AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈದ್ರಾಬಾದ್​​ನಲ್ಲಿ ಮಂಗಳೂರು ಪೊಲೀಸರ ಭರ್ಜರಿ ಕಾರ್ಯಾಚರಣೆ: ಸೈಬರ್​ ವಂಚಕರ ಹೆಡೆಮುರಿ ಕಟ್ಟಿದ್ರು

ಮಂಗಳೂರು ಪೊಲೀಸರು ಹೈದರಾಬಾದ್‌ನಲ್ಲಿ ಸೈಬರ್ ವಂಚಕರ ದೊಡ್ಡ ಜಾಲವನ್ನು ಭೇದಿಸಿದ್ದಾರೆ. ವಿದೇಶಿಗರ ಸಹಭಾಗಿತ್ವದಲ್ಲಿ ಬ್ಯಾಂಕ್ ಖಾತೆದಾರರಿಗೆ ಆಮಿಷವೊಡ್ಡಿ OTP ಮೂಲಕ ಹಣ ದೋಚುತ್ತಿದ್ದ ಆರು ಆರೋಪಿಗಳನ್ನು ಬಂಧಿಸಿದ್ದಾರೆ. ಆ ಮೂಲಕ ಕೋಟಿ ಕೋಟಿ ವಹಿವಾಟು ನಡೆಸುತ್ತಿದ್ದ ಖದೀಮರ ಬಣ ಬಯಲು ಮಾಡಿದ್ದಾರೆ.

ಹೈದ್ರಾಬಾದ್​​ನಲ್ಲಿ ಮಂಗಳೂರು ಪೊಲೀಸರ ಭರ್ಜರಿ ಕಾರ್ಯಾಚರಣೆ: ಸೈಬರ್​ ವಂಚಕರ ಹೆಡೆಮುರಿ ಕಟ್ಟಿದ್ರು
ಪೊಲೀಸರು ಜಪ್ತಿ ಮಾಡಿರುವ ವಸ್ತುಗಳು
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on: Feb 27, 2026 | 6:54 PM

Share

ಮಂಗಳೂರು, ಫೆಬ್ರವರಿ 27: ವಿದೇಶದಲ್ಲಿದ್ದವರ ಜೊತೆ ಕೈಜೋಡಿಸಿ ಸೈಬರ್ ಕ್ರೈಂ (Cyber Crime) ಮಾಡುತ್ತಿದ್ದ ಆರು ಜನರ ತಂಡವನ್ನು ಹೈದರಾಬಾದ್​​ನಲ್ಲಿ ಮಂಗಳೂರು ಪೊಲೀಸರು ಬಂಧಿಸಿದ್ದಾರೆ (Arrest). ಶೇಖ್ ಕರೀಮುಲ್ಲಾ, ಬುಡಿದಿನ್ನೆ ವಂಶಿ, ಬಡೆ ಶ್ರೀನಿವಾಸ್, ಪಂಡಿತಿ ಕ್ರಾಂತಿ ಕುಮಾರ್, ಇಬ್ರಾಹಿಂ ಪ್ರಾಯ ಹಾಗೂ ಉತ್ಸಲ ಸಂತೋಷ್ ಕೃಷ್ಣ ಬಂಧಿತರು. ದುರುಳರು ನಿನ್ನೆ ಒಂದೇ ದಿನ 2 ಕೋಟಿ ರೂ ವಹಿವಾಟು ಮಾಡಿದ್ದಾರೆ.

ಕಮಿಷನ್​​ ಆಸೆ ತೋರಿಸುವ ಖದೀಮರು

ಬ್ಯಾಂಕ್ ಖಾತೆದಾರರಿಗೆ 4 ರಿಂದ 6% ಕಮಿಷನ್ ನೀಡುವ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಜಾಹಿರಾತು ನೀಡುತ್ತಿದ್ದರು. ಅದನ್ನು ನಂಬಿ ಬಂದವರಿಂದ ಓಟಿಪಿ ಪಡೆದು ವಿದೇಶಕ್ಕೆ ರವಾನಿಸುತ್ತಿದ್ದರು. ಅಲ್ಲಿರುವ ಸೈಬರ್ ಕ್ರೈಂ ಖದೀಮರು ಹಣ ಎಗರಿಸುತ್ತಿದ್ದರು.

ಇದನ್ನೂ ಓದಿ: ಸಾಲ ತೀರಿಸಲು ಕೆನರಾ, HDFC ಎಟಿಎಂನಲ್ಲಿ ಕಳ್ಳತನಕ್ಕೆ ಯತ್ನ: ಸೈರನ್ ಸದ್ದಿಗೆ ಬೆದರಿ ಓಡಿದ್ದ ಕಳ್ಳ ಈಗ ಪೊಲೀಸ್ ವಶಕ್ಕೆ!

ಸದ್ಯ ಮಂಗಳೂರಿನ ಮೊಹ್ಮದ್​ ಇಕ್ಬಾಲ್​ ದೂರಿನನ್ವಯ ಕಾರ್ಯಾಚರಣೆ ನಡೆಸಿದ ಮಂಗಳೂರು ಪೊಲೀಸರು ಆರೋಪಿಗಳು ಹೆಡೆಮುರಿ ಕಟ್ಟಿದ್ದಾರೆ. ಆರೋಪಿಗಳಿಂದ 18 ಮೊಬೈಲ್, 12 ಸಿಮ್ ಕಾರ್ಡ್,​ 1 ಲ್ಯಾಪ್ ಟಾಪ್, 15 ಚೆಕ್​ಬುಕ್, 18 ಡೆಬಿಟ್ ಕಾರ್ಡ್​ ಮತ್ತು 12 ಬ್ಯಾಂಕ್ ಪಾಸ್ ಬುಕ್​​ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಗಡಿ ದಾಟಿ‌ ಹಂತಕರ ಬಂಧಿಸಿದ ಮಂಗಳೂರು ಪೊಲೀಸರು

ಇನ್ನು ಇತ್ತೀಚೆಗೆ ಮಂಗಳೂರು ಪೊಲೀಸರು ಗಡಿ ಮೀರಿ ನಡೆಸಿದ ಕಾರ್ಯಾಚರಣೆಯಲ್ಲಿ ಸೈಬರ್‌ ವಂಚಕರ ಮೂಲವನ್ನೇ ಭೇದಿಸಿದ್ದರು. ಆ ಮೂಲಕ ದೇಶದಲ್ಲಿ ಇದುವರೆಗೂ ಯಾರೂ ಮಾಡದ ಆಪರೇಷನ್‌ ಮೂಲಕ ಖದೀಮರ ಹೆಡೆಮುರಿ ಕಟ್ಟಿದ್ದರು. ಮಂಗಳೂರು ಸೆನ್‌ ಪೊಲೀಸರ ಕಾರ್ಯಾಚರಣೆಗೆ ನೇಪಾಳ ಪೊಲೀಸರು ಸಾಥ್‌ ನೀಡಿದ್ದರು.

ಇದನ್ನೂ ಓದಿ: ಸ್ನೇಹಿತರಿಗೆ ಪ್ರಾಣವನ್ನಾದರೂ ಕೊಡಿ, ಬ್ಯಾಂಕ್ ಡೀಟೇಲ್ಸ್ ಕೊಡ್ಬೇಡಿ! ಯಾಕೆ ಗೊತ್ತಾ?

