AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಸುರತ್ಕಲ್​​ ಬಳಿಯ ಕಾಟಿಪಳ್ಳದಲ್ಲಿ ಮಸೀದಿ ಮೇಲೆ ಕಲ್ಲು ತೂರಾಟ

ಮಂಡ್ಯದ ನಾಗಮಂಗಲದಲ್ಲಿ ನಡೆದಿರುವ ಕೋಮು ಗಲಭೆಯ ಕಿಚ್ಚು ಆರುತ್ತಿರುವ ಸಂದರ್ಭದಲ್ಲೇ ಕೋಮು ಸೂಕ್ಷ್ಮ ಪ್ರದೇಶವಾಗಿರುವ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಕಾಟಿಪಳ್ಳದಲ್ಲಿ ಭಾನುವಾರ ರಾತ್ರಿ ಮಸೀದಿ ಮೇಲೆ ಕಲ್ಲು ತೂರಾಟ ನಡೆದಿದೆ. ಈದ್ ಮಿಲಾದ್ ಮುನ್ನಾ ದಿನವೇ ಘಟನೆ ನಡೆದಿದ್ದು, ಸದ್ಯ ಮಸೀದಿಗೆ ಬಿಗಿ ಭದ್ರತೆ ಕಲ್ಪಿಸಲಾಗಿದೆ.

ಮಂಗಳೂರು: ಸುರತ್ಕಲ್​​ ಬಳಿಯ ಕಾಟಿಪಳ್ಳದಲ್ಲಿ ಮಸೀದಿ ಮೇಲೆ ಕಲ್ಲು ತೂರಾಟ
ಮಸೀದಿಗೆ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ. ಮಸೀದಿ ಬಳಿ ಜನ ಜಮಾಯಿಸಿರುವುದು (ಬಲ ಚಿತ್ರ)
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on:Sep 16, 2024 | 6:47 AM

Share

ಮಂಗಳೂರು, ಸೆಪ್ಟೆಂಬರ್ 16: ಕೋಮು ಸೂಕ್ಷ್ಮ ಪ್ರದೇಶವಾಗಿರುವ ಮಂಗಳೂರಿನ ಹೊರವಲಯದ ಸುರತ್ಕಲ್​​ ಬಳಿಯ ಕಾಟಿಪಳ್ಳದಲ್ಲಿ ಭಾನುವಾರ ರಾತ್ರಿ ಮಸೀದಿ ಮೇಲೆ ಕಲ್ಲು ತೂರಾಟ ನಡೆದಿದೆ. ಕಾಟಿಪಳ್ಳ 3ನೇ ಬ್ಲಾಕ್​​ನ ಬದ್ರಿಯಾ ಮಸೀದಿ ಮೇಲೆ ಕಲ್ಲೆಸೆತ ನಡೆದಿದೆ. ಕಲ್ಲು ತೂರಾಟದಿಂದ ಮಸೀದಿಯ ಗಾಜು ಪುಡಿ ಪುಡಿಯಾಗಿದೆ. ಈದ್ ಮಿಲಾದ್ ಮುನ್ನಾ ದಿನವೇ ಘಟನೆ ಸಂಭವಿಸಿದ್ದು, ಆತಂಕಕ್ಕೆ ಕಾರಣವಾಗಿದೆ.

ಭಾನುವಾರ ರಾತ್ರಿ 10.30ರ ಸುಮಾರಿಗೆ 2 ಬೈಕ್​ಗಳಲ್ಲಿ ಬಂದಿದ್ದ ನಾಲ್ವರು ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿ ಪರಾರಿಯಾಗಿದ್ದಾರೆ. ಸುರತ್ಕಲ್​​ ಪೊಲೀಸ್ ಠಾಣಾ ವ್ಯಾಪ್ತಿಯ ಕಾಟಿಪಳ್ಳದ ಮಸೀದಿಗೆ ಸದ್ಯ ಬಿಗಿ ಪೊಲೀಸ್​​​ ಬಂದೋಬಸ್ತ್​​​​​​​ ಕಲ್ಪಿಸಲಾಗಿದೆ.

