AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿನ ಕೆಲ ಅಂಗಡಿಗಳಲ್ಲಿ ಕುರಿ ಮಾಂಸದಲ್ಲಿ ಕರುಗಳ ಮಾಂಸ ಮಿಶ್ರಣ: ಭಜರಂಗದಳ ಆರೋಪ

ದಕ್ಷಿಣ ಕನ್ನಡ ಜಿಲ್ಲೆಯ ಕೆಲ ಹೊಟೇಲ್​ಗಳಲ್ಲಿ ಗೋ ಖಾದ್ಯಗಳ ಮಾರಾಟ ಮಾಡಲಾಗುತ್ತಿದೆ. ಇದನ್ನು ಹಿಂದೂಗಳಿಗೆ ತಿನ್ನಿಸಿ ಧರ್ಮ‌ ಭ್ರಷ್ಟರನ್ನಾಗಿ ಮಾಡಲಾಗುತ್ತಿದೆ. ಮಾಂಸದ ಅಂಗಡಿಯ ಲೈಸನ್ಸ್ ಪಡೆದು ಗೋಮಾಂಸ ಮಾರಾಟ ಮಾಡುತ್ತಿದ್ದಾರೆ ಎಂದು ಭಜರಂಗದಳ ಪ್ರಮುಖ ಪುನೀತ್ ಅತ್ತಾವರ ಹೇಳಿದರು.

ಮಂಗಳೂರಿನ ಕೆಲ ಅಂಗಡಿಗಳಲ್ಲಿ ಕುರಿ ಮಾಂಸದಲ್ಲಿ ಕರುಗಳ ಮಾಂಸ ಮಿಶ್ರಣ: ಭಜರಂಗದಳ ಆರೋಪ
ವಿಹೆಚ್​ಪಿ, ಭಜರಂಗ ಮುಖಂಡರು
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on: Jul 26, 2024 | 10:42 AM

Share

ಮಂಗಳೂರು, ಜುಲೈ 26: ಕುರಿ ಮಾಂಸದಲ್ಲಿ ಕರುಗಳ ಮಾಂಸ ಮಿಶ್ರಣ ಮಾಡಿ ಮಾರಲಾಗುತ್ತಿದೆ ಎಂದು ಭಜರಂಗದಳ (Bajrang Dal) ಮಂಗಳೂರು (Mangaluru) ವಿಭಾಗೀಯ ಸಹ ಸಂಯೋಜಕ ಪುನೀತ್ ಅತ್ತಾವರ ಆರೋಪ ಮಾಡಿದ್ದಾರೆ. ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಯಿದರೂ ಅವ್ಯಾಹತವಾಗಿ ಅಕ್ರಮ ಗೋ ಸಾಗಾಟ, ಹತ್ಯೆ ಮಾಡಲಾಗುತ್ತಿದೆ. ಕುರಿ ಮಾಂಸದ ಹೆಸರಿನಲ್ಲಿ ಸಣ್ಣ ಸಣ್ಣ ಕರುಗಳ (Calf) ಮಾಂಸ ಮಿಶ್ರಣ ಮಾಡಿ ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಮಂಗಳೂರಿನಲ್ಲಿ ಟವಿ9 ಜೊತೆ ಮಾತನಾಡಿದ ಅವರು, ಕೆಲ ಹೊಟೇಲ್​ಗಳಲ್ಲಿ ಗೋ ಖಾದ್ಯಗಳ ಮಾರಾಟ ಮಾಡಲಾಗುತ್ತಿದೆ. ಇದನ್ನು ಹಿಂದೂಗಳಿಗೆ ತಿನ್ನಿಸಿ ಧರ್ಮ‌ ಭ್ರಷ್ಟರನ್ನಾಗಿ ಮಾಡಲಾಗುತ್ತಿದೆ. ಮಾಂಸದ ಅಂಗಡಿಯ ಲೈಸನ್ಸ್ ಪಡೆದು ಗೋಮಾಂಸ ಮಾರಾಟ ಮಾಡುತ್ತಿದ್ದಾರೆ. ಸುರತ್ಕಲ್, ಜೋಕಟ್ಟೆ, ತಣ್ಣೀರುಬಾವಿ ಪರಿಸರದಲ್ಲಿಅಕ್ರಮ ಕಸಾಯಿಖಾನೆ ತೆರೆಯಲಾಗಿದೆ. ಈ ಬಗ್ಗೆ ದೂರು ನೀಡುತ್ತೇವೆ ಎಂದರು.

ಇದನ್ನೂ ಓದಿ: ಗೋಮಾತೆಯನ್ನು ಕಡಿಯುವ ಮುಸ್ಲಿಮರ ಕೈಗಳನ್ನು ಕತ್ತರಿಸಬೇಕೆಂದ ಹಿಂದೂ ಮುಖಂಡ ಪುನೀತ್ ಅತ್ತಾವರ; ಕಾರ್ಕಳದಲ್ಲಿ ಪ್ರಕರಣ ದಾಖಲು

ಗೋವುಗಳನ್ನು ತರುವ, ಮಾಂಸ ಕೊಂಡು ಹೋಗುವ ಜಾಲ ಭೇದಿಸಬೇಕು. ಕಮೀಷನರೇಟ್ ವ್ಯಾಪ್ತಿಯಲ್ಲಿ ನೂರಾರು ಬೀಫ್ ಸ್ಟಾಲ್​ಗಳಿವೆ. ಎಲ್ಲಿಂದ ಈ ಮಾಂಸ ಬರುತ್ತೆ ಎಂಬ ತನಿಖೆ ಆಗುತ್ತಿಲ್ಲ. ಪೊಲೀಸ್ ಇಲಾಖೆ ಕಠಿಣ ಕ್ರಮ ಕೈಗೊಳ್ಳಬೇಕು. ಕ್ರಮ ಕೈಗೊಳ್ಳದಿದ್ದರೆ ಭಜರಂಗದಳ ಕಾರ್ಯಕರ್ತರೇ ನೇರ ಕಾರ್ಯಾಚರಣೆಗಿಳಿಯುತ್ತಾರೆ.

2006 ರಲ್ಲಿ ಮಂಗಳೂರಿನಲ್ಲಿ ನಡೆದ ಘಟನೆಯನ್ನು ಪೊಲೀಸ್​ ಇಲಾಖೆ ನೆನಪು ಮಾಡಿಕೊಳ್ಳಬೇಕು. ಇಂತಹ ಘಟನೆ ಆಗಬಾರದೆಂದರೇ ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳಬೇಕು. ಗೋವಿನ ರಕ್ಷಣೆ ಹಿಂದೂ ಸಮಾಜದ ಕರ್ತವ್ಯ. ನಮ್ಮ ಮೇಲೆ ಕೇಸ್ ಆದ್ರೂ ಗೋ ರಕ್ಷಣೆ ಮಾಡೇ ಮಾಡುತ್ತೇವೆ. ಗೋರಕ್ಷಣೆ ಮಾಡಿದ ಕಾರ್ಯಕರ್ತರ ಮೇಲೆ ಗೂಂಡಾ ಕಾಯ್ದೆ ಹಾಕಲಾಗಿದೆ. ಗೋ ಕಳ್ಳರ ಮೇಲೂ ಗೂಂಡಾ ಕಾಯ್ದೆ ಹಾಕಿ. ಆಗ ಈ ಗೋಕಳ್ಳತನ, ಅಕ್ರಮ ಕಸಾಯಿಖಾನೆ ಕೃತ್ಯ ಕಡಿಮೆಯಾಗುತ್ತದೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ
ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?