AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಧಾರ್ಮಿಕ ಕೇಂದ್ರಗಳಿಗೆ ಕಾಂಡೊಮ್ ಹಾಕುತ್ತಿದ್ದ ಆರೋಪಿಯ ಬಂಧನ

ಇಲ್ಲಿನ ಹಲವು ಧಾರ್ಮಿಕ ಕೇಂದ್ರಗಳಿಗೆ ಕಾಂಡೊಮ್ ಹಾಕುತ್ತಿದ್ದ. ಇದೀಗ ಆರೋಪಿಯನ್ನು ಮಂಗಳೂರಿನ ಪಾಂಡೇಶ್ವರ ಪೊಲೀಸರು ಹಾಗೂ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು: ಧಾರ್ಮಿಕ ಕೇಂದ್ರಗಳಿಗೆ ಕಾಂಡೊಮ್ ಹಾಕುತ್ತಿದ್ದ ಆರೋಪಿಯ ಬಂಧನ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Dec 29, 2021 | 5:27 PM

Share

ಮಂಗಳೂರು: ಕರಾವಳಿ ಭಾಗದ ದೈವಸ್ಥಾನಗಳಿಗೆ ಸಾಲು ಸಾಲು ಕಾಂಡೊಮ್ ಹಾಕುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಹಾಗೂ ಕರಾವಳಿಯ ಇತರ ಭಾಗದ ದೈವಸ್ಥಾನ, ದೇವಸ್ಥಾನ, ಸಿಖ್ ಗುರುದ್ವಾರ, ಬಸದಿ, ದರ್ಗಾಗಳಿಗೆ ಕಾಂಡೊಮ್ ಹಾಕುತ್ತಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಮಂಗಳೂರಿನ ಕೋಟೆಕಾರು ನಿವಾಸಿ ದೇವದಾಸ್ ದೇಸಾಯಿ (62) ಎಂಬಾತನ ಬಂಧನವಾಗಿದೆ.

ಮಂಗಳೂರು ಸಿಸಿಬಿ ಮತ್ತು ಪಾಂಡೇಶ್ವರ ಪೊಲೀಸರಿಂದ ಆರೋಪಿಯನ್ನು ಸೆರೆ ಹಿಡಿಯಲಾಗಿದೆ. ಹುಬ್ಬಳ್ಳಿಯ ಉಣ್ಕಲ್ ಮೂಲದ ಆರೋಪಿ ಕಳೆದ 20 ವರ್ಷದಿಂದ ಮಂಗಳೂರಿನಲ್ಲಿ ವಾಸ ಆಗಿದ್ದ. ಈ ವೇಳೆ ಇಲ್ಲಿನ ಹಲವು ಧಾರ್ಮಿಕ ಕೇಂದ್ರಗಳಿಗೆ ಕಾಂಡೊಮ್ ಹಾಕುತ್ತಿದ್ದ. ಇದೀಗ ಆರೋಪಿಯನ್ನು ಮಂಗಳೂರಿನ ಪಾಂಡೇಶ್ವರ ಪೊಲೀಸರು ಹಾಗೂ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ದೇಗುಲಗಳ ಹುಂಡಿಗೆ ಕಾಂಡೋಮ್ ಹಾಕ್ತಿದ್ದವನ ಬಂಧನ ಪ್ರಕರಣದ ಆರೋಪಿ ಈವರೆಗೆ 18 ದೇಗುಲಗಳ ಹುಂಡಿಗೆ ಕಾಂಡೋಮ್​ ಹಾಕಿದ್ದಾನೆ ಎಂದು ತಿಳಿದುಬಂದಿದೆ. ವಿಚಾರಣೆ ವೇಳೆ ಈ ಬಗ್ಗೆ ಆರೋಪಿ ದೇವದಾಸ್​​ ದೇಸಾಯಿ ಹೇಳಿಕೆ ನೀಡಿದ್ದಾರೆ. ದೇವದಾಸ್ ದೇಸಾಯಿ ತಂದೆ ಆದಾಯ ತೆರಿಗೆ ಇಲಾಖೆ ಅಧಿಕಾರಿ ಆಗಿದ್ದರು. ದೇವದಾಸ್ ತಂದೆ ಹಿಂದೂ ಧರ್ಮದಿಂದ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾಗಿದ್ದರು. ಕುಟುಂಬದಿಂದ ದೂರ ಉಳಿದಿದ್ದ ಆರೋಪಿ ದೇವದಾಸ್ ದೇಸಾಯಿ, ಮಂಗಳೂರಿನ ಕೋಟೆಕಾರು ನಿವಾಸಿ ಆಗಿದ್ದರು ಎಂದು ತಿಳಿದುಬಂದಿದೆ.

