AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಲಪಾಡಿ ಗ್ರಾ.ಪಂ. ಚುನಾವಣೆ: ಬಿಜೆಪಿ ಬೆಂಬಲಿತ ಸದಸ್ಯರಿಂದ ಎಸ್​ಡಿಪಿಐಗೆ ದಕ್ಕಿದ ಅಧ್ಯಕ್ಷ ಸ್ಥಾನ

ಬಿಜೆಪಿಯ ತತ್ವ ಸಿದ್ಧಾಂತ ಹಾಗೂ ಎಸ್​ಡಿಪಿಐ ತತ್ವ ಸಿದ್ಧಾಂತವೇ ಬೇರೆ. ಆದರೆ ದಕ್ಷಿಣ ಕನ್ನಡ ಜಿಲ್ಲೆಯ ತಲಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸದಸ್ಯರಿಂದಾಗಿ ಅಧ್ಯಕ್ಷ ಸ್ಥಾನ ಎಸ್​ಡಿಪಿಐ ಪಾಲಾಗಿದೆ.

ತಲಪಾಡಿ ಗ್ರಾ.ಪಂ. ಚುನಾವಣೆ: ಬಿಜೆಪಿ ಬೆಂಬಲಿತ ಸದಸ್ಯರಿಂದ ಎಸ್​ಡಿಪಿಐಗೆ ದಕ್ಕಿದ ಅಧ್ಯಕ್ಷ ಸ್ಥಾನ
ಬಿಜೆಪಿ ಬೆಂಬಲಿತ ಸದಸ್ಯರ ಅಡ್ಡ ಮತದಾನದಿಂದ ತಪಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಸ್ಥಾನ ಎಸ್​ಡಿಪಿಐ ಪಾಲು
ಅಶೋಕ್​ ಪೂಜಾರಿ, ಮಂಗಳೂರು
| Edited By: |

Updated on: Aug 10, 2023 | 4:37 PM

Share

ಮಂಗಳೂರು, ಆಗಸ್ಟ್ 10: ಬಿಜೆಪಿ ತತ್ವ ಸಿದ್ಧಾಂತ ಮತ್ತು ನಿಷೇಧಿತ ಪಿಎಫ್​ಐ ರಾಜಕೀಯ ಪಕ್ಷ ಎಸ್​ಡಿಪಿಐ (SDPI) ತತ್ವ ಸಿದ್ಧಾಂತವೇ ಬೇರೆ. ಆದರೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಉಳ್ಳಾಲ ತಾಲೂಕಿನ ತಲಪಾಡಿ (Talapady) ಗ್ರಾಮ ಪಂಚಾಯತ್ ಅಧ್ಯಕ್ಷ ಸ್ಥಾನವು ಬಿಜೆಪಿ (BJP) ಬೆಂಬಲಿತ ಸದಸ್ಯರ ಅಡ್ಡಮತದಾನದಿಂದ ಎಸ್​ಡಿಪಿಐ ಪಾಲಾಗಿದೆ.

13 ಬಿಜೆಪಿ ಬೆಂಬಲಿತ ಸದಸ್ಯರು ಹಾಗೂ 10 ಎಸ್​ಡಿಪಿಐ ಬೆಂಬಲಿತ ಸದಸ್ಯರು ಹಾಗೂ ಏಕೈಕ ಕಾಂಗ್ರೆಸ್​ ಬೆಂಬಲಿತ ಅಭ್ಯರ್ಥಿ ಇರುವ ತಲಪಾಡಿ ಗ್ರಾಮ ಪಂಚಾಯತ್​ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಇಂದು ಚುನಾವಣೆ ನಡೆದಿದೆ.

ಇದನ್ನೂ ಓದಿ: ಮಂಗಳೂರಿನ ಹಲವೆಡೆ ಮತ್ತೆ ಕೊಳೆತ ಮೊಟ್ಟೆ ಪೂರೈಕೆ; ಗರ್ಭಿಣಿ, ಮಕ್ಕಳು ಅಸ್ವಸ್ಥ

ಅಧ್ಯಕ್ಷ ಸ್ಥಾನದ ಚುನಾವಣೆ ಮತ ಎಣಿಕೆ ವೇಳೆ ಬಿಜೆಪಿ ಬೆಂಬಲಿತ ಇಬ್ಬರು ಸದಸ್ಯರು ಎಸ್​ಡಿಪಿಐಗೆ ಅಡ್ಡ ಮತದಾನ ಹಾಕಿರುವುದು ತಿಳಿದುಬಂದಿದೆ. ಬಿಜೆಪಿ ಹಾಗೂ ಎಸ್​ಡಿಪಿಐ ಸಮಬಲ ಸಾಧಿಸಿದ ಹಿನ್ನೆಲೆ ಅಧ್ಯಕ್ಷ ಸ್ಥಾನ ಯಾರಿಗೆ ಎಂಬ ಕುತೂಹಲವನ್ನೂ ಕೆರಳಿಸಿತು. ನಂತರ ನಡೆದ ಚೀಟಿ ಎತ್ತುವಿಕೆ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಸ್ಥಾನ ಎಸ್​ಡಿಪಿಐ ಬೆಂಬಲಿತ ಸದಸ್ಯನಿಗೆ ಒಲಿದೆ.

ಅದರಂತೆ, ತಲಪಾಡಿ ಗ್ರಾಮ ಪಂಚಾಯತ್​ನ ಅಧ್ಯಕ್ಷರಾಗಿ ಎಸ್​ಡಿಪಿಐ ಬೆಂಬಲಿತ ಟಿ.ಇಸ್ಮಾಯಿಲ್ ಆಯ್ಕೆಯಾಗಿದ್ದು, ಉಪಾಧ್ಯಕ್ಷರಾಗಿ ಬೆಜೆಪಿ ಬೆಂಬಲಿತ ಪುಷ್ಪಾವತಿ ಶೆಟ್ಟಿ ಆಯ್ಕೆಯಾಗಿದ್ದಾರೆ. ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಏಕೈಕ ಸದಸ್ಯ ಹಾಗೂ ಎಸ್​ಡಿಪಿಐ ಬೆಂಬಲಿತ ಓರ್ವ ಸದಸ್ಯ ಗೈರಾಗಿದ್ದರೂ ಪಂಚಾಯತ್ ಅಧ್ಯಕ್ಷ ಸ್ಥಾನವನ್ನು ಎಸ್​ಡಿಪಿಐ ಗೆದ್ದುಕೊಂಡಿತು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?