AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಬ್ರಿಜೇಶ್ ಚೌಟ ಹೆಸರಿನಲ್ಲಿ ನಕಲಿ ಜಾತಿಪತ್ರ ವೈರಲ್, ಬಿಜೆಪಿಯಿಂದ ಆಯೋಗಕ್ಕೆ ದೂರು

ಲೋಕಸಭೆ ಚುನಾವಣೆ ಮತದಾನಕ್ಕೆ ಒಂದು ದಿನ ಬಾಕಿ ಇರುವಾಗ ಮಂಗಳೂರಿನಲ್ಲಿ ಬಿಜೆಪಿ ಅಭ್ಯರ್ಥಿಯದ್ದು ಎನ್ನಲಾದ ಜಾತಿ ಪತ್ರವೊಂದು ವೈರಲ್ ಆಗಿದೆ. ಆದರೆ, ಇದು ನಕಲಿ ಎಂದಿರುವ ಬಿಜೆಪಿ, ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಕಾಂಗ್ರೆಸ್​ನ ಕುತಂತ್ರವಿದು ಎಂದು ಆರೋಪಿಸಿರುವ ಬಿಜೆಪಿ, ಇಂಥದ್ದಕ್ಕೆಲ್ಲ ಮತದಾರ ಮಣಿಯುವುದಿಲ್ಲ. ಇದು ಹಿಂದುತ್ವದ ಭದ್ರ ಕೋಟೆಯಾಗಿದ್ದು, ಜಾತಿ ಜಾತಿಗಳ ನಡುವೆ ಕಂದಕ ಸೃಷ್ಟಿಸಲು ಸಾಧ್ಯವಿಲ್ಲ ಎಂದು ಹೇಳಿದೆ.

ಮಂಗಳೂರು: ಬ್ರಿಜೇಶ್ ಚೌಟ ಹೆಸರಿನಲ್ಲಿ ನಕಲಿ ಜಾತಿಪತ್ರ ವೈರಲ್, ಬಿಜೆಪಿಯಿಂದ ಆಯೋಗಕ್ಕೆ ದೂರು
ಮಂಗಳೂರು: ಬ್ರಿಜೇಶ್ ಚೌಟ ಹೆಸರಿನಲ್ಲಿ ನಕಲಿ ಜಾತಿಪತ್ರ ವೈರಲ್, ಬಿಜೆಪಿಯಿಂದ ಆಯೋಗಕ್ಕೆ ದೂರು
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on: Apr 25, 2024 | 9:19 AM

Share

ಮಂಗಳೂರು, ಏಪ್ರಿಲ್ 25: ಲೋಕಸಭೆ ಚುನಾವಣೆಗೆ (Lok Sabha Polls) ಕರ್ನಾಟಕದಲ್ಲಿ ಮೊದಲ ಹಂತದ ಮತದಾನಕ್ಕೆ ಇನ್ನು ಒಂದೇ ದಿನ ಬಾಕಿ ಇದ್ದು, ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ (Dkashina Kannada) ಜಿಲ್ಲಾ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ (Brijesh Chowta) ಹೆಸರಿನಲ್ಲಿ ಜಾತಿ ಪತ್ರವೊಂದು ವೈರಲಾಗಿದೆ. ಆದರೆ, ಇದು ನಕಲಿ ಎಂದು ಹೇಳಿಕೊಂಡಿರುವ ಬಿಜೆಪಿ, ಕಾಂಗ್ರೆಸ್ ವಿರುದ್ಧ ಆರೋಪ ಮಾಡಿದೆ. ಜತೆಗೆ, ಚುನಾವಣಾ ಅಧಿಕಾರಿಗಳಿಗೆ ದೂರು ನೀಡಿದೆ. ನಕಲಿ ಪತ್ರ ಹರಿಯಬಿಟ್ಟು ಪಕ್ಷದ ಅಭ್ಯರ್ಥಿಗೆ ಹಿನ್ನಡೆ ಉಂಟು ಮಾಡಲು ಯತ್ನಿಸಲಾಗುತ್ತಿದೆ ಎಂದು ಆರೋಪಿಸಿರುವ ಬಿಜೆಪಿ, ಕಾಂಗ್ರೆಸ್ ಚುನಾವಣೆಗೆ ಮುನ್ನವೇ ಸೋಲೊಪ್ಪಿಕೊಂಡಿದೆ ಎಂದಿದೆ.

