Surathkal Murder: ಮತ್ತೋರ್ವನ ಬಂಧನ, ಈ ಹಿಂದೆ ಜಲೀಲ್ ಅಂಗಡಿಗೆ ಹೋಗಿ ಜಗಳವಾಡಿದ್ದ ಆರೋಪಿ

| Updated By: ರಮೇಶ್ ಬಿ. ಜವಳಗೇರಾ

Updated on: Dec 27, 2022 | 4:57 PM

ಮಂಗಳೂರಿನ ಸುರತ್ಕಲ್‍ (Surathkal) ನ ಕಾಟಿಪಳ್ಳದಲ್ಲಿ ನಡೆದಿದ್ದ ಅಬ್ದುಲ್​ ಜಲೀಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲಿಸರು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ.

Surathkal Murder: ಮತ್ತೋರ್ವನ ಬಂಧನ, ಈ ಹಿಂದೆ ಜಲೀಲ್ ಅಂಗಡಿಗೆ ಹೋಗಿ ಜಗಳವಾಡಿದ್ದ ಆರೋಪಿ
ಆರೋಪಿ ಲಕ್ಷ್ಮೀಶ
Follow us on

ಮಂಗಲೂರು: ಡಿಸೆಂಬರ್ 24ರಂದು ಮಂಗಳೂರಿನ ಸುರತ್ಕಲ್‍ (Surathkal) ನ ಕಾಟಿಪಳ್ಳದಲ್ಲಿ ನಡೆದಿದ್ದ ಅಬ್ದುಲ್​ ಜಲೀಲ್ ಕೊಲೆ ಪ್ರಕರಣದ  (Abdul Jaleel Murder Case)  ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದು, ಇಂದು(ಡಿಸೆಂಬರ್ 27) ಮತ್ತೋರ್ವ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಲಕ್ಷ್ಮೀಶ ದೇವಾಡಿಗ(28) ಬಂಧಿತ ಆರೋಪಿ. ಇದರೊಂದಿಗೆ ಆರೋಪಗಳ ಬಂಧನ ಸಂಖ್ಯೆ 4ಕ್ಕೆ ಏರಿಕೆಯಾಗಿದೆ.

ಇದನ್ನೂ ಒದಿ: Surathkal Murder: ಅಬ್ದುಲ್ ಜಲೀಲ್ ಹತ್ಯೆಗೆ ಹಿಂದೂ ಮಹಿಳೆ ಜೊತೆಗಿನ ಅನೈತಿಕ ಸಂಬಂಧವೇ ಕಾರಣವಾಯ್ತಾ?

ಕೃಷ್ಣಪುರ 4ನೇ ಬ್ಲಾಕ್‌ ನಿವಾಸಿಯಾಗಿರುವ ಲಕ್ಷ್ಮೀಶ ದೇವಾಡಿಗ ಈ ಹಿಂದೆ ಜಲೀಲ್ ಅಂಗಡಿಗೆ ಹೋಗಿ ಜಗಳವಾಡಿದ್ದ. ಆ ಹಳೆ ವೈಷಮ್ಯದಿಂದ ಜಲೀಲ್​ನನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿತ್ತು. ಹಿಂದೂ ಧರ್ಮದ ಮಹಿಳೆಯೊಂದಿಗೆ ಜಲೀಲ್ ಅನೈತಿಕ ಸಂಬಂಧ ಹೊಂದಿದ್ದ ಎನ್ನಲಾಗಿದ್ದು, ಈ ವಿಚಾರಕ್ಕೆ ಆರೋಪಿ ಲಕ್ಷ್ಮೀಶ ದೇವಾಡಿಗ ಅಂಗಡಿಗೆ ಹೋಗಿ ಜಲೀಲನ ಜೊತೆ ಗಲಾಟೆ ಮಾಡಿದ್ದ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಲಕ್ಷ್ಮೀಶ ದೇವಾಡಿಗನನ್ನು ಅರೆಸ್ಟ್ ಮಾಡಿ ವಿಚಾರಣೆಗೊಳಪಡಿಸಿದ್ದಾರೆ.

