AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿನ ಯುವ ನ್ಯಾಯವಾದಿ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಪುಂಜಾಲಕಟ್ಟೆ ಪಿಎಸ್ಐ ಸುತೇಶ್ ವರ್ಗಾವಣೆ

ಮಂಗಳೂರಿನ ಯುವ ನ್ಯಾಯವಾದಿ ಮೇಲೆ ಪೊಲೀಸ್ ದೌರ್ಜನ್ಯ ಆರೋಪ ಪ್ರಕರಣ ವಿಚಾರವಾಗಿ ಪುಂಜಾಲಕಟ್ಟೆ ಪಿಎಸ್ಐ ಸುತೇಶ್ ವರ್ಗಾವಣೆ ಮಾಡಲಾಗಿದೆ.

ಮಂಗಳೂರಿನ ಯುವ ನ್ಯಾಯವಾದಿ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಪುಂಜಾಲಕಟ್ಟೆ ಪಿಎಸ್ಐ ಸುತೇಶ್ ವರ್ಗಾವಣೆ
ಮಂಗಳೂರಿನ ಯುವ ನ್ಯಾಯವಾದಿ ಮೇಲೆ ಪೊಲೀಸ್ ದೌರ್ಜನ್ಯ ಆರೋಪ
TV9 Web
| Edited By: |

Updated on: Dec 08, 2022 | 2:52 PM

Share

ಮಂಗಳೂರು: ಡಿ. 3 ರಂದು ಮಂಗಳೂರಿನ ಯುವ ವಕೀಲ (lawyer) ಕುಲದೀಪ್ ಶೆಟ್ಟಿ ‌ಮೇಲೆ ಬಂಟ್ವಾಳದ ಪುಂಜಾಲಕಟ್ಟೆ ಪೊಲೀಸರು ದೌರ್ಜನ್ಯ ನಡೆಸಿದ್ದಾರೆಂದು ಆರೋಪ ಮಾಡಲಾಗಿತ್ತು. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಂಜಾಲಕಟ್ಟೆ ಪಿಎಸ್ಐ ಸುತೇಶ್​ನನ್ನು ಜಿಲ್ಲಾ ಎಸ್ಪಿ ಕಚೇರಿಗೆ ವರ್ಗಾವಣೆ‌ (transferred) ಮಾಡಲಾಗಿದೆ. ಆಡಳಿತಾತ್ಮಕ ದೃಷ್ಟಿಯಿಂದ ಎಂಬ ಕಾರಣ ಕೊಟ್ಟು ವರ್ಗಾವಣೆ ಮಾಡಲಾಗಿದೆ. ಸಿವಿಲ್​ ವ್ಯಾಜ್ಯ ನ್ಯಾಯಾಲಯದಲ್ಲಿ ಇದ್ದು ಎದುರುದಾರರ ವಿರುದ್ಧ ಪ್ರತಿಬಂದಕಾಜ್ಞೆ ಇದ್ದರೂ ಕೂಡ ಎದುರುದಾರರ ಸುಳ್ಳು ಫಿರ್ಯಾದಿಯ ಆಧಾರದ ಮೇಲೆ ಯುವ ವಕೀಲ ಕುಲದೀಪ್ ಶೆಟ್ಟಿ ಮೇಲೆ ಎಫ್​ಐಆರ್​ ದಾಖಲಿಸಲಾಗಿತ್ತು ಇದನ್ನು ಖಂಡಿಸಿ ನೂರಾರು ವಕೀಲರಿಂದ ಕೋರ್ಟ್ ಮುಂಭಾಗ ಪ್ರತಿಭಟನೆ ಕೂಡ ಮಾಡಲಾಗಿದೆ.   ‌

ಯುವ ವಕೀಲ ಕುಲದೀಪ್ ಶೆಟ್ಟಿ ವಿರುದ್ಧ ಸಿವಿಲ್ ಕೇಸ್​ನಲ್ಲಿ ಎಫ್.ಐ.ಆರ್ ದಾಖಲಿಸಿ ರಾತ್ರೋರಾತ್ರಿ ಮನೆಗೆ ನುಗ್ಗಿ ಬಂಧನ ಮಾಡಲಾಗಿತ್ತು. ಅರೆಬೆತ್ತಲಾಗಿ ನ್ಯಾಯವಾದಿಯನ್ನ ಜೀಪಿನಲ್ಲಿ ಎಳೆದುಕೊಂಡು ಹೋಗಿ ದೌರ್ಜನ್ಯವೆಸಗಿರುವ ಆರೋಪ ಕೇಳಿಬಂದಿತ್ತು.

