AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈದ್ರಾಬಾದ್​​ನಲ್ಲಿ ಮಂಗಳೂರು ಪೊಲೀಸರ ಭರ್ಜರಿ ಕಾರ್ಯಾಚರಣೆ: ಸೈಬರ್​ ವಂಚಕರ ಹೆಡೆಮುರಿ ಕಟ್ಟಿದ್ರು

ಮಂಗಳೂರು ಪೊಲೀಸರು ಹೈದರಾಬಾದ್‌ನಲ್ಲಿ ಸೈಬರ್ ವಂಚಕರ ದೊಡ್ಡ ಜಾಲವನ್ನು ಭೇದಿಸಿದ್ದಾರೆ. ವಿದೇಶಿಗರ ಸಹಭಾಗಿತ್ವದಲ್ಲಿ ಬ್ಯಾಂಕ್ ಖಾತೆದಾರರಿಗೆ ಆಮಿಷವೊಡ್ಡಿ OTP ಮೂಲಕ ಹಣ ದೋಚುತ್ತಿದ್ದ ಆರು ಆರೋಪಿಗಳನ್ನು ಬಂಧಿಸಿದ್ದಾರೆ. ಆ ಮೂಲಕ ಕೋಟಿ ಕೋಟಿ ವಹಿವಾಟು ನಡೆಸುತ್ತಿದ್ದ ಖದೀಮರ ಬಣ ಬಯಲು ಮಾಡಿದ್ದಾರೆ.

ಹೈದ್ರಾಬಾದ್​​ನಲ್ಲಿ ಮಂಗಳೂರು ಪೊಲೀಸರ ಭರ್ಜರಿ ಕಾರ್ಯಾಚರಣೆ: ಸೈಬರ್​ ವಂಚಕರ ಹೆಡೆಮುರಿ ಕಟ್ಟಿದ್ರು
ಪೊಲೀಸರು ಜಪ್ತಿ ಮಾಡಿರುವ ವಸ್ತುಗಳು
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on: Feb 27, 2026 | 6:54 PM

Share

ಮಂಗಳೂರು, ಫೆಬ್ರವರಿ 27: ವಿದೇಶದಲ್ಲಿದ್ದವರ ಜೊತೆ ಕೈಜೋಡಿಸಿ ಸೈಬರ್ ಕ್ರೈಂ (Cyber Crime) ಮಾಡುತ್ತಿದ್ದ ಆರು ಜನರ ತಂಡವನ್ನು ಹೈದರಾಬಾದ್​​ನಲ್ಲಿ ಮಂಗಳೂರು ಪೊಲೀಸರು ಬಂಧಿಸಿದ್ದಾರೆ (Arrest). ಶೇಖ್ ಕರೀಮುಲ್ಲಾ, ಬುಡಿದಿನ್ನೆ ವಂಶಿ, ಬಡೆ ಶ್ರೀನಿವಾಸ್, ಪಂಡಿತಿ ಕ್ರಾಂತಿ ಕುಮಾರ್, ಇಬ್ರಾಹಿಂ ಪ್ರಾಯ ಹಾಗೂ ಉತ್ಸಲ ಸಂತೋಷ್ ಕೃಷ್ಣ ಬಂಧಿತರು. ದುರುಳರು ನಿನ್ನೆ ಒಂದೇ ದಿನ 2 ಕೋಟಿ ರೂ ವಹಿವಾಟು ಮಾಡಿದ್ದಾರೆ.

ಕಮಿಷನ್​​ ಆಸೆ ತೋರಿಸುವ ಖದೀಮರು

ಬ್ಯಾಂಕ್ ಖಾತೆದಾರರಿಗೆ 4 ರಿಂದ 6% ಕಮಿಷನ್ ನೀಡುವ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಜಾಹಿರಾತು ನೀಡುತ್ತಿದ್ದರು. ಅದನ್ನು ನಂಬಿ ಬಂದವರಿಂದ ಓಟಿಪಿ ಪಡೆದು ವಿದೇಶಕ್ಕೆ ರವಾನಿಸುತ್ತಿದ್ದರು. ಅಲ್ಲಿರುವ ಸೈಬರ್ ಕ್ರೈಂ ಖದೀಮರು ಹಣ ಎಗರಿಸುತ್ತಿದ್ದರು.

