AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cyber Fraud: ಅಪರಿಚಿತ ಲಿಂಕ್​ ಕ್ಲಿಕ್ ಮಾಡಿ 15 ಲಕ್ಷ ರೂ. ಕಳೆದುಕೊಂಡ ಮಂಗಳೂರಿನ ವ್ಯಕ್ತಿ

ಅಪರಿಚಿತರಿಂದ ಬರುವ ಸಂದೇಶಗಳು, ಲಿಂಕ್​​ಗಳನ್ನು ಕ್ಲಿಕ್ ಮಾಡಿ ಹಣ ಕಳೆದುಕೊಂಡ ಪ್ರಕರಣಗಳು ಕರ್ನಾಟಕದಾದ್ಯಂತ ಆಗಾಗ ವರದಿಯಾಗುತ್ತಿರುತ್ತವೆ. ಇದೀಗ ಮಂಗಳೂರಿನಲ್ಲಿ ಅಂಥದ್ದೇ ಒಂದು ಘಟನೆ ನಡೆದಿದ್ದು, ಅಪರಿಚಿತರಿಂದ ಪಾರ್ಟ್​ ಟೈಮ್ ಕೆಲಸ ನೀಡುವ ಭರವಸೆಯೊಂದಿಗೆ ಬಂದ ಲಿಂಕೊಂದನ್ನು ಕ್ಲಿಕ್ ಮಾಡಿದ ವ್ಯಕ್ತಿ 15 ಲಕ್ಷ ರೂ. ಕಳೆದುಕೊಂಡಿದ್ದಾರೆ.

Cyber Fraud: ಅಪರಿಚಿತ ಲಿಂಕ್​ ಕ್ಲಿಕ್ ಮಾಡಿ 15 ಲಕ್ಷ ರೂ. ಕಳೆದುಕೊಂಡ ಮಂಗಳೂರಿನ ವ್ಯಕ್ತಿ
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on:Mar 16, 2023 | 4:56 PM

Share

ಮಂಗಳೂರು: ಅಪರಿಚಿತರಿಂದ ಬರುವ ಸಂದೇಶಗಳು, ಲಿಂಕ್​​ಗಳನ್ನು ಕ್ಲಿಕ್ ಮಾಡಿ ಹಣ ಕಳೆದುಕೊಂಡ ಪ್ರಕರಣಗಳು ಕರ್ನಾಟಕದಾದ್ಯಂತ ಆಗಾಗ ವರದಿಯಾಗುತ್ತಿರುತ್ತವೆ. ಇದೀಗ ಮಂಗಳೂರಿನಲ್ಲಿ (Mangaluru) ಅಂಥದ್ದೇ ಒಂದು ಘಟನೆ ನಡೆದಿದ್ದು, ಅಪರಿಚಿತರಿಂದ ಪಾರ್ಟ್​ ಟೈಮ್ ಕೆಲಸ ನೀಡುವ ಭರವಸೆಯೊಂದಿಗೆ ಬಂದ ಲಿಂಕೊಂದನ್ನು (Malicious Link) ಕ್ಲಿಕ್ ಮಾಡಿದ ವ್ಯಕ್ತಿ 15 ಲಕ್ಷ ರೂ. ಕಳೆದುಕೊಂಡಿದ್ದಾರೆ. ಸಂತ್ರಸ್ತರಿಗೆ ಮಾರ್ಚ್ 4ರಂದು ಅಪರಿಚಿತ ಸಂಖ್ಯೆಯೊಂದರಿಂದ ಪಾರ್ಟ್​ ಟೈಮ್ ಕೆಲಸ ನೀಡುವುದಾಗಿ ಎಸ್​ಎಂಎಸ್ ಬಂದಿತ್ತು. ಉದ್ಯೋಗಾವಕಾಶದ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಅವರು ಎಸ್​ಎಂಎಸ್ ಕಳುಹಿಸಿದಾತನಿಗೆ ದೂರವಾಣಿ ಕರೆ ಮಾಡಿದ್ದರು. ಆ ಸಂದರ್ಭದಲ್ಲಿ ಅಪರಿಚಿತ ವ್ಯಕ್ತಿ ಟೆಲಿಗ್ರಾಂ ಆ್ಯಪ್ ಡೌನ್​ಲೋಡ್ ಮಾಡುವಂತೆ ಸಂತ್ರಸ್ತರಿಗೆ ಸೂಚಿಸಿದ್ದರು.

ಮುಂದೇನಾಯ್ತು?