ಇದನ್ನೂ ಓದಿ: ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್​ಗಿರಿ: ಜ್ಯುವೆಲರಿ ಶಾಪ್​ನಲ್ಲಿ ಅನ್ಯಕೋಮಿನ ಜೋಡಿಗೆ ಥಳಿತ, ಮೂರು ಪ್ರಕರಣ ದಾಖಲು

ಸದ್ಯ ಪುಂಜಾಲಕಟ್ಟೆ ಪಿಎಸ್ಸೈ ವಿರುದ್ದ ದ‌.ಕ ಜಿಲ್ಲಾ ವಕೀಲರ ಸಂಘ ಸೇರಿ ರಾಜ್ಯಾದ್ಯಂತ ವಕೀಲರು ಆಕ್ರೋಶ ವ್ಯಕ್ತಪಡಿಸಿದ್ದು, ಅಮಾನತಿಗೆ ಆಗ್ರಹಿಸಿ ವಕೀಲರಿಂದ ಪ್ರತಿಭಟನೆ ಮಾಡಲಾಗಿದೆ. ನ್ಯಾಯವಾದಿ ಜೊತೆ ಕೆಟ್ಟದಾಗಿ ‌ನಡೆದುಕೊಂಡ ಪೊಲೀಸರ ವರ್ತನೆಗೆ ‌ಕಿಡಿಕಾರಿದ್ದಾರೆ. ಜಾಗದ ವಿಚಾರದ ಜಗಳದಲ್ಲಿ ಎಫ್.ಐ.ಆರ್ ದಾಖಲಿಸಲಾಗಿದೆ. ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ಬೆಳ್ತಂಗಡಿ ಪಿ.ಎಸ್.ಐ ನಂದಕುಮಾರ್ ಅಧಿಕಾರ ವಹಿಸಿಕೊಂಡಿದ್ದಾರೆ.

ಯುವಕ-ಯುವತಿ ಮೇಲೆ ನೈತಿಕ ಪೊಲೀಸ್​ಗಿರಿ

ಇಡೀ ದೇಶದಲ್ಲೇ ಹವಾ ಎಬ್ಬಿಸಿದ ತುಳು ನಾಡ ದೈವಾರಾಧನೆ ಪರಿಚಯಿಸಿದ ಕನ್ನಡದ ಕಾಂತಾರ (Kantara) ಸಿನಿಮಾ ನೋಡಲು ಥಿಯೇಟರ್​ಗೆ ಬಂದ ಜೋಡಿ ಮೇಲೆ ಮುಸ್ಲಿಂ ಯುವಕರು ನೈತಿಕ ಪೊಲೀಸ್ ಗಿರಿ ನಡೆಸಿದ್ದಾರೆ ಎಂದು ದೂರಲಾಗಿದೆ. ಒಂದೇ ಕೋಮಿನ ಜೋಡಿಯ ಮೇಲೆ ಮುಸ್ಲಿಂ ಯುವಕರು ಹಲ್ಲೆಗೆ ಯತ್ನಿಸಿದ್ದಾರೆ ಎನ್ನಲಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಸಂತೋಷ್ ಚಿತ್ರಮಂದಿರದಲ್ಲಿ ಘಟನೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಮಂಗಳೂರು: ರಸ್ತೆ ಬದಿ ಕುಡುಕನ ಕೈಗೆ ಸಿಕ್ತು ಕಂತೆ ಕಂತೆ ಹಣದ ಬಾಕ್ಸ್, ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ

ಸುಳ್ಯದ ಖಾಸಗಿ ಕಾಲೇಜಿನ ಕೇರಳದ ಮೂಲದ ವಿದ್ಯಾರ್ಥಿ ಜೋಡಿ ಕಾಲೇಜು ತಪ್ಪಿಸಿ ಸಿನಿಮಾ ವೀಕ್ಷಣೆಗೆ ಬಂದಿದ್ದ ವೇಳೆ ಯುವಕ ಮತ್ತು ಯುವತಿಯನ್ನು ಗುಂಪೊಂದು ತರಾಟೆಗೆ ತೆಗೆದುಕೊಂಡಿತ್ತು. ಮುಸ್ಲಿಂ ಯುವಕ ಮತ್ತು ಹಿಜಾಬ್ ಹಾಕಿದ್ದ ಯುವತಿ ಸಂತೋಷ್ ಚಿತ್ರಮಂದಿರಕ್ಕೆ ಕಾಂತಾರ ಸಿನಿಮಾ ವೀಕ್ಷಣೆಗೆ ಬಂದಿದ್ದರು.

ಈ ವೇಳೆ ಯುವಕ ಪಾರ್ಕಿಂಗ್​ನಲ್ಲಿ ಬೈಕ್ ನಿಲ್ಲಿಸಿದ್ದ ವೇಳೆ ಸ್ಥಳೀಯ ‌ಕೆಲ ಮುಸ್ಲಿಂ ಯುವಕರು ತಲಾಟೆ ಶುರು ಮಾಡಿದ್ದರು. ಕಾಲೇಜಿಗೆ ಹೋಗದೇ ಸಿನಿಮಾಗೆ ಬಂದಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರು. ಸದ್ಯ ಹಲ್ಲೆಗೆ ಯತ್ನಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಮುಸ್ಲಿಂ ಯುವಕರು ಎಚ್ಚರಿಸಿದ ಬಳಿಕ ವಿದ್ಯಾರ್ಥಿಗಳು ಸ್ಥಳದಿಂದ ತೆರಳಿದ್ದಾರೆ ಎನ್ನಲಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