AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಜಾಬ್ ನಿಯಮ ವಾಪಸ್ ಪಡೆಯಲು SYS ಸಮ್ಮೇಳನದಲ್ಲಿ ಸರ್ಕಾರಕ್ಕೆ ಹಕ್ಕೊತ್ತಾಯ

ಮಂಗಳೂರಿನ ಹೊರವಲಯದ ಅಡ್ಯಾರಿನಲ್ಲಿ ಸುನ್ನಿ ಯುವಜನ ಸಂಘಂ ಆಯೋಜನೆ ಮಾಡಿರುವ ಎಸ್​ವೈಎಸ್​ ಮಹಾ ಸಮ್ಮೇಳನದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಭಾಗವಹಿಸಿದ್ದರು. ಈ ವೇಳೆ ಮುಸ್ಲಿಂ ಮಹಿಳೆ ಮನೆಯಿಂದ ಹೊರಹೋದರೆ ಬುರ್ಖಾ ಹಾಕಲೇಬೇಕು. ಹಿಂದಿನ ಸರ್ಕಾರದ ಹಿಜಾಬ್ ನಿಯಮವನ್ನು ವಾಪಸ್ ಪಡೆಯುವಂತೆ ಶಾಪಿ ಸಹದಿ ಒತ್ತಾಯಿಸಿದ್ದಾರೆ. ಸರ್ಕಾರಕ್ಕೆ ಹಕ್ಕೊತ್ತಾಯ ಮಾಡಲಾಗಿದೆ.​

ಹಿಜಾಬ್ ನಿಯಮ ವಾಪಸ್ ಪಡೆಯಲು SYS ಸಮ್ಮೇಳನದಲ್ಲಿ ಸರ್ಕಾರಕ್ಕೆ ಹಕ್ಕೊತ್ತಾಯ
SYS​​ನ ಮಹಾ ಸಮ್ಮೇಳನdಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಭಾಗಿ​
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on:Jan 24, 2024 | 10:41 PM

Share

ಮಂಗಳೂರು, ಜನವರಿ 24: ಮುಸ್ಲಿಂ ಮಹಿಳೆ ಮನೆಯಿಂದ ಹೊರಹೋದರೆ ಬುರ್ಖಾ ಹಾಕಲೇಬೇಕು. ಹಿಂದಿನ ಸರ್ಕಾರದ ಹಿಜಾಬ್ (hijab) ನಿಯಮವನ್ನು ವಾಪಸ್ ಪಡೆಯುವಂತೆ ಶಾಪಿ ಸಹದಿ ಒತ್ತಾಯಿಸಿದ್ದಾರೆ. ಸರ್ಕಾರಕ್ಕೆ ಹಕ್ಕೊತ್ತಾಯ ಮಾಡಲಾಗಿದೆ. ಮಂಗಳೂರಿನ ಹೊರವಲಯದ ಅಡ್ಯಾರಿನಲ್ಲಿ ಸುನ್ನಿ ಯುವಜನ ಸಂಘಂ ಆಯೋಜನೆ ಮಾಡಿರುವ ಎಸ್​ವೈಎಸ್​ ಮಹಾ ಸಮ್ಮೇಳನದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಭಾಗವಹಿಸಿದ್ದಾಗ​ ಸರ್ಕಾರಕ್ಕೆ ಹಕ್ಕೊತ್ತಾಯಿಸಲಾಗಿದೆ. 2ಬಿ 4% ಮೀಸಲಾತಿಯಲ್ಲಿ ವಾಪಾಸ್ ಪಡೆದಿದ್ದನ್ನು ಸರ್ಕಾರ ವಾಪಾಸ್ ಪಡೆಯಲು ಮತ್ತು 2013 ರ ಜಾತಿಗಣತಿ ವರದಿ ಬಿಡುಗಡೆ ಮಾಡಲು ಒತ್ತಾಯಿಸಲಾಗಿದೆ.

