AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯೆ ರಾಮಮಂದಿರಕ್ಕೆ ಧರ್ಮಸ್ಥಳದಿಂದ ಪೂಜಾ ಪರಿಕರಗಳು ರವಾನೆ: ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಹೇಳಿದ್ದಿಷ್ಟು

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶ್ರೀಕ್ಷೇತ್ರ ಧರ್ಮಸ್ಥಳ ಕ್ಷೇತ್ರದಲ್ಲಿದ್ದ ಬೆಳ್ಳಿ ಪೂಜಾ ಪರಿಕರಗಳನ್ನು ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಪೇಜಾವರ ಶ್ರೀಗಳಿಗೆ ತಲುಪಿಸಲು ನೀಡಿದ್ದಾರೆ. ಈ ಕುರಿತಾಗಿ ಪ್ರತಿಕ್ರಿಯೆ ಮಾತನಾಡಿರುವ ಅವರು, ಅಯೋಧ್ಯೆಗೆ ಏನಾದರೂ ಸಮರ್ಪಿಸಬೇಕು ಎನ್ನುವ ಆಸೆಯಿತ್ತು ಎಂದು ಹೇಳಿದ್ದಾರೆ.

ಅಯೋಧ್ಯೆ ರಾಮಮಂದಿರಕ್ಕೆ ಧರ್ಮಸ್ಥಳದಿಂದ ಪೂಜಾ ಪರಿಕರಗಳು ರವಾನೆ: ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಹೇಳಿದ್ದಿಷ್ಟು
ಆಹ್ವಾನ ನೀಡುತ್ತಿರುವುದು, ಪೂಜಾ ಪರಿಕರ ನೀಡಿಕೆ
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on:Jan 17, 2024 | 7:10 PM

Share

ಮಂಗಳೂರು, ಜನವರಿ 17: ಜನವರಿ 22ರಂದು ಅಯೋಧ್ಯೆ (Ayodhya) ಯಲ್ಲಿ ಶ್ರೀರಾಮನ ಪ್ರಾಣಪ್ರತಿಷ್ಠಾಪನೆ ನಡೆಯಲಿದೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶ್ರೀಕ್ಷೇತ್ರ ಧರ್ಮಸ್ಥಳ ಕ್ಷೇತ್ರದಲ್ಲಿದ್ದ ಬೆಳ್ಳಿ ಪೂಜಾ ಪರಿಕರಗಳನ್ನು ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ (Veerendra Heggade) ಅವರು ಪೇಜಾವರ ಶ್ರೀಗಳಿಗೆ ತಲುಪಿಸಲು ನೀಡಿದ್ದಾರೆ. ಜ. 22 ರ ಉದ್ಘಾಟನಾ ಸಮಾರಂಭಕ್ಕೆ ವಿವಿಐಪಿ ಅತಿಥಿಯಾಗಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರಿಗೆ ಆಹ್ವಾನ ನೀಡಲಾಗಿದೆ.

ಅಯೋಧ್ಯೆಗೆ ಏನಾದರೂ ಸಮರ್ಪಿಸಬೇಕು ಎನ್ನುವ ಆಸೆಯಿತ್ತು: ಡಾ.ಡಿ.ವೀರೇಂದ್ರ ಹೆಗ್ಗಡೆ

ಈ ಕುರಿತಾಗಿ ಪ್ರತಿಕ್ರಿಯೆ ನೀಡಿರುವ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ, ಜ.22ರಂದು ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಭಾಗಿಯಾಗುವೆ. ಅಯೋಧ್ಯೆಗೆ ಏನಾದರೂ ಸಮರ್ಪಿಸಬೇಕು ಎನ್ನುವ ಆಸೆಯಿತ್ತು. ಹಾಗಾಗಿ ಕ್ಷೇತ್ರದಲ್ಲಿದ್ದ ಅನೇಕ ಪರಿಕರವನ್ನು ಅಯೋಧ್ಯೆಗೆ ರವಾನಿಸಿದ್ದೇವೆ. ಅಯೋಧ್ಯೆಯಲ್ಲಿ ಕೆಲಕಾಲ ಪೇಜಾವರಶ್ರೀಗಳು ಪೂಜೆ ಸಲ್ಲಿಸುತ್ತಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅಯೋಧ್ಯೆಗೆ ರಾಮ ಲಲ್ಲಾ ಮೂರ್ತಿ ಆಗಮನ, ರಾಮ ಹೇಗಿದ್ದಾನೆ ಎಂದು ಚಿತ್ರಗಳಲ್ಲಿ ನೋಡಿ

