AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿನಲ್ಲಿ ಮಹಿಳೆ ಮೇಲೆ ಅತ್ಯಾಚಾರ: ಪತಿ ಸೇರಿ ಪೊಲೀಸ್​ ಕಾನ್ಸ್​ಟೇಬಲ್​​ನ ಬಂಧನ

ಮಂಗಳೂರಿನಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ಆರೋಪದಡಿ ಕಾನ್ಸ್​ಟೇಬಲ್​ನನ್ನು ಅರೆಸ್ಟ್ ಮಾಡಲಾಗಿದೆ. ಪತಿಯ ಸಹಕಾರ ಪಡೆದು ಮಹಿಳೆಗೆ ಲೈಂಗಿಕ ದೌರ್ಜನ್ಯವೆಸಗಿರುವಂತಹ ಘಟನೆ ನಡೆದಿದೆ. ಈ ಪ್ರಕರಣದಲ್ಲಿ ಸಂತ್ರಸ್ತೆಯ ಪತಿಯನ್ನು ಕೂಡ ಪೊಲೀಸರು ಬಂಧಿಸಿದ್ದಾರೆ. ಪೊಲೀಸ್ ಕಮಿಷನರ್ ಸುಧೀರ್ ಕುಮಾರ್​ಗೆ ಮಹಿಳೆ ದೂರು ನೀಡಿದ್ದರು.

ಮಂಗಳೂರಿನಲ್ಲಿ ಮಹಿಳೆ ಮೇಲೆ ಅತ್ಯಾಚಾರ: ಪತಿ ಸೇರಿ ಪೊಲೀಸ್​ ಕಾನ್ಸ್​ಟೇಬಲ್​​ನ ಬಂಧನ
ಪೊಲೀಸ್ ಠಾಣೆ ಕಾನ್ಸ್‌ಟೇಬಲ್ ಚಂದ್ರನಾಯಕ್
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on: Jul 16, 2025 | 1:55 PM

Share

ಮಂಗಳೂರು, ಜುಲೈ 16: ಮಹಿಳೆಯ ಮೇಲೆ ಅತ್ಯಾಚಾರ ಆರೋಪ ಹಿನ್ನಲೆ ಪೊಲೀಸ್​ ಕಾನ್ಸ್​ಟೇಬಲ್​​ನನ್ನು ಮಂಗಳೂರಿನ ಕಂಕನಾಡಿ ಪೊಲೀಸರು ಬಂಧಿಸಿದ್ದಾರೆ. ಕಾವೂರು ಪೊಲೀಸ್ ಠಾಣೆ ಕಾನ್ಸ್‌ಟೇಬಲ್ ಚಂದ್ರನಾಯಕ್ ಬಂಧಿತ ಆರೋಪಿ. ಇದೇ ಪ್ರಕರಣದಲ್ಲಿ ಪತ್ನಿಯ ಖಾಸಗಿ ವಿಡಿಯೋ ಸೆರೆ ಹಿಡಿದು ಬ್ಲ್ಯಾಕ್‌ಮೇಲ್​ ಮಾಡುತ್ತಿದ್ದ ಗಂಡನನ್ನು ಕೂಡ ಬಂಧಿಸಲಾಗಿದೆ. ಪೊಲೀಸ್ ಕಮಿಷನರ್ ಸುಧೀರ್ ಕುಮಾರ್​ಗೆ ಮಹಿಳೆ ದೂರು ನೀಡಿದ್ದರು.

ನಡೆದದ್ದೇನು? 

ಸಂತ್ರಸ್ತ ಮಹಿಳೆಗೆ ಮದುವೆಯಾಗಿ ಕೆಲ ವರ್ಷ ಆಗಿತ್ತು. ಪತ್ನಿಯ ಖಾಸಗಿ ವಿಡಿಯೋವನ್ನು ಪತಿ ಸೆರೆ ಹಿಡಿದಿದ್ದ. ಈ ವಿಡಿಯೋ ತೋರಿಸಿ ಬ್ಲ್ಯಾಕ್‌ಮೇಲ್​​​ ಕೂಡ ಮಾಡುತ್ತಿದ್ದ. ತಾನು ಹೇಳಿದವರ ಜೊತೆ ಮಲಗಬೇಕು ಅಂತ ಟಾರ್ಚರ್ ಕೊಟ್ಟಿದ್ದ. ವಿಡಿಯೋ ಇಟ್ಟುಕೊಂಡು ಬೇರೆಯವರ ಹಾಸಿಗೆಗೆ ಪತ್ನಿಯನ್ನು ಆರೋಪಿ ಪತಿ ದೂಡಿದ್ದ. ಇದರಿಂದ ತುಂಬಾ ನೊಂದಿದ್ದ ಸಂತ್ರಸ್ತೆ ಪೊಲೀಸನ ಸಂಪರ್ಕ ಮಾಡಿದ್ದಾರೆ.

ಇದನ್ನೂ ಓದಿ: ಮಂಗಳೂರು: ಉಪನ್ಯಾಸಕರಿಂದಲೇ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಬೆಂಗಳೂರಿನಲ್ಲಿ ಮೂವರ ಬಂಧನ

ಇದನ್ನೂ ಓದಿ
Image
ಉಪನ್ಯಾಸಕರಿಂದಲೇ ವಿದ್ಯಾರ್ಥಿನಿ ಮೇಲೆ ರೇಪ್, ಬೆಂಗಳೂರಿನಲ್ಲಿ ಮೂವರ ಬಂಧನ
Image
ಪ್ರತ್ಯೇಕ ಘಟನೆ: ಮಂಡ್ಯ, ಮಂಗಳೂರಿನಲ್ಲಿ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ
Image
ಬಿಜೆಪಿ ಮುಖಂಡನ ಪುತ್ರನಿಂದ ಯುವತಿಗೆ ವಂಚನೆ ಪ್ರಕರಣ: ಭೂಗತ ಪಾತಕಿ ಎಂಟ್ರಿ!
Image
ಹಿಂದೂ ಮುಖಂಡನ ಮೊಬೈಲ್​ನಲ್ಲಿ ರಾಜಕಾರಣಿಯೊಬ್ಬರ ಅಶ್ಲೀಲ ವಿಡಿಯೋ ಪತ್ತೆ!

ಬೇರೆಯವರ ಮೂಲಕ ಕಾವೂರು ಪೊಲೀಸ್ ಚಂದ್ರನಾಯಕ್ ಪರಿಚಯವಾಗಿದೆ. ವಿಡಿಯೋ ಡಿಲೀಟ್ ಮಾಡಿಸುವಂತೆ ಚಂದ್ರನಾಯಕನಿಗೆ ಸಂತ್ರಸ್ತೆ ಮನವಿ ಮಾಡಿದ್ದರು. ಆ ಮೂಲಕ ಚಂದ್ರನಾಯಕ್ ತನ್ನ  ಪೊಲೀಸ್ ಪವರ್ ಬಳಸಿ ವಿಡಿಯೋವನ್ನು ಡಿಲೀಟ್ ಮಾಡಿಸಿದ್ದ. ಬಳಿಕ ದಂಪತಿ ನಡುವೆ ರಾಜಿ ಮಾಡಿಸಿದ್ದ.

ಇದನ್ನೂ ಓದಿ: ಪ್ರತ್ಯೇಕ ಘಟನೆ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಉದ್ಯಮಿ, ಚಾಕೊಲೇಟ್ ಕೊಡಿಸುವುದಾಗಿ ಬಾಲಕಿ ಮೇಲೆ ಅತ್ಯಾಚಾರ

ಈ ವೇಳೆ ಪೊಲೀಸಪ್ಪ ಸಂತ್ರಸ್ತೆ ಪತಿ ಬಳಿ ವಿಶ್ವಾಸದಿಂದ ಇದ್ದ. ಪತಿಯ ಸಹಕಾರ ಪಡೆದು ಮಹಿಳೆಗೆ ಲೈಂಗಿಕ ದೌರ್ಜನ್ಯವೆಸಗಿದ್ದಾನೆ. ಚಂದ್ರನಾಯಕ್​ ಪದೇ ಪದೇ ಮಹಿಳೆಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. ಇತ್ತ ಸಂತ್ರಸ್ತೆ ಪತಿಗೆ ಸಂಪೂರ್ಣ ಬೆಂಬಲ ನೀಡಿ ಹಳೇ ಚಾಳಿ ಮುಂದುವರೆಸಲು ಕಾನ್ಸ್‌ಟೇಬಲ್​ ಸಹಕರಿಸಿದ್ದ. ಇದರಿಂದ ದಾರಿ ಕಾಣದೆ ಸಂತ್ರಸ್ತೆ ಪೊಲೀಸ್ ಆಯುಕ್ತ‌ ಸುಧೀರ್ ಕುಮಾರ್ ರೆಡ್ಡಿ ಮೊರೆ ಹೋಗಿದ್ದರು. ಇದೀಗ ಇಬ್ಬರ ಬಂಧನವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