AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಲಪಾಡಿ ಗ್ರಾ.ಪಂ. ಚುನಾವಣೆ: ಬಿಜೆಪಿ ಬೆಂಬಲಿತ ಸದಸ್ಯರಿಂದ ಎಸ್​ಡಿಪಿಐಗೆ ದಕ್ಕಿದ ಅಧ್ಯಕ್ಷ ಸ್ಥಾನ

ಬಿಜೆಪಿಯ ತತ್ವ ಸಿದ್ಧಾಂತ ಹಾಗೂ ಎಸ್​ಡಿಪಿಐ ತತ್ವ ಸಿದ್ಧಾಂತವೇ ಬೇರೆ. ಆದರೆ ದಕ್ಷಿಣ ಕನ್ನಡ ಜಿಲ್ಲೆಯ ತಲಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸದಸ್ಯರಿಂದಾಗಿ ಅಧ್ಯಕ್ಷ ಸ್ಥಾನ ಎಸ್​ಡಿಪಿಐ ಪಾಲಾಗಿದೆ.

ತಲಪಾಡಿ ಗ್ರಾ.ಪಂ. ಚುನಾವಣೆ: ಬಿಜೆಪಿ ಬೆಂಬಲಿತ ಸದಸ್ಯರಿಂದ ಎಸ್​ಡಿಪಿಐಗೆ ದಕ್ಕಿದ ಅಧ್ಯಕ್ಷ ಸ್ಥಾನ
ಬಿಜೆಪಿ ಬೆಂಬಲಿತ ಸದಸ್ಯರ ಅಡ್ಡ ಮತದಾನದಿಂದ ತಪಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಸ್ಥಾನ ಎಸ್​ಡಿಪಿಐ ಪಾಲು
Follow us
ಅಶೋಕ್​ ಪೂಜಾರಿ, ಮಂಗಳೂರು
| Updated By: Rakesh Nayak Manchi

Updated on: Aug 10, 2023 | 4:37 PM

ಮಂಗಳೂರು, ಆಗಸ್ಟ್ 10: ಬಿಜೆಪಿ ತತ್ವ ಸಿದ್ಧಾಂತ ಮತ್ತು ನಿಷೇಧಿತ ಪಿಎಫ್​ಐ ರಾಜಕೀಯ ಪಕ್ಷ ಎಸ್​ಡಿಪಿಐ (SDPI) ತತ್ವ ಸಿದ್ಧಾಂತವೇ ಬೇರೆ. ಆದರೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಉಳ್ಳಾಲ ತಾಲೂಕಿನ ತಲಪಾಡಿ (Talapady) ಗ್ರಾಮ ಪಂಚಾಯತ್ ಅಧ್ಯಕ್ಷ ಸ್ಥಾನವು ಬಿಜೆಪಿ (BJP) ಬೆಂಬಲಿತ ಸದಸ್ಯರ ಅಡ್ಡಮತದಾನದಿಂದ ಎಸ್​ಡಿಪಿಐ ಪಾಲಾಗಿದೆ.

13 ಬಿಜೆಪಿ ಬೆಂಬಲಿತ ಸದಸ್ಯರು ಹಾಗೂ 10 ಎಸ್​ಡಿಪಿಐ ಬೆಂಬಲಿತ ಸದಸ್ಯರು ಹಾಗೂ ಏಕೈಕ ಕಾಂಗ್ರೆಸ್​ ಬೆಂಬಲಿತ ಅಭ್ಯರ್ಥಿ ಇರುವ ತಲಪಾಡಿ ಗ್ರಾಮ ಪಂಚಾಯತ್​ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಇಂದು ಚುನಾವಣೆ ನಡೆದಿದೆ.

ಇದನ್ನೂ ಓದಿ: ಮಂಗಳೂರಿನ ಹಲವೆಡೆ ಮತ್ತೆ ಕೊಳೆತ ಮೊಟ್ಟೆ ಪೂರೈಕೆ; ಗರ್ಭಿಣಿ, ಮಕ್ಕಳು ಅಸ್ವಸ್ಥ

ಅಧ್ಯಕ್ಷ ಸ್ಥಾನದ ಚುನಾವಣೆ ಮತ ಎಣಿಕೆ ವೇಳೆ ಬಿಜೆಪಿ ಬೆಂಬಲಿತ ಇಬ್ಬರು ಸದಸ್ಯರು ಎಸ್​ಡಿಪಿಐಗೆ ಅಡ್ಡ ಮತದಾನ ಹಾಕಿರುವುದು ತಿಳಿದುಬಂದಿದೆ. ಬಿಜೆಪಿ ಹಾಗೂ ಎಸ್​ಡಿಪಿಐ ಸಮಬಲ ಸಾಧಿಸಿದ ಹಿನ್ನೆಲೆ ಅಧ್ಯಕ್ಷ ಸ್ಥಾನ ಯಾರಿಗೆ ಎಂಬ ಕುತೂಹಲವನ್ನೂ ಕೆರಳಿಸಿತು. ನಂತರ ನಡೆದ ಚೀಟಿ ಎತ್ತುವಿಕೆ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಸ್ಥಾನ ಎಸ್​ಡಿಪಿಐ ಬೆಂಬಲಿತ ಸದಸ್ಯನಿಗೆ ಒಲಿದೆ.

ಅದರಂತೆ, ತಲಪಾಡಿ ಗ್ರಾಮ ಪಂಚಾಯತ್​ನ ಅಧ್ಯಕ್ಷರಾಗಿ ಎಸ್​ಡಿಪಿಐ ಬೆಂಬಲಿತ ಟಿ.ಇಸ್ಮಾಯಿಲ್ ಆಯ್ಕೆಯಾಗಿದ್ದು, ಉಪಾಧ್ಯಕ್ಷರಾಗಿ ಬೆಜೆಪಿ ಬೆಂಬಲಿತ ಪುಷ್ಪಾವತಿ ಶೆಟ್ಟಿ ಆಯ್ಕೆಯಾಗಿದ್ದಾರೆ. ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಏಕೈಕ ಸದಸ್ಯ ಹಾಗೂ ಎಸ್​ಡಿಪಿಐ ಬೆಂಬಲಿತ ಓರ್ವ ಸದಸ್ಯ ಗೈರಾಗಿದ್ದರೂ ಪಂಚಾಯತ್ ಅಧ್ಯಕ್ಷ ಸ್ಥಾನವನ್ನು ಎಸ್​ಡಿಪಿಐ ಗೆದ್ದುಕೊಂಡಿತು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ರಿಹ್ಯಾಬ್ ಸೆಂಟರ್​ಗಳ ಮೇಲೆ ಮಾನವ ಹಕ್ಕುಗಳ ಆಯೋಗ ದಾಳಿ
ರಿಹ್ಯಾಬ್ ಸೆಂಟರ್​ಗಳ ಮೇಲೆ ಮಾನವ ಹಕ್ಕುಗಳ ಆಯೋಗ ದಾಳಿ
ಮರದ ಕೊಂಬೆ ಬಿದ್ದು ಅಕ್ಷಯ್​ ಬ್ರೈನ್ ಡೆಡ್:ಮೊಮ್ಮಗನಿಗಾಗಿ ಅಜ್ಜ-ಅಜ್ಜಿ ಪೂಜೆ
ಮರದ ಕೊಂಬೆ ಬಿದ್ದು ಅಕ್ಷಯ್​ ಬ್ರೈನ್ ಡೆಡ್:ಮೊಮ್ಮಗನಿಗಾಗಿ ಅಜ್ಜ-ಅಜ್ಜಿ ಪೂಜೆ