AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಅಪ್ರಾಪ್ತ ಮಲ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ 20 ವರ್ಷ ಜೈಲು ಶಿಕ್ಷೆ

ಅಪ್ರಾಪ್ತ ಮಲ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ ಮಂಗಳೂರಿನ ಪೋಸ್ಕೋ ನ್ಯಾಯಾಲಯವು 20 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ. ಪೊಲೀಸರ ಪ್ರಕಾರ, ಆರೋಪಿಯು ಲೈಂಗಿಕ ದೌರ್ಜನ್ಯ ಎಸಗಿ ಬೆದರಿಕೆ ಹಾಕಿದ್ದನು.

ಮಂಗಳೂರು: ಅಪ್ರಾಪ್ತ ಮಲ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ 20 ವರ್ಷ ಜೈಲು ಶಿಕ್ಷೆ
ಅಪ್ರಾಪ್ತ ಮಲ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿದ ಮಂಗಳೂರಿನ ಪೋಕ್ಸೋ ನ್ಯಾಯಾಲಯ (ಸಾಂದರ್ಭಿಕ ಚಿತ್ರ)Image Credit source: Pxfuel (CC0)
Follow us
Rakesh Nayak Manchi
|

Updated on:Jun 22, 2023 | 5:58 PM

ಮಂಗಳೂರು: ಅಪ್ರಾಪ್ತ ಮಲ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಬೆದರಿಕೆ ಹಾಕಿದ್ದ ಆರೋಪಿಗೆ ಮಂಗಳೂರಿನ (Mangaluru) ಪೋಸ್ಕೋ ನ್ಯಾಯಾಲಯವು 20 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ. ಸಂತ್ರಸ್ತೆಯ ಚಿಕ್ಕಮ್ಮ ನೀಡಿದ ದೂರಿನ ಮೇರೆಗೆ ಕಳೆದ ವರ್ಷ ಅಪರಾಧಿ ಅಶ್ವಥ್ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ತನಿಖೆ ನಡೆಸಿದ ಪೊಲೀಸರು ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದರು.

ಪೊಲೀಸರ ಪ್ರಕಾರ, ಅಶ್ವಥ್ ಮಲ್ಲಿಕಾ ಅಲಿಯಾಸ್ ರಾಜೀವಿಯ ಎರಡನೇ ಪತಿಯಾಗಿದ್ದಾನೆ. ಮಲ್ಲಿಕಾಗೆ ಮೊದಲ ಪತಿಯಿಂದ ಹೆಣ್ಣು ಮಗು ಜನಿಸಿತ್ತು. ಆದರೆ ಅಶ್ವಥ್, 2022 ಜುಲೈ 26 ರಂದು ಮುಂಜಾನೆ 3.30 ರ ಸುಮಾರಿಗೆ ಅಪ್ರಾಪ್ತ ಮಲ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದನು. ಅಲ್ಲದೆ, ಘಟನೆ ಬಗ್ಗೆ ಯಾರಿಗಾದರೂ ಹೇಳಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದನು.

ಇದನ್ನೂ ಓದಿ: ಹೈದರಾಬಾದ್: ಅಪ್ರಾಪ್ತ ಸೋದರಳಿಯನ ಸಹಾಯದಿಂದ ಪತಿಯನ್ನು ಕೊಂದ ಮಹಿಳೆಗೆ ಜೀವಾವಧಿ ಶಿಕ್ಷೆ

ವಿಚಾರವನ್ನು ಸಂತ್ರಸ್ತೆಯು ತನ್ನ ಚಿಕ್ಕಮ್ಮನ ಬಳಿ ಹೇಳಿಕೊಂಡಿದ್ದಾಳೆ. ಕೂಡಲೇ ಮಂಗಳೂರು ಮಹಿಳಾ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದರು. ಅದರಂತೆ ಪೊಲೀಸರು, ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 376 (ಅತ್ಯಾಚಾರ), 323 (ಸ್ವಯಂಪ್ರೇರಿತವಾಗಿ ಗಾಯಗೊಳಿಸುವುದು) ಮತ್ತು 506 (ಅಪರಾಧ ಬೆದರಿಕೆ) ಮತ್ತು ಸೆಕ್ಷನ್ 6 (ಲೈಂಗಿಕ ದೌರ್ಜನ್ಯ) ರಕ್ಷಣೆಯ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು.

ನಂತರ ಪೊಲೀಸರು ಸಂತ್ರಸ್ತೆ ಮತ್ತು ಆರೋಪಿಯ ತನಿಖೆ ಮತ್ತು ವೈದ್ಯಕೀಯ ಪರೀಕ್ಷೆಗಳನ್ನು ಪೂರ್ಣಗೊಳಿಸಿ ಪೋಕ್ಸೋ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದರು. ಈ ಬಗ್ಗೆ ಅಂತಿಮ ತೀರ್ಪು ಪ್ರಕಟಿಸಿದ ಜಿಲ್ಲಾ ಮತ್ತು ಸೆಷನ್ಸ್ FTSC II (POCSO) ನ್ಯಾಯಾಲಯವು ಆರೋಪಿಯನ್ನು ದೋಷಿ ಎಂದು ಘೋಷಿಸಿ 20 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿ ಆದೇಶಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:58 pm, Thu, 22 June 23

ನಟಿ ರಚಿತಾ ರಾಮ್ ವಿರುದ್ಧ ಕ್ರಮ ಕೈಗೊಳ್ಳುತ್ತಾ ಚಲನಚಿತ್ರ ವಾಣಿಜ್ಯ ಮಂಡಳಿ?
ನಟಿ ರಚಿತಾ ರಾಮ್ ವಿರುದ್ಧ ಕ್ರಮ ಕೈಗೊಳ್ಳುತ್ತಾ ಚಲನಚಿತ್ರ ವಾಣಿಜ್ಯ ಮಂಡಳಿ?
ಪ್ರಕೃತಿಯ ಶಕ್ತಿ ಮುಂದೆ ನಾವೇನೂ ಅಲ್ಲ!; ಈ ವಿಡಿಯೋ ನೋಡಿ
ಪ್ರಕೃತಿಯ ಶಕ್ತಿ ಮುಂದೆ ನಾವೇನೂ ಅಲ್ಲ!; ಈ ವಿಡಿಯೋ ನೋಡಿ
ಕನ್ನಡ ಸಿನಿಮಾಗೆ ಬೆಳಗ್ಗೆ 9.30ರ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ
ಕನ್ನಡ ಸಿನಿಮಾಗೆ ಬೆಳಗ್ಗೆ 9.30ರ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು