ಮಂಗಳೂರು ವೈದ್ಯರ ಎಡವಟ್ಟು: ಸರ್ಜರಿ ವೇಳೆ ಯುವಕ ಸಾವು, ಪೋಷಕರ ಆಕ್ರೋಶ

ಎದೆ ಭಾಗ ಉಬ್ಬಿದ ಹಿನ್ನಲೆಯಲ್ಲಿ ಗೈನ್ ಇಕೋಮಸ್ಟಿಯಾ ಸರ್ಜರಿಗಾಗಿ ಉಳ್ಳಾಲದ ಅಕ್ಕರೆಕೆರೆ ನಿವಾಸಿ ಮುಹಮ್ಮದ್ ಮಾಝಿನ್ (32) ಅವರು ಮಂಗಳೂರು ನಗರದ ಕಂಕನಾಡಿಯ ಬೆಂದೂರ್ ವೆಲ್ ನಲ್ಲಿರುವ ಕ್ಲಿನಿಕ್​ನಲ್ಲಿ ದಾಖಲಾಗಿದ್ದರು. ಮುಂದೇನಾಯ್ತು? ಈ ಸುದ್ದಿ ಓದಿ.

ಮಂಗಳೂರು ವೈದ್ಯರ ಎಡವಟ್ಟು: ಸರ್ಜರಿ ವೇಳೆ ಯುವಕ ಸಾವು, ಪೋಷಕರ ಆಕ್ರೋಶ
ಕ್ಲಿನಿಕ್​, ಮೃತ ಯುವಕ
Edited By: ವಿವೇಕ ಬಿರಾದಾರ

Updated on: Sep 25, 2024 | 1:13 PM

ಮಂಗಳೂರು, ಸೆಪ್ಟೆಂಬರ್​ 25: ಕಾಸ್ಮೆಟಿಕ್ ಸರ್ಜರಿ ವೇಳೆ ಯುವಕ ಮೃತಪಟ್ಟ ಪ್ರಕರಣವನ್ನು ದ‌ಕ್ಷಿಣ ಕನ್ನಡ (Dakshina Kannada) ಜಿಲ್ಲಾ ಆರೋಗ್ಯ ಇಲಾಖೆ (Health Department) ಗಂಭೀರವಾಗಿ ಪರಿಗಣಿಸಿದೆ. ಸರ್ಜರಿ ನಡೆದ ಬೆಂದೂರ್​ ವೆಲ್​ನಲ್ಲಿರುವ ಫ್ಲೋಂಟ್ ಕಾಸ್ಮೆಟಿಕ್ ಸರ್ಜರಿ ಮತ್ತು ಹೇರ್ ಟ್ರಾನ್ಸ್​​ಪ್ಲಾಂಟ್ ಕ್ಲಿನಿಕ್​ಗೆ ಜಿಲ್ಲಾ ಆರೋಗ್ಯ ಅಧಿಕಾರಿ ಓ ಡಾ.ತಿಮ್ಮಯ್ಯ ಭೇಟಿ ನೀಡಿ, ಮಾಹಿತಿ ಸಂಗ್ರಹಿಸಿದರು.

ಎದೆ ಭಾಗ ಉಬ್ಬಿದ ಹಿನ್ನೆಲೆಯಲ್ಲಿ ಗೈನ್ ಇಕೋಮಸ್ಟಿಯಾ ಸರ್ಜರಿಗಾಗಿ ಉಳ್ಳಾಲದ ಅಕ್ಕರೆಕೆರೆ ನಿವಾಸಿ ಮುಹಮ್ಮದ್ ಮಾಝಿನ್ (32) ಅವರು ಮಂಗಳೂರು ನಗರದ ಕಂಕನಾಡಿಯ ಬೆಂದೂರ್ ವೆಲ್ ನಲ್ಲಿರುವ ಫ್ಲೋಂಟ್ ಕಾಸ್ಮೆಟಿಕ್ ಸರ್ಜರಿ ಮತ್ತು ಹೇರ್ ಟ್ರಾನ್ಸ್​​ಪ್ಲಾಂಟ್ ಕ್ಲಿನಿಕ್​ನಲ್ಲಿ ದಾಖಲಾಗಿದ್ದರು. ಅರ್ಧ ಗಂಟೆಯಲ್ಲಿ ಮುಗಿಯಬಹುದಾಗಿದ್ದ ಸಣ್ಣ ಶಸ್ತ್ರಚಿಕಿತ್ಸೆ, ಸಂಜೆಯಾದರು ಮುಗಿಯದ ಹಿನ್ನೆಲೆಯಲ್ಲಿ ಅನುಮಾನಗೊಂಡ ಮಾಝಿನ್ ಪೋಷಕರು ಅನುಮಾನಗೊಂಡಿದ್ದಾರೆ.

