AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mangaluru Vijayapura train: ಮಂಗಳೂರು ಸೆಂಟ್ರಲ್​ಗೆ ವಿಸ್ತರಣೆಯಾಗಲಿದೆ ಮಂಗಳೂರು ವಿಜಯಪುರ ರೈಲು

ಮಂಗಳೂರಿನ ರೈಲು ಪ್ರಯಾಣಿಕರಿಗೆ ಪಾಲಕ್ಕಾಡ್ ರೈಲ್ವೆ ಅಧಿಕಾರಿಗಳು ಸಿಹಿ ಸುದ್ದಿ ನೀಡಿದ್ದಾರೆ. ಕೊನೆಗೂ ಮಂಗಳೂರು-ವಿಜಯಪುರ ರೈಲನ್ನು ಮಂಗಳೂರು ಜಂಕ್ಷನ್‌ನಿಂದ ಮಂಗಳೂರು ಸೆಂಟ್ರಲ್‌ಗೆ ವಿಸ್ತರಿಸಲು ಸಮ್ಮತಿಸಿದ್ದಾರೆ. ಆದರೆ, ಮುಂಬೈ ಸಿಎಸ್‌ಟಿಎಂ-ಮಂಗಳೂರು ಜಂಕ್ಷನ್ ರೈಲನ್ನು ಸೆಂಟ್ರಲ್‌ಗೆ ವಿಸ್ತರಿಸುವ ಬೇಡಿಕೆಯನ್ನು ತಿರಸ್ಕರಿಸಿದ್ದಾರೆ.

Mangaluru Vijayapura train: ಮಂಗಳೂರು ಸೆಂಟ್ರಲ್​ಗೆ ವಿಸ್ತರಣೆಯಾಗಲಿದೆ ಮಂಗಳೂರು ವಿಜಯಪುರ ರೈಲು
ಸಾಂದರ್ಭಿಕ ಚಿತ್ರ
Ganapathi Sharma
|

Updated on: Dec 11, 2023 | 7:55 AM

Share

ಮಂಗಳೂರು, ಡಿಸೆಂಬರ್ 11: ಮಂಗಳೂರು-ವಿಜಯಪುರ ರೈಲನ್ನು (Mangaluru Vijayapura train) ಮಂಗಳೂರು ಜಂಕ್ಷನ್‌ನಿಂದ ಮಂಗಳೂರು ಸೆಂಟ್ರಲ್‌ಗೆ ವಿಸ್ತರಿಸಲು ಪಾಲಕ್ಕಾಡ್ ರೈಲ್ವೆ ಅಧಿಕಾರಿಗಳು ಸಮ್ಮತಿಸಿದ್ದಾರೆ. ಯೋಜನೆಯ ಪ್ರಕಾರ ರೈಲು ಮಂಗಳೂರು ಸೆಂಟ್ರಲ್‌ಗೆ ಮಧ್ಯಾಹ್ನ 1 ಗಂಟೆಗೆ ಆಗಮಿಸಿ ಮಧ್ಯಾಹ್ನ 2.35 ಕ್ಕೆ ವಿಜಯಪುರಕ್ಕೆ ಹೊರಡಲಿದೆ. ಮಂಗಳೂರು-ಯಶವಂತಪುರ ಮಧ್ಯೆ ವಾರಕ್ಕೊಮ್ಮೆ ಸಂಚರಿಸುವ ರೈಲನ್ನು ಜಂಕ್ಷನ್‌ನಿಂದ ಸೆಂಟ್ರಲ್‌ಗೆ ವಿಸ್ತರಿಸಲು ಕ್ರಮಕೈಗೊಳ್ಳಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆ.

ಮಂಗಳೂರು-ಯಶವಂತಪುರ ರೈಲು ಮಂಗಳೂರು ಜಂಕ್ಷನ್‌ನಿಂದ ಯಶವಂತಪುರಕ್ಕೆ ಸಂಜೆ 7 ಗಂಟೆಗೆ ಹೊರಡುತ್ತದೆ. ವಿಭಾಗೀಯ ರೈಲು ಬಳಕೆದಾರರ ಸಲಹಾ ಸಮಿತಿ (ಡಿಆರ್‌ಯುಸಿಸಿ) 163 ನೇ ಸಭೆಯಲ್ಲಿ ಈ ಬಗ್ಗೆ ಮಾಹಿತಿ ನೀಡಲಾಗಿದೆ. ಪಾಲಕ್ಕಾಡ್ ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕರ ಕಚೇರಿಯಲ್ಲಿ ಗುರುವಾರ ನಡೆಯಿತು.

ಮುಂಬೈ ಸಿಎಸ್‌ಟಿಎಂ-ಮಂಗಳೂರು ಜಂಕ್ಷನ್ ರೈಲನ್ನು ಸೆಂಟ್ರಲ್‌ಗೆ ವಿಸ್ತರಿಸುವ ಬೇಡಿಕೆ ಪ್ರಸ್ತುತ ವೇಳಾಪಟ್ಟಿಯಲ್ಲಿ ಸಾಧ್ಯವಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ. ಪಾಲಕ್ಕಾಡ್‌ನ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಅರುಣ್ ಕುಮಾರ್ ಚತುರ್ವೇದಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಡಿಆರ್‌ಯುಸಿಸಿಯ ಹಿರಿಯ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕ ಮತ್ತು ಕಾರ್ಯದರ್ಶಿ ಅರುಣ್ ಥಾಮಸ್ ಕಲತ್ತಿಕಲ್ ಅವರು ಡಿಆರ್‌ಯುಸಿಸಿಯ ಕಾರ್ಯವೈಖರಿ ಮತ್ತು ಪಾಲಕ್ಕಾಡ್ ವಿಭಾಗದ ಸಾಧನೆಗಳ ಕುರಿತು ಪ್ರಸ್ತುತಿ ಮೂಲಕ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಮಂಗಳೂರು: ಸೋಮೇಶ್ವರ ಬಳಿ ಇಬ್ಬರು ವಿದ್ಯಾರ್ಥಿಗಳು ಸಮುದ್ರಪಾಲು

ಮಂಗಳೂರು-ಮುಂಬೈ ಸಿಎಸ್‌ಟಿ ಸೂಪರ್‌ಫಾಸ್ಟ್, ಮಂಗಳೂರು-ಬೆಂಗಳೂರು ಗೋಮಟೇಶ್ವರ ಎಕ್ಸ್‌ಪ್ರೆಸ್ ಮತ್ತು ಮಂಗಳೂರು-ವಿಜಯಪುರ ಎಕ್ಸ್‌ಪ್ರೆಸ್‌ಗಳ ಸೇವೆಗಳನ್ನು ಜಂಕ್ಷನ್‌ನಿಂದ ಸೆಂಟ್ರಲ್‌ಗೆ ವಿಸ್ತರಿಸದಿದ್ದಲ್ಲಿ, ವಂದೇ ಭಾರತ್ ರೈಲು ಹೊರತುಪಡಿಸಿ ಸೆಂಟ್ರಲ್‌ನಿಂದ ಯಾವುದೇ ಹೊಸ ರೈಲು ಪ್ರಾರಂಭಿಸಲು ವಿರೋಧಿಸುತ್ತೇವೆ ಎಂದು ಡಿಆರ್‌ಯುಸಿಸಿ ಸದಸ್ಯ ಹನುಮಂತ್ ಕಾಮತ್ ಎಂಬವರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

ಸೆಂಟ್ರಲ್‌ ರೈಲು ನಿಲ್ದಾಣದ ಪ್ಲಾಟ್‌ಫಾರ್ಮ್​ನಲ್ಲಿ ಹೊಸದಾಗಿ ನಿರ್ಮಿಸಲಾಗುತ್ತಿರುವ ಮೇಲ್ಸೇತುವೆ ಡಿಸೆಂಬರ್ ಅಂತ್ಯದ ವೇಳೆಗೆ ಸಾರ್ವಜನಿಕರ ಬಳಕೆಗೆ ಲಭ್ಯವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?