾರಿ, ಮಂಗಳೂರು
| Edited By: |

Updated on: Aug 06, 2023 | 9:31 PM

Share

ಮಂಗಳೂರು, ಆಗಸ್ಟ್​ 06: ಇಂಧನ ಉಳಿತಾಯದ ಜೊತೆಗೆ ಪರಿಸರ ಮಾಲಿನ್ಯ ನಿಯಂತ್ರಣದ ದೃಷ್ಟಿಯಿಂದ ಸರ್ಕಾರ ಇಲೆಕ್ಟ್ರಿಕ್ ವಾಹನ (Electric vehicle) ಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದೆ.‌ ಆದರೆ ಕಡಲನಗರಿ ಮಂಗಳೂರಿನಲ್ಲಿ ಇ-ಅಟೋ ಬುಕ್ ಮಾಡಿದವರು ಸಂಕಷ್ಟ ಅನುಭವಿಸುವಂತಾಗಿದೆ. ತಾವು ಖರೀದಿಸಿದ ಆಟೋಗಳನ್ನು ನೋಂದಣಿ ಮಾಡಿಕೊಳ್ಳಲು ಸಾಧ್ಯವಾಗದೆ ಪರದಾಡುವಂತಾಗಿದೆ.

ದಿನದಿಂದ ದಿನಕ್ಕೆ ಪೆಟ್ರೋಲ್, ಡಿಸೇಲ್ ಚಾಲಿತ ಹೊಸ ವಾಹನಗಳು ರಸ್ತೆಗಿಳಿಯುವ ಸಂಖ್ಯೆ ಹೆಚ್ಚಾಗುತ್ತಿದೆ. ಇದರಿಂದ ಭವಿಷ್ಯದಲ್ಲಿ ಇಂಧನದ ಕೊರತೆ ಉಂಟಾಗುದರ ಜೊತೆ ವಾತವಾರಣದಲ್ಲಿ ಇಂಗಾಲದ ಡೈ ಆಕ್ಸೈಡ್ ಹೆಚ್ಚಾಗಿ ಉಸಿರಾಡುವುದಕ್ಕೆ ಶುದ್ದ ಗಾಳಿ ಇಲ್ಲದಂತಾಗುತ್ತದೆ. ಹೀಗಾಗಿ ಸದ್ಯ ಇಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತಿದೆ. ಇದಕ್ಕಾಗಿ ಸರ್ಕಾರವು ಸಹ ಇಲೆಕ್ಟ್ರಿಕ್ ವಾಹನ ಖರೀದಿದಾರರಿಗೆ ಸಪೋರ್ಟ್ ಸಹ ನೀಡುತ್ತಿದೆ. ಆದರೆ ಮಂಗಳೂರಿನಲ್ಲಿ ಇದಕ್ಕೆ ತದ್ವಿರುದ್ಧ ಎಂಬಂತೆ ಕಳೆದ ನವೆಂಬರ್‌ನಿಂದ ಇವರೆಗೆ ಪರಿಸರ ಸ್ನೇಹಿ ಇಲೆಕ್ಟ್ರಿಕ್ ಆಟೋಗಳ ನೋಂದಣಿಯೇ ಆಗುತ್ತಿಲ್ಲ.

ಇದನ್ನೂ ಓದಿ: ಪ್ರಯಾಣಿಕರನ್ನು ಬೆಂಗಳೂರು ನಿಲ್ದಾಣದಲ್ಲೇ ಬಿಟ್ಟು ಮಂಗಳೂರಿಗೆ ಹಾರಿದ ಇಂಡಿಗೋ ವಿಮಾನ, ಮುಂದೇನಾಯ್ತು?