ದಕ್ಷಿಣ ಕನ್ನಡ ಜಿಲ್ಲೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಪ್ರಭಾವಿ ಬಂಟ ಸಮುದಾಯಕ್ಕೆ ಸೇರಿದವರು. ಹೀಗಾಗಿ ಬಂಟ ಬ್ರಿಗೇಡ್ ಹೆಸರಿನಲ್ಲಿ ಜಾತಿ ಪತ್ರವನ್ನು ವೈರಲ್ ಮಾಡಲಾಗಿದೆ.

ವೈರಲ್ ಆಗಿರುವ ಪತ್ರದಲ್ಲಿ ಏನಿದೆ?

‘ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಬಂಟ ಸಮುದಾಯದವರು. ನಮ್ಮ ಸಮುದಾಯದ ಅಭ್ಯರ್ಥಿಯನ್ನು ಗೆಲ್ಲಿಸಿ. ಇತರ ಶೂದ್ರ ಸಮುದಾಯಗಳು ಮೆರೆಯದಂತೆ ನೋಡಿಕೊಳ್ಳಿ’ ಎಂದು ವೈರಲ್ ಆದ ಪತ್ರದಲ್ಲಿದೆ. ಬಿಲ್ಲವ ಸಮುದಾಯವನ್ನು ಟಾರ್ಗೆಟ್ ಮಾಡಿ ಪತ್ರ ಬರೆಯಲಾಗಿದೆ ಎಂದು ಹೇಳಲಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲಾ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪದ್ಮರಾಜ್ ಇಲ್ಲವ ಸಮುದಾಯಕ್ಕೆ ಸೇರಿದವರು ಎಂಬುದು ಗಮನಾರ್ಹ.

ಇದನ್ನೂ ಓದಿ: ಚೊಂಬು ಜಾಹೀರಾತಿನ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಜಾತಿ ಬಂಡಾಯ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಭಾವಿ ಹಿಂದೂ ನಾಯಕ ಸತ್ಯಜಿತ್ ಸುರತ್ಕಲ್ ಬಿಜೆಪಿಯಿಂದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಟಿಕೆಟ್ ದೊರೆಯದ ಹಿನ್ನೆಲೆಯಲ್ಲಿ ಬಂಡಾಯದ್ದಿರುವ ಅವರು ಜಾತಿ ನೆಲೆಯಲ್ಲಿ ಅಭ್ಯರ್ಥಿಗಳನ್ನು ಬೆಂಬಲಿಸೋಣ ಎಂದು ಸಮುದಾಯದವರಿಗೆ ಇತ್ತೀಚೆಗೆ ಕರೆ ನೀಡಿದ್ದರು. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಪದ್ಮರಾಜ್ ಅವರನ್ನು ಬೆಂಬಲಿಸೋಣ, ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಗೆಲ್ಲಿಸೋಣ. ನಮ್ಮ ಸಮುದಾಯದ ಅಭ್ಯರ್ಥಿಗಳಿಗೆ ಮತ ನೀಡೋಣ ಎಂದು ಅವರು ಬೆಂಬಲಿಗರಿಗೆ ಕರೆ ನೀಡಿದ್ದು ಇತ್ತೀಚಿಗೆ ಸುದ್ದಿಯಾಗಿತ್ತು. ಕಳೆದ ವರ್ಷ ವಿಧಾನಸಭೆ ಚುನಾವಣೆ ವೇಳೆಯೂ ಅವರು, ಕಾಂಗ್ರೆಸ್ ಪರ ಮತಯಾನೆ ಮಾಡಿದ್ದರು ಎಂದು ಬಿಜೆಪಿಯ ಕೆಲವು ನಾಯಕರು ದೂರಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Pruthviraj
Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More