ವಿಮಾನದಲ್ಲಿ ಬಂದು ಕಳ್ಳತನ: ಮಂಗಳೂರು ರೈಲ್ವೆ ಪೊಲೀಸರ ಕೈಗೆ ಸಿಕ್ಕಿಬಿದ್ದ ಹೈಟೆಕ್‌ ದರೋಡೆಕೋರರು

ವಿಮಾನದಲ್ಲಿ ಬಂದು ರೈಲಿನಲ್ಲಿ ಪ್ರಯಾಣಿಕರನ್ನು ಸುಲಿಗೆ ಮಾಡಿ ವಾಪಸ್​ ಫ್ಲೈಟ್​ನಲ್ಲೇ ಎಸ್ಕೇಪ್ ಆಗುತ್ತಿದ್ದ ಇಬ್ಬರು ಹೈಟೆಕ್​ ಖದೀಮರು ಮಂಗಳೂರಿನಲ್ಲಿ ಸಿಕ್ಕಿಬಿದ್ದಿದ್ದಾರೆ. ಒಂದು ಕಳ್ಳತನ ಪ್ರಕರಣದಲ್ಲಿ ರೈಲಿನಲ್ಲಿ ಅನುಮಾನದ ಮೇರೆಗೆ ಇಬ್ಬರು ಯುವಕರನ್ನು ಮಂಗಳೂರು ವಶಕ್ಕೆ ಪಡೆದುಕೊಂಡು ವಿಚಾರಣೆಗೊಳಪಡಿಸಿದಾಗ ಹೈಟೆಕ್​ ಕಳ್ಳರ ಕರಾಮತ್ತು ಬಟಾಬಯಲಾಗಿದೆ.

ವಿಮಾನದಲ್ಲಿ ಬಂದು ಕಳ್ಳತನ:  ಮಂಗಳೂರು ರೈಲ್ವೆ ಪೊಲೀಸರ ಕೈಗೆ ಸಿಕ್ಕಿಬಿದ್ದ ಹೈಟೆಕ್‌ ದರೋಡೆಕೋರರು
ಬಂಧಿತ ಆರೋಪಿಗಳು
Follow us
| Updated By: ರಮೇಶ್ ಬಿ. ಜವಳಗೇರಾ

Updated on: Oct 05, 2023 | 12:53 PM

ಮಂಗಳೂರು, (ಅಕ್ಟೋಬರ್ 05): ವಿಮಾನದಲ್ಲಿ (Flight) ಬಂದು ರೈಲಿನಲ್ಲಿ ಪ್ರಯಾಣಿಕರ (Train Passengers)  ಹಣ, ಚಿನ್ನ ಕದ್ದು ವಾಪಸ್​ ವಿಮಾನದಲ್ಲೇ ಪರಾರಿಯಾಗುತ್ತಿದ್ದ ಅಂತಾರಾಜ್ಯ ಹೈಟೆಕ್‌ ದರೋಡೆಕೋರರು ಕೊನೆಗೂ ಮಂಗಳೂರು ರೈಲ್ವೆ ಪೊಲೀಸರ (Mangaluru Railway Police) ಬಲೆಗೆ ಬಿದ್ದಿದ್ದಾರೆ. ಯುಪಿ ಮೂಲದ ಅಭಯರಾಜ್ (26), ಹರಿಶಂಕರ್ ಗಿರಿ(25) ಬಂಧತ ಖದೀಮರು. ಸೆಪ್ಟೆಂಬರ್ 28ರಂದು ಮಂಗಳೂರು-ಸುರತ್ಕಲ್ ಮಾರ್ಗದ ರೈಲಿನಲ್ಲಿ ನಡೆದಿದ್ದ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅನುಮಾನದ ಮೇಲೆ ಈ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದಾಗ ಈ ಹೈಟೆಕ್‌ ಕಳ್ಳತನದ ದಂಧೆ ಬೆಳಕಿಗೆ ಬಂದಿದೆ.

ಇದನ್ನೂ ಓದಿ: ಕಳ್ಳತನ ಮಾಡಿದ ಭಯದಲ್ಲಿ ಸಿಗ್ನಲ್​ ಜಂಪ್​ ಮಾಡಿ ಹೋದರು: ಟ್ರಾಫಿಕ್ ಫೈನ್​​ ಕೊಟ್ಟ ಸುಳಿವಿನ ಮೇಲೆ ಸಿಕ್ಕರು

ಸೆಪ್ಟೆಂಬರ್ 28ರಂದು ಮಂಗಳೂರು- ಸುರತ್ಕಲ್ ಮಧ್ಯೆ ರೈಲಿನಲ್ಲಿ ಪ್ರಯಾಣಿಕರ ಸುಲಿಗೆ ನಡೆದಿತ್ತು. ಬಳಿಕ ಮಂಗಳೂರು ರೈಲ್ವೆ ಪೊಲೀಸರು, ಸಂಶಯದಿಂದ ರೈಲಿನಲ್ಲಿದ್ದ ಇಬ್ಬರು ಯುವಕರನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಈ ಕೃತ್ಯ ಬಟಾಬಯಲಾಗಿದೆ. ರಾತ್ರಿ ವೇಳೆ ಕೊಂಕಣ ರೈಲ್ವೇಯಲ್ಲಿ ಪ್ರಯಾಣಿಕರ ಚಿನ್ನಾಭರಣ ಕಳ್ಳತನ ಮಾಡುತ್ತಿದ್ದರು. ಅಲ್ಲದೇ ಕೇರಳ, ಕರ್ನಾಟಕದ ರೈಲಿನಲ್ಲಿ ಪ್ರಯಾಣಿಕರ ಚಿನ್ನ ಕದ್ದು ವಿಮಾನದಲ್ಲಿ ಪರಾರಿಯಾಗುತ್ತಿದ್ದರು. ಸದ್ಯ ಇದೀಗ ಹೈಟೆಕ್ ಆರೋಪಿಗಳು ಪೊಲೀಸರ ಅತಿಥಿಯಾಗಿದ್ದು, ಆರೋಪಿಗಳಿಂದ ಒಟ್ಟು 125 ಗ್ರಾಂ ಚಿನ್ನಾಭರಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತ ಇಬ್ಬರು ಆರೋಪಿಗಳು ಉತ್ತರ ಪ್ರದೇಶದ ಮಿರ್ಜಾಪುರ ಜಿಲ್ಲೆಯವರು ಎಂದು ತಿಳಿದುಬಂದಿದ್ದು, ಈ ಬಗ್ಗೆ ಮಂಗಳೂರು ರೈಲ್ವೆ ಪೊಲಿಸರು ಇನ್ನಷ್ಟು ತನಿಖೆ ನಡೆಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​