AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಆರೋಗ್ಯಾಧಿಕಾರಿ ಡಾ.ರತ್ನಾಕರ್​ನನ್ನು ಬಂಧಿಸಿದ ಪೊಲೀಸರು

Mangaluru News: ಇಲ್ಲಿನ ಆರೋಗ್ಯಾಧಿಕಾರಿ ಡಾ. ರತ್ನಾಕರ್​ನನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಕಮಿಷನರೇಟ್​ ವ್ಯಾಪ್ತಿ ಪೊಲೀಸರಿಂದ ರತ್ನಾಕರ್ ಬಂಧನ ಮಾಡಲಾಗಿದೆ.

ಮಂಗಳೂರು: ಆರೋಗ್ಯಾಧಿಕಾರಿ ಡಾ.ರತ್ನಾಕರ್​ನನ್ನು ಬಂಧಿಸಿದ ಪೊಲೀಸರು
ಡಾಕ್ಟರ್ ರತ್ನಾಕರ್
TV9 Web
| Edited By: |

Updated on:Nov 27, 2021 | 9:12 PM

Share

ಮಂಗಳೂರು: ಇಲ್ಲಿನ ಆರೋಗ್ಯಾಧಿಕಾರಿ ಡಾ. ರತ್ನಾಕರ್​ನನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಕಮಿಷನರೇಟ್​ ವ್ಯಾಪ್ತಿ ಪೊಲೀಸರಿಂದ ರತ್ನಾಕರ್ ಬಂಧನ ಮಾಡಲಾಗಿದೆ. ಮಂಗಳೂರು ಮಹಿಳಾ ಪೊಲೀಸರಿಂದ ಬಂಧನವಾಗಿದೆ. ಬಂಧಿಸಿ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯ ಎರಡು ದಿನ ಪೊಲೀಸರ ಕಸ್ಟಡಿಗೆ ನೀಡಿದೆ. ರತ್ನನ್ ರಂಗೀನ್ ಪ್ರಪಂಚ ಶೀರ್ಷಿಕೆಯಡಿ ಟಿವಿ9 ನಲ್ಲಿ ಸುದ್ದಿ ಪ್ರಸಾರ ಮಾಡಲಾಗಿತ್ತು. ಟಿವಿ9ನಲ್ಲಿ ವರದಿ ಬಳಿಕ ಕೇಸ್​ ದಾಖಲಿಸಿ ರತ್ನಾಕರ್​ ಬಂಧನ ಮಾಡಲಾಗಿದೆ.

ಈ ಮೊದಲು, ಡಾ.ರತ್ನಾಕರ್​ನನ್ನು ಬಂಧಿಸಿ ಕೋರ್ಟ್​ಗೆ ಹಾಜರುಪಡಿಸಿದ್ದರು. ಇದೀಗ ರತ್ನಾಕರ್​ನನ್ನು ವಿಚಾರಣೆಗಾಗಿ 2 ದಿನ ಪೊಲೀಸರ ವಶಕ್ಕೆ ಕೋರ್ಟ್​ ನೀಡಿದೆ. ಮಹಿಳಾ ಠಾಣೆ ಪೊಲೀಸರ ವಶಕ್ಕೆ ನೀಡಲಾಗಿದೆ. ಡಾ.ರತ್ನಾಕರ್ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿತ್ತು. ಯಾವುದೇ ಕ್ಷಣದಲ್ಲಾದರೂ ರತ್ನಾಕರ್ ಬಂಧನ ಸಾಧ್ಯತೆ ಎಂದು ಹೇಳಲಾಗಿತ್ತು. ಡಾ.ರತ್ನಾಕರ್ ಮೊಬೈಲ್ ವಶಕ್ಕೆ ಪಡೆದು ಪರಿಶೀಲನೆ ಮಾಡಲಾಗಿತ್ತು. ಮೊಬೈಲ್‌ನಲ್ಲಿ ಮತ್ತಷ್ಟು ವಿಡಿಯೋಗಳಿರುವ ಮಾಹಿತಿ ಲಭ್ಯವಾಗಿತ್ತು. ಘಟನೆ ಸಂಬಂಧ ಯುವತಿಯರು ಮಂಗಳೂರು ಮಹಿಳಾ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದರು. ಯುವತಿಯರ ಹೇಳಿಕೆ ಆಧರಿಸಿ ಬಂಧನ ಸಾಧ್ಯತೆ ಊಹಿಸಲಾಗಿತ್ತು.

ಸಹೋದ್ಯೋಗಿಗಳಿಗೆ ಡಾ.ರತ್ನಾಕರ್ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿ ಟಿವಿ9ಗೆ ಮಂಗಳೂರು ಪೊಲೀಸ್ ಆಯುಕ್ತ ಎನ್‌. ಶಶಿಕುಮಾರ್ ಹೇಳಿಕೆ‌ ನೀಡಿದ್ದರು. ಟಿವಿ9ನಲ್ಲಿ ವರದಿ ನಂತರ ಮಹಿಳಾ ಸಂಘಟನೆ ದೂರು ನೀಡಿವೆ. ದೂರಿನ ಆಧಾರದಲ್ಲಿ ತೀವ್ರ ವಿಚಾರಣೆ ನಡೆಯುತ್ತಿದೆ. ಘಟನೆ ಸಂಬಂಧ ಸಾಕಷ್ಟು ಪೂರಕ ಸಾಕ್ಷಿ ದೊರಕಿದೆ. ನಾಲ್ವರು ಮಹಿಳೆಯರು ವಿವರಣೆ ನೀಡಲು ಬರುತ್ತಿದ್ದಾರೆ. ವಿವರಣೆ, ಸಾಕ್ಷ್ಯಗಳ ಆಧಾರದ ಮೇಲೆ ಬಂಧಿಸುತ್ತೇವೆ. ವಿವರಣೆ ಬಳಿಕ ರತ್ನಾಕರ್​ನನ್ನ ಬಂಧನ ಮಾಡಲಿದ್ದೇವೆ ಎಂದು ಎನ್‌. ಶಶಿಕುಮಾರ್ ಹೇಳಿದ್ದರು.

ಇದನ್ನೂ ಓದಿ: Mangaluru: ಮಹಿಳಾ ಸಿಬ್ಬಂದಿಗಳಿಗೆ ಕಿರುಕುಳ; ವೈದ್ಯ ಡಾ.ರತ್ನಾಕರ್ ಪೊಲೀಸರ ವಶಕ್ಕೆ

ಇದನ್ನೂ ಓದಿ: ಗುತ್ತಿಗೆ ಆಧಾರದಲ್ಲಿದ್ದ ಯುವತಿಯರಿಗೆ ‘ಮುತ್ತಿಗೆ’ ಹಾಕ್ತಾನೆ ಡಾಕ್ಟರ್! ಟಿವಿ9 ಕ್ಯಾಮರಾದಲ್ಲಿ ಸೆರೆಯಾಗಿದೆ ಸ್ತ್ರೀಲೋಲ ವೈದ್ಯನ ಲವ್ವಿಡವ್ವಿ!

Published On - 9:05 pm, Sat, 27 November 21

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