AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರಬ್ಬೀ ಸಮುದ್ರದಲ್ಲಿ ಭಾರೀ ಮತ್ಸ್ಯ ಕ್ಷಾಮ: ಮೀನುಗಾರಿಕೆ ನಿಷೇಧದ ಅವಧಿಗೂ ಮೊದಲೇ ಬಂದರಿನಲ್ಲಿ ಲಂಗರು ಹಾಕಿದ ಬೋಟ್‌ಗಳು

ದಕ್ಷಿಣಕನ್ನಡ ಜಿಲ್ಲೆಯಲ್ಲಿ 30 ಸಾವಿರಕ್ಕೂ ಹೆಚ್ಚು ವೃತ್ತಿನಿರತ ಮೀನುಗಾರರಿದ್ದಾರೆ. 1134 ಪರ್ಸೀನ್ ಮತ್ತು ಟ್ರಾಲ್, 1396 ಗಿಲ್‌ನೆಟ್, 531 ಸಾಂಪ್ರದಾಯಿಕ ಬೋಟ್‌ಗಳಿವೆ. ಮೀನುಗಾರಿಕೆ ನಷ್ಟದ ಹಾದಿಯಲ್ಲಿರುವುದರಿಂದ ಅನಿವಾರ್ಯವಾಗಿ ಸಾವಿರಾರು ಬೋಟುಗಳು ಬಂದರು ಸೇರುತ್ತಿವೆ.

ಅರಬ್ಬೀ ಸಮುದ್ರದಲ್ಲಿ ಭಾರೀ ಮತ್ಸ್ಯ ಕ್ಷಾಮ: ಮೀನುಗಾರಿಕೆ ನಿಷೇಧದ ಅವಧಿಗೂ ಮೊದಲೇ ಬಂದರಿನಲ್ಲಿ ಲಂಗರು ಹಾಕಿದ ಬೋಟ್‌ಗಳು
ಬಂದರು ಸೇರುತ್ತಿರುವ ಮೀನುಗಾರಿಕಾ ಬೋಟ್​ಗಳು
ಅಶೋಕ್​ ಪೂಜಾರಿ, ಮಂಗಳೂರು
| Edited By: |

Updated on: May 10, 2024 | 2:56 PM

Share

ಮಂಗಳೂರು, ಮೇ 10: ಕರಾವಳಿಯ ಆರ್ಥಿಕತೆಯ ಜೀವನಾಡಿ ಮತ್ಸೋದ್ಯಮ (Fishing) ಪಾತಾಳಕ್ಕೆ ಕುಸಿದಿದೆ. ಜೂನ್‌ನಲ್ಲಿ ಲಂಗರು ಹಾಕಬೇಕಾದ ಮೀನುಗಾರಿಕಾ ಬೋಟ್‌ಗಳು ಮೇ ತಿಂಗಳಲ್ಲೇ ಬಂದರಿನಲ್ಲಿ ಲಂಗರು ಹಾಕಿವೆ. ಅವೈಜ್ಞಾನಿಕ ಮೀನುಗಾರಿಕೆ, ಸಮುದ್ರದ (Arabian Sea) ನೀರಿನ ಉಷ್ಣಾಂಶ ಏರಿಕೆಯಿಂದ ಮೀನಿನ (Fish) ಕೊರತೆಯಾಗಿ ಮೀನುಗಾರರ ಹೊಟ್ಟೆಗೆ ತಣ್ಣೀರಿನ ಬಟ್ಟೆ ಕಟ್ಟುವಂತಾಗಿದೆ.

ಸಾಮಾನ್ಯವಾಗಿ ಬೋಟುಗಳು ಮಳೆಗಾಲದ ಮೀನುಗಾರಿಕಾ ನಿಷೇಧದ ಅವಧಿಯಾದ ಜೂನ್ ತಿಂಗಳಲ್ಲಿ ಲಂಗರು ಹಾಕುತ್ತವೆ. ಆದರೆ ಈ ಬಾರಿ ಮೇ ಪ್ರಾರಂಭದಲ್ಲೇ 80 ಶೇಕಡಾ ಬೋಟ್‌ಗಳು ದಡದಲ್ಲಿ ಬಂದು ಲಂಗರು ಹಾಕಿವೆ. ಇದಕ್ಕೆ ಮುಖ್ಯ ಕಾರಣ ಕಡಲಲ್ಲಿ ಭಾರೀ ಮತ್ಸ್ಯ ಕ್ಷಾಮ ಉಂಟಾಗಿರುವುದು. ಅವೈಜ್ಞಾನಿಕವಾಗಿ ನಡೆಸಿದ ಮೀನುಗಾರಿಕೆಯಿಂದ ಮೀನಿನ ಸಂತತಿಯೆಲ್ಲಾ ನಾಶವಾಗಿದೆ. ಸಣ್ಣ ಪುಟ್ಟ ಮರಿ ಮೀನುಗಳನ್ನು ಹಿಡಿದು ತಂದಿರುವುದರಿಂದ ಮೀನುಗಳ ಸಂಖ್ಯೆ ಕಡಿಮೆಯಾಗಿದೆ. ಇದರ ಜೊತೆ ಸಮುದ್ರದಲ್ಲಿ ನೀರಿನ ಉಷ್ಣಾಂಶ ಏರಿಕೆಯಾಗಿರುವುದರಿಂದ ಮೀನುಗಳೆಲ್ಲಾ ತಳ ಸೇರಿದೆ. ಹೀಗಾಗಿ ದೊಡ್ಡ ಮಟ್ಟದ ಮತ್ಸ್ಯ ಕ್ಷಾಮ ಎದುರಾಗಿದೆ.

