AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು ಅಬುಧಾಬಿ ಮಧ್ಯೆ ಪ್ರತಿ ದಿನ ಸಂಚರಿಸಲಿದೆ ಏರ್ ಇಂಡಿಯಾ ಎಕ್ಸ್​ಪ್ರೆಸ್

Air India Express; ಮಂಗಳೂರಿನಿಂದ ಯುನೈಟೆಡ್ ಅರಬ್ ಎಮಿರೇಟ್ಸ್‌ನ ರಾಜಧಾನಿ ಅಬುಧಾಬಿಗೆ ತೆರಳುವವರಿಗೆ ಮತ್ತು ಮಂಗಳೂರು - ಬೆಂಗಳೂರು ಪ್ರಯಾಣಿಕರಿಗೆ ಏರ್ ಇಂಡಿಯಾ ಎಕ್ಸ್​​ಪ್ರೆಸ್ ಶುಭ ಸುದ್ದಿ ನೀಡಿದೆ. ಜುಲೈ 22ರಿಂದ ಮಂಗಳೂರು ಅಬುಧಾಬಿ ಮಧ್ಯೆ ಪ್ರತಿ ದಿನ ಏರ್ ಇಂಡಿಯಾ ಎಕ್ಸ್​​ಪ್ರೆಸ್ ವಿಮಾನ ಸಂಚಾರ ನಡೆಸಲಿದೆ. ಹಾಗೆಯೇ ಬೆಂಗಳೂರು ಮಂಗಳೂರು ವಿಮಾನಗಳ ಸಂಖ್ಯೆ ಆಗಸ್ಟ್​ನಿಂದ ಹೆಚ್ಚಾಗಲಿದೆ. ವಿವರ ಇಲ್ಲಿದೆ.

ಮಂಗಳೂರು ಅಬುಧಾಬಿ ಮಧ್ಯೆ ಪ್ರತಿ ದಿನ ಸಂಚರಿಸಲಿದೆ ಏರ್ ಇಂಡಿಯಾ ಎಕ್ಸ್​ಪ್ರೆಸ್
ಏರ್ ಇಂಡಿಯಾ ಎಕ್ಸ್​ಪ್ರೆಸ್
ಗಣಪತಿ ಶರ್ಮಾ
|

Updated on: Jun 12, 2024 | 7:34 AM

Share

ಮಂಗಳೂರು, ಜೂನ್ 12: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ (Mangaluru International Airpor) ಯುನೈಟೆಡ್ ಅರಬ್ ಎಮಿರೇಟ್ಸ್‌ನ (UAE) ರಾಜಧಾನಿ ಅಬುಧಾಬಿಗೆ (Abu Dhabi) ಏರ್ ಇಂಡಿಯಾ ಎಕ್ಸ್‌ಪ್ರೆಸ್ (IX) (Air India Express IX) ಜುಲೈ 22 ರಿಂದ ಪ್ರತಿ ದಿನ ವಿಮಾನ ಸಂಚಾರ ಆರಂಭಿಸಲಿದೆ. ಪ್ರಸ್ತುತ, ಏರ್ ಇಂಡಿಯಾ ಎಕ್ಸ್‌ಪ್ರೆಸ್ (IX) ಮಂಗಳವಾರ, ಗುರುವಾರ, ಶನಿವಾರ ಮತ್ತು ಭಾನುವಾರದಂದು ಅಬುಧಾಬಿಗೆ ವಾರದಲ್ಲಿ 4 ವಿಮಾನಗಳ ಸಂಚಾರ ನಿರ್ವಹಿಸುತ್ತಿದೆ.