ಮಂಗಳೂರು ನಗರದಲ್ಲಿ ಈಗಾಗಲೇ 7 ಸಾವಿರಕ್ಕೂ ಅಧಿಕ ಆಟೋಗಳು ಇದ್ದು ಹೀಗಾಗಿ ನಗರದಲ್ಲಿ ಹೊಸ ಅಟೋಗಳಿಗೆ ಅನುಮತಿ ನೀಡಬಾರದು ಎಂದು ಕೆಲ ಆಟೋ ಯೂನಿಯನ್‌ಗಳು ಪ್ರತಿಭಟನೆ ನಡೆಸಿದ್ದವು. ಈ ಬಗ್ಗೆ ಕ್ರಮ ವಹಿಸಿದ ಪ್ರಾದೇಶಿಕ ಪ್ರಾಧಿಕಾರದ ಅಧ್ಯಕ್ಷ, ಜಿಲ್ಲಾಧಿಕಾರಿಗಳು ನಗರ ಭಾಗದಲ್ಲಿ ಹೊಸ ಆಟೋಗಳಿಗೆ ನೋಂದಣಿಗೆ ಅವಕಾಶ ಇಲ್ಲ ಎಂಬ ಆದೇಶ ಹೊರಡಿಸಿದರು. ಆ ಬಳಿಕದಿಂದ ಈ ಸಮಸ್ಯೆ ಉದ್ಭವವಾಗಿದ್ದು ಇದರಿಂದ ಹೊಸ ಇ-ಆಟೋ ಬುಕ್ ಮಾಡಿದವರು ಇತ್ತ ರಿಕ್ಷಾ ನೋಂದಣಿಯು ಸಾಧ್ಯವಾಗದೆ ಅತ್ತ ಸಾಲದ ಕಂತು ಪಾವತಿಸಲು ಸಾಧ್ಯವಾಗದೆ ಸಮಸ್ಯೆಯ ಸುಲಿಯಲ್ಲಿ ಸಿಲುಕಿದ್ದಾರೆ.

ಮಂಗಳೂರಿನಲ್ಲಿ ಸಾರಿಗೆ ಇಲಾಖೆ ಅಧಿಕಾರಿಗಳು ವಲಯ 1 ಹಾಗೂ ವಲಯ 2 ಎಂಬ ವಿಭಾಗ ಮಾಡಿದ್ದಾರೆ. ವಲಯ 1ರಲ್ಲಿ ಅನುಮತಿ ಪಡೆದ ಆಟೋಗಳು ನಗರದಲ್ಲಿ ಮಾತ್ರ ಬಾಡಿಗೆ ಮಾಡಬೇಕು. ವಲಯ 2 ಅಡಿ ನೋಂದಣಿ ಮಾಡಿದ ಆಟೋಗಳು ಗ್ರಾಮಾಂತರ ಪ್ರದೇಶದಲ್ಲಿ ಮಾತ್ರ ಬಾಡಿಗೆ ಮಾಡಬೇಕೆಂಬ ನಿಯಮವನ್ನು ಮಾಡಿದ್ದಾರೆ. ಆದರೆ ಸದ್ಯ ಇ ಆಟೋ‌ ಸೇರಿದಂತೆ ಹೊಸ‌‌ ಆಟೋಗಳಿಗೆ ಗ್ರಾಮಾಂತರ ಪ್ರದೇಶದಲ್ಲಿ ಮಾತ್ರ ಅನುಮತಿಸಲು ಅವಕಾಶ ನೀಡಲಾಗಿದೆ.

ಇದನ್ನೂ ಓದಿ: ಗ್ರಾಹಕರಿಗೆ ಶಾಕ್: ಮಂಗಳೂರಿನಲ್ಲಿಯೂ ಹೋಟೆಲ್ ತಿಂಡಿ, ತಿನಿಸು ದುಬಾರಿ, ಶೇ 10ರ ದರ ಹೆಚ್ಚಳ