30 ಸಾವಿರಕ್ಕೂ ಹೆಚ್ಚು ಮೀನುಗಾರರಿಗೆ ಸಂಕಷ್ಟ

ದಕ್ಷಿಣಕನ್ನಡ ಜಿಲ್ಲೆಯಲ್ಲಿ 30 ಸಾವಿರಕ್ಕೂ ಹೆಚ್ಚು ವೃತ್ತಿನಿರತ ಮೀನುಗಾರರಿದ್ದಾರೆ. 1134 ಪರ್ಸೀನ್ ಮತ್ತು ಟ್ರಾಲ್, 1396 ಗಿಲ್‌ನೆಟ್, 531 ಸಾಂಪ್ರದಾಯಿಕ ಬೋಟ್‌ಗಳಿವೆ. ಮೀನುಗಾರಿಕೆ ನಷ್ಟದ ಹಾದಿಯಲ್ಲಿರುವುದರಿಂದ ಅನಿವಾರ್ಯವಾಗಿ ಸಾವಿರಾರು ಬೋಟುಗಳು ಬಂದರು ಸೇರುತ್ತಿವೆ. ಇನ್ನು ಆಗಸ್ಟ್, ಸೆಪ್ಟೆಂಬರ್, ನವೆಂಬರ್ ತಿಂಗಳಿನಲ್ಲಿ ಮೀನಿನ ಇಳುವರಿ ಉತ್ತಮವಾಗಿತ್ತು.

ಬಂದರಿನಲ್ಲಿ ಮೀನಿನ ಟ್ರೇಗಳು ಖಾಲಿಯಾಗಿರುವುದು

ಜನವರಿ, ಫೆಬ್ರವರಿ, ಮಾರ್ಚ್ ತಿಂಗಳಲ್ಲಿ ಸಾಮಾನ್ಯವಾಗಿ ಮೀನುಗಾರಿಕೆ ಕಡಿಮೆಯೇ ಇರುತ್ತೆ. ಈ ಸಂದರ್ಭ ಬೋಟ್ ರಿಪೇರಿ, ಪೈಟಿಂಗ್ ಕಾರ್ಯಗಳೆಲ್ಲಾ ನಡೆಯುತ್ತವೆ. ಆದರೆ, ಏಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ಉತ್ತಮ ಮೀನುಗಾರಿಕೆ ನಡೆಯುತ್ತವೆ. ಈ ಬಾರಿ ಈ ಎರಡು ತಿಂಗಳಲ್ಲೂ ನಿರೀಕ್ಷಿತ ಪ್ರಮಾಣದ ಮೀನುಗಳು ಸಿಕ್ಕಿಲ್ಲ. ಹೀಗಾಗಿ ಮೀನುಗಾರಿಕೆ ನಷ್ಟದ ಹಾದಿಯಲ್ಲಿರುವುದರಿಂದ ಅನಿವಾರ್ಯವಾಗಿ ಸಾವಿರಾರು ಬೋಟುಗಳು ಅವಧಿಗಿಂತ ಮೊದಲೇ ಬಂದರು ಸೇರುತ್ತಿವೆ.

ಇದನ್ನೂ ಓದಿ: ಪ್ರವೀಣ ನೆಟ್ಟಾರು ಕೊಲೆ ಪ್ರಕರಣದ ನಾಲ್ಕನೇ ಆರೋಪಿ ಬಂಧನ

ಪ್ರತಿ ವರ್ಷ ಮಳೆಗಾಲದ ಸಂದರ್ಭ ಏಕರೂಪವಾಗಿ ಕರಾವಳಿಯಲ್ಲಿ ಮೀನುಗಾರಿಕೆ ನಿಷೇಧ ಮಾಡಲಾಗುತ್ತದೆ. ಅದರಂತೆ ಈ ಬಾರೀಯು ಜೂನ್ 1ರಿಂದ ಜುಲೈ 31ರವರೆಗೆ 61 ದಿನಗಳ ಕಾಲ ಮೀನುಗಾರಿಕೆ ನಿಷೇಧವಾಗಲಿದೆ. ಈ ಮೂಲಕ ಮತ್ಸ್ಯಸಂಪತ್ತಿನ ಬರದ ಜೊತೆ ಈ ಬಾರೀಯ ಮೀನುಗಾರಿಕ ಋತು ಅಂತ್ಯ ಕಾಣುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ashok
Ashok

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸುದ್ದಿಬಿಡುಗಡೆ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಪ್ರಜಾ ಟಿ.ವಿಯ ಉಡುಪಿ ಜಿಲ್ಲಾ ವರದಿಗಾರರಾಗಿ ಒಂದು ವರ್ಷ ಏಳು ತಿಂಗಳು ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ, ಒಂದು ವರ್ಷ ನಾಲ್ಕು ತಿಂಗಳಿನಿಂದ ಟಿ.ವಿ 9 ವಾಹಿನಿಯಲ್ಲಿ ದಕ್ಷಿಣಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ ಇಂಡಿಯಾ ಟೆಲಿವಿಷನ್​ . ಕಾಮ್​ 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು