AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಶಾಸಕರೊಬ್ಬರ ಜೊತೆಗಿನ ಅಶ್ಲೀಲ ಫೋಟೋ ವೈರಲ್: ತಮ್ಮ ಫೋಟೋ ಬಗ್ಗೆ ಸ್ಪಷ್ಟನೆ ಕೊಟ್ಟ ಮಹಿಳೆ

ಪುತ್ತೂರು ಬಿಜೆಪಿ ಶಾಸಕ ಹಾಗೂ ಮಹಿಳೆಯೋರ್ವರ ಫೋಟೋ ವೈರಲ್ ಆಗಿದೆ. ಶಾಸಕರ ಜೊತೆಗಿನ ಫೋಟೋ ವೈರಲ್ ಬಗ್ಗೆ ಸ್ವತಃ ಫೋಟೋದಲ್ಲಿರುವ ಮಹಿಳೆಯೇ ಸ್ಪಷ್ಟನೆ ಕೊಟ್ಟಿದ್ದಾರೆ.

ಬಿಜೆಪಿ ಶಾಸಕರೊಬ್ಬರ ಜೊತೆಗಿನ ಅಶ್ಲೀಲ ಫೋಟೋ ವೈರಲ್: ತಮ್ಮ ಫೋಟೋ ಬಗ್ಗೆ ಸ್ಪಷ್ಟನೆ ಕೊಟ್ಟ ಮಹಿಳೆ
ರಮೇಶ್ ಬಿ. ಜವಳಗೇರಾ
|

Updated on:Apr 06, 2023 | 2:30 PM

Share

ಮಂಗಳೂರು: ವಿಧಾನಸಭೆ ಚುನಾವಣೆ ಹೊತ್ತಲ್ಲೇ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಬಿಜೆಪಿ ಶಾಸಕ ಸಂಜೀವ್ ಮಠಂದೂರು ಮಹಿಳೆ ಜೊತೆ ಇರುವ ಅಶ್ಲೀಲ ಫೋಟೋಗಳು ವೈರಲ್ ಆಗುತ್ತಿದ್ದ, ಜಿಲ್ಲೆಯಲ್ಲಿ ಭಾರೀ ಸಂಚಲನ ಮೂಡಿಸಿದೆ. ಈ ಫೋಟೋಗಳು ವೈರಲ್ ಆಗುತ್ತಿದ್ದಂತೆಯೇ ಶಾಸಕ ಸಂಜೀವ್ ಮಠಂದೂರು ಉಪ್ಪಿನಂಗಡಿ ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ. ಇದರ ಬೆನಲ್ಲೇ ಇದೀಗ ಫೋಟೋದಲ್ಲಿ ಇರುವ ಮಹಿಳೆ ಸಹ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: BJP MLA Photo Viral: ಬಿಜೆಪಿ ಶಾಸಕರೊಬ್ಬರು ಮಹಿಳೆ ಜೊತೆ ಇರುವ ಅಶ್ಲೀಲ ಫೋಟೊ ವೈರಲ್

ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಉಪ್ಪಿನಂಗಡಿಯಲ್ಲಿ ಇಂದು (ಏಪ್ರಿಲ್ 06) ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಮಹಿಳೆ, ನನ್ನ ವೈಯಕ್ತಿ ಫೋಟೋಗಳನ್ನು ಪುತ್ತೂರಿನ ಶಾಸಕರ ಫೋಟೋ ಜೊತೆ ಜೋಡಿಸಿದ್ದು, ಎಡಿಟ್ ಮಾಡಿದ ಫೋಟೋವನ್ನು ವೈರಲ್ ಮಾಡುತ್ತಿದ್ದಾರೆ. ಇದರಿಂದ ನನ್ನ ಹಾಗೂ ನನ್ನ ಕುಟುಂಬಕ್ಕೆ ತುಂಬಾ ನೋವಾಗಿದೆ. ಓರ್ವ ಮಹಿಳೆ ಮೇಲೆ ಈ ರೀತಿ ದೌರ್ಜನ್ಯ ಎಸಗುತ್ತಿದ್ದಾರೆ. ಶಾಸಕರಿಗೂ ನನಗೂ ಸಂಬಂಧವಿಲ್ಲ. ಆದರೂ ಫೋಟೋ ಎಡಿಟ್ ಮಾಡಿ ತೇಜೋವಧೆ ಮಾಡುತ್ತಿದ್ದಾರೆ ಎಂದು ಸ್ಪಷ್ಟಪಡಿಸಿದರು.