ಪ್ರಸ್ತುತ, ಇಂಡಿಗೋ (4) ಮತ್ತು ಏರ್ ಇಂಡಿಯಾ ಎಕ್ಸ್‌ಪ್ರೆಸ್ IX (1) ಬೆಂಗಳೂರು-ಮಂಗಳೂರು ಸೆಕ್ಟರ್‌ನಲ್ಲಿ ಪ್ರತಿದಿನ ಒಟ್ಟು 5 ವಿಮಾನಗಳನ್ನು ನಿರ್ವಹಿಸುತ್ತಿವೆ. ಜುಲೈ 8 ರಿಂದ, ಈ ವಲಯದಲ್ಲಿ ದೈನಂದಿನ ವಿಮಾನಗಳ ಸಂಚಾರ 6 ಕ್ಕೆ ಹೆಚ್ಚಳವಾಗಲಿದೆ. ಅಂದಿನಿಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್ IX ತನ್ನ ಎರಡನೇ ದೈನಂದಿನ ಸಂಚಾರ ಪುನರಾರಂಭಿಸಲಿದೆ. ಈ ಸಂಖ್ಯೆಯು ಜುಲೈ 22 ರಿಂದ ಸೋಮವಾರ, ಬುಧವಾರ ಮತ್ತು ಶುಕ್ರವಾರದಂದು 7 ಕ್ಕೆ ಹೆಚ್ಚಾಗಲಿದೆ ಎಂದು ಮೂಲಗಳು ತಿಳಿಸಿವೆ.

ಸದ್ಯ ಬೆಂಗಳೂರು ಹಾಗೂ ಮಂಗಳೂರು ಮಧ್ಯೆ ಸಂಚರಿಸುವ ಏರ್ ಇಂಡಿಯಾ ಎಕ್ಸ್‌ಪ್ರೆಸ್ IX ಮುಂದೆ ಸಂಪೂರ್ಣ ದೇಶೀಯ ವಿಮಾನವಾಗಿ ಬದಲಾಗಲಿದೆ. ಅಬುಧಾಬಿಗೆ ತೆರಳುವ ಪ್ರಯಾಣಿಕರು ಮಂಗಳೂರಿನಿಂದ ಪ್ರತಿ ದಿನದ ಏರ್ ಇಂಡಿಯಾ ಎಕ್ಸ್‌ಪ್ರೆಸ್ IX ವಿಮಾನ ಏರಲಿದ್ದಾರೆ.

ಬೆಂಗಳೂರು – ಮಂಗಳೂರು ವಿಮಾನಗಳ ಸಂಖ್ಯೆ ಹೆಚ್ಚಳ

ಆಗಸ್ಟ್ 1 ರಿಂದ, ಬೆಂಗಳೂರು ಹಾಗೂ ಮಂಗಳೂರು ಮಧ್ಯೆ ವಾರದಲ್ಲಿ ಮೂರು ದಿನಗಳಲ್ಲಿ (ಕ್ರಮವಾಗಿ ಸೋಮವಾರ, ಬುಧವಾರ ಮತ್ತು ಶುಕ್ರವಾರ) ಸಂಚರಿಸುವ ವಿಮಾನಗಳ ಸಂಖ್ಯೆ 8 ಕ್ಕೆ ಏರಲಿದೆ. ಏರ್ ಇಂಡಿಯಾ ಎಕ್ಸ್‌ಪ್ರೆಸ್ IX ತನ್ನ ಎರಡು ದೈನಂದಿನ ವಿಮಾನಗಳೊಂದಿಗೆ ಮೂರನೇ ವಿಮಾನವನ್ನು ಆರಂಭಿಸಲಿದೆ.

ಸದ್ಯ ಮಾರ್ಚ್ 31 ರಿಂದ ಪ್ರಾರಂಭವಾಗುವ ಬೇಸಿಗೆ ವೇಳಾಪಟ್ಟಿಯಲ್ಲಿ ಘೋಷಿಸಿದ ಐದನೇ ವಿಮಾನ ಸೇರಿದಂತೆ ಇಂಡಿಗೋ 5 ದೈನಂದಿನ ವಿಮಾನಗಳನ್ನು ನಿರ್ವಹಿಸುತ್ತದೆ.