ಈಗ ಜೈಲಿಗೆ ಹೋಗುತ್ತಿರೋದಕ್ಕೆ ನನಗೆ ಪಶ್ಚತ್ತಾಪವಿಲ್ಲ ಬಂಧಿತ ಆರೋಪಿಯಿಂದ ಚಿತ್ರವಿಚಿತ್ರ ಹೇಳಿಕೆ ಕೇಳಿಬಂದಿದೆ. ಭೂಮಿ ವಿನಾಶಕ್ಕೆ ಬಂದಿದೆ. ಎಲ್ಲರೂ ಅಂತ್ಯವಾಗುತ್ತಾರೆ. ಏಸು ಒಬ್ಬನೆ ಕಾಪಾಡಬೇಕು‌. ಇನ್ಯಾವುದೇ ಧರ್ಮದ ದೇವರು ಈ ಅಂತ್ಯವನ್ನು ಕಾಪಾಡಲು ಸಾದ್ಯವಿಲ್ಲ. ಏಸು ಒಬ್ಬನೇ ಶ್ರೇಷ್ಟ. ಇನ್ನೇಲ್ಲಾ ದೇವರುಗಳು ಅಪವಿತ್ರ ಎಂದು ಹೇಳಿಕೆ ನೀಡಿದ್ದಾನೆ. ಅದಕ್ಕಾಗಿ ನಾನು ಅಲ್ಲಿ ಅಪವಿತ್ರ ವಸ್ತುಗಳನ್ನು ಹಾಕುತ್ತಿದ್ದೆ. ಮನುಷ್ಯನಿಗೆ ಆಯಸ್ಸು ಇರೋದೆ 70 ವರ್ಷ. ಈಗ ಜೈಲಿಗೆ ಹೋಗುತ್ತಿರೋದಕ್ಕೆ ನನಗೆ ಪಶ್ಚತ್ತಾಪವಿಲ್ಲ. ಇನ್ನೊಂದಿಷ್ಟು ವರ್ಷ ಇಂತದ್ದೇ ಕೆಲಸ ಮಾಡುವ ಅವಕಾಶವಿತ್ತು ಎಂದು ಹೇಳಿದ್ದಾನೆ.

ಶಿವಮೊಗ್ಗ: ಕಣ್ಣೂರು ಬಳಿ ಮಿನಿ ಲಾರಿ ಡಿಕ್ಕಿಯಾಗಿ ಲಾರಿ ಕ್ಲೀನರ್ ಸಾವು ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಕಣ್ಣೂರು ಬಳಿ ಅಪಘಾತ ಸಂಭವಿಸಿದೆ. ಕಣ್ಣೂರು ಬಳಿ ಸಂಭವಿಸಿದ ಅಪಘಾತದಲ್ಲಿ ಲಾರಿ ಕ್ಲೀನರ್ ಸಾವನ್ನಪ್ಪಿದ್ದಾರೆ. ಮಿನಿ ಲಾರಿ ಡಿಕ್ಕಿಯಾಗಿ ಘಟನೆ ನಡೆದಿದೆ, ಮಿನಿ ಲಾರಿ ಕ್ಲೀನರ್ ನೂರ್ ಅಹಮ್ಮದ್‌ (36) ದುರ್ಮರಣವನ್ನಪ್ಪಿದ್ದಾರೆ. ಚಾಲಕ ರಾಹೀಲ್‌ಗೆ ಗಾಯವಾಗಿದ್ದು, ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸಾಗರ ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Crime News: 21 ವರ್ಷದ ಮಗಳ ಮುಂದೆಯೇ ಮಹಿಳೆಯ ಹತ್ಯೆ ಪ್ರಕರಣ: 3ನೇ ಪತಿ ಸೇರಿ ಇಬ್ಬರ ಬಂಧನ

ಇದನ್ನೂ ಓದಿ: ಐಟಿ ದಾಳಿ: ಬರೋಬ್ಬರಿ ₹257 ಕೋಟಿ ಜಪ್ತಿ; ಉತ್ತರ ಪ್ರದೇಶದ ಸುಗಂಧ ದ್ರವ್ಯ ಉದ್ಯಮಿ ಪಿಯೂಷ್ ಜೈನ್ ಬಂಧನ

Published On - 2:33 pm, Wed, 29 December 21

ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