ಇದನ್ನೂ ಓದಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಲರಾ ಆತಂಕ! ಆಹಾರ ಗುಣಮಟ್ಟದ ಬಗ್ಗೆ ಎಚ್ಚರವಹಿಸಲು ಸೂಚನೆ

ಸಂಶಯಗೊಂಡು‌ ವಿಚಾರಿಸಿದಾಗ ಮುಹಮ್ಮದ್ ಮಾಝಿನ್ ಆರೋಗ್ಯದಲ್ಲಿ ಏರುಪೇರು ಆಗಿರುವ ಮಾಹಿತಿ ಬೆಳಕಿಗೆ ಬಂದಿದೆ. ಕೂಡಲೆ ಪೋಷಕರು ಮುಹಮ್ಮದ್ ಮಾಝಿನ್​ನನ್ನು ತಕ್ಷಣ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಖಾಸಗಿ ಆಸ್ಪತ್ರೆ ವೈದ್ಯರು ಪರೀಕ್ಷಿಸಿದಾಗ ಮುಹಮ್ಮದ್ ಮಾಝಿನ್ ಮೃತಪಟ್ಟಿದ್ದಾರೆ ಎಂದು ಘೋಷಿಸಿದ್ದಾರೆ. ಸರ್ಜರಿಯ ವೇಳೆ ವೈದ್ಯರು ಎಡವಟ್ಟು ಮಾಡಿದ್ದಾರೆ ಎಂದು ಪೋಷಕರು ಆರೋಪ ಮಾಡಿದ್ದಾರೆ. ಕದ್ರಿ‌ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ತನಿಖೆಗೆ ಸಮಿತಿ ರಚನೆ

ಪ್ರಕರಣ ಸಂಬಂಧ ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಡಾ.ತಿಮ್ಮಯ್ಯ ಮಾತನಾಡಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಕ್ಲಿನಿಕ್​ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇವೆ. ಕ್ಲಿನಿಕ್​ನ ವೈದ್ಯರು ಹಾಗೂ ಮುಖ್ಯಸ್ಥರಿಂದ ಪ್ರಕರಣ ಸಂಬಂಧ ಮಾಹಿತಿ ಪಡೆಯಲಾಗಿದೆ. ಸದ್ಯ ಪ್ರಾಥಮಿಕ ತನಿಖೆ ನಡೆಸಿ ಜಿಲ್ಲಾಧಿಕಾರಿಗೆ ವರದಿ ಸಲ್ಲಿಕೆ ಮಾಡುತ್ತೇವೆ ಎಂದು ಹೇಳಿದರು.

ಈ ಘಟನೆಯ ಸಮಗ್ರ ತನಿಖೆಗೆ ಆರೋಗ್ಯ ಇಲಾಖೆಯಿಂದ ಸಮಿತಿ ರಚಿಸಲಾಗುವುದು. ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್​ ಅವರಿಗೆ ವರದಿ ಸಲ್ಲಿಕೆ ಮಾಡುತ್ತೇವೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Ashok

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸುದ್ದಿಬಿಡುಗಡೆ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಪ್ರಜಾ ಟಿ.ವಿಯ ಉಡುಪಿ ಜಿಲ್ಲಾ ವರದಿಗಾರರಾಗಿ ಒಂದು ವರ್ಷ ಏಳು ತಿಂಗಳು ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ, ಒಂದು ವರ್ಷ ನಾಲ್ಕು ತಿಂಗಳಿನಿಂದ ಟಿ.ವಿ 9 ವಾಹಿನಿಯಲ್ಲಿ ದಕ್ಷಿಣಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ ಇಂಡಿಯಾ ಟೆಲಿವಿಷನ್​ . ಕಾಮ್​ 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More
Follow Us