AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಲೇಜ್ ಹುಡುಗಿಯರನ್ನಿಟ್ಟುಕೊಂಡು ದಂಧೆ: ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್ ದಾಳಿ

ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ ತಾಲೂಕಿನ ನಿಡ್ಡೋಡಿಯಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರು ದಾಳಿ ಮಾಡಿ ಇಬ್ಬರು ಅಪ್ರಾಪ್ತ ಬಾಲಕಿಯರನ್ನು ರಕ್ಷಣೆ ಮಾಡಿದ್ದಾರೆ. ಓರ್ವ ಆಟೋ ಚಾಲಕ ಸೇರಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಸದ್ಯ ಮೂಡಬಿದಿರೆ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.

ಕಾಲೇಜ್ ಹುಡುಗಿಯರನ್ನಿಟ್ಟುಕೊಂಡು ದಂಧೆ: ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್ ದಾಳಿ
ಬಂಧಿತರು
ಅಶೋಕ್​ ಪೂಜಾರಿ, ಮಂಗಳೂರು
| Edited By: |

Updated on: Oct 14, 2025 | 6:02 PM

Share

ಮಂಗಳೂರು, ಅಕ್ಟೋಬರ್​ 14: ಅಪ್ರಾಪ್ತ ಕಾಲೇಜ್ ಹುಡುಗಿಯರನ್ನಿಟ್ಟುಕೊಂಡು (girls) ದಂಧೆ ಮಾಡುತ್ತಿದ್ದ ವೇಶ್ಯಾವಾಟಿಕೆ (Prostitution) ಅಡ್ಡೆ ಮೇಲೆ ಮೂಡಬಿದಿರೆ ಪೊಲೀಸರು ದಾಳಿ ಮಾಡಿ, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಆಟೋ ಚಾಲಕ ಮಹೇಶ್, ಕಟೀಲು ನಿವಾಸಿ ಶ್ರೀಕಾಂತ್, ಯಜ್ಞೇಶ್ ಮತ್ತು ದಿಲೀಪ್ ಬಂಧಿತರು. ಖಾಕಿ ಪಡೆ ಇಬ್ಬರು ಅಪ್ರಾಪ್ತೆಯರ ರಕ್ಷಣೆ ಮಾಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ ತಾಲೂಕಿನ ನಿಡ್ಡೋಡಿ ಎಂಬಲ್ಲಿ ಘಟನೆ ನಡೆದಿದೆ. ಮೂಡಬಿದಿರೆಯ ನಿಡ್ಡೋಡಿ ನಿವಾಸಿ ಆಟೋ ಚಾಲಕ, ಬಂಧಿತ ಮಹೇಶ್, ಇಬ್ಬರು ಅಪ್ರಾಪ್ತ ಕಾಲೇಜ್​ ಬಾಲಕಿಯರನ್ನು ಪುಸಲಾಯಿಸಿ ಕರೆತಂದಿದ್ದ.

ಇದನ್ನೂ ಓದಿ: ಮನೆಯಲ್ಲೇ ಹೈಟೆಕ್ ವೇಶ್ಯವಾಟಿಕೆ ದಂಧೆ: ರೆಡ್​ ಹ್ಯಾಂಡ್ ಆಗಿ ಸಿಕ್ಕಿಬಿದ್ದ 6 ಪುರುಷರು, ಇಬ್ಬರು ಯುವತಿಯರು

ಇದೇ ವೇಳೆ ತನ್ನ ಸ್ನೇಹಿತರನ್ನು ಮನೆಗೆ ಕರೆಸಿದ್ದ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದ ಮೂಡಬಿದಿರೆ ಪೊಲೀಸರು ಇಬ್ಬರು ಅಪ್ರಾಪ್ತೆಯರ ರಕ್ಷಣೆ ಮಾಡಿ ನಾಲ್ವರನ್ನು ಬಂಧಿಸಿದ್ದಾರೆ. ಮೂಡಬಿದಿರೆ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿದೆ.

ಅಕ್ರಮ ಹೈಟೆಕ್ ವೇಶ್ಯಾವಾಟಿಕೆ ದಂಧೆ

ಇನ್ನು ಇತ್ತೀಚೆಗೆ ಮೈಸೂರು ತಾಲ್ಲೂಕಿನ ದಾಸನಕೊಪ್ಪಲಿನಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಹೈಟೆಕ್ ವೇಶ್ಯಾವಾಟಿಕೆ ದಂಧೆಯ ಮೇಲೆ ಪೊಲೀಸರು ದಾಳಿ ಮಾಡಿ, 6 ಆರೋಪಿಗಳನ್ನು ಬಂಧಿಸಿದ್ದರು. ಇನ್ನು ದಾಳಿ ವೇಳೆ ಮನೆಯಲ್ಲಿ ನಡೆಯುತ್ತಿದ್ದ ಅನೈತಿಕ ಚಟುವಟಿಕೆಗಳು ಬೆಳಕಿಗೆ ಬಂದಿದ್ದವು.

ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ ಪತ್ತೆ

ಓಡನಾಡಿ ಸಂಸ್ಥೆ ನೀಡಿದ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ಮಾಡಿದ್ದರು. ಮನೆಯಲ್ಲಿ ನಕಲಿ ಪೇಯಿಂಗ್ ಗೆಸ್ಟ್ ಎಂದು ಯುವತಿಯರನ್ನು ಇರಿಸಲಾಗಿತ್ತು. ಸ್ಥಳೀಯರು ಈ ಕುರಿತು ಅನುಮಾನ ವ್ಯಕ್ತಪಡಿಸಿದ್ದರು.

ಕೆಎಸ್ಆರ್​ಟಿಸಿ ಬಸ್​ನಲ್ಲಿ ವೈದ್ಯೆಗೆ ಲೈಂಗಿಕ ಕಿರುಕುಳ

ಇನ್ನು ಮತ್ತೊಂದು ಪ್ರಕರಣದಲ್ಲಿ ಕೆಎಸ್ಆರ್​ಟಿಸಿ ಬಸ್​ನಲ್ಲಿ ಪ್ರಯಾಣ ಮಾಡುತ್ತಿದ್ದ ವೈದ್ಯೆಗೆ ಕಾಮುಕನೊಬ್ಬ ಲೈಂಗಿಕ ಕಿರುಕುಳ ನೀಡಿದ್ದ ಘಟನೆಯೊಂದು ವರದಿಯಾಗಿತ್ತು. ಬಸ್​​ನಲ್ಲಿ ಪಕ್ಕದಲ್ಲಿ ಕುಳಿತು ಅಸಭ್ಯವಾಗಿ ವರ್ತಿಸಿದ್ದ. ಸದ್ಯ ಪ್ರಯಾಣಿಕರೆಲ್ಲರೂ ಸೇರಿ ವ್ಯಕ್ತಿಯನ್ನು ಪೊಲೀಸರಿಗೆ ಹಿಡಿದುಕೊಟ್ಟಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!