AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ವಾಲಿಬಾಲ್ ಆಟಗಾರನ ಕಾಮಕಾಂಡ ಬಯಲು, ಮೊಬೈಲ್​ನಲ್ಲಿತ್ತು ನೂರಾರು ಹುಡುಗಿಯರ ಜೊತೆಗಿನ ಸರಸ ಸಲ್ಲಾಪದ ವಿಡಿಯೋ

ವಿದ್ಯಾರ್ಥಿನಿಗೆ ಮೆಸೇಜ್ ಮೂಲಕ ಲೈಂಗಿಕ ಕಿರುಕುಳ ಹಿನ್ನಲೆ ಅನ್ಯಕೋಮಿನ ಯುವಕನಿಗೆ ಹಿಂದೂ ಸಂಘಟನೆ ಕಾರ್ಯಕರ್ತರಿಂದ ಹಲ್ಲೆ ಮಾಡಲಾಗಿದೆ. ಈ ವೇಳೆ ಆತನ ಮೊಬೈಲ್​ ಪರೀಕ್ಷಿಸಿದಾಗ ನೂರಾರು ಹುಡುಗಿಯರ ಜೊತೆಗಿನ ಸರಸ-ಸಲ್ಲಾಪದ ವಿಡಿಯೋಗಳು ಪತ್ತೆ ಆಗಿವೆ. ಆ ಮೂಲಕ ವಾಲಿಬಾಲ್ ಆಟಗಾರನ ಕಾಮಕಾಂಡ ಬಯಲಾಗಿದೆ.

ಮಂಗಳೂರು: ವಾಲಿಬಾಲ್ ಆಟಗಾರನ ಕಾಮಕಾಂಡ ಬಯಲು, ಮೊಬೈಲ್​ನಲ್ಲಿತ್ತು ನೂರಾರು ಹುಡುಗಿಯರ ಜೊತೆಗಿನ ಸರಸ ಸಲ್ಲಾಪದ ವಿಡಿಯೋ
ಸೈಯದ್
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on:Apr 28, 2025 | 11:23 AM

Share

ಮಂಗಳೂರು, ಏಪ್ರಿಲ್​ 28: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ (Belthangady) ತಾಲೂಕಿನ ಖಾಸಗಿ ಕಾಲೇಜಿನ ವಿದ್ಯಾರ್ಥಿ ಕಂ, ವಾಲಿಬಾಲ್ ಆಟಗಾರ (volleyball player) ಸೈಯದ್​​ ಎಂಬಾತನ ಕಾಮಕಾಂಡ ಬಯಲಾಗಿದೆ. ವಿದ್ಯಾರ್ಥಿನಿಗೆ ಮೆಸೇಜ್ ಮೂಲಕ ಲೈಂಗಿಕ ಕಿರುಕುಳ ಹಿನ್ನಲೆ ಹಿಂದೂ ಸಂಘಟನೆ ಕಾರ್ಯಕರ್ತರು ಆತನ ಮೇಲೆ ಹಲ್ಲೆ ಮಾಡಿದ್ದಾರೆ. ಈ ವೇಳೆ ಸೈಯದ್ ಮೊಬೈಲ್ ಕಿತ್ತುಕೊಂಡು ನೋಡಿದಾಗ ನೂರಾರು ಹುಡುಗಿಯರ ಜೊತೆಗಿನ ಸರಸ ಸಲ್ಲಾಪದ ವಿಡಿಯೋಗಳು ಪತ್ತೆಯಾಗಿವೆ. ಸದ್ಯ ಬೆಳ್ತಂಗಡಿ ಪೊಲೀಸರು ಪೋಕ್ಸೋ ಕಾಯ್ದೆಯಡಿ ಆತನನ್ನು ಬಂಧಿಸಿದ್ದಾರೆ.

ಅಶ್ಲೀಲ ವಿಡಿಯೋಗಳು ಪತ್ತೆ

ಸೈಯದ್​ ಮೂಲತಃ ಕಾರ್ಕಳ ನಿವಾಸಿ. ಬೆಳ್ತಂಗಡಿ ಖಾಸಗಿ ಕಾಲೇಜಿನಲ್ಲಿ ಓದುತ್ತಿದ್ದು, ವಾಲಿಬಾಲ್ ಆಟಗಾರ ಕೂಡ ಹೌದು. ಓರ್ವ ವಿದ್ಯಾರ್ಥಿನಿಗೆ ಸೈಯದ್ ಮೆಸೇಜ್ ಮೂಲಕ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಈ ವಿಚಾರವಾಗಿ ಹಿಂದೂ ಸಂಘಟನೆ ಕಾರ್ಯಕರ್ತರು ಆತನನ್ನು ಥಳಿಸಿ ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ.