SYS, ಎಸ್​ಎಸ್​​ಎಫ್​ನಿಂದ ಪ್ರತಿಭಟನೆ

ಅಬ್ದಲ್​ ಜಲೀಲ್​ ಕೊಲೆ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಈ ಕೇಸ್​ ಬೆಳಗಾವಿ ಚಳಿಗಾಲದ ಅಧಿವೇಶನದಲ್ಲೂ ಪ್ರತಿಧ್ವನಿಸಿದೆ. ಇದೀಗ ಜಲೀಲ್​ ಹತ್ಯೆ ಖಂಡಿಸಿ SYS, ಎಸ್​ಎಸ್​​ಎಫ್​ ಪ್ರತಿಭಟನೆಗಿಳಿದಿವೆ. ಇಂದು(ಡಿಸೆಂಬರ್ 27) ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನ ಕ್ಲಾಕ್ ಟವರ್ ಬಳಿ SYS, ಎಸ್​ಎಸ್​​ಎಫ್​ ಸಂಘಟನೆಗಳು ಪ್ರತಿಭಟನೆಗಿಳಿದಿವೆ. ಜಲೀಲ್ ಕೊಲೆ ಕೇಸ್​ನಲ್ಲಿ ತಾರತಮ್ಯ ಆಗಿದೆ ಎಂದು ಪೊಲೀಸ್ ಇಲಾಖೆ, ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆಯಲ್ಲಿ ಬಹಳಷ್ಟು ಸಂಖ್ಯೆಯಲ್ಲಿ ಜನ ಜಮಾಯಿಸಿವುದರಿಂದ ಮುಂಜಾಗ್ರತಾ ಕ್ರಮವಾಗಿ ಕ್ಲಾಕ್ ಟವರ್ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಇದನ್ನೂ ಓದಿ: Mangaluru Jaleel Murder Case: ಜಲೀಲ್ ಹತ್ಯೆ ಪ್ರಕರಣದಲ್ಲಿ ಮೂವರ ಬಂಧನ, ಆರೋಪಿಗಳ ಬಗ್ಗೆ ಮಾಹಿತಿ ನೀಡಿದ ಕಮಿಷನರ್

ಪ್ರಕರಣದ ಹಿನ್ನೆಲೆ

ಮಂಗಳೂರಿನ (Mangaluru) ಕಾಟಿಪಳ್ಳದ ನಾಲ್ಕನೇ ಬ್ಲಾಕ್​​ನಲ್ಲಿ 40 ವರ್ಷದ‌ ಅಬ್ದುಲ್​ ಜಲೀಲ್  ಎಂಬ ವ್ಯಕ್ತಿಯನ್ನು ಡಿಸೆಂಬರ್ 24ರಂದು ಬೈಕಿನಲ್ಲಿ ಬಂದ ದುಷ್ಕರ್ಮಿಗಳು ಚೂರಿಯಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದರು. ಪ್ರಕರಣ ಸಂಬಂಧ ಪೊಲೀಸರು ಈಗಾಗಲೇ ಶೈಲೇಶ್ ಪೂಜಾರಿ, ಸವಿನ್ ಕಾಂಚನ್, ಪವನ್ ಅಲಿಯಾಸ್ ಪಚ್ಚು ಎನ್ನುವ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಜಲೀಲ್​ ಕೊಲೆ ಬೆನ್ನಲ್ಲೇ ಪೊಲೀಸರು ಮುನ್ನೆಚ್ಚರಿಕೆ ಕ್ರಮವಾಗಿ ಸುರತ್ಕಲ್​ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಸೆಕ್ಷನ್​ 144 (Section 144) ಜಾರಿ ಮಾಡಲಾಗಿತ್ತು. ಅಲ್ಲದೇ ಮದ್ಯ ಮಾರಾಟವನ್ನೂ ಸಹ ಡಿಸೆಂಬರ್ 29ರ ವರೆಗೆ ನಿಷೇಧಿಸಲಾಗಿದೆ.

ಇನ್ನಷ್ಟು ದಕ್ಷಿಣ ಕನ್ನಡ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

 

Published On - 4:51 pm, Tue, 27 December 22