AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿನ ಯುವ ನ್ಯಾಯವಾದಿ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಪುಂಜಾಲಕಟ್ಟೆ ಪಿಎಸ್ಐ ಸುತೇಶ್ ವರ್ಗಾವಣೆ

ಮಂಗಳೂರಿನ ಯುವ ನ್ಯಾಯವಾದಿ ಮೇಲೆ ಪೊಲೀಸ್ ದೌರ್ಜನ್ಯ ಆರೋಪ ಪ್ರಕರಣ ವಿಚಾರವಾಗಿ ಪುಂಜಾಲಕಟ್ಟೆ ಪಿಎಸ್ಐ ಸುತೇಶ್ ವರ್ಗಾವಣೆ ಮಾಡಲಾಗಿದೆ.

ಮಂಗಳೂರಿನ ಯುವ ನ್ಯಾಯವಾದಿ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಪುಂಜಾಲಕಟ್ಟೆ ಪಿಎಸ್ಐ ಸುತೇಶ್ ವರ್ಗಾವಣೆ
ಮಂಗಳೂರಿನ ಯುವ ನ್ಯಾಯವಾದಿ ಮೇಲೆ ಪೊಲೀಸ್ ದೌರ್ಜನ್ಯ ಆರೋಪ
TV9 Web
| Edited By: |

Updated on: Dec 08, 2022 | 2:52 PM

Share

ಮಂಗಳೂರು: ಡಿ. 3 ರಂದು ಮಂಗಳೂರಿನ ಯುವ ವಕೀಲ (lawyer) ಕುಲದೀಪ್ ಶೆಟ್ಟಿ ‌ಮೇಲೆ ಬಂಟ್ವಾಳದ ಪುಂಜಾಲಕಟ್ಟೆ ಪೊಲೀಸರು ದೌರ್ಜನ್ಯ ನಡೆಸಿದ್ದಾರೆಂದು ಆರೋಪ ಮಾಡಲಾಗಿತ್ತು. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಂಜಾಲಕಟ್ಟೆ ಪಿಎಸ್ಐ ಸುತೇಶ್​ನನ್ನು ಜಿಲ್ಲಾ ಎಸ್ಪಿ ಕಚೇರಿಗೆ ವರ್ಗಾವಣೆ‌ (transferred) ಮಾಡಲಾಗಿದೆ. ಆಡಳಿತಾತ್ಮಕ ದೃಷ್ಟಿಯಿಂದ ಎಂಬ ಕಾರಣ ಕೊಟ್ಟು ವರ್ಗಾವಣೆ ಮಾಡಲಾಗಿದೆ. ಸಿವಿಲ್​ ವ್ಯಾಜ್ಯ ನ್ಯಾಯಾಲಯದಲ್ಲಿ ಇದ್ದು ಎದುರುದಾರರ ವಿರುದ್ಧ ಪ್ರತಿಬಂದಕಾಜ್ಞೆ ಇದ್ದರೂ ಕೂಡ ಎದುರುದಾರರ ಸುಳ್ಳು ಫಿರ್ಯಾದಿಯ ಆಧಾರದ ಮೇಲೆ ಯುವ ವಕೀಲ ಕುಲದೀಪ್ ಶೆಟ್ಟಿ ಮೇಲೆ ಎಫ್​ಐಆರ್​ ದಾಖಲಿಸಲಾಗಿತ್ತು ಇದನ್ನು ಖಂಡಿಸಿ ನೂರಾರು ವಕೀಲರಿಂದ ಕೋರ್ಟ್ ಮುಂಭಾಗ ಪ್ರತಿಭಟನೆ ಕೂಡ ಮಾಡಲಾಗಿದೆ.   ‌

ಯುವ ವಕೀಲ ಕುಲದೀಪ್ ಶೆಟ್ಟಿ ವಿರುದ್ಧ ಸಿವಿಲ್ ಕೇಸ್​ನಲ್ಲಿ ಎಫ್.ಐ.ಆರ್ ದಾಖಲಿಸಿ ರಾತ್ರೋರಾತ್ರಿ ಮನೆಗೆ ನುಗ್ಗಿ ಬಂಧನ ಮಾಡಲಾಗಿತ್ತು. ಅರೆಬೆತ್ತಲಾಗಿ ನ್ಯಾಯವಾದಿಯನ್ನ ಜೀಪಿನಲ್ಲಿ ಎಳೆದುಕೊಂಡು ಹೋಗಿ ದೌರ್ಜನ್ಯವೆಸಗಿರುವ ಆರೋಪ ಕೇಳಿಬಂದಿತ್ತು.

ಇದನ್ನೂ ಓದಿ: ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್​ಗಿರಿ: ಜ್ಯುವೆಲರಿ ಶಾಪ್​ನಲ್ಲಿ ಅನ್ಯಕೋಮಿನ ಜೋಡಿಗೆ ಥಳಿತ, ಮೂರು ಪ್ರಕರಣ ದಾಖಲು

ಸದ್ಯ ಪುಂಜಾಲಕಟ್ಟೆ ಪಿಎಸ್ಸೈ ವಿರುದ್ದ ದ‌.ಕ ಜಿಲ್ಲಾ ವಕೀಲರ ಸಂಘ ಸೇರಿ ರಾಜ್ಯಾದ್ಯಂತ ವಕೀಲರು ಆಕ್ರೋಶ ವ್ಯಕ್ತಪಡಿಸಿದ್ದು, ಅಮಾನತಿಗೆ ಆಗ್ರಹಿಸಿ ವಕೀಲರಿಂದ ಪ್ರತಿಭಟನೆ ಮಾಡಲಾಗಿದೆ. ನ್ಯಾಯವಾದಿ ಜೊತೆ ಕೆಟ್ಟದಾಗಿ ‌ನಡೆದುಕೊಂಡ ಪೊಲೀಸರ ವರ್ತನೆಗೆ ‌ಕಿಡಿಕಾರಿದ್ದಾರೆ. ಜಾಗದ ವಿಚಾರದ ಜಗಳದಲ್ಲಿ ಎಫ್.ಐ.ಆರ್ ದಾಖಲಿಸಲಾಗಿದೆ. ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ಬೆಳ್ತಂಗಡಿ ಪಿ.ಎಸ್.ಐ ನಂದಕುಮಾರ್ ಅಧಿಕಾರ ವಹಿಸಿಕೊಂಡಿದ್ದಾರೆ.

ಯುವಕ-ಯುವತಿ ಮೇಲೆ ನೈತಿಕ ಪೊಲೀಸ್​ಗಿರಿ

ಇಡೀ ದೇಶದಲ್ಲೇ ಹವಾ ಎಬ್ಬಿಸಿದ ತುಳು ನಾಡ ದೈವಾರಾಧನೆ ಪರಿಚಯಿಸಿದ ಕನ್ನಡದ ಕಾಂತಾರ (Kantara) ಸಿನಿಮಾ ನೋಡಲು ಥಿಯೇಟರ್​ಗೆ ಬಂದ ಜೋಡಿ ಮೇಲೆ ಮುಸ್ಲಿಂ ಯುವಕರು ನೈತಿಕ ಪೊಲೀಸ್ ಗಿರಿ ನಡೆಸಿದ್ದಾರೆ ಎಂದು ದೂರಲಾಗಿದೆ. ಒಂದೇ ಕೋಮಿನ ಜೋಡಿಯ ಮೇಲೆ ಮುಸ್ಲಿಂ ಯುವಕರು ಹಲ್ಲೆಗೆ ಯತ್ನಿಸಿದ್ದಾರೆ ಎನ್ನಲಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಸಂತೋಷ್ ಚಿತ್ರಮಂದಿರದಲ್ಲಿ ಘಟನೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಮಂಗಳೂರು: ರಸ್ತೆ ಬದಿ ಕುಡುಕನ ಕೈಗೆ ಸಿಕ್ತು ಕಂತೆ ಕಂತೆ ಹಣದ ಬಾಕ್ಸ್, ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ

ಸುಳ್ಯದ ಖಾಸಗಿ ಕಾಲೇಜಿನ ಕೇರಳದ ಮೂಲದ ವಿದ್ಯಾರ್ಥಿ ಜೋಡಿ ಕಾಲೇಜು ತಪ್ಪಿಸಿ ಸಿನಿಮಾ ವೀಕ್ಷಣೆಗೆ ಬಂದಿದ್ದ ವೇಳೆ ಯುವಕ ಮತ್ತು ಯುವತಿಯನ್ನು ಗುಂಪೊಂದು ತರಾಟೆಗೆ ತೆಗೆದುಕೊಂಡಿತ್ತು. ಮುಸ್ಲಿಂ ಯುವಕ ಮತ್ತು ಹಿಜಾಬ್ ಹಾಕಿದ್ದ ಯುವತಿ ಸಂತೋಷ್ ಚಿತ್ರಮಂದಿರಕ್ಕೆ ಕಾಂತಾರ ಸಿನಿಮಾ ವೀಕ್ಷಣೆಗೆ ಬಂದಿದ್ದರು.

ಈ ವೇಳೆ ಯುವಕ ಪಾರ್ಕಿಂಗ್​ನಲ್ಲಿ ಬೈಕ್ ನಿಲ್ಲಿಸಿದ್ದ ವೇಳೆ ಸ್ಥಳೀಯ ‌ಕೆಲ ಮುಸ್ಲಿಂ ಯುವಕರು ತಲಾಟೆ ಶುರು ಮಾಡಿದ್ದರು. ಕಾಲೇಜಿಗೆ ಹೋಗದೇ ಸಿನಿಮಾಗೆ ಬಂದಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರು. ಸದ್ಯ ಹಲ್ಲೆಗೆ ಯತ್ನಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಮುಸ್ಲಿಂ ಯುವಕರು ಎಚ್ಚರಿಸಿದ ಬಳಿಕ ವಿದ್ಯಾರ್ಥಿಗಳು ಸ್ಥಳದಿಂದ ತೆರಳಿದ್ದಾರೆ ಎನ್ನಲಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