ಪ್ರಚೋದನಕಾರಿ ಹೇಳಿಕೆ: ಹಿಂದೂ ಮುಖಂಡರ ವಿರುದ್ದ ಪ್ರಕರಣ

ಪ್ರಚೋದನಕಾರಿ ಹೇಳಿಕೆ ನೀಡಿದ ವಿಚಾರವಾಗಿ ವಿಎಚ್​​ಪಿ ಹಾಗೂ ಬಜರಂಗದಳ ಮುಖಂಡರಾದ ಶರಣ್ ಪಂಪ್​ವೆಲ್ ಮತ್ತು ಪುನೀತ್ ಅತ್ತಾವರ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಸಾಮಾಜಿಕ ಜಾಲತಾಣದ ಮೂಲಕ ಹೇಳಿಕೆ ಹರಿಬಿಟ್ಟಿದ್ದ ಪುನಿತ್ ಅತ್ತಾವರ ವಿರುದ್ಧ ಮಂಗಳೂರಿನ‌ ಸೆನ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು. ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ವಹಿಸಿರುವ ಮಂಗಳೂರು ಪೊಲೀಸರು, ಪ್ರಚೋದನಾಕಾರಿ ಹೇಳಿಕೆ ನೀಡುವವರ ವಿರುದ್ಧ ಕ್ರಮ ಕೈಗೊಳ್ಳುತ್ತಿದ್ದಾರೆ. ಈ ಬಗ್ಗೆ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಈಗಾಗಲೇ ಎಚ್ಚರಿಕೆಯನ್ನೂ ನೀಡಿದ್ದಾರೆ.

ಇಂದು ಬಿಸಿ ರೋಡ್ ಚಲೋಗೆ ಕರೆ

ಇಂದು ವಿಎಚ್​​ಪಿ ಹಾಗೂ ಬಜರಂಗದಳ ಮುಖಂಡರು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಬಿಸಿ ರೋಡ್ ಚಲೋಗೆ ಕರೆ ಕೊಟ್ಟಿದ್ದಾರೆ. ವಿಎಚ್​​ಪಿ ಮುಖಂಡ ಶರಣ್ ಪಂಪ್​​ವೆಲ್​ಗೆ ಮುಸ್ಲಿಂ ಮುಖಂಡರು ಸವಾಲು ಹಾಕಿದ್ದ ಕಾರಣ ಈ ಜಾಥಾಕ್ಕೆ ಕರೆ ನೀಡಲಾಗಿದೆ.

ತಾಕತ್ತಿದ್ದರೆ ನಾಳೆ ಈದ್ ಮಿಲಾದ್ ಮೆರವಣಿಗೆ ತಡೆಯಿರಿ ಎಂದು ಶರಣ್ ಪಂಪ್​​ವೆಲ್​ಗೆ ಮುಸ್ಲಿಂ ಮುಖಂಡರು ಸವಾಲು ಹಾಕಿದ್ದರು. ನಾಗಮಂಗಲ ಗಲಾಟೆ ಹಿನ್ನೆಲೆ ಶರಣ್ ಪಂಪ್​​ವೆಲ್ ಈದ್ ಮೆರವಣಿಗೆ ತಡೆಯುವ ಎಚ್ಚರಿಕೆ ನೀಡಿದ್ದರು. ಇದಕ್ಕೆ ಪ್ರತಿಯಾಗಿ ಮುಸ್ಲಿಂ ಮುಖಂಡರು ಸಾಮಾಜಿಕ ತಾಣಗಳಲ್ಲಿ ಅಡಿಯೋ ಹರಿಬಿಟ್ಟಿದ್ದರು.

ಇದನ್ನೂ ಓದಿ: ಮಂಗಳೂರು: ಬೋಳಂತೂರು ಗಣೇಶೋತ್ಸವ ಮೆರವಣಿಗೆಯಲ್ಲಿ ಹಿಂದೂ ಮುಸ್ಲಿಂ -ಸೌಹಾರ್ದತೆಗೆ ಬ್ರೇಕ್!

ಈ ಮಧ್ಯೆ, ಬಿಸಿ ರೋಡ್ ಚಲೋ ಮಾಡದಂತೆ ಪೊಲೀಸರಿಂದ ಹಿಂದೂ ಮುಖಂಡರಿಗೆ ಸೂಚನೆ ರವಾನೆಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 6:38 am, Mon, 16 September 24