ಇದನ್ನೂ ಓದಿ: ಸಾಲ ತೀರಿಸಲು ಕೆನರಾ, HDFC ಎಟಿಎಂನಲ್ಲಿ ಕಳ್ಳತನಕ್ಕೆ ಯತ್ನ: ಸೈರನ್ ಸದ್ದಿಗೆ ಬೆದರಿ ಓಡಿದ್ದ ಕಳ್ಳ ಈಗ ಪೊಲೀಸ್ ವಶಕ್ಕೆ!

ಸದ್ಯ ಮಂಗಳೂರಿನ ಮೊಹ್ಮದ್​ ಇಕ್ಬಾಲ್​ ದೂರಿನನ್ವಯ ಕಾರ್ಯಾಚರಣೆ ನಡೆಸಿದ ಮಂಗಳೂರು ಪೊಲೀಸರು ಆರೋಪಿಗಳು ಹೆಡೆಮುರಿ ಕಟ್ಟಿದ್ದಾರೆ. ಆರೋಪಿಗಳಿಂದ 18 ಮೊಬೈಲ್, 12 ಸಿಮ್ ಕಾರ್ಡ್,​ 1 ಲ್ಯಾಪ್ ಟಾಪ್, 15 ಚೆಕ್​ಬುಕ್, 18 ಡೆಬಿಟ್ ಕಾರ್ಡ್​ ಮತ್ತು 12 ಬ್ಯಾಂಕ್ ಪಾಸ್ ಬುಕ್​​ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಗಡಿ ದಾಟಿ‌ ಹಂತಕರ ಬಂಧಿಸಿದ ಮಂಗಳೂರು ಪೊಲೀಸರು

ಇನ್ನು ಇತ್ತೀಚೆಗೆ ಮಂಗಳೂರು ಪೊಲೀಸರು ಗಡಿ ಮೀರಿ ನಡೆಸಿದ ಕಾರ್ಯಾಚರಣೆಯಲ್ಲಿ ಸೈಬರ್‌ ವಂಚಕರ ಮೂಲವನ್ನೇ ಭೇದಿಸಿದ್ದರು. ಆ ಮೂಲಕ ದೇಶದಲ್ಲಿ ಇದುವರೆಗೂ ಯಾರೂ ಮಾಡದ ಆಪರೇಷನ್‌ ಮೂಲಕ ಖದೀಮರ ಹೆಡೆಮುರಿ ಕಟ್ಟಿದ್ದರು. ಮಂಗಳೂರು ಸೆನ್‌ ಪೊಲೀಸರ ಕಾರ್ಯಾಚರಣೆಗೆ ನೇಪಾಳ ಪೊಲೀಸರು ಸಾಥ್‌ ನೀಡಿದ್ದರು.

ಇದನ್ನೂ ಓದಿ: ಸ್ನೇಹಿತರಿಗೆ ಪ್ರಾಣವನ್ನಾದರೂ ಕೊಡಿ, ಬ್ಯಾಂಕ್ ಡೀಟೇಲ್ಸ್ ಕೊಡ್ಬೇಡಿ! ಯಾಕೆ ಗೊತ್ತಾ?

ಮಂಗಳೂರು ಪೊಲೀಸರು 11 ಜನರನ್ನು ಬಂಧಿಸಿದ್ದರು. ಬಂಧಿತರಿಂದ ಮೊಬೈಲ್‌, ಲ್ಯಾಪ್‌ಟಾಪ್‌ಗಳನ್ನು ವಶಕ್ಕೆ ಪಡೆಯಲಾಗಿತ್ತು. ಬಂಧಿತರ ಬಳಿಯಿದ್ದ ಒಟ್ಟು 624 ಬ್ಯಾಂಕ್‌ ಖಾತೆಗಳ ವಿವರ ಸಂಗ್ರಹಿಸಲಾಗಿತ್ತು. ವಿಚಿತ್ರ ಅಂದರೆ ಒಂದು ಖಾತೆಯಲ್ಲಿ 167 ಕೋಟಿ ರೂ ಹಣ ವರ್ಗಾವಣೆ ಆಗಿರುವುದು ಕೂಡ ಪತ್ತೆ ಆಗಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು