AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಲಪಾಡಿ ಗ್ರಾ.ಪಂ. ಚುನಾವಣೆ: ಬಿಜೆಪಿ ಬೆಂಬಲಿತ ಸದಸ್ಯರಿಂದ ಎಸ್​ಡಿಪಿಐಗೆ ದಕ್ಕಿದ ಅಧ್ಯಕ್ಷ ಸ್ಥಾನ

ಬಿಜೆಪಿಯ ತತ್ವ ಸಿದ್ಧಾಂತ ಹಾಗೂ ಎಸ್​ಡಿಪಿಐ ತತ್ವ ಸಿದ್ಧಾಂತವೇ ಬೇರೆ. ಆದರೆ ದಕ್ಷಿಣ ಕನ್ನಡ ಜಿಲ್ಲೆಯ ತಲಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸದಸ್ಯರಿಂದಾಗಿ ಅಧ್ಯಕ್ಷ ಸ್ಥಾನ ಎಸ್​ಡಿಪಿಐ ಪಾಲಾಗಿದೆ.

ತಲಪಾಡಿ ಗ್ರಾ.ಪಂ. ಚುನಾವಣೆ: ಬಿಜೆಪಿ ಬೆಂಬಲಿತ ಸದಸ್ಯರಿಂದ ಎಸ್​ಡಿಪಿಐಗೆ ದಕ್ಕಿದ ಅಧ್ಯಕ್ಷ ಸ್ಥಾನ
ಬಿಜೆಪಿ ಬೆಂಬಲಿತ ಸದಸ್ಯರ ಅಡ್ಡ ಮತದಾನದಿಂದ ತಪಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಸ್ಥಾನ ಎಸ್​ಡಿಪಿಐ ಪಾಲು
ಅಶೋಕ್​ ಪೂಜಾರಿ
| Edited By: Rakesh Nayak Manchi|

Updated on: Aug 10, 2023 | 4:37 PM

Share

ಮಂಗಳೂರು, ಆಗಸ್ಟ್ 10: ಬಿಜೆಪಿ ತತ್ವ ಸಿದ್ಧಾಂತ ಮತ್ತು ನಿಷೇಧಿತ ಪಿಎಫ್​ಐ ರಾಜಕೀಯ ಪಕ್ಷ ಎಸ್​ಡಿಪಿಐ (SDPI) ತತ್ವ ಸಿದ್ಧಾಂತವೇ ಬೇರೆ. ಆದರೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಉಳ್ಳಾಲ ತಾಲೂಕಿನ ತಲಪಾಡಿ (Talapady) ಗ್ರಾಮ ಪಂಚಾಯತ್ ಅಧ್ಯಕ್ಷ ಸ್ಥಾನವು ಬಿಜೆಪಿ (BJP) ಬೆಂಬಲಿತ ಸದಸ್ಯರ ಅಡ್ಡಮತದಾನದಿಂದ ಎಸ್​ಡಿಪಿಐ ಪಾಲಾಗಿದೆ.

13 ಬಿಜೆಪಿ ಬೆಂಬಲಿತ ಸದಸ್ಯರು ಹಾಗೂ 10 ಎಸ್​ಡಿಪಿಐ ಬೆಂಬಲಿತ ಸದಸ್ಯರು ಹಾಗೂ ಏಕೈಕ ಕಾಂಗ್ರೆಸ್​ ಬೆಂಬಲಿತ ಅಭ್ಯರ್ಥಿ ಇರುವ ತಲಪಾಡಿ ಗ್ರಾಮ ಪಂಚಾಯತ್​ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಇಂದು ಚುನಾವಣೆ ನಡೆದಿದೆ.

ಇದನ್ನೂ ಓದಿ: ಮಂಗಳೂರಿನ ಹಲವೆಡೆ ಮತ್ತೆ ಕೊಳೆತ ಮೊಟ್ಟೆ ಪೂರೈಕೆ; ಗರ್ಭಿಣಿ, ಮಕ್ಕಳು ಅಸ್ವಸ್ಥ

ಅಧ್ಯಕ್ಷ ಸ್ಥಾನದ ಚುನಾವಣೆ ಮತ ಎಣಿಕೆ ವೇಳೆ ಬಿಜೆಪಿ ಬೆಂಬಲಿತ ಇಬ್ಬರು ಸದಸ್ಯರು ಎಸ್​ಡಿಪಿಐಗೆ ಅಡ್ಡ ಮತದಾನ ಹಾಕಿರುವುದು ತಿಳಿದುಬಂದಿದೆ. ಬಿಜೆಪಿ ಹಾಗೂ ಎಸ್​ಡಿಪಿಐ ಸಮಬಲ ಸಾಧಿಸಿದ ಹಿನ್ನೆಲೆ ಅಧ್ಯಕ್ಷ ಸ್ಥಾನ ಯಾರಿಗೆ ಎಂಬ ಕುತೂಹಲವನ್ನೂ ಕೆರಳಿಸಿತು. ನಂತರ ನಡೆದ ಚೀಟಿ ಎತ್ತುವಿಕೆ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಸ್ಥಾನ ಎಸ್​ಡಿಪಿಐ ಬೆಂಬಲಿತ ಸದಸ್ಯನಿಗೆ ಒಲಿದೆ.

ಅದರಂತೆ, ತಲಪಾಡಿ ಗ್ರಾಮ ಪಂಚಾಯತ್​ನ ಅಧ್ಯಕ್ಷರಾಗಿ ಎಸ್​ಡಿಪಿಐ ಬೆಂಬಲಿತ ಟಿ.ಇಸ್ಮಾಯಿಲ್ ಆಯ್ಕೆಯಾಗಿದ್ದು, ಉಪಾಧ್ಯಕ್ಷರಾಗಿ ಬೆಜೆಪಿ ಬೆಂಬಲಿತ ಪುಷ್ಪಾವತಿ ಶೆಟ್ಟಿ ಆಯ್ಕೆಯಾಗಿದ್ದಾರೆ. ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಏಕೈಕ ಸದಸ್ಯ ಹಾಗೂ ಎಸ್​ಡಿಪಿಐ ಬೆಂಬಲಿತ ಓರ್ವ ಸದಸ್ಯ ಗೈರಾಗಿದ್ದರೂ ಪಂಚಾಯತ್ ಅಧ್ಯಕ್ಷ ಸ್ಥಾನವನ್ನು ಎಸ್​ಡಿಪಿಐ ಗೆದ್ದುಕೊಂಡಿತು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೃಷ್ಣಾ ನದಿಗೆ ಹರಿದುಬಂತು 60,000 ಕ್ಯೂಸೆಕ್ ನೀರು
ಕೃಷ್ಣಾ ನದಿಗೆ ಹರಿದುಬಂತು 60,000 ಕ್ಯೂಸೆಕ್ ನೀರು
ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ
ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