AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಲಪಾಡಿ ಗ್ರಾ.ಪಂ. ಚುನಾವಣೆ: ಬಿಜೆಪಿ ಬೆಂಬಲಿತ ಸದಸ್ಯರಿಂದ ಎಸ್​ಡಿಪಿಐಗೆ ದಕ್ಕಿದ ಅಧ್ಯಕ್ಷ ಸ್ಥಾನ

ಬಿಜೆಪಿಯ ತತ್ವ ಸಿದ್ಧಾಂತ ಹಾಗೂ ಎಸ್​ಡಿಪಿಐ ತತ್ವ ಸಿದ್ಧಾಂತವೇ ಬೇರೆ. ಆದರೆ ದಕ್ಷಿಣ ಕನ್ನಡ ಜಿಲ್ಲೆಯ ತಲಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸದಸ್ಯರಿಂದಾಗಿ ಅಧ್ಯಕ್ಷ ಸ್ಥಾನ ಎಸ್​ಡಿಪಿಐ ಪಾಲಾಗಿದೆ.

ತಲಪಾಡಿ ಗ್ರಾ.ಪಂ. ಚುನಾವಣೆ: ಬಿಜೆಪಿ ಬೆಂಬಲಿತ ಸದಸ್ಯರಿಂದ ಎಸ್​ಡಿಪಿಐಗೆ ದಕ್ಕಿದ ಅಧ್ಯಕ್ಷ ಸ್ಥಾನ
ಬಿಜೆಪಿ ಬೆಂಬಲಿತ ಸದಸ್ಯರ ಅಡ್ಡ ಮತದಾನದಿಂದ ತಪಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಸ್ಥಾನ ಎಸ್​ಡಿಪಿಐ ಪಾಲು
ಅಶೋಕ್​ ಪೂಜಾರಿ, ಮಂಗಳೂರು
| Edited By: Rakesh Nayak Manchi|

Updated on: Aug 10, 2023 | 4:37 PM

Share

ಮಂಗಳೂರು, ಆಗಸ್ಟ್ 10: ಬಿಜೆಪಿ ತತ್ವ ಸಿದ್ಧಾಂತ ಮತ್ತು ನಿಷೇಧಿತ ಪಿಎಫ್​ಐ ರಾಜಕೀಯ ಪಕ್ಷ ಎಸ್​ಡಿಪಿಐ (SDPI) ತತ್ವ ಸಿದ್ಧಾಂತವೇ ಬೇರೆ. ಆದರೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಉಳ್ಳಾಲ ತಾಲೂಕಿನ ತಲಪಾಡಿ (Talapady) ಗ್ರಾಮ ಪಂಚಾಯತ್ ಅಧ್ಯಕ್ಷ ಸ್ಥಾನವು ಬಿಜೆಪಿ (BJP) ಬೆಂಬಲಿತ ಸದಸ್ಯರ ಅಡ್ಡಮತದಾನದಿಂದ ಎಸ್​ಡಿಪಿಐ ಪಾಲಾಗಿದೆ.

13 ಬಿಜೆಪಿ ಬೆಂಬಲಿತ ಸದಸ್ಯರು ಹಾಗೂ 10 ಎಸ್​ಡಿಪಿಐ ಬೆಂಬಲಿತ ಸದಸ್ಯರು ಹಾಗೂ ಏಕೈಕ ಕಾಂಗ್ರೆಸ್​ ಬೆಂಬಲಿತ ಅಭ್ಯರ್ಥಿ ಇರುವ ತಲಪಾಡಿ ಗ್ರಾಮ ಪಂಚಾಯತ್​ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಇಂದು ಚುನಾವಣೆ ನಡೆದಿದೆ.

ಇದನ್ನೂ ಓದಿ: ಮಂಗಳೂರಿನ ಹಲವೆಡೆ ಮತ್ತೆ ಕೊಳೆತ ಮೊಟ್ಟೆ ಪೂರೈಕೆ; ಗರ್ಭಿಣಿ, ಮಕ್ಕಳು ಅಸ್ವಸ್ಥ

ಅಧ್ಯಕ್ಷ ಸ್ಥಾನದ ಚುನಾವಣೆ ಮತ ಎಣಿಕೆ ವೇಳೆ ಬಿಜೆಪಿ ಬೆಂಬಲಿತ ಇಬ್ಬರು ಸದಸ್ಯರು ಎಸ್​ಡಿಪಿಐಗೆ ಅಡ್ಡ ಮತದಾನ ಹಾಕಿರುವುದು ತಿಳಿದುಬಂದಿದೆ. ಬಿಜೆಪಿ ಹಾಗೂ ಎಸ್​ಡಿಪಿಐ ಸಮಬಲ ಸಾಧಿಸಿದ ಹಿನ್ನೆಲೆ ಅಧ್ಯಕ್ಷ ಸ್ಥಾನ ಯಾರಿಗೆ ಎಂಬ ಕುತೂಹಲವನ್ನೂ ಕೆರಳಿಸಿತು. ನಂತರ ನಡೆದ ಚೀಟಿ ಎತ್ತುವಿಕೆ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಸ್ಥಾನ ಎಸ್​ಡಿಪಿಐ ಬೆಂಬಲಿತ ಸದಸ್ಯನಿಗೆ ಒಲಿದೆ.