ಈಗ ನನಗೆ ಬೆದರಿಕೆ ಕರೆಗಳು ಬರುತ್ತಿವೆ‌. ಶಾಸಕರನ್ನು ಭೇಟಿ ಮಾಡುವ ಪ್ರಸಂಗ ಈ ಹಿಂದೆ ಬಂದಿರಲೇ ಇಲ್ಲ. ನನ್ನ ಫೋಟೋಗಳನ್ನು ತೆಗೆದುಕೊಂಡು ಎಡಿಟ್ ಮಾಡಿ ವೈರಲ್ ಮಾಡುತ್ತಿದ್ದಾರೆ. ಅದಕ್ಕೆ ನಾನು ಹೆದರುವ ಪ್ರಶ್ನೆಯೇ ಇಲ್ಲ. ಯಾಕಂದ್ರೆ ನಾನು ಯಾವುದೇ ತಪ್ಪು ಮಾಡಿಲ್ಲ. ಎಡಿಟ್ ಮಾಡುವ ಕೌಶಲ್ಯತೆ ಜನರಲ್ಲಿ ಇದೆ. ಆದ್ರೆ, ನನ್ನ ಫೋಟೋಗಳನ್ನು ದುರುಪಯೋಗ ಮಾಡಿಕೊಂಡಿದ್ದಾರೆ. ಈ ರೀತಿ ಎಡಿಟ್ ಮಾಡಿ ಓರ್ವ ಮಹಿಳೆ ವಿರುದ್ಧ ಇಷ್ಟೊಂದು ದೊಡ್ಡ ಮಟ್ಟದ ಆರೋಪ ಮಾಡುವುದು ಸರಿ ಅಲ್ಲ. ಹಾಗೇ ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದೇನೆ. ಯಾರು ಇದನೆಲ್ಲ ಮಾಡಿದ್ದಾರೆ ಅವರಿಗೆ ಸೂಕ್ತ ಶಿಕ್ಷೆ ಆಗಬೇಕೆಂದು ಮನವಿ ಮಾಡಿದರು.

ಶಾಸಕರಿಂದಲೂ ದೂರು

ಇನ್ನು ಮಹಿಳೆಯೊಂದಿಗೆ ತಮ್ಮ ಫೋಟೋ ವೈರಲ್ ಆಗುತ್ತಿದ್ದಂತೆಯೇ ಶಾಸಕ ಸಂಜೀವ್ ಮಠಂದೂರು ಸಹ ಈಗಾಗಲೇ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ನನ್ನ ಎಡಿಟ್ ಫೋಟೋವನ್ನು  ವೈರಲ್ ಆಗುತ್ತಿದ್ದು,. ವೈರಲ್ ಮಾಡುತ್ತಿರುವವರ ವಿರುದ್ಧ ಕ್ರಮಕೈಗೊಳ್ಳುವಂತೆ ದೂರಿನಲ್ಲಿ ಮನವಿ ಮಾಡಿದ್ದರು. ಇನ್ನು ಉಪ್ಪಿನಂಗಡಿ ಪೊಲೀಸರು ಇನ್ಫಾರ್ಮೇಶನ್ ಟೆಕ್ನಾಲಜಿ ಆಕ್ಟ್ ಪ್ರಕಾರ ಎಫ್.ಐ.ಆರ್ ದಾಖಲು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 2:23 pm, Thu, 6 April 23

Follow Us
Ramesh B Jawalagera
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?