AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿಗರ ಬಹುವರ್ಷಗಳ ಬೇಡಿಕೆ ಶೀಘ್ರ ಈಡೇರಿಕೆ: ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್

ಮಂಗಳೂರು-ತಣ್ಣೀರುಬಾವಿ ಸೇತುವೆ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಆಗಸ್ಟ್ ಅಥವಾ ಸೆಪ್ಟೆಂಬರ್‌ನಲ್ಲಿ ಲೋಕಾರ್ಪಣೆ ಮಾಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಈ ಸೇತುವೆಯಿಂದಾಗಿ ಸುತ್ತಿ ಬಳಸಿ ಓಡಾಟಕ್ಕೆ ಬ್ರೇಕ್ ಬೀಳಲಿದೆ. ಹಾಗಾದರೆ ಈ ಸೇತುವೆಯ ವಿಶೇಷತೆ ಏನು, ವೆಚ್ಚ ಎಷ್ಟು ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಮಂಗಳೂರಿಗರ ಬಹುವರ್ಷಗಳ ಬೇಡಿಕೆ ಶೀಘ್ರ ಈಡೇರಿಕೆ: ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್
ಮಂಗಳೂರು-ತಣ್ಣೀರುಬಾವಿ ಬ್ರಿಡ್ಜ್Image Credit source: tv9 kannada
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on:May 08, 2026 | 7:25 PM

Share

ಮಂಗಳೂರು, ಮೇ 08: ಮಂಗಳೂರು-ತಣ್ಣೀರುಬಾವಿ ಬ್ರಿಡ್ಜ್​​ (Mangaluru Tannirbhavi Bridge) ಮಂಗಳೂರಿನ ಬಹುವರ್ಷದ ಬೇಡಿಕೆ. ಸದ್ಯ ಬ್ರಿಡ್ಜ್ ಕಾಮಗಾರಿ ಅಂತಿಮ ಹಂತಕ್ಕೆ ತಲುಪಿದ್ದು, ಆಗಸ್ಟ್ ಅಥವಾ ಸೆಪ್ಟೆಂಬರ್​​ನಲ್ಲಿ ಲೋಕಾರ್ಪಣೆ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ತಿಳಿಸಿದ್ದಾರೆ. ಆ ಮೂಲಕ ತಣ್ಣೀರುಬಾವಿ ಬೀಚ್‌ಗೆ ತೆರಳಲು ದಶಕಗಳಿಂದ ಇದ್ದ ಸಂಚಾರ ಸಂಕಷ್ಟಕ್ಕೆ ಶೀಘ್ರದಲ್ಲೇ ಪರಿಹಾರ ಸಿಗಲಿದೆ.

  • 64 ಕೋಟಿ ರೂ ವೆಚ್ಚದಲ್ಲಿ 285 ಮೀಟರ್ ಉದ್ದದ ಸೇತುವೆ ನಿರ್ಮಾಣ
  • 30-35 ನಿಮಿಷ ಬೇಕಾಗುವ ಪ್ರಯಾಣದ ಸಮಯ ಈ ಸೇತುವೆ ಮೂಲಕ ಕೇವಲ 10 ನಿಮಿಷಕ್ಕೆ ಕಡಿತ
  • ಆಗಸ್ಟ್ ಅಥವಾ ಸೆಪ್ಟೆಂಬರ್​​ನಲ್ಲಿ ಲೋಕಾರ್ಪಣೆ ಸಾಧ್ಯತೆ

ತಣ್ಣೀರುಬಾವಿ ಬೀಚ್‌ ಮಂಗಳೂರು ಸಿಟಿಗೆ ಹೊಂದಿಕೊಂಡಿರುವ ಬೀಚ್. ಮಂಗಳೂರು ಸಿಟಿಯ ಒಂದು ತುದಿಯಿಂದ ಸುಮಾರು ಒಂದೂವರೆ ಕಿ.ಮೀ ದೂರದಲ್ಲಿರುವ ಈ ಬೀಚ್​​ಗೆ ವಾಹನದಲ್ಲಿ ಹೋಗಬೇಕು ಅಂದರೆ 15 ರಿಂದ 20 ಕಿ.ಮೀ ಸುತ್ತಿಕೊಂಡು ಹೋಗಬೇಕಿತ್ತು. ಆದರೆ ಫೆರಿಯಲ್ಲಿ ಹೋಗೋದಾದರೆ ಕೆಲವೇ ಮೀಟರ್ ಕ್ರಮಿಸಿದರೆ ಸಾಕಿತ್ತು.

ಇದನ್ನೂ ಓದಿ: ಸಮುದ್ರ ಇದ್ರೂ ಮಂಗಳೂರಿನಲ್ಲಿ ನೀರಿಗೆ ಬರ: ವಾಹನಗಳನ್ನ ತೊಳೆಯದಂತೆ ಸೂಚನೆ

ಇನ್ನು ತಣ್ಣೀರುಬಾವಿ ಸುತ್ತಾಮುತ್ತಾ 4 ಸಾವಿರಕ್ಕೂ ಹೆಚ್ಚು ಕುಟುಂಬಗಳು ವಾಸವಿದ್ದು, ಅವರು ಮಂಗಳೂರಿಗೆ ಬರಬೇಕು ಅಂದರೆ ಫೆರಿಯಲ್ಲಿ ಬರಬೇಕಿತ್ತು. ರಸ್ತೆ ಮೂಲಕ ಬರಬೇಕು ಅಂದರೆ ಮತ್ತೆದೇ 15 ಕಿ.ಮೀ ಸುತ್ತಾಟ. ಆದ್ದರಿಂದ ಮೆಡಿಕಲ್ ಎಮರ್ಜೆನ್ಸಿ ಸೇರಿದಂತೆ ವಿವಿಧ ರೀತಿಯಲ್ಲಿ ಜನರಿಗೆ ತೊಂದರೆ ಆಗುತ್ತಿತ್ತು. ಆದರೆ ಇದೀಗ ಫಲ್ಗುಣಿ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಾಣ ಮಾಡುತ್ತಿರುವುದರಿಂದ ಇದಕ್ಕೆ ಮುಕ್ತಿ ಸಿಗಲಿದೆ.

ವೆಚ್ಚ ಮತ್ತು ವಿನ್ಯಾಸ

64 ಕೋಟಿ ರೂ ವೆಚ್ಚದಲ್ಲಿ ಒಟ್ಟು 285 ಮೀಟರ್ ಸೇತುವೆ ಇದಾಗಿದ್ದು, 100 ಮೀಟರ್ ಬೋ-ಸ್ಟ್ರಿಂಗ್ ಸೇತುವೆ ನಿರ್ಮಾಣ ಮಾಡುಲಾಗುತ್ತಿದೆ. ಆ ಮೂಲಕ 30 ರಿಂದ 35 ನಿಮಿಷ ಸಾಗುವ ದಾರಿಯನ್ನು 8 ರಿಂದ 10 ನಿಮಿಷಕ್ಕೆ ಇಳಿಸುವಲ್ಲಿ ಈ ಸೇತುವೆ ಉಪಯೋಗಕಾರಿಯಾಗಿದೆ. ಈ ಸೇತುವೆ ಎಲ್ಲಾ ಮಾದರಿಯ ವಾಹನಗಳು ಸಂಚಾರ ಮಾಡುವ ಸಾಮರ್ಥ್ಯ ಹೊಂದಿದೆ. ಈ ಬ್ರಿಡ್ಜ್ ಆಗಸ್ಟ್ ಅಥವಾ ಸೆಪ್ಟೆಂಬರ್​ನಲ್ಲಿ ಲೋಕಾರ್ಪಣೆ ಮಾಡಲಾಗುವುದು ಎಂದು ಸಚಿವ ದಿನೇಶ್ ಗುಂಡೂರಾವ್ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ದೇಶದಲ್ಲೇ ಮೊದಲ ಬಾರಿಗೆ ‘ಧಾರ್ಮಿಕ ತ್ಯಾಜ್ಯ ವಿಲೇವಾರಿ’ ಅಭಿಯಾನಕ್ಕೆ ಸಾಕ್ಷಿಯಾದ ಮಂಗಳೂರು

ಇನ್ನೇನು ಮಳೆಗಾಲ ಆರಂಭವಾಗುತ್ತಿದೆ. ಹೀಗಾಗಿ ಕಾಮಗಾರಿ ಅದೆಷ್ಟು ವೇಗವಾಗಿ ಸಾಗುತ್ತದೆ ಎನ್ನುವುದು ಮುಂದಿರುವ ಪ್ರಶ್ನೆ. ಇನ್ನು ಸಚಿವರು ಲೋಕಾರ್ಪಣೆ ತಿಂಗಳು ಫಿಕ್ಸ್ ಮಾಡಿ ಹೋಗಿದ್ದಾರೆ. ಅಧಿಕಾರಿಗಳು ಮತ್ತು ಗುತ್ತಿಗೆದಾರರು ಅದಕ್ಕೆ ಬದ್ಧರಾಗಿರುತ್ತಾರಾ ಕಾದುನೋಡಬೇಕಿದೆ.

ಕರ್ನಾಟಕದ ಮತ್ತಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:23 pm, Fri, 8 May 26

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್