Follow Us
‘ಲವ್ ಮಾಕ್ಟೇಲ್ 3’ ಬಿಸ್ನೆಸ್ ಹಾಳು ಮಾಡಲು ನಾವು ಬಂದಿಲ್ಲ: ಗುರು ದೇಶಪಾಂಡೆ
‘ಲವ್ ಮಾಕ್ಟೇಲ್ 3’ ಬಿಸ್ನೆಸ್ ಹಾಳು ಮಾಡಲು ನಾವು ಬಂದಿಲ್ಲ: ಗುರು ದೇಶಪಾಂಡೆ
ಕಾಂಗ್ರೆಸ್ಸಿಗನಾಗಿ ಹುಟ್ಟಿದ್ದೇನೆ, ಕಾಂಗ್ರೆಸ್ಸಿಗನಾಗೇ ಸಾಯ್ತೇನೆ: ಡಿಕೆಶಿ
ಕಾಂಗ್ರೆಸ್ಸಿಗನಾಗಿ ಹುಟ್ಟಿದ್ದೇನೆ, ಕಾಂಗ್ರೆಸ್ಸಿಗನಾಗೇ ಸಾಯ್ತೇನೆ: ಡಿಕೆಶಿ
‘ಲವ್ ಮಾಕ್ಟೇಲ್ 3’ ಸಿನಿಮಾ ಕಥೆ ಕಾಪಿ? ಎಲ್ಲವನ್ನೂ ವಿವರಿಸಿದ ರಾಘವೇಂದ್ರ
‘ಲವ್ ಮಾಕ್ಟೇಲ್ 3’ ಸಿನಿಮಾ ಕಥೆ ಕಾಪಿ? ಎಲ್ಲವನ್ನೂ ವಿವರಿಸಿದ ರಾಘವೇಂದ್ರ
ಡಾ. ಸಮೀಕ್ಷಾ ರೆಡ್ಡಿ ಸಾವಿನ ಬಗ್ಗೆ ಸ್ಫೋಟಕ ಮಾಹಿತಿ
ಡಾ. ಸಮೀಕ್ಷಾ ರೆಡ್ಡಿ ಸಾವಿನ ಬಗ್ಗೆ ಸ್ಫೋಟಕ ಮಾಹಿತಿ
‘ಡಾರ್ಲಿಂಗ್ ಕೃಷ್ಣಗೆ ಕತೆ ಹೇಳಿದ್ದೆ, ಈಗ ಮರ್ತೋಗಿದೆ ಅಂತಿದ್ದಾರೆ’
‘ಡಾರ್ಲಿಂಗ್ ಕೃಷ್ಣಗೆ ಕತೆ ಹೇಳಿದ್ದೆ, ಈಗ ಮರ್ತೋಗಿದೆ ಅಂತಿದ್ದಾರೆ’
ಬಾರ್​​, ರೆಸ್ಟೋರೆಂಟ್​ಗಳಿಗೂ ತಟ್ಟಿದ್ದ ಗ್ಯಾಸ್ ಅಭಾವದ ಎಫೆಕ್ಟ್
ಬಾರ್​​, ರೆಸ್ಟೋರೆಂಟ್​ಗಳಿಗೂ ತಟ್ಟಿದ್ದ ಗ್ಯಾಸ್ ಅಭಾವದ ಎಫೆಕ್ಟ್
ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಉಡಿ ತುಂಬಿದ ಮುಸ್ಲಿಂ ಮಹಿಳೆಯರು
ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಉಡಿ ತುಂಬಿದ ಮುಸ್ಲಿಂ ಮಹಿಳೆಯರು
ಕಾಲ್ತುಳಿತದಲ್ಲಿ ಮೃತಪಟ್ಟ ಅಭಿಮಾನಿಗಳಿಗೆ ಆರ್​ಸಿಬಿಯಿಂದ ವಿಶೇಷ ನಮನ
ಕಾಲ್ತುಳಿತದಲ್ಲಿ ಮೃತಪಟ್ಟ ಅಭಿಮಾನಿಗಳಿಗೆ ಆರ್​ಸಿಬಿಯಿಂದ ವಿಶೇಷ ನಮನ
ಕಾರಿನಲ್ಲೇ ಸುಟ್ಟು ಹೋದ ಧಾರವಾಡದ ಮಾಜಿ ಶಾಸಕನ ಪುತ್ರ
ಕಾರಿನಲ್ಲೇ ಸುಟ್ಟು ಹೋದ ಧಾರವಾಡದ ಮಾಜಿ ಶಾಸಕನ ಪುತ್ರ
ಇರಾನ್ ಯುದ್ಧದ ನಡುವೆ ಹಾರ್ಮುಜ್ ಜಲಸಂಧಿ ದಾಟಿದ ಎಲ್​ಪಿಜಿ ಹೊತ್ತ 2 ಹಡಗುಗಳು
ಇರಾನ್ ಯುದ್ಧದ ನಡುವೆ ಹಾರ್ಮುಜ್ ಜಲಸಂಧಿ ದಾಟಿದ ಎಲ್​ಪಿಜಿ ಹೊತ್ತ 2 ಹಡಗುಗಳು