ಮಂಗಳೂರು ಪೊಲೀಸರು 11 ಜನರನ್ನು ಬಂಧಿಸಿದ್ದರು. ಬಂಧಿತರಿಂದ ಮೊಬೈಲ್‌, ಲ್ಯಾಪ್‌ಟಾಪ್‌ಗಳನ್ನು ವಶಕ್ಕೆ ಪಡೆಯಲಾಗಿತ್ತು. ಬಂಧಿತರ ಬಳಿಯಿದ್ದ ಒಟ್ಟು 624 ಬ್ಯಾಂಕ್‌ ಖಾತೆಗಳ ವಿವರ ಸಂಗ್ರಹಿಸಲಾಗಿತ್ತು. ವಿಚಿತ್ರ ಅಂದರೆ ಒಂದು ಖಾತೆಯಲ್ಲಿ 167 ಕೋಟಿ ರೂ ಹಣ ವರ್ಗಾವಣೆ ಆಗಿರುವುದು ಕೂಡ ಪತ್ತೆ ಆಗಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ
ಬೆಂಗಳೂರಿನಲ್ಲಿ ಕುರಿ ಮಾರಾಟ ಮಾಡ್ತಿದ್ದವನ ಬಳಿ ಪಿಸ್ತೂಲ್!
ಬೆಂಗಳೂರಿನಲ್ಲಿ ಕುರಿ ಮಾರಾಟ ಮಾಡ್ತಿದ್ದವನ ಬಳಿ ಪಿಸ್ತೂಲ್!
ಮಲ್ಲಿಕಾರ್ಜುನ ಮುತ್ಯಾ ಪರ ಭಕ್ತರ ಸಭೆ, ಜಿಲ್ಲಾಡಳಿತಕ್ಕೆ 2 ದಿನ ಡೆಡ್​​ಲೈನ್
ಮಲ್ಲಿಕಾರ್ಜುನ ಮುತ್ಯಾ ಪರ ಭಕ್ತರ ಸಭೆ, ಜಿಲ್ಲಾಡಳಿತಕ್ಕೆ 2 ದಿನ ಡೆಡ್​​ಲೈನ್
ಜನಾರ್ದನ ರೆಡ್ಡಿಗೆ ಮತ್ತೆ 'ಗಣಿ' ಉರುಳು? 884 ಕೋಟಿ ನಷ್ಟ ವಸೂಲಿಗೆ ಆಗ್ರಹ
ಜನಾರ್ದನ ರೆಡ್ಡಿಗೆ ಮತ್ತೆ 'ಗಣಿ' ಉರುಳು? 884 ಕೋಟಿ ನಷ್ಟ ವಸೂಲಿಗೆ ಆಗ್ರಹ
ತಾನು ಕೆಲಸ ಮಾಡಿದ ಆಫೀಸಿಗೇ 91 ಲಕ್ಷ ರೂ. ಕನ್ನ! ಆರೋಪಿ ಕ್ಯಾಶಿಯರ್ ಅಂದರ್
ತಾನು ಕೆಲಸ ಮಾಡಿದ ಆಫೀಸಿಗೇ 91 ಲಕ್ಷ ರೂ. ಕನ್ನ! ಆರೋಪಿ ಕ್ಯಾಶಿಯರ್ ಅಂದರ್
ನಡುರಸ್ತೆಯಲ್ಲಿ ಇಬ್ಬರು ಕಾಲೇಜು ಹುಡುಗಿಯರಿಗೆ ಲಿಪ್​​​ ಕಿಸ್ ಮಾಡಿದ ಯುವಕ
ನಡುರಸ್ತೆಯಲ್ಲಿ ಇಬ್ಬರು ಕಾಲೇಜು ಹುಡುಗಿಯರಿಗೆ ಲಿಪ್​​​ ಕಿಸ್ ಮಾಡಿದ ಯುವಕ
ಸತ್ತವರ ಖಾತೆಗೆ ಪಾವತಿಯಾದ ಗೃಹಲಕ್ಷ್ಮೀ ಹಣ ವಾಪಸ್ ಪಡೆಯಲು ಸರ್ಕಾರ ನಿರ್ಧಾರ
ಸತ್ತವರ ಖಾತೆಗೆ ಪಾವತಿಯಾದ ಗೃಹಲಕ್ಷ್ಮೀ ಹಣ ವಾಪಸ್ ಪಡೆಯಲು ಸರ್ಕಾರ ನಿರ್ಧಾರ
ಕೋಲ್ಕತ್ತಾದಲ್ಲಿ 5.3 ತೀವ್ರತೆಯ ಭೂಕಂಪ
ಕೋಲ್ಕತ್ತಾದಲ್ಲಿ 5.3 ತೀವ್ರತೆಯ ಭೂಕಂಪ
ಪಿಸ್ತೂಲ್ ಇಟ್ಟುಕೊಂಡ ಬಂದ ಜೆಡಿಎಸ್ ಕಾರ್ಯಕರ್ತ, ವಿಡಿಯೋ ವೈರಲ್
ಪಿಸ್ತೂಲ್ ಇಟ್ಟುಕೊಂಡ ಬಂದ ಜೆಡಿಎಸ್ ಕಾರ್ಯಕರ್ತ, ವಿಡಿಯೋ ವೈರಲ್
ಅನಂತ್​​ ಕುಮಾರ್​​ ಹೆಗಡೆ ಮರಳಿ ರಾಜಕೀಯಕ್ಕೆ? ಶ್ರೀರಾಮುಲು ಹೇಳಿದ್ದಿಷ್ಟು
ಅನಂತ್​​ ಕುಮಾರ್​​ ಹೆಗಡೆ ಮರಳಿ ರಾಜಕೀಯಕ್ಕೆ? ಶ್ರೀರಾಮುಲು ಹೇಳಿದ್ದಿಷ್ಟು