AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿನಲ್ಲಿ ಮಹಿಳೆ ಮೇಲೆ ಅತ್ಯಾಚಾರ: ಪತಿ ಸೇರಿ ಪೊಲೀಸ್​ ಕಾನ್ಸ್​ಟೇಬಲ್​​ನ ಬಂಧನ

ಮಂಗಳೂರಿನಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ಆರೋಪದಡಿ ಕಾನ್ಸ್​ಟೇಬಲ್​ನನ್ನು ಅರೆಸ್ಟ್ ಮಾಡಲಾಗಿದೆ. ಪತಿಯ ಸಹಕಾರ ಪಡೆದು ಮಹಿಳೆಗೆ ಲೈಂಗಿಕ ದೌರ್ಜನ್ಯವೆಸಗಿರುವಂತಹ ಘಟನೆ ನಡೆದಿದೆ. ಈ ಪ್ರಕರಣದಲ್ಲಿ ಸಂತ್ರಸ್ತೆಯ ಪತಿಯನ್ನು ಕೂಡ ಪೊಲೀಸರು ಬಂಧಿಸಿದ್ದಾರೆ. ಪೊಲೀಸ್ ಕಮಿಷನರ್ ಸುಧೀರ್ ಕುಮಾರ್​ಗೆ ಮಹಿಳೆ ದೂರು ನೀಡಿದ್ದರು.

ಮಂಗಳೂರಿನಲ್ಲಿ ಮಹಿಳೆ ಮೇಲೆ ಅತ್ಯಾಚಾರ: ಪತಿ ಸೇರಿ ಪೊಲೀಸ್​ ಕಾನ್ಸ್​ಟೇಬಲ್​​ನ ಬಂಧನ
ಪೊಲೀಸ್ ಠಾಣೆ ಕಾನ್ಸ್‌ಟೇಬಲ್ ಚಂದ್ರನಾಯಕ್
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on: Jul 16, 2025 | 1:55 PM

Share

ಮಂಗಳೂರು, ಜುಲೈ 16: ಮಹಿಳೆಯ ಮೇಲೆ ಅತ್ಯಾಚಾರ ಆರೋಪ ಹಿನ್ನಲೆ ಪೊಲೀಸ್​ ಕಾನ್ಸ್​ಟೇಬಲ್​​ನನ್ನು ಮಂಗಳೂರಿನ ಕಂಕನಾಡಿ ಪೊಲೀಸರು ಬಂಧಿಸಿದ್ದಾರೆ. ಕಾವೂರು ಪೊಲೀಸ್ ಠಾಣೆ ಕಾನ್ಸ್‌ಟೇಬಲ್ ಚಂದ್ರನಾಯಕ್ ಬಂಧಿತ ಆರೋಪಿ. ಇದೇ ಪ್ರಕರಣದಲ್ಲಿ ಪತ್ನಿಯ ಖಾಸಗಿ ವಿಡಿಯೋ ಸೆರೆ ಹಿಡಿದು ಬ್ಲ್ಯಾಕ್‌ಮೇಲ್​ ಮಾಡುತ್ತಿದ್ದ ಗಂಡನನ್ನು ಕೂಡ ಬಂಧಿಸಲಾಗಿದೆ. ಪೊಲೀಸ್ ಕಮಿಷನರ್ ಸುಧೀರ್ ಕುಮಾರ್​ಗೆ ಮಹಿಳೆ ದೂರು ನೀಡಿದ್ದರು.

ನಡೆದದ್ದೇನು? 

ಸಂತ್ರಸ್ತ ಮಹಿಳೆಗೆ ಮದುವೆಯಾಗಿ ಕೆಲ ವರ್ಷ ಆಗಿತ್ತು. ಪತ್ನಿಯ ಖಾಸಗಿ ವಿಡಿಯೋವನ್ನು ಪತಿ ಸೆರೆ ಹಿಡಿದಿದ್ದ. ಈ ವಿಡಿಯೋ ತೋರಿಸಿ ಬ್ಲ್ಯಾಕ್‌ಮೇಲ್​​​ ಕೂಡ ಮಾಡುತ್ತಿದ್ದ. ತಾನು ಹೇಳಿದವರ ಜೊತೆ ಮಲಗಬೇಕು ಅಂತ ಟಾರ್ಚರ್ ಕೊಟ್ಟಿದ್ದ. ವಿಡಿಯೋ ಇಟ್ಟುಕೊಂಡು ಬೇರೆಯವರ ಹಾಸಿಗೆಗೆ ಪತ್ನಿಯನ್ನು ಆರೋಪಿ ಪತಿ ದೂಡಿದ್ದ. ಇದರಿಂದ ತುಂಬಾ ನೊಂದಿದ್ದ ಸಂತ್ರಸ್ತೆ ಪೊಲೀಸನ ಸಂಪರ್ಕ ಮಾಡಿದ್ದಾರೆ.

