AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ರಜೆ ಮೇಲೆ ಹುಟ್ಟೂರಿಗೆ ಬರಬೇಕಿದ್ದ ಮಂಗಳೂರಿನ ಯೋಧ ಹೃದಯಾಘಾತದಿಂದ ಸಾವು, ನಾಳೆ ಅಂತ್ಯಸಂಸ್ಕಾರ

ಭೋಪಾಲ್​ನಲ್ಲಿ‌ ಸಶಸ್ತ್ರ ಸೀಮಾ ಬಲ್​ನಲ್ಲಿ ಕರ್ತವ್ಯದಲ್ಲಿದ್ದ ಮಂಗಳೂರಿನ ಯೋಧ ಮುರಳಿಧರ್ ರೈ ಅವರು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ನಿನ್ನೆ ಮುಂಜಾನೆ ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಇಂದು ರಜೆ ಮೇಲೆ ಹುಟ್ಟೂರಿಗೆ ಬರಬೇಕಿದ್ದ ಮಂಗಳೂರಿನ ಯೋಧ ಹೃದಯಾಘಾತದಿಂದ ಸಾವು, ನಾಳೆ ಅಂತ್ಯಸಂಸ್ಕಾರ
ಮೃತ ಯೋಧ ಮುರಳಿಧರ್ ರೈ (ಎಡ ಚಿತ್ರ)
TV9 Web
| Edited By: |

Updated on:Jan 24, 2023 | 8:11 PM

Share

ಮಂಗಳೂರು: ಇಂದು ರಜೆಯ ಮೇಲೆ ಊರಿಗೆ ಬರಬೇಕಾಗಿದ್ದ ಮಂಗಳೂರು ಮೂಲದ ಯೋಧರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ (Mangalore soldier passes away). ಮಧ್ಯಪ್ರದೇಶದ ಭೋಪಾಲ್​ನಲ್ಲಿ‌ ಸಶಸ್ತ್ರ ಸೀಮಾ ಬಲ್​ನಲ್ಲಿ ಕರ್ತವ್ಯದಲ್ಲಿದ್ದ ಮುರಳಿಧರ್ ರೈ (37) ಮೃತ ಯೋಧರಾಗಿದ್ದಾರೆ. ನಿನ್ನೆ (ಜನವರಿ 23) ಮುಂಜಾನೆ ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವನ್ನಪ್ಪಿರುವ ಮುರಳಿಧರ್ ಅವರ ಪಾರ್ಥಿವ ಶರೀರ ಇಂದು ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿತು. ವಿಮಾನ ನಿಲ್ದಾಣದಲ್ಲಿ ಜಿಲ್ಲಾಡಳಿತದಿಂದ ಸಕಲ ಸರ್ಕಾರಿ ಗೌರವ ಸಲ್ಲಿಕೆ ಮಾಡಲಾಗಿದೆ.

ನಿನ್ನೆ ಬೆಳಗ್ಗೆ ಮಲಗಿದ್ದಲ್ಲಿಯೇ ಯೋಧ ಮುರಳಿಧರ್ ಅವರಿಗೆ ಹೃದಯಾಘಾತವಾಗಿ ಕೊನೆಯುಸಿರೆಳೆದಿದ್ದಾರೆ. ಇಂದು ಮಂಗಳೂರು ವಿಮಾನ ನಿಲ್ದಾಣಕ್ಕೆ ಮೃತ ಯೋಧ‌ನ ಪಾರ್ಥಿವ ಶರೀರ ಆಗಮಿಸಿದ್ದು, ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ಸೇರಿದಂತೆ ಅಧಿಕಾರಿಗಳು ಸಕಲ ಸರ್ಕಾರಿ ಗೌರವ ಸಲ್ಲಿಸಿದರು. ಬಳಿಕ ಮೃತದೇಹವನ್ನು ಎ.ಜೆ ಆಸ್ಪತ್ರೆಯ ಶವಗಾರಕ್ಕೆ ರವಾನೆ ಮಾಡಲಾಯಿತು. ನಾಳೆ ಶಕ್ತಿನಗರದ ಯೋಧನ ಮನೆಯಲ್ಲಿ ಅಂತಿಮ ವಿಧಿ ವಿಧಾನ ನೆರವೇರಲಿದೆ.

ಇದನ್ನೂ ಓದಿ: Balkrishna Vithaldas Doshi: ಪ್ರಸಿದ್ಧ ವಾಸ್ತುಶಿಲ್ಪಿ ಬಾಲಕೃಷ್ಣ ವಿಠ್ಠಲದಾಸ್ ದೋಶಿ ನಿಧನ: ಪ್ರಧಾನಿ ಮೋದಿ ಸಂತಾಪ

2007ರಲ್ಲಿ ಕಾನ್ಸ್‌ಟೇಬಲ್ ಆಗಿ ಸಶಸ್ತ್ರ ಸೀಮಾ ಬಲ್​ಗೆ ಸೇರ್ಪಡೆಯಾಗಿದ್ದ ಮುರಳಿಧರ್ ರೈ, ಹವಾಲ್ದಾರ್ ಆಗಿ ಭೋಪಾಲ್​ನಲ್ಲಿ ಕರ್ತವ್ಯದಲ್ಲಿದ್ದರು. ಇಂದು ರಜೆಯ ಮೇಲೆ ಊರಿಗೆ ಬರಬೇಕಾಗಿದ್ದ ಮುರಳಿಧರ್ ರೈ, ಪತ್ನಿ ಹಾಗೂ ಆರು ತಿಂಗಳ ಮಗುವನ್ನು‌ ಅಗಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:11 pm, Tue, 24 January 23

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?