ಆದರೆ ಇ-ಆಟೋಗಳು ನಗರದಲ್ಲಿ ಓಡಿಸುವುದು ಸುಲಭವಾಗಿದ್ದು ನೋಂದಣಿಗೆ ಅವಕಾಶ ಸಿಗುತ್ತಿಲ್ಲ. ಹೀಗಾಗಿ ಸಮಸ್ಯೆ ಸೃಷ್ಟಿಯಾಗಿದ್ದು ಈ ನೀತಿಯ ವಿರುದ್ದ ಇಲೆಕ್ಟ್ರಿಕ್ ಆಟೋ ಡೀಲರ್‌ಗಳು ಹೈಕೋರ್ಟ್ ಮೊರೆ ಹೋಗಿದ್ದಾರೆ. ಸದ್ಯ ಈ ಹಿಂದಿನ ಆಟೋ ಯೂನಿಯನ್ ಮತ್ತು ಆಟೋ ಡೀಲರ್ಸ್‌ಗಳ ನಡುವೆ ಕಾನೂನು ಹೋರಾಟ ನಡೆಯುತ್ತಿದ್ದು ತೀರ್ಪಿಗಾಗಿ ಕಾಯಲಾಗುತ್ತಿದೆ. ಇನ್ನು ಈ ವಿಚಾರ ದಕ್ಷಿಣಕನ್ನಡ ಜಿಲ್ಲೆಯ ನೂತ‌ನ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರ ಗಮನಕ್ಕೂ ಬಂದಿದ್ದು ಪ್ರಾದೇಶಿಕ ಪ್ರಾಧಿಕಾರದ ಸಭೆ ನಡೆಸಿ ಸಮಸ್ಯೆ ಬಗೆಹರಿಸುವುದಾಗಿ ಹೇಳಿದ್ದಾರೆ.

ಈಗಾಗಲೇ ಮಂಗಳೂರಿನಲ್ಲಿ ಸುಮಾರು 400 ಕ್ಕೂ ಹೆಚ್ಚು ಎಲೆಕ್ಟ್ರಿಕ್ ಆಟೋಗಳ ನೋಂದಣಿಯಾಗಿದೆ. ಆದ್ರೆ ನವೆಂಬರ್ ಬಳಿಕದಿಂದ ಯಾವುದೇ ನೋಂದಣಿ ಆಗಿಲ್ಲ. ಒಟ್ಟಿನಲ್ಲಿ ಶೀಘ್ರದಲ್ಲಿ ಈ ಸಮಸ್ಯೆಯನ್ನು ಬಗೆಹರಿಸಿ ಎಲ್ಲರಿಗೂ ಸಮಾನವಾಗಿ‌ ದುಡಿಯುವ ಅವಕಾಶವನ್ನು ಕಲ್ಪಿಸಿಕೊಡಬೇಕಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಅಶೋಕ್​ ಪೂಜಾರಿ, ಮಂಗಳೂರು
ಅಶೋಕ್​ ಪೂಜಾರಿ, ಮಂಗಳೂರು