ಇದನ್ನೂ ಓದಿ: ಮಂಗಳೂರು: ಉಪನ್ಯಾಸಕರಿಂದಲೇ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಬೆಂಗಳೂರಿನಲ್ಲಿ ಮೂವರ ಬಂಧನ

ಇದನ್ನೂ ಓದಿ
Image
ಉಪನ್ಯಾಸಕರಿಂದಲೇ ವಿದ್ಯಾರ್ಥಿನಿ ಮೇಲೆ ರೇಪ್, ಬೆಂಗಳೂರಿನಲ್ಲಿ ಮೂವರ ಬಂಧನ
Image
ಪ್ರತ್ಯೇಕ ಘಟನೆ: ಮಂಡ್ಯ, ಮಂಗಳೂರಿನಲ್ಲಿ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ
Image
ಬಿಜೆಪಿ ಮುಖಂಡನ ಪುತ್ರನಿಂದ ಯುವತಿಗೆ ವಂಚನೆ ಪ್ರಕರಣ: ಭೂಗತ ಪಾತಕಿ ಎಂಟ್ರಿ!
Image
ಹಿಂದೂ ಮುಖಂಡನ ಮೊಬೈಲ್​ನಲ್ಲಿ ರಾಜಕಾರಣಿಯೊಬ್ಬರ ಅಶ್ಲೀಲ ವಿಡಿಯೋ ಪತ್ತೆ!

ಬೇರೆಯವರ ಮೂಲಕ ಕಾವೂರು ಪೊಲೀಸ್ ಚಂದ್ರನಾಯಕ್ ಪರಿಚಯವಾಗಿದೆ. ವಿಡಿಯೋ ಡಿಲೀಟ್ ಮಾಡಿಸುವಂತೆ ಚಂದ್ರನಾಯಕನಿಗೆ ಸಂತ್ರಸ್ತೆ ಮನವಿ ಮಾಡಿದ್ದರು. ಆ ಮೂಲಕ ಚಂದ್ರನಾಯಕ್ ತನ್ನ  ಪೊಲೀಸ್ ಪವರ್ ಬಳಸಿ ವಿಡಿಯೋವನ್ನು ಡಿಲೀಟ್ ಮಾಡಿಸಿದ್ದ. ಬಳಿಕ ದಂಪತಿ ನಡುವೆ ರಾಜಿ ಮಾಡಿಸಿದ್ದ.

ಇದನ್ನೂ ಓದಿ: ಪ್ರತ್ಯೇಕ ಘಟನೆ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಉದ್ಯಮಿ, ಚಾಕೊಲೇಟ್ ಕೊಡಿಸುವುದಾಗಿ ಬಾಲಕಿ ಮೇಲೆ ಅತ್ಯಾಚಾರ

ಈ ವೇಳೆ ಪೊಲೀಸಪ್ಪ ಸಂತ್ರಸ್ತೆ ಪತಿ ಬಳಿ ವಿಶ್ವಾಸದಿಂದ ಇದ್ದ. ಪತಿಯ ಸಹಕಾರ ಪಡೆದು ಮಹಿಳೆಗೆ ಲೈಂಗಿಕ ದೌರ್ಜನ್ಯವೆಸಗಿದ್ದಾನೆ. ಚಂದ್ರನಾಯಕ್​ ಪದೇ ಪದೇ ಮಹಿಳೆಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. ಇತ್ತ ಸಂತ್ರಸ್ತೆ ಪತಿಗೆ ಸಂಪೂರ್ಣ ಬೆಂಬಲ ನೀಡಿ ಹಳೇ ಚಾಳಿ ಮುಂದುವರೆಸಲು ಕಾನ್ಸ್‌ಟೇಬಲ್​ ಸಹಕರಿಸಿದ್ದ. ಇದರಿಂದ ದಾರಿ ಕಾಣದೆ ಸಂತ್ರಸ್ತೆ ಪೊಲೀಸ್ ಆಯುಕ್ತ‌ ಸುಧೀರ್ ಕುಮಾರ್ ರೆಡ್ಡಿ ಮೊರೆ ಹೋಗಿದ್ದರು. ಇದೀಗ ಇಬ್ಬರ ಬಂಧನವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Pruthviraj
Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More