AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mangalore News: ಮಂಗಳೂರಿನ ತೋಕೂರು ಬಳಿ ಹಳಿ ತಪ್ಪಿದ ಅದಾನಿ ಗ್ರೂಪ್​ಗೆ ಸೇರಿದ ರೈಲು

ಸೋಮವಾರ ಸಂಜೆ ಚೆನ್ನೈನಿಂದ ಕೇರಳ ಮತ್ತು ಮಂಗಳೂರು ಮಾರ್ಗವಾಗಿ ಹೊರಟಿದ್ದ ಗೂಡ್ಸ್ ರೈಲು ಹಳಿತಪ್ಪಿದೆ.

Mangalore News: ಮಂಗಳೂರಿನ ತೋಕೂರು ಬಳಿ ಹಳಿ ತಪ್ಪಿದ ಅದಾನಿ ಗ್ರೂಪ್​ಗೆ ಸೇರಿದ ರೈಲು
ಹಳಿ ತಪ್ಪಿದ ಗೂಡ್ಸ್ ಟ್ರೈನ್
TV9 Web
| Edited By: |

Updated on:May 23, 2023 | 11:57 AM

Share

ಮಂಗಳೂರು: ನಗರದ ಹೊರವಲಯದ ತೋಕೂರು ರೈಲು ನಿಲ್ದಾಣದ(Thokur Railway Station) ಬಳಿ ಮೇ 22 ರ ಸೋಮವಾರ ಸಂಜೆ ಚೆನ್ನೈನಿಂದ ಕೇರಳ ಮತ್ತು ಮಂಗಳೂರು ಮಾರ್ಗವಾಗಿ ಹೊರಟಿದ್ದ ಗೂಡ್ಸ್ ರೈಲು ಹಳಿತಪ್ಪಿದೆ(Goods Train Derails). ಈ ಪರಿಣಾಮ ನಿನ್ನೆ ಕಾರವಾರ ಬೆಂಗಳೂರು ಸೇರಿದಂತೆ ವಿವಿಧ ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಿತ್ತು.

ಇನ್ನು ನಿನ್ನೆ ಈ ಘಟನೆಯಿಂದ ಒಂದು ಗಂಟೆ ತಡವಾಗಿ ರೈಲುಗಳು ಸಂಚರಿಸಿದ್ದು ಗೂಡ್ಸ್ ರೈಲು ದುರಸ್ತಿಗೆ ಕ್ರಮ ಕೈಗೊಳ್ಳಲಾಗಿತ್ತು. ಸದ್ಯ ಹಳಿತಪ್ಪಿದ ಗೂಡ್ಸ್ ರೈಲು ಅದಾನಿ ಗ್ರೂಪ್‌ಗೆ ಸೇರಿದ್ದು, ಲೋಡ್ ಆಗಿರಲಿಲ್ಲ ಎಂದು ರೈಲ್ವೆ ಮೂಲಗಳು ತಿಳಿಸಿವೆ. ಹಳಿ ತಪ್ಪಲು ಕಾರಣ ತಿಳಿದುಬಂದಿಲ್ಲ. ತೋಕೂರು ನಿಲ್ದಾಣದ ಬಳಿ ಗೂಡ್ಸ್ ರೈಲು ಹಳಿತಪ್ಪಿದ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ರೈಲು ಸಂಚಾರಕ್ಕೆ ಯಾವುದೇ ತೊಂದರೆಯಾಗಲಿಲ್ಲ. ಯಶವಂತಪುರ-ಕಾರವಾರ ಹಗಲು ರೈಲು ಯಾವುದೇ ತೊಂದರೆಗಳಿಲ್ಲದೆ ಮತ್ತೊಂದು ಹಳಿಯಲ್ಲಿ ಚಲಿಸಿತು ಎಂದು ಮಾಹಿತಿ ಸಿಕ್ಕಿದೆ.

ಇದನ್ನೂ ಓದಿ: Belagavi News: ಕೃಷ್ಣಾ ನದಿ ಕೂಗಳತೆ ದೂರದಲ್ಲೇ ನೀರಿಗಾಗಿ ಪರದಾಟ; ಜನಪ್ರತಿನಿಧಿಗಳ ವಿರುದ್ದ ಆಕ್ರೋಶ ಹೊರ ಹಾಕುತ್ತಿರುವ ಗ್ರಾಮಸ್ಥರು

ವಿಜಯಪುರ – ಮಂಗಳೂರು ರೈಲು ಸಂಚಾರ ಜೂನ್ 4ರ ವರೆಗೆ ರದ್ದು

ಮಂಗಳೂರು: ಹಾಸನ ಜಿಲ್ಲೆಯ ಕಡಗರವಳ್ಳಿ ಮತ್ತು ಯಡಕುಮೇರಿ ಮಧ್ಯೆ ರೈಲು ಹಳಿ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ವಿಜಯಪುರ – ಮಂಗಳೂರು (Vijayapura – Mangaluru Train) ನಡುವೆ ಸಂಚರಿಸುವ ರೈಲು ಸಂಚಾರವನ್ನು ಭಾಗಶಃ ರದ್ದುಗೊಳಿಸಲಾಗಿದೆ. ರೈಲು ಸಂಚಾರ ರದ್ದುಗೊಳಿಸುವುದರಿಂದ ಪ್ರಯಾಣಿಕರಿಗೆ ಕೆಲ ದಿನಗಳ ಕಾಲ ತೊಂದರೆಯಾಗಲಿದೆ. ಇದರಿಂದ, ಗೋವಾದಲ್ಲಿ ಕುಲೈಮ್-ವಾಸ್ಕೋ ಡ ಗಾಮಾ ಸರಕು ಸಾಗಣೆ ರೈಲು ಸಂಚಾರದ ಮೇಲೂ ಪರಿಣಾಮವಾಗಲಿದೆ.

ಮಂಗಳೂರು – ವಿಜಯಪುರ ನಡುವಣ ದೈನಂದಿನ ರೈಲು ಸಂಚಾರ ಮೇ 21 ರಿಂದ ಜೂನ್ 4 ರವರೆಗೆ ರದ್ದಾಗಲಿದೆ. ಇದು ಗೋವಾದಲ್ಲಿ ಮರ್ಜೋಡ ಮತ್ತು ವಾಸ್ಕೋ ಡ ಗಾಮಾ ವಿಭಾಗದಲ್ಲಿ ಸರಕುಗಳ ಸಾಗಾಟದ ಮೇಲೂ ಪರಿಣಾಮ ಬಿರಲಿದೆ. ಕುಲೇಮ್ – ವಾಸ್ಕೋ ಡ ಗಾಮಾ ರೈಲು ಮೇ 22, 24, 26 ರಂದು ರದ್ದಾಗಲಿದೆ. ಈ ರೈಲು ಸಂಚಾರವನ್ನು ಮೇ 28, 30, ಜೂನ್ 1 ಮತ್ತು 3 ರಂದೂ ರದ್ದಗೊಳಿಸಲಾಗಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.

ಅದೇ ರೀತಿ, ಮಂಗಳೂರು-ವಿಜಯಪುರ ರೈಲು (07378) ಮೇ 22ರಿಂದ ಜುಲೈ 5ರವರೆಗೆ ಮಂಗಳೂರು ಬದಲು ಹಾಸನದಿಂದ ಸಂಚರಿಸಲಿದೆ.

ಮಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:36 am, Tue, 23 May 23

ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​