AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಂಗಣ್ಣು ಕಾಯಿಲೆಗೆ ಹೈರಾಣಾದ ಕಡಲನಗರಿ ಮಂಗಳೂರು: ಕಣ್ಣಿನ ಆಸ್ಪತ್ತೆಯಲ್ಲಿ ಹೆಚ್ಚಾಗುತ್ತಿದೆ ರೋಗಿಗಳ ಸಂಖ್ಯೆ

ಕಡಲನಗರಿ ಮಂಗಳೂರಿನಲ್ಲಿ ಕೆಂಗಣ್ಣು ಕಾಯಿಲೆಯ ಹಾವಳಿಯು ಜಾಸ್ತಿಯಾಗಿದೆ. ಒಬ್ಬರಿಂದ ಒಬ್ಬರಿಗೆ ಬಹಳ ವೇಗವಾಗಿ ಹರಡುವ ಈ ರೋಗದಿಂದ ಜನ ಗಾಬರಿಯಾಗಿದ್ದಾರೆ.

ಕೆಂಗಣ್ಣು ಕಾಯಿಲೆಗೆ ಹೈರಾಣಾದ ಕಡಲನಗರಿ ಮಂಗಳೂರು: ಕಣ್ಣಿನ ಆಸ್ಪತ್ತೆಯಲ್ಲಿ ಹೆಚ್ಚಾಗುತ್ತಿದೆ ರೋಗಿಗಳ ಸಂಖ್ಯೆ
ಕೆಂಗಣ್ಣು ಕಾಯಿಲೆ
TV9 Web
| Edited By: |

Updated on: Nov 15, 2022 | 3:27 PM

Share

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಕೆಂಗಣ್ಣು ಕಾಯಿಲೆ ಸಮಸ್ಯೆ ಜನರನ್ನು ಹೈರಾಣಾಗಿಸಿದೆ. ದಿನದಿಂದ ದಿನಕ್ಕೆ ರೋಗಿಗಳ ಸಂಖ್ಯೆಯೂ ಜಾಸ್ತಿಯಾಗುತ್ತಿದೆ. ಮಂಗಳೂರು ನಗರ ಹೊರವಲಯದ ಬಜಪೆ, ಎಕ್ಕಾರು ಮತ್ತು ಬಂಟ್ವಾಳ, ಬೆಳ್ತಂಗಡಿ ತಾಲೂಕಿನಲ್ಲಿ ಹೆಚ್ಚಿನ ಜನ ಈ ಕಾಯಿಲೆಗೆ ತುತ್ತಾಗುತ್ತಿದ್ದಾರೆ. ಇಡೀ ಊರಿನಲ್ಲಿ ಕಪ್ಪು ಕನ್ನಡಕ ಧರಿಸಿ ಓಡಾಡುತ್ತಿರುವವರ ಸಂಖ್ಯೆ ಏರುತ್ತಿದೆ. ಇನ್ನು ಈ ರೋಗಿಗಳಲ್ಲಿ ಹೆಚ್ಚಾಗಿ ವಿದ್ಯಾರ್ಥಿಗಳು ಮತ್ತು ವ್ಯಾಪಾರಿಗಳು ಹೆಚ್ಚಾಗಿದ್ದಾರೆ. ಇವರ ಮೂಲಕ ಈ ವೈರಸ್ ಇತರರಿಗೆ ವೇಗವಾಗಿ ಹರಡುತ್ತಿದೆ. ಹೀಗಾಗಿ ಒಂದು ದಿನದಲ್ಲಿ 100ಕ್ಕಿಂತ ಹೆಚ್ಚು ಜನ ಈ ಕೆಂಗಣ್ಣು ಕಾಯಿಲಿಗೆ ತುತ್ತಾಗಿದ್ದಾರೆ.

ಕಾಯಿಲೆ ಕುರಿತು ವಿವರಿಸಿದ ಜಿಲ್ಲಾ ಆರೋಗ್ಯಧಿಕಾರಿ ಡಾ.ಕಿಶೋರ್ ಕುಮಾರ್, ಇದನ್ನು ಮದ್ರಾಸ್ ಐ ಎಂದು ಕರೆಯುತ್ತೇವೆ. ಈ ರೋಗವು ವೈರಾಣು ಅಥವಾ ಬ್ಯಾಕ್ಟೀರಿಯಾಗಳಿಂದ ಬರುವಂತದ್ದು, ಇದು ಸುಲಭವಾಗಿ ಒಬ್ಬರಿಂದ ಒಬ್ಬರಿಗೆ ಹರಡುವ ಸೋಂಕು ರೋಗವಾಗಿದೆ. ಇದು ಬಂದು ಒಂದು ವಾರದೊಳಗೆ ತನ್ನಷ್ಟಕ್ಕೆ ತಾನೆ ಗುಣಮುಖವಾಗುತ್ತದೆ. ಕೆಲವೊಂದು ಬಾರಿ ಕಣ್ಣಿನ ಕಪ್ಪು ಗುಡ್ಡೆ ಪ್ರದೇಶಕ್ಕೆ ಹರಡುವ ಸಾಧ್ಯತೆ ಇದ್ದು, ಹೀಗಾಗಿ ಕೆಂಗಣ್ಣು ರೋಗ ಬಂದಾಗ ಕಣ್ಣನ್ನು ಮುಟ್ಟಿಕೊಳ್ಳಬಾರದು, ಆಗಾಗ ಕೈ ಸ್ವಚ್ಚಗೊಳಿಸುತ್ತಿರುವುದು, ವೈರಸ್‌ಗೆ ತುತ್ತಾದವರಿಂದ ದೂರವಿರುವುದರಿಂದ ರೋಗ ಹರಡದಂತೆ ತಡೆಯಬಹುದು ಎಂದು ಹೇಳಿದರು.

ರೋಗ ಭಾದೆಯಿಂದಾಗಿ ಈಗಾಗಲೇ ಬೆಳ್ತಂಗಡಿಯ ಖಾಸಗಿ ಶಾಲೆಯೊಂದಕ್ಕೆ ರಜೆ ನೀಡಲಾಗಿದೆ. ರೋಗಭಾದೆಗೆ ಒಳಗಾಗಿರುವ ವಿದ್ಯಾರ್ಥಿಗಳಿಗೆ ರಜೆ ನೀಡುವಂತೆ ಶಿಕ್ಷಣ ಇಲಾಖೆ ಎಲ್ಲಾ ಶಾಲೆಗಳ ಮುಖ್ಯಸ್ಥರಿಗೆ ಸೂಚನೆ ನೀಡಲಾಗಿದೆ. ಕೆಂಗಣ್ಣು ಕಾಯಿಲೆಯಿಂದ ಯಾವುದೇ ದೃಷ್ಟಿ ದೋಷ ಉಂಟಾಗದಂತೆ ಎಚ್ಚರಿಕೆ ವಹಿಸಬೇಕಾಗಿದೆ.

ವರದಿ: ಅಶೋಕ್ ಟಿ.ವಿ 9 ಮಂಗಳೂರು

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Web contact
Web contact

TV9 Kannada

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್