ಇದನ್ನೂ ಓದಿ: ಇನ್ಸ್ಟಾಗ್ರಾಮ್​ನಲ್ಲಿ ಪರಿಚಯವಾದ ಸುಂದರಿಗೆ 25 ಲಕ್ಷ ರೂ ಕೊಟ್ಟ: ಮುಂದೇನಾಯ್ತು?

ಇದನ್ನೂ ಓದಿ
Image
ರೈಲ್ವೆ ಪರೀಕ್ಷೆಯಲ್ಲಿ ಜನಿವಾರ, ಮಂಗಳಸೂತ್ರ ತೆಗೆಸದಂತೆ ಸಚಿವ ಸೋಮಣ್ಣ ಸೂಚನೆ
Image
ರೈಲ್ವೆ ಪರೀಕ್ಷೆಯಲ್ಲಿ ಜನಿವಾರ ಮಾತ್ರವಲ್ಲ, ಮಂಗಳಸೂತ್ರವೂ ನಿಷಿದ್ಧ!
Image
ಮಂಗಳೂರಿನಲ್ಲಿ ತೇರು ಬಿದ್ದ ವಿಚಾರ: ಅವಘಡದ ಬಗ್ಗೆ ದೈವಗಳು ಆಕ್ರೋಶ
Image
ಕಂಡಕ್ಟರ್​ನಿಂದ ಯುವತಿಗೆ ಲೈಂಗಿಕ ಕಿರುಕುಳ: ವಿಡಿಯೋ ವೈರಲ್

ಇನು ಈ ಘಟನೆ ವೇಳೆ ಸೈಯದ್​​ ಮೊಬೈಲ್ ಕಿತ್ತುಕೊಂಡು ನೋಡಿದಾಗ ಹಿಂದೂ ಸಂಘಟನೆ ಕಾರ್ಯಕರ್ತರು ಒಂದು ಕ್ಷಣ ಶಾಕ್​ ಆಗಿದ್ದಾರೆ. ಏಕೆಂದರೆ ಆತನ ಮೊಬೈಲ್​ ತುಂಬಾ ನೂರಾರು ಹುಡುಗಿಯರ ಜೊತೆಗಿನ ಸರಸ-ಸಲ್ಲಾಪದ ವಿಡಿಯೋಗಳನ್ನು ಕಂಡು ದಂಗಾಗಿದ್ದಾರೆ.

ಹಿಂದೂ ಕಾರ್ಯಕರ್ತರ ವಿರುದ್ಧವೂ FIR ದಾಖಲು

ಇತ್ತ ತನ್ನ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಸೈಯದ್​​ ಕೂಡ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾನೆ. ಹೀಗಾಗಿ ಹಿಂದೂ ಸಂಘಟನೆ ಕಾರ್ಯಕರ್ತರ ವಿರುದ್ಧವೂ ಎಫ್​ಐಆರ್​ ದಾಖಲಾಗಿದೆ. ಉಜಿರೆಯ ಮನೋಜ್ ಮತ್ತು ಪ್ರಜ್ವಲ್ ಗೌಡ ಎಂಬುವವರ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ಕೆಎಸ್​ಆರ್​ಟಿಸಿ ಬಸ್ಸಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ

ಇನ್ನು ಇತ್ತೀಚೆಗೆ ಕೆಎಸ್​ಆರ್​ಟಿಸಿ ಬಸ್ಸಿನಲ್ಲಿ ನಿರ್ವಾಹಕನೊಬ್ಬ ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದ ಘಟನೆ ಮಂಗಳೂರಿನ ಮುಡಿಪು -ಸ್ಟೇಟ್‌ ಬ್ಯಾಂಕ್‌ ಭಾಗದಲ್ಲಿ ನಡೆದಿತ್ತು. ಈ ಬಗ್ಗೆ ಪ್ರಯಾಣಿಕರೊಬ್ಬರು ಮಾಡಿದ್ದ ವಿಡಿಯೋ ಕೂಡ ವೈರಲ್ ಆಗಿತ್ತು. ಆ ಬೆನ್ನಲ್ಲೇ ಎಚ್ಚೆತ್ತುಕೊಂಡಿದ್ದ ಪೊಲೀಸರು, ಬಾಗಲಕೋಟೆ ಮೂಲದ ಆರೋಪಿ ಪ್ರದೀಪ್‌ (40) ಎಂಬಾತನನ್ನು ವಶಕ್ಕೆ ಪಡೆದುಕೊಂಡಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:10 am, Mon, 28 April 25

ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