AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mangaluru Vijayapura train: ಮಂಗಳೂರು ಸೆಂಟ್ರಲ್​ಗೆ ವಿಸ್ತರಣೆಯಾಗಲಿದೆ ಮಂಗಳೂರು ವಿಜಯಪುರ ರೈಲು

ಮಂಗಳೂರಿನ ರೈಲು ಪ್ರಯಾಣಿಕರಿಗೆ ಪಾಲಕ್ಕಾಡ್ ರೈಲ್ವೆ ಅಧಿಕಾರಿಗಳು ಸಿಹಿ ಸುದ್ದಿ ನೀಡಿದ್ದಾರೆ. ಕೊನೆಗೂ ಮಂಗಳೂರು-ವಿಜಯಪುರ ರೈಲನ್ನು ಮಂಗಳೂರು ಜಂಕ್ಷನ್‌ನಿಂದ ಮಂಗಳೂರು ಸೆಂಟ್ರಲ್‌ಗೆ ವಿಸ್ತರಿಸಲು ಸಮ್ಮತಿಸಿದ್ದಾರೆ. ಆದರೆ, ಮುಂಬೈ ಸಿಎಸ್‌ಟಿಎಂ-ಮಂಗಳೂರು ಜಂಕ್ಷನ್ ರೈಲನ್ನು ಸೆಂಟ್ರಲ್‌ಗೆ ವಿಸ್ತರಿಸುವ ಬೇಡಿಕೆಯನ್ನು ತಿರಸ್ಕರಿಸಿದ್ದಾರೆ.

Mangaluru Vijayapura train: ಮಂಗಳೂರು ಸೆಂಟ್ರಲ್​ಗೆ ವಿಸ್ತರಣೆಯಾಗಲಿದೆ ಮಂಗಳೂರು ವಿಜಯಪುರ ರೈಲು
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on: Dec 11, 2023 | 7:55 AM

Share

ಮಂಗಳೂರು, ಡಿಸೆಂಬರ್ 11: ಮಂಗಳೂರು-ವಿಜಯಪುರ ರೈಲನ್ನು (Mangaluru Vijayapura train) ಮಂಗಳೂರು ಜಂಕ್ಷನ್‌ನಿಂದ ಮಂಗಳೂರು ಸೆಂಟ್ರಲ್‌ಗೆ ವಿಸ್ತರಿಸಲು ಪಾಲಕ್ಕಾಡ್ ರೈಲ್ವೆ ಅಧಿಕಾರಿಗಳು ಸಮ್ಮತಿಸಿದ್ದಾರೆ. ಯೋಜನೆಯ ಪ್ರಕಾರ ರೈಲು ಮಂಗಳೂರು ಸೆಂಟ್ರಲ್‌ಗೆ ಮಧ್ಯಾಹ್ನ 1 ಗಂಟೆಗೆ ಆಗಮಿಸಿ ಮಧ್ಯಾಹ್ನ 2.35 ಕ್ಕೆ ವಿಜಯಪುರಕ್ಕೆ ಹೊರಡಲಿದೆ. ಮಂಗಳೂರು-ಯಶವಂತಪುರ ಮಧ್ಯೆ ವಾರಕ್ಕೊಮ್ಮೆ ಸಂಚರಿಸುವ ರೈಲನ್ನು ಜಂಕ್ಷನ್‌ನಿಂದ ಸೆಂಟ್ರಲ್‌ಗೆ ವಿಸ್ತರಿಸಲು ಕ್ರಮಕೈಗೊಳ್ಳಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆ.

ಮಂಗಳೂರು-ಯಶವಂತಪುರ ರೈಲು ಮಂಗಳೂರು ಜಂಕ್ಷನ್‌ನಿಂದ ಯಶವಂತಪುರಕ್ಕೆ ಸಂಜೆ 7 ಗಂಟೆಗೆ ಹೊರಡುತ್ತದೆ. ವಿಭಾಗೀಯ ರೈಲು ಬಳಕೆದಾರರ ಸಲಹಾ ಸಮಿತಿ (ಡಿಆರ್‌ಯುಸಿಸಿ) 163 ನೇ ಸಭೆಯಲ್ಲಿ ಈ ಬಗ್ಗೆ ಮಾಹಿತಿ ನೀಡಲಾಗಿದೆ. ಪಾಲಕ್ಕಾಡ್ ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕರ ಕಚೇರಿಯಲ್ಲಿ ಗುರುವಾರ ನಡೆಯಿತು.

ಮುಂಬೈ ಸಿಎಸ್‌ಟಿಎಂ-ಮಂಗಳೂರು ಜಂಕ್ಷನ್ ರೈಲನ್ನು ಸೆಂಟ್ರಲ್‌ಗೆ ವಿಸ್ತರಿಸುವ ಬೇಡಿಕೆ ಪ್ರಸ್ತುತ ವೇಳಾಪಟ್ಟಿಯಲ್ಲಿ ಸಾಧ್ಯವಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ. ಪಾಲಕ್ಕಾಡ್‌ನ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಅರುಣ್ ಕುಮಾರ್ ಚತುರ್ವೇದಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಡಿಆರ್‌ಯುಸಿಸಿಯ ಹಿರಿಯ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕ ಮತ್ತು ಕಾರ್ಯದರ್ಶಿ ಅರುಣ್ ಥಾಮಸ್ ಕಲತ್ತಿಕಲ್ ಅವರು ಡಿಆರ್‌ಯುಸಿಸಿಯ ಕಾರ್ಯವೈಖರಿ ಮತ್ತು ಪಾಲಕ್ಕಾಡ್ ವಿಭಾಗದ ಸಾಧನೆಗಳ ಕುರಿತು ಪ್ರಸ್ತುತಿ ಮೂಲಕ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಮಂಗಳೂರು: ಸೋಮೇಶ್ವರ ಬಳಿ ಇಬ್ಬರು ವಿದ್ಯಾರ್ಥಿಗಳು ಸಮುದ್ರಪಾಲು

ಮಂಗಳೂರು-ಮುಂಬೈ ಸಿಎಸ್‌ಟಿ ಸೂಪರ್‌ಫಾಸ್ಟ್, ಮಂಗಳೂರು-ಬೆಂಗಳೂರು ಗೋಮಟೇಶ್ವರ ಎಕ್ಸ್‌ಪ್ರೆಸ್ ಮತ್ತು ಮಂಗಳೂರು-ವಿಜಯಪುರ ಎಕ್ಸ್‌ಪ್ರೆಸ್‌ಗಳ ಸೇವೆಗಳನ್ನು ಜಂಕ್ಷನ್‌ನಿಂದ ಸೆಂಟ್ರಲ್‌ಗೆ ವಿಸ್ತರಿಸದಿದ್ದಲ್ಲಿ, ವಂದೇ ಭಾರತ್ ರೈಲು ಹೊರತುಪಡಿಸಿ ಸೆಂಟ್ರಲ್‌ನಿಂದ ಯಾವುದೇ ಹೊಸ ರೈಲು ಪ್ರಾರಂಭಿಸಲು ವಿರೋಧಿಸುತ್ತೇವೆ ಎಂದು ಡಿಆರ್‌ಯುಸಿಸಿ ಸದಸ್ಯ ಹನುಮಂತ್ ಕಾಮತ್ ಎಂಬವರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

ಸೆಂಟ್ರಲ್‌ ರೈಲು ನಿಲ್ದಾಣದ ಪ್ಲಾಟ್‌ಫಾರ್ಮ್​ನಲ್ಲಿ ಹೊಸದಾಗಿ ನಿರ್ಮಿಸಲಾಗುತ್ತಿರುವ ಮೇಲ್ಸೇತುವೆ ಡಿಸೆಂಬರ್ ಅಂತ್ಯದ ವೇಳೆಗೆ ಸಾರ್ವಜನಿಕರ ಬಳಕೆಗೆ ಲಭ್ಯವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