ಮಂಗಳೂರು ವಿದ್ಯಾರ್ಥಿ ನಾಪತ್ತೆ: ಮಂಗಳಮುಖಿಯರ ಜೊತೆ ಹೋದ್ನಾ ದಿಗಂತ? ಸಹೋದರ ಹೇಳಿದ್ದಿಷ್ಟು

ಬಂಟ್ವಾಳ ತಾಲೂಕಿನ ಫರಂಗಿಪೇಟೆಯ ವಿದ್ಯಾರ್ಥಿ ದಿಗಂತ್ ನಾಪತ್ತೆಯಾಗಿದ್ದು, ಪೊಲೀಸರು ವಿವಿಧ ಆಯಾಮಗಳಲ್ಲಿ ಹುಡುಕಾಟ ನಡೆಸುತ್ತಿದ್ದಾರೆ. ದಿಗಂತ ಮಂಗಳಮುಖಿಯರ ಜೊತೆ ಹೋಗಿದ್ದಾನೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹಬ್ಬುತ್ತಿರುವ ವದಂತಿಗಳನ್ನು ಪೊಲೀಸರು ನಿರಾಕರಿಸಿದ್ದಾರೆ. ದಿಗಂತ್‌ನ ಕುಟುಂಬ ಮತ್ತು ಸ್ನೇಹಿತರು ಆತನನ್ನು ತ್ವರಿತವಾಗಿ ಪತ್ತೆಹಚ್ಚುವಂತೆ ಒತ್ತಾಯಿಸಿದ್ದಾರೆ.

ಮಂಗಳೂರು ವಿದ್ಯಾರ್ಥಿ ನಾಪತ್ತೆ: ಮಂಗಳಮುಖಿಯರ ಜೊತೆ ಹೋದ್ನಾ ದಿಗಂತ? ಸಹೋದರ ಹೇಳಿದ್ದಿಷ್ಟು
ವಿದ್ಯಾರ್ಥಿ ದಿಗಂತ
Edited By: ವಿವೇಕ ಬಿರಾದಾರ

Updated on: Mar 08, 2025 | 12:19 PM

ಮಂಗಳೂರು, ಮಾರ್ಚ್​ 09: ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಬಂಟ್ವಾಳ (Bantwala) ತಾಲೂಕಿನ ಫರಂಗಿಪೇಟೆ ಕಿದೆಬೆಟ್ಟು ನಿವಾಸಿ‌, ವಿದ್ಯಾರ್ಥಿ ದಿಗಂತ್ (Diganth) ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಂದತಿಯೊಂದು ಹಬ್ಬಿದೆ. ದಿಗಂತ್​ ಬಂಟ್ವಾಳ ತಾಲೂಕಿನ ಸಜಿಪ ಮೂಲದ ಮಂಗಳಮುಖಿಯ ಜೊತೆ ಹೋಗಿದ್ದಾನೆ ಎಂದು ಸ್ನೇಹಿತರ ಮ‌ೂಲಕ ಗೊತ್ತಾಯಿತು ಎಂದು ದಿಗಂತ್ ಸಹೋದರ ಪವನ್ ಟಿವಿ‌9 ಗೆ ತಿಳಿಸಿದ್ದಾರೆ.

ಟಿವಿ9 ಜೊತೆ ಮಾತನಾಡಿದ ಪವನ್​, ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಸುದ್ದಿ ಹರಡುತ್ತಿದೆ. ಈ ಬಗ್ಗೆ ವಿಶೇಷ ತನಿಖಾ ತಂಡದ ಎಸ್ಐ ಜೊತೆ ಮಾತನಾಡಿದ್ದೇನೆ. ಈ ಬಗ್ಗೆ ಮಾಹಿತಿ ಇದೆಯಾ ಎಂದು ವಿಚಾರಿಸಿದೆ. ಅವರು ನಮಗೆ ಈ ರೀತಿಯ ಮಾಹಿತಿ ಸಿಕ್ಕಿಲ್ಲ ಎಂದು ಹೇಳಿದ್ರು. ಜನ ಆ ರೀತಿ‌ ಹೇಳುತ್ತಿದ್ದಾರೆ ಅಂದ್ರು. ಅದು‌ ಸುಳ್ಳು ‌ಸುದ್ದಿಯಾಗಿರಬಹುದು. ಈವರೆಗೂ ಆತನ ವರ್ತನೆಯಲ್ಲಿ ಈ ರೀತಿಯ ಬದಲಾವಣೆ ಬಗ್ಗೆ ನಮ್ಮ ಗಮನಕ್ಕೆ ಬಂದಿಲ್ಲ ಎಂದು ಪವನ್​ ಹೇಳಿದರು.

ಸ್ನೇಹಿತರ ಜೊತೆ ಮೆಸೇಜ್ ಮಾಡುತ್ತಿದ್ದನು. ತಡರಾತ್ರಿವರೆಗೂ ಮೊಬೈಲ್​ನಲ್ಲಿ ಗೇಮ್ಸ್ ಆಡುತ್ತಿದ್ದನಂತೆ. ಅವನು ಬೇರೆ ಬೇರೆ ಮೊಬೈಲ್​ನ್ನೂ ಉಪಯೋಗಿಸುತ್ತಿದ್ದನು ಎಂದು ಪೊಲೀಸರು ಹೇಳಿದ ಬಳಿಕವಷ್ಟೇ ನನಗೆ (ಪವನ್​) ಗೊತ್ತಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ
ವಿದ್ಯಾರ್ಥಿ ನಿಗೂಢ ನಾಪತ್ತೆ: ಸಿಗದ ಸುಳಿವು, ಪೊಲೀಸರಿಗೆ ಹೈಕೋರ್ಟ್ ಸೂಚನೆ
ಮಂಗಳೂರು: ವಿದ್ಯಾರ್ಥಿ ದಿಗಂತ್​ ನಾಪತ್ತೆ, VHP​​ ಪ್ರತಿಭಟನೆ
ಕೋಟೆಕಾರು ದರೋಡೆ: ಪ್ರಮುಖ ಸೂತ್ರಧಾರ ಭಾಸ್ಕರ್ ಬೆಳ್ಚಪಾಡನ ಹಿನ್ನೆಲೆಯೇ ರೋಚಕ
ಸೈಬರ್ ವಂಚಕರ ಜತೆಗೆ ಅವರ ದುಡ್ಡಲ್ಲೇ ಪ್ರವಾಸ ಮಾಡಿದ ಮಂಗಳೂರು ಪೊಲೀಸರು!

ಫರಂಗಿಪೇಟೆಯಲ್ಲಿ‌ ಸಿಸಿ ಕ್ಯಾಮರಾ ತುಂಬಾ ಕಡಿಮೆಯಿವೆ. ನಾಪತ್ತೆಯಾಗಿ‌ 48 ಗಂಟೆ ಬಳಿಕ ಶ್ವಾನದಳ ಬಂದಿತ್ತು. ಆದರೆ, 6 ಗಂಟೆ ಬಳಿಕ ಶ್ವಾನಕ್ಕೆ ವಾಸನೆ ಗ್ರಹಿಸುವುದು ಸಾಧ್ಯವಾಗಲ್ಲ. ಶ್ವಾನ ಬಂದರೂ ಸಹ ಏನು ಪ್ರಯೋಜನ ಇಲ್ಲದಂತಾಗಿದೆ. 24 ಗಂಟೆ ಒಳಗೆ ಹುಡುಕಾಟ ಆರಂಭಿಸಿದ್ದರೇ ಏನಾದರೂ ಒಳ್ಳೆ ಸುದ್ದಿ ಸಿಗುತ್ತಿತ್ತು. ಹಿಂದೂ ಸಂಘಟನೆಗಳ ಹೋರಾಟಕ್ಕೆ ನಮ್ಮ ಬೆಂಬಲ ಇದೆ. ತನಿಖೆಯಲ್ಲಿ ಯಾವುದೇ ಬೆಳವಣಿಗೆ ಇಲ್ಲದಾಗ ಇನ್ನಷ್ಟು ಒತ್ತಡ ಹಾಕಬೇಕಿದೆ ಎಂದರು.

ಹೇಗಿದೆ ಪೊಲೀಸರ ಹುಡುಕಾಟ?

ದಿಗಂತ್​ಗಾಗಿ ಪೊಲೀಸರು ಕಳೆದ 12 ದಿನಗಳಿಂದ ಹುಡುಕಾಟ ನಡೆಸಿದ್ದಾರೆ. ವಿವಿಧ ಆಯಾಮಗಳಲ್ಲಿ 40 ಕ್ಕೂ ಅಧಿಕ ಪೋಲೀಸರ ತಂಡ ಕಾರ್ಯಾಚರಣೆ ನಡೆಸುತ್ತಿದೆ. ಬಂಟ್ವಾಳ ಸಬ್ ಡಿವಿಜನ್​ನ ಸುಮಾರು 9 ಪೋಲೀಸ್ ಠಾಣೆಯ ಇನ್ಸ್ಪೆಕ್ಟರ್​ಗಳು. ಎಸ್.ಐ.ಗಳು ಹಾಗೂ ಸುಮಾರು 100 ಕ್ಕೂ ಅಧಿಕ ಪೋಲೀಸರ ತಂಡ ಹುಡುಕಾಟದಲ್ಲಿ ನಿರತವಾಗಿದೆ. ಡಿ‌ಎಆರ್ ತಂಡದ 30 ಪೋಲೀಸರು, ರೈಲ್ವೆ ಪೋಲೀಸ್, ಅಗ್ನಿಶಾಮಕ ದಳ, ಎಫ್​.ಎಸ್​.ಎಲ್, ಡಾಗ್ ಸ್ಕ್ವಾಡ್, ಡ್ರೋನ್ ಕ್ಯಾಮೆರಾಗಳನ್ನು ಬಳಿಸಿ ಹುಡುಕಾಟ ನಡೆಸಿದ್ದಾರೆ.

ಮೊದಲಿಗೆ ದಿಗಂತ್ ನಾಪತ್ತೆಯಾಗಿದ್ದ ಘಟನಾ ಸ್ಥಳದ ಸುತ್ತಮುತ್ತಲಿನ ಸುಮಾರು 5 ಕಿ.ಮೀ ವ್ಯಾಪ್ತಿಯಲ್ಲಿ ಹುಡುಕಾಟ ನಡೆಸಲಾಗುತ್ತಿದೆ. ನೇತ್ರಾವತಿ ನದಿ ಭಾಗದ ಸುತ್ತಲಿನ ಭಾಗದಲ್ಲಿ ದೋಣಿ ಬಳಸಿಕೊಂಡು ‌ನದಿಯಲ್ಲೂ ಕೂಡ ಸರ್ಚ್ ಮಾಡಲಾಗುತ್ತಿದೆ.

ಇದನ್ನೂ ಓದಿ: ಮಂಗಳೂರು ಜೈಲಿನಲ್ಲಿ 40ಕ್ಕೂ ಹೆಚ್ಚು ಕೈದಿಗಳಿಗೆ ಫುಡ್ ಪಾಯಿಸನ್: ವಾಂತಿ-ಭೇದಿ, ಓರ್ವನ ಸ್ಥಿತಿ ಗಂಭೀರ

ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್, ಅಡಿಷನಲ್ ಎಸ್​ಪಿ ರಾಜೇಂದ್ರ, ಡಿವೈಎಸ್ ಪಿ. ವಿಜಯಪ್ರಸಾದ್, ಇನ್ಸ್ಪೆಕ್ಟರ್​ಗಳಾದ ಶಿವಕುಮಾರ್, ಅನಂತಪದ್ಮನಾಭ, ನಾಗಾರಾಜ್ ಹೆಚ್, ಎಸ್‌ಐಗಳಾದ ನಂದಕುಮಾರ್, ಪ್ರಸನ್ನ, ಅವಿನಾಶ್, ಹರೀಶ್, ಉದಯರವಿ, ರಾಮಕೃಷ್ಣ, ಕಿಶೋರ್, ಸಮರ್ಥ್, ಅರ್ಜುನ್, ಮುರಳೀಧರ, ಆನಂದ ಮತ್ತು ಕೌಶಿಕ್ ಮತ್ತು ಎಸ್​ಐಗಳು ಸೇರಿಕೊಂಡು 10 ತಂಡವಾಗಿ ಕಾರ್ಯಾಚರಣೆ ನಡೆಸಿವೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Ashok

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸುದ್ದಿಬಿಡುಗಡೆ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಪ್ರಜಾ ಟಿ.ವಿಯ ಉಡುಪಿ ಜಿಲ್ಲಾ ವರದಿಗಾರರಾಗಿ ಒಂದು ವರ್ಷ ಏಳು ತಿಂಗಳು ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ, ಒಂದು ವರ್ಷ ನಾಲ್ಕು ತಿಂಗಳಿನಿಂದ ಟಿ.ವಿ 9 ವಾಹಿನಿಯಲ್ಲಿ ದಕ್ಷಿಣಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ ಇಂಡಿಯಾ ಟೆಲಿವಿಷನ್​ . ಕಾಮ್​ 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More
Follow Us