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸುದ್ದಿಬಿಡುಗಡೆ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಪ್ರಜಾ ಟಿ.ವಿಯ ಉಡುಪಿ ಜಿಲ್ಲಾ ವರದಿಗಾರರಾಗಿ ಒಂದು ವರ್ಷ ಏಳು ತಿಂಗಳು ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ, ಒಂದು ವರ್ಷ ನಾಲ್ಕು ತಿಂಗಳಿನಿಂದ ಟಿ.ವಿ 9 ವಾಹಿನಿಯಲ್ಲಿ ದಕ್ಷಿಣಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ ಇಂಡಿಯಾ ಟೆಲಿವಿಷನ್​ . ಕಾಮ್​ 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More
ನಿರುದ್ಯೋಗಿಗಳಿಗೆ ಗುಡ್​ನ್ಯೂಸ್​​ ನೀಡಿದ ಸಿಎಂ ಡಿಕೆ ಶಿವಕುಮಾರ್​
ನಿರುದ್ಯೋಗಿಗಳಿಗೆ ಗುಡ್​ನ್ಯೂಸ್​​ ನೀಡಿದ ಸಿಎಂ ಡಿಕೆ ಶಿವಕುಮಾರ್​
ವೆನೆಜುವೆಲಾ ದರೋಡೆಕೋರನ ಮೇಲಿನ ವೈಮಾನಿಕ ದಾಳಿಯ ವಿಡಿಯೋ ಹಂಚಿಕೊಂಡ ಟ್ರಂಪ್
ವೆನೆಜುವೆಲಾ ದರೋಡೆಕೋರನ ಮೇಲಿನ ವೈಮಾನಿಕ ದಾಳಿಯ ವಿಡಿಯೋ ಹಂಚಿಕೊಂಡ ಟ್ರಂಪ್
ಮತ್ತೆ ವಿದೇಶಕ್ಕೆ ತೆರಳಿದ ಪ್ರಧಾನಿ ಮೋದಿ; ಫ್ರಾನ್ಸ್​, ಸ್ಲೋವಾಕಿಯಾಗೆ ಭೇಟಿ
ಮತ್ತೆ ವಿದೇಶಕ್ಕೆ ತೆರಳಿದ ಪ್ರಧಾನಿ ಮೋದಿ; ಫ್ರಾನ್ಸ್​, ಸ್ಲೋವಾಕಿಯಾಗೆ ಭೇಟಿ
ಮನಾಲಿಗೆ ಹೊರಟ ಪ್ರವಾಸಿಗರಿಂದ ಕುಲು-ಮಂಡಿ ಮಾರ್ಗದಲ್ಲಿ ಟ್ರಾಫಿಕ್ ಜಾಮ್
ಮನಾಲಿಗೆ ಹೊರಟ ಪ್ರವಾಸಿಗರಿಂದ ಕುಲು-ಮಂಡಿ ಮಾರ್ಗದಲ್ಲಿ ಟ್ರಾಫಿಕ್ ಜಾಮ್
ಪ್ರಥಮ ದರ್ಜೆ ನೌಕರನಿಗೆ ಚಪ್ಪಲಿ ಏಟು ಕೊಟ್ಟ ರೈತ! ಯಾಕೆ ಗೊತ್ತಾ?
ಪ್ರಥಮ ದರ್ಜೆ ನೌಕರನಿಗೆ ಚಪ್ಪಲಿ ಏಟು ಕೊಟ್ಟ ರೈತ! ಯಾಕೆ ಗೊತ್ತಾ?
ಬಿಡದಿ ಟೌನ್​ಶಿಪ್​ ಯೋಜನೆ ವಿರೋಧಿಸಿ ಜೂನ್ 22ರಂದು ಬೃಹತ್ ಪ್ರತಿಭಟನೆ!
ಬಿಡದಿ ಟೌನ್​ಶಿಪ್​ ಯೋಜನೆ ವಿರೋಧಿಸಿ ಜೂನ್ 22ರಂದು ಬೃಹತ್ ಪ್ರತಿಭಟನೆ!
ಕಲಬುರಗಿಯಲ್ಲಿ ನಕಲಿ ಡಿಎಪಿ ರಸಗೊಬ್ಬರ ಮಾರಾಟ: ರೈತರ ತೀವ್ರ ಆಕ್ರೋಶ
ಕಲಬುರಗಿಯಲ್ಲಿ ನಕಲಿ ಡಿಎಪಿ ರಸಗೊಬ್ಬರ ಮಾರಾಟ: ರೈತರ ತೀವ್ರ ಆಕ್ರೋಶ
ಬಿಡದಿ ಟೌನ್​ಶಿಪ್​​ ಯೋಜನೆ ಲೂಟಿ ಸ್ಕೀಮ್​​​ ಡೌಟೇ ಬೇಡ: ಕುಮಾರಸ್ವಾಮಿ
ಬಿಡದಿ ಟೌನ್​ಶಿಪ್​​ ಯೋಜನೆ ಲೂಟಿ ಸ್ಕೀಮ್​​​ ಡೌಟೇ ಬೇಡ: ಕುಮಾರಸ್ವಾಮಿ
ಕೊಲೆ ಆರೋಪಿಗಳಿಂದ ಜೈಲಿನಲ್ಲಿ ಪುಂಡಾಟ: ವಾರ್ಡನ್ ಮೇಲೆ ಹಲ್ಲೆ!
ಕೊಲೆ ಆರೋಪಿಗಳಿಂದ ಜೈಲಿನಲ್ಲಿ ಪುಂಡಾಟ: ವಾರ್ಡನ್ ಮೇಲೆ ಹಲ್ಲೆ!
‘ಯತ್ನಾಳ್ ಯಾವುದೋ ಒಂದು ಕೋತಿಯ ಬ್ರೀಡ್’: ಪ್ರದೀಪ್ ಈಶ್ವರ್ ವಾಗ್ದಾಳಿ
‘ಯತ್ನಾಳ್ ಯಾವುದೋ ಒಂದು ಕೋತಿಯ ಬ್ರೀಡ್’: ಪ್ರದೀಪ್ ಈಶ್ವರ್ ವಾಗ್ದಾಳಿ