ಪ್ರಸ್ತುತ, ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಮಾನಯಾನ ಸಂಸ್ಥೆಗಳು ಮುಂಬೈ ಮತ್ತು ಬೆಂಗಳೂರಿಗೆ ಪ್ರತಿ ದಿನ 5 ವಿಮಾನಗಳು, ಚೆನ್ನೈ ಮತ್ತು ಹೈದರಾಬಾದ್‌ಗೆ ಕ್ರಮವಾಗಿ ಪ್ರತಿ ದಿನ 2 ವಿಮಾನಗಳು, ದೆಹಲಿಗೆ ಪ್ರತಿ ದಿನ ಒಂದು ವಿಮಾನ, ಪುಣೆಗೆ ವಾರಕ್ಕೆ 3 ವಿಮಾನಗಳು ಮತ್ತು ತಿರುಚಿರಾಪಳ್ಳಿಗೆ ವಾರಕ್ಕೆ 1 ವಿಮಾನ ಕಾರ್ಯಾಚರಣೆ ನಡೆಸುತ್ತಿವೆ.

ಇದನ್ನೂ ಓದಿ: ಮಂಗಳೂರಿನಲ್ಲಿ ಬಿಜೆಪಿ ವಿಜಯೋತ್ಸವ ಮೆರವಣಿಗೆ ಬಳಿಕ ಇಬ್ಬರಿಗೆ ಚೂರಿ ಇರಿತ ಪ್ರಕರಣ; ಆರು ಮಂದಿ ಬಂಧನ, 20 ಜನ ವಶಕ್ಕೆ

ಸದ್ಯ ಮಂಗಳೂರಿನಿಂದ ಅಂತರರಾಷ್ಟ್ರೀಯ ವಿಮಾನಗಳ ಕಾರ್ಯಾಚರಣೆಯು ಏರ್​​ ಇಂಡಿಯಾ ಮೂಲಕ ದುಬೈಗೆ ಪ್ರತಿ ದಿನ 2 ವಿಮಾನಗಳು ಮತ್ತು ಇಂಡಿಗೋದಿಂದ ವಾರಕ್ಕೆ 4 ವಿಮಾನಗಳು, ದಮ್ಮಾಮ್‌ಗೆ ವಾರಕ್ಕೆ 4 ವಿಮಾನಗಳು, ವಾರಕ್ಕೆ 3 ಮಸ್ಕತ್‌ಗೆ, ವಾರಕ್ಕೆ 2 ವಿಮಾನ ದೋಹಾ ಮತ್ತು ಬಹ್ರೇನ್‌ಗೆ ಮತ್ತು ವಾರಕ್ಕೊಮ್ಮೆ ಏರ್ ಇಂಡಿಯಾದ 1 ವಿಮಾನ ಕುವೈತ್ ಮತ್ತು ಜೆಡ್ಡಾಕ್ಕೆ ಸಂಚಾರ ನಡೆಸುತ್ತಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು
ಮನೆಗೆ ಬಂದು ಕಣ್ಣೀರು ಹಾಕಿದ್ರಲ್ಲ: ಸಿಎಂಗೆ ಹಳೆಯ ದಿನಗಳನ್ನ ನೆನಪಿಸಿದ HDK
ಮನೆಗೆ ಬಂದು ಕಣ್ಣೀರು ಹಾಕಿದ್ರಲ್ಲ: ಸಿಎಂಗೆ ಹಳೆಯ ದಿನಗಳನ್ನ ನೆನಪಿಸಿದ HDK
ಸಿಎಂ ಸಿದ್ದರಾಮಯ್ಯಗೆ ಕುಮಾರಸ್ವಾಮಿ ಓಪನ್ ಚಾಲೆಂಜ್
ಸಿಎಂ ಸಿದ್ದರಾಮಯ್ಯಗೆ ಕುಮಾರಸ್ವಾಮಿ ಓಪನ್ ಚಾಲೆಂಜ್
ಶ್ರೀನಂದಾ ಸಾವು ಕಾಲು ಜಾರಿ ಬಿದ್ದಿದ್ದಾ ಅಥವಾ ಕೊಲೆಯೇ?
ಶ್ರೀನಂದಾ ಸಾವು ಕಾಲು ಜಾರಿ ಬಿದ್ದಿದ್ದಾ ಅಥವಾ ಕೊಲೆಯೇ?
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ
ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್