ಅದರಂತೆ, ತಲಪಾಡಿ ಗ್ರಾಮ ಪಂಚಾಯತ್​ನ ಅಧ್ಯಕ್ಷರಾಗಿ ಎಸ್​ಡಿಪಿಐ ಬೆಂಬಲಿತ ಟಿ.ಇಸ್ಮಾಯಿಲ್ ಆಯ್ಕೆಯಾಗಿದ್ದು, ಉಪಾಧ್ಯಕ್ಷರಾಗಿ ಬೆಜೆಪಿ ಬೆಂಬಲಿತ ಪುಷ್ಪಾವತಿ ಶೆಟ್ಟಿ ಆಯ್ಕೆಯಾಗಿದ್ದಾರೆ. ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಏಕೈಕ ಸದಸ್ಯ ಹಾಗೂ ಎಸ್​ಡಿಪಿಐ ಬೆಂಬಲಿತ ಓರ್ವ ಸದಸ್ಯ ಗೈರಾಗಿದ್ದರೂ ಪಂಚಾಯತ್ ಅಧ್ಯಕ್ಷ ಸ್ಥಾನವನ್ನು ಎಸ್​ಡಿಪಿಐ ಗೆದ್ದುಕೊಂಡಿತು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಶೋಕ್​ ಪೂಜಾರಿ, ಮಂಗಳೂರು
ಅಶೋಕ್​ ಪೂಜಾರಿ, ಮಂಗಳೂರು

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸುದ್ದಿಬಿಡುಗಡೆ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಪ್ರಜಾ ಟಿ.ವಿಯ ಉಡುಪಿ ಜಿಲ್ಲಾ ವರದಿಗಾರರಾಗಿ ಒಂದು ವರ್ಷ ಏಳು ತಿಂಗಳು ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ, ಒಂದು ವರ್ಷ ನಾಲ್ಕು ತಿಂಗಳಿನಿಂದ ಟಿ.ವಿ 9 ವಾಹಿನಿಯಲ್ಲಿ ದಕ್ಷಿಣಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ ಇಂಡಿಯಾ ಟೆಲಿವಿಷನ್​ . ಕಾಮ್​ 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More
ನನ್ನ ಮಗ ಕ್ಯಾಪ್ಟನ್: ಶ್ರೇಯಸ್ ಅಯ್ಯರ್ ತಂದೆಯ ಡ್ಯಾನ್ಸ್ ವಿಡಿಯೋ ವೈರಲ್
ನನ್ನ ಮಗ ಕ್ಯಾಪ್ಟನ್: ಶ್ರೇಯಸ್ ಅಯ್ಯರ್ ತಂದೆಯ ಡ್ಯಾನ್ಸ್ ವಿಡಿಯೋ ವೈರಲ್
ಕೊಟ್ಟಿಯೂರು ದೇವಾಲಯದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ: ಭಕ್ತರ ಅಸಮಾಧಾನ
ಕೊಟ್ಟಿಯೂರು ದೇವಾಲಯದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ: ಭಕ್ತರ ಅಸಮಾಧಾನ
ಬೈಲಹೊಂಗಲದಲ್ಲಿ ವರುಣಾರ್ಭಟ: ಅಂಗಡಿಗಳಿಗೆ ಮಳೆನೀರು ನುಗ್ಗಿ ಅಪಾರ ನಷ್ಟ
ಬೈಲಹೊಂಗಲದಲ್ಲಿ ವರುಣಾರ್ಭಟ: ಅಂಗಡಿಗಳಿಗೆ ಮಳೆನೀರು ನುಗ್ಗಿ ಅಪಾರ ನಷ್ಟ
ಡಿಕೆಶಿ ಸಂಪುಟದಲ್ಲಿ ನನಗೇನೂ ಬೇಡ: ರಾಜಣ್ಣ ಖಡಕ್ ಮಾತು
ಡಿಕೆಶಿ ಸಂಪುಟದಲ್ಲಿ ನನಗೇನೂ ಬೇಡ: ರಾಜಣ್ಣ ಖಡಕ್ ಮಾತು
ಸೂರಜ್ ಹೆಗ್ಡೆ ಅಂತಿಮ ದರ್ಶನ ಪಡೆದ ರಾಹುಲ್​​ ಗಾಂಧಿ
ಸೂರಜ್ ಹೆಗ್ಡೆ ಅಂತಿಮ ದರ್ಶನ ಪಡೆದ ರಾಹುಲ್​​ ಗಾಂಧಿ
ಮುಗಿಯದ ಖಾತೆ ಕ್ಯಾತೆ: ದೆಹಲಿಗೆ ತೆರಳಿದ ಸಚಿವ ಕೃಷ್ಣ ಭೈರೇಗೌಡ
ಮುಗಿಯದ ಖಾತೆ ಕ್ಯಾತೆ: ದೆಹಲಿಗೆ ತೆರಳಿದ ಸಚಿವ ಕೃಷ್ಣ ಭೈರೇಗೌಡ
ಲ್ಯಾಡಲ್ ಸ್ಫೋಟ: 25 ಲಕ್ಷ ರೂ. ಪರಿಹಾರ ಘೋಷಿಸಿದ ಹೆಚ್​ಡಿ ಕುಮಾರಸ್ವಾಮಿ
ಲ್ಯಾಡಲ್ ಸ್ಫೋಟ: 25 ಲಕ್ಷ ರೂ. ಪರಿಹಾರ ಘೋಷಿಸಿದ ಹೆಚ್​ಡಿ ಕುಮಾರಸ್ವಾಮಿ
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು