Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಸ್ವಾತಂತ್ರ್ಯೋತ್ಸವ ದಿನ ಮಕ್ಕಳಿಂದ ಸಾವರ್ಕರ್​​ಗೆ ಜೈಕಾರ; ಶಿಕ್ಷಕಿ ಕ್ಷಮೆ ಕೇಳುವಂತೆ ಪೋಷಕರ ಆಗ್ರಹ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಸರ್ಕಾರಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ದಿನ ಮಕ್ಕಳಿಂದ ಸ್ವಾತಂತ್ರ್ಯ ವೀರ್​​ ಸಾವರ್ಕರ್​​ಗೆ ಜೈ ಘೋಷಣೆ ಹಾಕಿಸಿದ್ದಕ್ಕೆ ಶಿಕ್ಷಕಿ ಕ್ಷಮೆ ಕೇಳುವಂತೆ ಕೆಲ ಪೋಷಕರು ಗಲಾಟೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಶಿಕ್ಷಕಿ ಪೋಷಕರ ಮತ್ತು ಶಿಕ್ಷಕರ ಸಭೆ ನಡೆಸಿ ಕ್ಷಮೆಯಾಚಿಸಿದ್ದಾರೆ.

Follow us
ಅಶೋಕ್​ ಪೂಜಾರಿ, ಮಂಗಳೂರು
| Updated By: ವಿವೇಕ ಬಿರಾದಾರ

Updated on: Aug 18, 2023 | 12:57 PM

ಮಂಗಳೂರು: ಸ್ವಾತಂತ್ರ್ಯೋತ್ಸವ ದಿನ (Independence Day) ಮಕ್ಕಳಿಂದ ಸ್ವಾತಂತ್ರ್ಯ ವೀರ್​​ ಸಾವರ್ಕರ್​​ಗೆ (Savarkar) ಜೈ ಘೋಷಣೆ ಹಾಕಿಸಿದ್ದಕ್ಕೆ ಶಿಕ್ಷಕಿ ಕ್ಷಮೆ ಕೇಳುವಂತೆ ಕೆಲ ಪೋಷಕರು ಗಲಾಟೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಶಿಕ್ಷಕಿ ಪೋಷಕರ ಮತ್ತು ಶಿಕ್ಷಕರ ಸಭೆ ನಡೆಸಿ ಕ್ಷಮೆಯಾಚಿಸಿದ್ದಾರೆ. ದಕ್ಷಿಣ ಕನ್ನಡ (Dakshin Kannada) ಜಿಲ್ಲೆಯ ಬಂಟ್ವಾಳ (Bantwal) ತಾಲೂಕಿನ ಮಂಚಿ ಸರ್ಕಾರಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ದಿನ ಶಾಲೆಯ ವಿದ್ಯಾರ್ಥಿಗಳು ಸ್ವಾತಂತ್ರ್ಯ ಹೋರಾಟಗಾರರಿಗೆ ಜೈಕಾರ ಹಾಕಿದ್ದರು.

ಈ ವೇಳೆ ಶಿಕ್ಷಕಿಯೊಬ್ಬರು ವೀರ್​​ ಸಾವರ್ಕರ್ ಅವರಿಗೂ ಜೈ ಕಾರದ ಘೋಷಣೆ ಹಾಕಿಸಿದ್ದಾರೆ. ಈ ಜೈಕಾರವನ್ನು ಅಲ್ಲಿಯೇ ಇದ್ದ ಓರ್ವ ವ್ಯಕ್ತಿ ವಿಡಿಯೋ ಮಾಡಿ ಸಾಮಾಜಿಕ ತಾಣಗಳಲ್ಲಿ ಹರಿಬಿಟ್ಟಿದ್ದಾನೆ. ಈ ವಿಡಿಯೋ ವೈರಲ್​ ಆಗುತ್ತಿದ್ದಂತೆ ಕೆಲ ಪೋಷಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದರಿಂದ ಮುಖ್ಯಶಿಕ್ಷಕಿ ಪೋಷಕರು ಮತ್ತು ಶಿಕ್ಷಕರ ಸಭೆ ಕರೆದಿದ್ದಾರೆ.

ಇದನ್ನೂ ಓದಿ:  ಮಂಗಳೂರು: ಆಸ್ಪತ್ರೆಯಲ್ಲಿ ದೈಹಿಕ ಸಂಪರ್ಕ ನಡೆಸುವುದನ್ನು ನೋಡಿದ ಅಪ್ರಾಪ್ತೆ ಮೇಲೆ ಅತ್ಯಾಚಾರ!

ಜೈಕಾರ ಹಾಕಿಸಿದ್ದ ಶಿಕ್ಷಕಿ ವಿರುದ್ಧ ಸಭೆಯಲ್ಲಿ ಪೋಷಕರು ಹಾಗೂ ಕೆಲ ರಾಜಕೀಯ ಮುಖಂಡರು ಗಲಾಟೆ ಮಾಡಿದ್ದಾರೆ. ಕೊನೆಗೆ ಶಿಕ್ಷಕಿ ಪೋಷಕರ ಬಳಿ‌ ಕ್ಷಮೆ ಯಾಚಿಸಿದ್ದಾರೆ. ಆದರೆ ವಿಡಿಯೋ ಮಾಡಿ ಹರಿಬಿಟ್ಟವರ ವಿರುದ್ಧ ಶಾಲಾ ಮುಖ್ಯಶಿಕ್ಷಕಿ ಅಸಮಾಧಾನ ವ್ಯಕ್ತಪಡಿಸಿದ್ದು, ವಿಡಿಯೋ ಮಾಡಿ ಹರಿ ಬಿಟ್ಟವರ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್