ಮಂಗಳೂರು ಸಿಎಎ ಎನ್​ಆರ್​ಸಿ ಗೋಲಿಬಾರ್​ನಲ್ಲಿ ಮೃತಪಟ್ಟ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ ನೀಡಲಾಗಿದೆ. ಗೋಲಿವಾರ್ ವೇಳೆ ಯುವಕರ ಮೇಲಿರುವ ಕೇಸ್ ವಾಪಾಸ್ ತೆಗೆಯಲು ಆಗ್ರಹಿಸಲಾಗಿದೆ. ಹುಬ್ಬಳ್ಳಿ, ಡಿ‌.ಜೆ.ಹಳ್ಳಿ-ಕೆಜೆ ಹಳ್ಳಿ ಗಲಭೆಯಲ್ಲಿ ಜೈಲಿನಲ್ಲಿರುವ ಅಮಾಯಕರ ತಕ್ಷಣ ಬಿಡುಗಡೆಗೆ ಮತ್ತು ಚಿಕ್ಕಮಗಳೂರು ಬಾಬಾಬುಡನ್ ಗಿರಿ ದರ್ಗಾಕ್ಕೆ ಕಳೆದ ಸರ್ಕಾರ ತಂದ ಸಮಿತಿ ವಿಚಾರವಾಗಿ ಆದ ಅನ್ಯಾಯವನ್ನು ಸರಿಪಡಿಸಲು ಒತ್ತಾಯಿಸಲಾಗಿದೆ.

ನಿಮ್ಮ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಇರುತ್ತೆ: ಡಿಸಿಎಂ ಡಿ.ಕೆ.ಶಿವಕುಮಾರ್

ಎಸ್​ವೈಎಸ್ ಮಹಾ ಸಮ್ಮೇಳನದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಮಾತನಾಡಿದ್ದು, ಮುಸ್ಲಿಮರು ನನ್ನ ಸಹೋದರರು ಎಂದಿದ್ದಕ್ಕೆ ಟೀಕೆ, ವಿವಾದ ಮಾಡಿದರು. ಆದರೆ ಇದಕ್ಕೆಲ್ಲಾ ಹೆದರುವುದಿಲ್ಲ. ನೀವು ಹಕ್ಕೊತ್ತಾಯ ಮಾಡಿದ್ದು ಡಿ.ಕೆ.ಶಿವಕುಮಾರ್​​ಗೆ ಅಲ್ಲ, ಸರ್ಕಾರಕ್ಕೆ. ನಿಮ್ಮ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಇರುತ್ತೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಫೆ.8ರಂದು‌ ಸಿಎಂ 2ನೇ ಹಂತದ ಜನಸ್ಪಂದನಾ ಕಾರ್ಯಕ್ರಮ: ಮೆಜೆಸ್ಟಿಕ್​ನಿಂದ ವಿಧಾನಸೌಧಕ್ಕೆ ಬಸ್ ಸೌಲಭ್ಯ

ನಾವು ನಿಮ್ಮ ಜೊತೆ ಇದ್ದು, ನಿಮ್ಮ ರಕ್ಷಣೆಗೆ ನಿಲ್ಲುತ್ತೇವೆ. ನಾನು ಕನಕಪುರದ ಬಂಡೆ. ಲೋಕಸಭೆ ಚುನಾವಣೆ ಸಮೀಪಿಸುತ್ತಿದೆ, ದೇಶದ ಭವಿಷ್ಯ ನಿಮ್ಮ ಕೈಯಲ್ಲಿದೆ ಎಂದಿದ್ದಾರೆ.

ರಾಮಮಂದಿರ ಮಂತ್ರಾಕ್ಷತೆಗೆ ಡಿಸಿಎಂ ಡಿಕೆ ಶಿವಕುಮಾರ್​​ ಟೀಕೆ

ರಾಮಮಂದಿರ ಮಂತ್ರಾಕ್ಷತೆ ಮಂತ್ರಾಕ್ಷತೆ ಅಕ್ಕಿ ಸಿಎಂ ಸಿದ್ದರಾಮಯ್ಯ ಕೊಟ್ಟ ಅಕ್ಕಿ. ಐದು ಗ್ಯಾರಂಟಿಗಳೇ ಕಾಂಗ್ರೆಸ್ ಕೊಟ್ಟ ಮಂತ್ರಾಕ್ಷತೆ ಎಂದು ರಾಮಮಂದಿರ ಮಂತ್ರಾಕ್ಷತೆ ಬಗ್ಗೆ ಟೀಕೆ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:27 pm, Wed, 24 January 24

Follow Us
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೃಷ್ಣಾ ನದಿಗೆ ಹರಿದುಬಂತು 60,000 ಕ್ಯೂಸೆಕ್ ನೀರು
ಕೃಷ್ಣಾ ನದಿಗೆ ಹರಿದುಬಂತು 60,000 ಕ್ಯೂಸೆಕ್ ನೀರು
ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ
ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