ಟೆಲಿಗ್ರಾಂ ಆ್ಯಪ್ ಇನ್​ಸ್ಟಾಲ್ ಮಾಡಿಕೊಂಡ ಬಳಿಕ ಹೆಚ್ಚು ಹಣ ಹೂಡಿಕೆ ಮಾಡುವಂತೆಯೂ ಅದನ್ನು ದ್ವಿಗುಣಗೊಳಿಸುವುದಕ್ಕಾಗಿ ಮೂರು ಹಂತಗಳ ಪ್ರಕ್ರಿಯೆಯನ್ನು ಪೂರೈಸಬೇಕಾಗುತ್ತದೆ ಎಂದೂ ಅಪರಿಚಿತ ವ್ಯಕ್ತಿ ಸೂಚಿಸಿದ್ದರು. ಮೊದಲು 150 ರೂ, ನಂತರ 2,000 ರೂ, ಪಾವತಿ ಮಾಡುವಂತೆ ಸೂಚಿಸಿದರು. ಬಳಿಕ 2,800 ರೂ. ಮರಳಿಸಿದರು. ಮೊದಲ ಕೆಲವು ಹಂತದ ಪ್ರಕ್ರಿಯೆಗಳಲ್ಲಿ ವಿಶ್ವಾಸ ಗಳಿಸಿದ ಅಪರಿಚಿತ ವ್ಯಕ್ತಿ ಲಿಂಕೊಂದನ್ನು ಕಳುಹಿಸಿ ಅದರ ಮೂಲಕ ಖಾತೆ ತೆರೆಯುವಂತೆಯೂ ಅದರ ಮೂಲಕವೇ ಹಣ ಕಳುಹಿಸುವಂತೆಯೂ ಸೂಚಿಸಿದ್ದರು ಎಂದು ಸಂತ್ರಸ್ತ ವ್ಯಕ್ತಿ ತಿಳಿಸಿರುವುದಾಗಿ ‘ಟೈಮ್ಸ್ ಆಫ್ ಇಂಡಿಯಾ’ ವರದಿ ಮಾಡಿದೆ.

ಇದನ್ನೂ ಓದಿ: U.T.Khader: ರಾಹುಲ್‌ ಗಾಂಧಿ ಪಿಎ ಎಂದು ಹೇಳಿಕೊಂಡು ವಂಚನೆಗೆ ಯತ್ನ: ಸೈಬರ್ ಕ್ರೈಂಗೆ ದೂರು ನೀಡಿದ U.T.ಖಾದರ್‌

ಹಿಂದೆ-ಮುಂದೆ ಯೋಚನೆ ಮಾಡದೆ ಲಿಂಕ್ ಕ್ಲಿಕ್ ಮಾಡಿದ ಸಂತ್ರಸ್ತ ವ್ಯಕ್ತಿ, ಅದರಲ್ಲಿ ಕಾಣಿಸಿದ ಸೂಚನೆಯನ್ನು ಅನುಸರಿಸುತ್ತಾ ಹೋಗಿದ್ದಾರೆ. ಅಪರಿಚಿತ ಕೇಳಿದ ವಿವರವನ್ನೂ ಭರ್ತಿ ಮಾಡುತ್ತಾ ಹೋಗಿದ್ದಾರೆ. ಇದಾದ ಬೆನ್ನಲ್ಲೇ ಅವರ ವಿವಿಧ ಬ್ಯಾಂಕ್​ ಖಾತೆಗಳಿಂದ 15.34 ಲಕ್ಷ ರೂ.ಗೆ ಕನ್ನ ಹಾಕಲಾಗಿದೆ. ಮಾರ್ಚ್ 4ರಿಂದ ಮಾರ್ಚ್ 8ರ ನಡುವಣ ಅವಧಿಯಲ್ಲಿ ಬ್ಯಾಂಕ್ ಖಾತೆಗಳಿಂದ ಹಣ ಕಡಿತವಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಏನೋ ಎಡವಟ್ಟಾಗಿದೆ ಎಂದು ಅರಿತ ಸಂತ್ರಸ್ತ, ಸೈಬರ್ ಪೊಲೀಸ್ ಠಾಣೆಗೆ ತೆರಳಿ ದೂರು ಸಲ್ಲಿಸಿದ್ದಾರೆ. ಸದ್ಯ ಪ್ರಕರಣ ತನಿಖಾ ಹಂತದಲ್ಲಿದ್ದು, ಈ ಹಿಂದೆಯೂ ಇಂಥ ಅನೇಕ ಪ್ರಕರಣಗಳು ವರದಿಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಡಿಜಿಟಲ್ ಮಾರ್ಕೆಟಿಂಗ್​ ಪಾರ್ಟ್ ಟೈಮ್ ಉದ್ಯೋಗಕ್ಕೆ ಸಂಬಂಧಪಟ್ಟಂತೆ ವಾಟ್ಸ್​ಆ್ಯಪ್​ ಮೂಲಕ ಬಂದ ಅಪರಿಚಿತ ಸಂದೇಶಕ್ಕೆ ಸ್ಪಂದಿಸಿ ಇತ್ತೀಚೆಗಷ್ಟೇ ಮಂಗಳೂರಿನ ವ್ಯಕ್ತಿಯೊಬ್ಬರು ಹಣ ಕಳೆದುಕೊಂಡಿದ್ದರು.

ದಕ್ಷಿಣ ಕನ್ನಡದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:55 pm, Thu, 16 March 23

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು