AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದೇಶಿ ಯುವತಿಯನ್ನು ಹಿಂದೂ ಸಂಪ್ರದಾಯದಂತೆ ಮದ್ವೆಯಾದ ಮಂಗಳೂರಿಗ: ಥೈಲ್ಯಾಂಡ್‌‌ನಲ್ಲಿ ಅರಳಿದ ಪ್ರೇಮಕಥೆ

ಮದುವೆ ಎಂಬುದು ಸ್ವರ್ಗದಲ್ಲಿ ನಿಶ್ಚಯವಾಗಿರುತ್ತದೆ, ಭೂಮಿಯಲ್ಲಿ ಪೂರ್ಣಗೊಳ್ಳುತ್ತದೆ ಎಂಬ ಮಾತಿದೆ. ಕಡಲನಗರಿ ಮಂಗಳೂರಿನ ಯುವಕನ ಬಾಳಿನಲ್ಲಿ ಈ ಮಾತು ಅಕ್ಷರಶ ನಿಜವಾಗಿದೆ. ಥೈಲ್ಯಾಂಡ್‌‌ನಲ್ಲಿ ಅರಳಿದ ಪ್ರೇಮಕಥೆ ಮಂಗಳೂರಿನಲ್ಲಿ ಸಪ್ತಪದಿ ತುಳಿಯೋ ಮೂಲಕ ಸುಂದರ ತಿರುವು ಪಡೆದಿದೆ. ಮಂಗಳೂರಿನ ಯುವಕ ಥೈಲ್ಯಾಂಡ್ ಯುವತಿಯ ಸಿಂಪಲ್ ಲವ್ ಕಮ್ ಆ್ಯರೇಂಜ್ ಮ್ಯಾರೇಜ್ ಸ್ಟೋರಿ ಇಲ್ಲಿದೆ ನೋಡಿ..

ವಿದೇಶಿ ಯುವತಿಯನ್ನು ಹಿಂದೂ ಸಂಪ್ರದಾಯದಂತೆ ಮದ್ವೆಯಾದ ಮಂಗಳೂರಿಗ: ಥೈಲ್ಯಾಂಡ್‌‌ನಲ್ಲಿ ಅರಳಿದ ಪ್ರೇಮಕಥೆ
ಥೈಲ್ಯಾಂಡ್ ಯುವತಿಯ ಕೈ ಹಿಡಿದ ಮಂಗಳೂರಿಗ
ಅಶೋಕ್​ ಪೂಜಾರಿ, ಮಂಗಳೂರು
| Edited By: |

Updated on:Dec 05, 2024 | 7:29 PM

Share

ಮಂಗಳೂರು, (ಡಿಸೆಂಬರ್ 05): ಸಪ್ತಪದಿ ಇದು ಸಪ್ತಪದಿ. ಇದು ಏಳು ಜನುಮಗಳ ಅನುಬಂಧ ಎಂಬಂತೆ ಮಂಗಳೂರಿನಲ್ಲೊಂದು ವಿಶೇಷ ವಿವಾಹ ನಡೆದಿದೆ. ದೂರದ ಥೈಲ್ಯಾಂಡ್ ದೇಶಕ್ಕೂ ಭಾರತಕ್ಕೂ ಸಂಬಂಧ ಕೂಡಿ ಬಂದಿದೆ. ಇಲ್ಲಿ ಥೈಲ್ಯಾಂಡ್ ಸುಂದರಿ ಅಪ್ಪಟ ಕನ್ನಡಿಗನಿಗೆ ಜೋಡಿಯಾಗಿದ್ದಾಳೆ. ಕಡಲ ನಗರಿ ಮಂಗಳೂರು ಈ ವಿಶೇಷ ಜೋಡಿಯ ಅಪೂರ್ವ ಸಂಗಮಕ್ಕೆ ಸಾಕ್ಷಿಯಾಗಿದೆ. ಕಾಲಲ್ಲಿ ಕಾಲುಂಗುರ, ಮೈ ಮೇಲೆ ಧಾರೆ ಸೀರೆ, ಹಣೆಯಲ್ಲಿ ಕುಂಕುಮ, ಕೊರಳಲ್ಲಿ ತಾಳಿ. ನೋಡುವುದಕ್ಕೆ ಥೇಟ್ ಭಾರತೀಯ ನಾರಿಯಂತೆ ಕಾಣಿಸಿದ ಥೈಲ್ಯಾಂಡ್ ದೇಶದ ಯುವತಿ ಮೊಂತಕಾನ್ ಸಸೂಕ್. ಆದರೆ ಈಗ ಈಕೆ ಮಂಗಳೂರಿನ ಸೊಸೆ.

ಮಂಗಳೂರಿನ ಗೋರಿಗುಡ್ಡೆ ನಿವಾಸಿ ಪೃಥ್ವಿರಾಜ್ ಜೊತೆ ಈಕೆಯ ವಿವಾಹವಾಗಿದೆ. ಅದೂ ಅಪ್ಪಟ ಭಾರತೀಯ ಹಿಂದೂ ಸಂಪ್ರದಾಯದಂತೆ. ಮಂಗಳೂರಿನ ಮಂಗಳಾದೇವಿ ದೇವಸ್ಥಾನದಲ್ಲಿ ಶಾಸ್ತ್ರೋಕ್ತವಾಗಿ ಈ ವಿವಾಹ ಕಾರ್ಯಕ್ರಮ ಜರುಗಿದ್ದು, ಮಂಗಳಾದೇವಿಯ ಆಶೀರ್ವಾದ ಪಡೆದು ನವ ವಧು ವರರು ಹೊಸ ಬಾಳ ಪಯಣವನ್ನ ಆರಂಭಿಸಿದ್ದಾರೆ.

ಈ ಜೋಡಿಯ ಲವ್ ಸ್ಟೋರಿಯೇ ರೋಚಕ

ಇನ್ನು ಈ ಜೋಡಿಯ ನಡುವೆ ಪ್ರೇಮಾಕುಂರವಾಗಿರುವ ಕಥೆಯೇ ನಿಜಕ್ಕೂ ರೋಚಕವಾಗಿದೆ. ಮಂಗಳೂರಿನ ಪೃಥ್ವಿರಾಜ್ ಬೆಂಗಳೂರಿನಲ್ಲಿ ಐಟಿ ಉದ್ಯೋಗಿ. ಕಳೆದ ಫೆಬ್ರವರಿ ತಿಂಗಳಲ್ಲಿ ಫೃಥ್ವಿರಾಜ್ ಥೈಲ್ಯಾಂಡ್‌ಗೆ ಪ್ರಾಜೆಕ್ಟ್ ವರ್ಕ್ ಹಾಗೂ ಪ್ರವಾಸಕ್ಕೆಂದು ತೆರಳಿದಾಗ ಐಟಿ ಉದ್ಯೋಗಿಯೇ ಆಗಿರುವ ಮೊಂತಕಾನ್ ಸಸೂಕ್ ಪರಿಚಯವಾಗಿದೆ. ವ್ಯಾಲೆಂಟೈನ್ಸ್ ಡೇಯ ಪಾರ್ಟಿಯಲ್ಲಿ ಇವರಿಬ್ಬರು ಪರಿಚಿತರಾಗಿದ್ದಾರೆ. ಪ್ರೇಮಿಗಳ ದಿನದಂದು ಶುರುವಾದ ಈ ಪರಿಚಯ ಬಳಿಕ ಪ್ರೀತಿಗೆ ತಿರುಗಿದೆ. ಎರಡು ಮನಸ್ಸುಗಳು ಒಂದಾದ ಮೇಲೆ ಇಬ್ಬರು ಮದುವೆಯಾಗುವ ನಿರ್ಧಾರಕ್ಕೆ ಬಂದಿದ್ದಾರೆ. ಮನೆಯವರಿಗೆ ಈ ವಿಚಾರ ತಿಳಿಸಿದ್ದಾರೆ. ಮೊದಲಿಗೆ ಒಲ್ಲೆ ಎಂದ ಪೃಥ್ವಿರಾಜ್ ಕುಟುಂಬಸ್ಥರು ಬಳಿಕ ಥೈಲ್ಯಾಂಡ್ ಸುಂದರಿಯ ಗುಣ ನಡೆತೆಗೆ ಫಿದಾ ಆಗಿದ್ದಾರೆ. ಮಂಗಳೂರಿನಲ್ಲಿ ಹುಡುಕಿದರೂ ಇಂತಹ ಹುಡುಗಿ ಸಿಗೋದಿಲ್ಲ ಎಂದು ಇವರಿಬ್ಬರ ಮದುವೆಗೆ ಜೈ ಎಂದಿದ್ದಾರೆ.

ಹಿಂದೂ ಸಂಪ್ರದಾಯದಂತೆ ಮದ್ವೆ

ಅಪ್ಪಟ ಹಿಂದೂ ಸಂಪ್ರದಾಯದಂತೆ ಇಂದು ಮಂಗಳಾದೇವಿಯ ಸಮ್ಮುಖದಲ್ಲಿ ವಿವಾಹ ಮಹೋತ್ಸವ ಸಂಪನ್ನವಾಗಿದೆ. ವಧು ಮೊಂತಕಾನ್ ಸಸೂಕ್ ಬೌದ್ಧ ಧರ್ಮಕ್ಕೆ ಸೇರಿದ್ದು ಕಳೆದ ಜುಲೈ ತಿಂಗಳಲ್ಲೇ ಬೌದ್ಧ ಸಂಪ್ರದಾಯದಂತೆ ಥೈಲ್ಯಾಂಡ್‌ನಲ್ಲಿ ವಿವಾಹ ನಡೆದಿದೆ. ಇನ್ನು ಮುಂದೆ ಥೈಲ್ಯಾಂಡ್ ತ್ಯಜಿಸಿ ತನ್ನ ಪತಿಯೊಂದಿಗೆ ಭಾರತದಲ್ಲೇ ಮೊಂತಕಾನ್ ಸಸೂಕ್ ಸಂಸಾರ ನಡೆಸಲಿದ್ದಾರೆ. ಅರ್ಥಾತ್ ಭಾರತದ ಸೊಸೆಯಾಗಿದ್ದಾಳೆ .

ಥೈಲ್ಯಾಂಡ್‌ನಲ್ಲಿ ಅರಳಿದ ಪ್ರೇಮ ಕಥೆ ಭಾರತದಲ್ಲಿ ಸಾಂಸಾರಿಕ ಜೀವನಕ್ಕೆ ಕಾಲಿಡುವ ಮೂಲಕ ಸುಂದರ ತಿರುವು ಪಡೆದಿದೆ. ಈ ಮುದ್ದಾದ ಜೋಡಿಗೆ ಯಾರ ದೃಷ್ಟಿಯೂ ಬೀಳದೆ ನೂರು ಕಾಲ ಇವರು ಚೆನ್ನಾಗಿ ಬಾಳಲಿ ಎನ್ನುವುದೇ ನಮ್ಮ ಆಶಯ. ಹಾಗೇ ನಿಮ್ಮ ಆಶೀರ್ವಾದ ಈ ನವ ಜೋಡಿಗೆ ಇರಲಿ.

Published On - 5:24 pm, Thu, 5 December 24

Follow Us
Ashok
Ashok

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸುದ್ದಿಬಿಡುಗಡೆ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಪ್ರಜಾ ಟಿ.ವಿಯ ಉಡುಪಿ ಜಿಲ್ಲಾ ವರದಿಗಾರರಾಗಿ ಒಂದು ವರ್ಷ ಏಳು ತಿಂಗಳು ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ, ಒಂದು ವರ್ಷ ನಾಲ್ಕು ತಿಂಗಳಿನಿಂದ ಟಿ.ವಿ 9 ವಾಹಿನಿಯಲ್ಲಿ ದಕ್ಷಿಣಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ ಇಂಡಿಯಾ ಟೆಲಿವಿಷನ್​ . ಕಾಮ್​ 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು