AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಲಪಾಡಿ ಗ್ರಾ.ಪಂ. ಚುನಾವಣೆ: ಬಿಜೆಪಿ ಬೆಂಬಲಿತ ಸದಸ್ಯರಿಂದ ಎಸ್​ಡಿಪಿಐಗೆ ದಕ್ಕಿದ ಅಧ್ಯಕ್ಷ ಸ್ಥಾನ

ಬಿಜೆಪಿಯ ತತ್ವ ಸಿದ್ಧಾಂತ ಹಾಗೂ ಎಸ್​ಡಿಪಿಐ ತತ್ವ ಸಿದ್ಧಾಂತವೇ ಬೇರೆ. ಆದರೆ ದಕ್ಷಿಣ ಕನ್ನಡ ಜಿಲ್ಲೆಯ ತಲಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸದಸ್ಯರಿಂದಾಗಿ ಅಧ್ಯಕ್ಷ ಸ್ಥಾನ ಎಸ್​ಡಿಪಿಐ ಪಾಲಾಗಿದೆ.

ತಲಪಾಡಿ ಗ್ರಾ.ಪಂ. ಚುನಾವಣೆ: ಬಿಜೆಪಿ ಬೆಂಬಲಿತ ಸದಸ್ಯರಿಂದ ಎಸ್​ಡಿಪಿಐಗೆ ದಕ್ಕಿದ ಅಧ್ಯಕ್ಷ ಸ್ಥಾನ
ಬಿಜೆಪಿ ಬೆಂಬಲಿತ ಸದಸ್ಯರ ಅಡ್ಡ ಮತದಾನದಿಂದ ತಪಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಸ್ಥಾನ ಎಸ್​ಡಿಪಿಐ ಪಾಲು
ಅಶೋಕ್​ ಪೂಜಾರಿ
| Edited By: Rakesh Nayak Manchi|

Updated on: Aug 10, 2023 | 4:37 PM

Share

ಮಂಗಳೂರು, ಆಗಸ್ಟ್ 10: ಬಿಜೆಪಿ ತತ್ವ ಸಿದ್ಧಾಂತ ಮತ್ತು ನಿಷೇಧಿತ ಪಿಎಫ್​ಐ ರಾಜಕೀಯ ಪಕ್ಷ ಎಸ್​ಡಿಪಿಐ (SDPI) ತತ್ವ ಸಿದ್ಧಾಂತವೇ ಬೇರೆ. ಆದರೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಉಳ್ಳಾಲ ತಾಲೂಕಿನ ತಲಪಾಡಿ (Talapady) ಗ್ರಾಮ ಪಂಚಾಯತ್ ಅಧ್ಯಕ್ಷ ಸ್ಥಾನವು ಬಿಜೆಪಿ (BJP) ಬೆಂಬಲಿತ ಸದಸ್ಯರ ಅಡ್ಡಮತದಾನದಿಂದ ಎಸ್​ಡಿಪಿಐ ಪಾಲಾಗಿದೆ.

13 ಬಿಜೆಪಿ ಬೆಂಬಲಿತ ಸದಸ್ಯರು ಹಾಗೂ 10 ಎಸ್​ಡಿಪಿಐ ಬೆಂಬಲಿತ ಸದಸ್ಯರು ಹಾಗೂ ಏಕೈಕ ಕಾಂಗ್ರೆಸ್​ ಬೆಂಬಲಿತ ಅಭ್ಯರ್ಥಿ ಇರುವ ತಲಪಾಡಿ ಗ್ರಾಮ ಪಂಚಾಯತ್​ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಇಂದು ಚುನಾವಣೆ ನಡೆದಿದೆ.

ಇದನ್ನೂ ಓದಿ: ಮಂಗಳೂರಿನ ಹಲವೆಡೆ ಮತ್ತೆ ಕೊಳೆತ ಮೊಟ್ಟೆ ಪೂರೈಕೆ; ಗರ್ಭಿಣಿ, ಮಕ್ಕಳು ಅಸ್ವಸ್ಥ

ಅಧ್ಯಕ್ಷ ಸ್ಥಾನದ ಚುನಾವಣೆ ಮತ ಎಣಿಕೆ ವೇಳೆ ಬಿಜೆಪಿ ಬೆಂಬಲಿತ ಇಬ್ಬರು ಸದಸ್ಯರು ಎಸ್​ಡಿಪಿಐಗೆ ಅಡ್ಡ ಮತದಾನ ಹಾಕಿರುವುದು ತಿಳಿದುಬಂದಿದೆ. ಬಿಜೆಪಿ ಹಾಗೂ ಎಸ್​ಡಿಪಿಐ ಸಮಬಲ ಸಾಧಿಸಿದ ಹಿನ್ನೆಲೆ ಅಧ್ಯಕ್ಷ ಸ್ಥಾನ ಯಾರಿಗೆ ಎಂಬ ಕುತೂಹಲವನ್ನೂ ಕೆರಳಿಸಿತು. ನಂತರ ನಡೆದ ಚೀಟಿ ಎತ್ತುವಿಕೆ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಸ್ಥಾನ ಎಸ್​ಡಿಪಿಐ ಬೆಂಬಲಿತ ಸದಸ್ಯನಿಗೆ ಒಲಿದೆ.

ಅದರಂತೆ, ತಲಪಾಡಿ ಗ್ರಾಮ ಪಂಚಾಯತ್​ನ ಅಧ್ಯಕ್ಷರಾಗಿ ಎಸ್​ಡಿಪಿಐ ಬೆಂಬಲಿತ ಟಿ.ಇಸ್ಮಾಯಿಲ್ ಆಯ್ಕೆಯಾಗಿದ್ದು, ಉಪಾಧ್ಯಕ್ಷರಾಗಿ ಬೆಜೆಪಿ ಬೆಂಬಲಿತ ಪುಷ್ಪಾವತಿ ಶೆಟ್ಟಿ ಆಯ್ಕೆಯಾಗಿದ್ದಾರೆ. ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಏಕೈಕ ಸದಸ್ಯ ಹಾಗೂ ಎಸ್​ಡಿಪಿಐ ಬೆಂಬಲಿತ ಓರ್ವ ಸದಸ್ಯ ಗೈರಾಗಿದ್ದರೂ ಪಂಚಾಯತ್ ಅಧ್ಯಕ್ಷ ಸ್ಥಾನವನ್ನು ಎಸ್​ಡಿಪಿಐ ಗೆದ್ದುಕೊಂಡಿತು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