ದಕ್ಷಿಣ ಭಾರತ ಶೈಲಿಯ ಪೂಜೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಅಯೋಧ್ಯೆಗೆ ಹಲವು ಪೂಜಾ ಪರಿಕರ ನೀಡಿದ್ದೇವೆ. ಆರತಿ ತಟ್ಟೆಗಳು, ನೆಲಾರತಿ, ನಾಗಾರತಿ, ಕೂರ್ಮಾರತಿ, ಕರ್ಪೂರಾರತಿ, ಶಂಖ, ಚಾಮರ, ಘಂಟೆ, ಕುಂಬಗಳನ್ನು ಅಯೋಧ್ಯೆಗೆ ರವಾನಿಸಿದ್ದೇವೆ ಎಂದು ತಿಳಿಸಿದ್ದಾರೆ.

ಶ್ರೀರಾಮನ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಆಹ್ವಾನ ಬಂದಿದೆ. ಜ.22ರ ಕಾರ್ಯಕ್ರಮದಲ್ಲಿ ಭಾಗಿಯಾಗಲು ಅಯೋಧ್ಯೆಗೆ ತೆರಳುತ್ತೇನೆ ಎಂದಿದ್ದಾರೆ.

ಇದನ್ನೂ ಓದಿ: ರಾಮನ ಬಂಟ ಹನುಮಂತನ ಜನ್ಮಸ್ಥಳ ಗಂಗಾವತಿಯ ಅಂಜನಾದ್ರಿಯಲ್ಲಿ ಏನೆಲ್ಲಾ ಕಾರ್ಯಕ್ರಮಗಳು ನಡೆಯಲಿವೆ? ವಿವರ ಇಲ್ಲಿದೆ

ಅಯೋಧ್ಯೆಯಲ್ಲಿ, ಬಾಲ ರಾಮನ ಪ್ರಾಣಪ್ರತಿಷ್ಠಾಪನೆಯ ಎರಡನೇ ದಿನದ ಪೂಜಾ ಕೈಂಕರ್ಯಗಳು ಪೂರ್ಣಗೊಂಡಿವೆ. ನಿನ್ನೆಯಷ್ಟೇ ಪ್ರಾಣಪ್ರತಿಷ್ಠಾಪನೆಯ ಪೂರ್ವಭಾವಿ ಶುಭ ಕಾರ್ಯಗಳು ಆರಂಭವಾಗಿದ್ದು, ಪ್ರಾಯಶ್ಚಿತ ಪೂಜೆ, ವಿಷ್ಣುಪೂಜೆ ನೆರವೇರಿಸಲಾಗಿತ್ತು. ಇವತ್ತು ಜಲಯಾತ್ರೆ ಸೇರಿ ವಿವಿಧ ಪೂಜೈ ಕೈಂಕರ್ಯ ನಡೆಸಲಾಗಿದೆ.

ರಾಮಮಂದಿರದ ಆವರಣಕ್ಕೆ ರಾಮಲಲ್ಲಾ ವಿಗ್ರಹ ತರಲಾಗಿದೆ. ಕ್ಯಾಂಟರ್‌ನಲ್ಲಿ ರಾಮಲಲ್ಲಾ ವಿಗ್ರಹವನ್ನ ಮೂರ್ತಿ ತಯಾರಿಕಾ ಸ್ಥಳದಿಂದ ಬಿಗಿ ಭದ್ರತೆಯಲ್ಲಿ ತರಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:07 pm, Wed, 17 January 24

Follow Us
Pruthviraj
Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